ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ ಸ್ಪಷ್ಟ ಬಹುಮತ ಸಾಧಿಸಿದ ನಂತರ 11ದಿನಗಳ ಕಾಲ ನಡೆದ ತೀವ್ರ ರಾಜಕೀಯ ನಾಟಕಕ್ಕೆ ಕೊನೆಗೂ ತೆರೆ ಬಿದ್ದಿದೆ. ಕಾಂಗ್ರೆಸ್ ಹೈಕಮಾಂಡ್ ವಿ.ಡಿ. ಸತೀಶನ್ ಅವರನ್ನು ಕೇರಳದ ಮುಂದಿನ ಮುಖ್ಯಮಂತ್ರಿಯಾಗಿ ಘೋಷಿಸಿದೆ. ದೆಹಲಿಯಲ್ಲಿ ಎಐಸಿಸಿ ನಾಯಕರು ಅಜಯ್ ಮಾಕೆನ್ ಮತ್ತು ಮುಕುಲ್ ವಾಸ್ನಿಕ್ ಅವರ ಸಮ್ಮುಖದಲ್ಲಿ ಈ ಮಹತ್ವದ ನಿರ್ಧಾರ ಪ್ರಕಟವಾಗಿದೆ.
ಕೆ.ಸಿ. ವೇಣುಗೋಪಾಲ್ ಮತ್ತು ವಿ.ಡಿ. ಸತೀಶನ್ ನಡುವಿನ ಪೈಪೋಟಿ ತೀವ್ರವಾಗಿತ್ತು. ವಿಪಕ್ಷ ನಾಯಕರಾಗಿ ಪಕ್ಷವನ್ನು ಸಂಘಟಿಸಿ, ಚುನಾವಣೆಯಲ್ಲಿ ಯುಡಿಎಫ್ಗೆ ಜಯ ತಂದುಕೊಟ್ಟ ಸತೀಶನ್ ಅವರು ಕೊನೆಗೂ ಸಿಎಂ ಪಟ್ಟ ಗೆದ್ದಿದ್ದಾರೆ. ರಾಹುಲ್ ಗಾಂಧಿ ಅವರು ವೇಣುಗೋಪಾಲ್ ಅವರ ಪರ ನಿಂತಿದ್ದರೂ, ಅಂತಿಮವಾಗಿ ಸತೀಶನ್ ಅವರಿಗೆ ಬೆಂಬಲ ಸಿಕ್ಕಿದೆ.
ಪೈಪೋಟಿ ಮತ್ತು ನಿರ್ಧಾರ: ಕೆ.ಸಿ. ವೇಣುಗೋಪಾಲ್ ಅವರು ರಾಹುಲ್ ಗಾಂಧಿ ಅವರು ನಿಕಟ ಸಂಬಂಧ ಹೊಂದಿದ್ದು, ಅನೇಕ ಶಾಸಕರ ಬೆಂಬಲ ಹೊಂದಿದ್ದರು. ಆದರೆ ಸತೀಶನ್ ಅವರು ಯುಡಿಎಫ್ ಮಿತ್ರಪಕ್ಷಗಳ ಬಲವಾದ ಬೆಂಬಲ ಪಡೆದಿದ್ದರು. ಪಾರವೂರ್ ಕ್ಷೇತ್ರದಿಂದ ಆರನೇ ಬಾರಿ ಗೆದ್ದ ಸತೀಶನ್ ಅವರು ವಕೀಲರಾಗಿದ್ದು, ದೀರ್ಘಕಾಲದ ಸಂಘಟನಾ ಅನುಭವ ಹೊಂದಿದ್ದಾರೆ. 11 ದಿನಗಳ ಕಾಲ ನಡೆದ ಚರ್ಚೆಗಳ ನಂತರ ಹೈಕಮಾಂಡ್ ಅಳೆದುತೂಗಿ ಸತೀಶನ್ ಅವರನ್ನು ಆಯ್ಕೆ ಮಾಡಿದೆ.
ಕೇರಳ ಕಾಂಗ್ರೆಸ್ನಲ್ಲಿ ಈ ನಿರ್ಧಾರವು ಸಂತೋಷದ ವಾತಾವರಣ ಸೃಷ್ಟಿಸಿದೆ. ಸತೀಶನ್ ಅವರು “ಪಕ್ಷದ ಏಕತೆಯೊಂದಿಗೆ ಕೇರಳದ ಅಭಿವೃದ್ಧಿಗೆ ಕೆಲಸ ಮಾಡುತ್ತೇವೆ” ಎಂದು ಹೇಳಿದ್ದಾರೆ. ಯುಡಿಎಫ್ನ 102 ಸೀಟುಗಳ ಬಹುಮತದೊಂದಿಗೆ ಸರ್ಕಾರ ರಚನೆಯ ಸಿದ್ಧತೆಗಳು ಆರಂಭವಾಗಿವೆ.
ಈ ನಿರ್ಧಾರವು ಕಾಂಗ್ರೆಸ್ ತನ್ನ ಶಕ್ತಿ ಪ್ರದರ್ಶನ ಮಾಡಿದೆ ಎಂದು ವಿಶ್ಲೇಷಕರು ಹೇಳುತ್ತಿದ್ದಾರೆ. ಕೆ.ಸಿ. ವೇಣುಗೋಪಾಲ್ ಅವರಿಗೆ ಹಿನ್ನಡೆಯಾಗಿದ್ದರೂ, ಪಕ್ಷದಲ್ಲಿ ಅವರ ಪಾತ್ರ ಮುಂದುವರಿಯುವ ಸಾಧ್ಯತೆ ಇದೆ.
ಕೇರಳದ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ವಿ.ಡಿ. ಸತೀಶನ್ ಅವರ ನೇತೃತ್ವದಲ್ಲಿ ಯುಡಿಎಫ್ ಸರ್ಕಾರ ಎಷ್ಟು ದಿನ ಗಟ್ಟಿಯಾಗಿ ನಿಲ್ಲುತ್ತದೆ ಎಂಬುದು ಈಗ ಮುಖ್ಯ ಪ್ರಶ್ನೆಯಾಗಿದೆ.
ಈ ರೀತಿಯಾಗಿ ಕೊನೆಗೂ ಕೇರಳದಲ್ಲಿ ನಡೆಯುತ್ತಿದ್ದ ಹೈಡ್ರಾಮಾಕ್ಕೆ ಕೊನೆಗೂ ತೆರೆ ಬಿದ್ದಿದೆ. ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆಯಾಗಿದ್ದಾರೆ.




