ಜಬಲ್ಪುರ, ಮಧ್ಯಪ್ರದೇಶ: ಮಧ್ಯಪ್ರದೇಶದ ಜಬಲ್ಪುರದಲ್ಲಿ ಭೀಕರ ದುರಂತ ಸಂಭವಿಸಿದ್ದು, ವಾಸಿಗರನ್ನು ಹೊತ್ತೊಯ್ಯುತ್ತಿದ್ದ ಕ್ರೂಸ್ ಬೋಟ್ ಒಂದು ಹಠಾತ್ ಬಿರುಗಾಳಿಗೆ ಸಿಲುಕಿ ನೀರಿನಲ್ಲಿ ಮಗುಚಿ ಬಿದ್ದಿದೆ. ಇದರಿಂದ ಏಳು ಮಂದಿ ಸಾವನ್ನಪ್ಪಿದ್ದಾರೆ. ನ್ನೂ 8 ಮಂದಿ ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ.
ಬೋಟ್ನಲ್ಲಿದ್ದ ಒಟ್ಟು 29 ಪ್ರವಾಸಿಗರಲ್ಲಿ ಕೇವಲ 15 ಮಂದಿ ಈಜಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದಾರೆ. ಮೃತರಲ್ಲಿ ಇಬ್ಬರು ಮಹಿಳೆಯರು ಸೇರಿದ್ದಾರೆ. ಲೈಫ್ ಜಾಕೆಟ್ ಧರಿಸಿದ್ದ ಬೋಟ್ ಕ್ಯಾಪ್ಟನ್ ಮಹೇಶ್ ಪಟೇಲ್ ಬದುಕುಳಿದಿದ್ದು, ಆತನನ್ನು ರಕ್ಷಿಸಲಾಗಿದೆ.
ಬೋಟ್ ಸಂಪೂರ್ಣವಾಗಿ ನೀರಿನೊಳಗೆ ಮುಳುಗಿದೆ. ಇದರೊಳಗೆ ಕೆಲವು ಪ್ರವಾಸಿಗರು ಸಿಲುಕಿಕೊಂಡಿರುವ ಸಾಧ್ಯತೆಯಿದೆ. ರಾತ್ರಿಯ ಕತ್ತಲೆ ಮತ್ತು ನೀರಿನ ಅಬ್ಬರದಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ತೀವ್ರ ಅಡಚಣೆಯಾಗಿದೆ.
ರಾಜ್ಯ ವಿಪತ್ತು ಸ್ಪಂದನಾ ಪಡೆ (SDRF) ರಾತ್ರಿಯಿಡೀ ಶೋಧ ನಡೆಸಿತು. ಆದರೆ, ಹೆಚ್ಚಿನ ಸವಾಲು ಎದುರಾದ ಹಿನ್ನೆಲೆ ಭಾರತೀಯ ಸೇನೆಯನ್ನು ಕರೆಯಲಾಗಿದೆ. ಹೈದರಾಬಾದ್ ಮತ್ತು ಕೋಲ್ಕತ್ತಾದಿಂದ ಸೇನಾ ಹೆಲಿಕಾಪ್ಟರ್ಗಳನ್ನು ಕರೆಸಿಕೊಳ್ಳಲಾಗಿದೆ. NDRF ಮತ್ತು SDRF ತಂಡಗಳು ಸೇನೆಯ ಜೊತೆಗೂಡಿ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿವೆ.
ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ದುರಂತಕ್ಕೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಲೋಕೋಪಯೋಗಿ ಸಚಿವ ರಾಕೇಶ್ ಸಿಂಗ್ ಅವರು, “ಕ್ರೂಸ್ ಕಂಪನಿಯ ನಿರ್ಲಕ್ಷ್ಯ ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.





