• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆರೋಗ್ಯ-ಸೌಂದರ್ಯ

ಹೃದಯ ಚಿಕಿತ್ಸೆಯಲ್ಲಿ ಹೊಸ ಕ್ರಾಂತಿ: ಭಾರತಕ್ಕೆ ಬಂತು 3D ಮ್ಯಾಪಿಂಗ್ ಆಧಾರಿತ ‘ವೇರಿಪಲ್ಸ್ ಪ್ಲಾಟ್‌ಫಾರ್ಮ್’

ಭಾರತಕ್ಕೆ ಬಂತು 3D ಮ್ಯಾಪಿಂಗ್ ಆಧಾರಿತ 'ವೇರಿಪಲ್ಸ್ ಪ್ಲಾಟ್‌ಫಾರ್ಮ್'; ಏನಿದು ತಂತ್ರಜ್ಞಾನ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 4, 2026 - 5:41 pm
in ಆರೋಗ್ಯ-ಸೌಂದರ್ಯ, ತಂತ್ರಜ್ಞಾನ
0 0
0
Untitled design 2026 06 04T174108.541

ಬೆಂಗಳೂರು: ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ, ಅದರಲ್ಲೂ ವಿಶೇಷವಾಗಿ ‘ಏಟ್ರಿಯಲ್ ಫಿಬ್ರಿಲೇಷನ್’ ಸಮಸ್ಯೆಯಿರುವ ರೋಗಿಗಳಿಗೆ ಚಿಕಿತ್ಸೆ ನೀಡಲೆಂದೇ ‘ಜಾನ್ಸನ್ & ಜಾನ್ಸನ್’ ಸಂಸ್ಥೆಯು ಹೊಸ ತಂತ್ರಜ್ಞಾನವೊಂದನ್ನು ಪರಿಚಯಿಸಿದೆ. ‘ವೇರಿಪಲ್ಸ್ ಪ್ಲಾಟ್‌ಫಾರ್ಮ್’ ಎಂದು ಇದಕ್ಕೆ ಹೆಸರಿಡಲಾಗಿದ್ದು, ಭಾರತದಲ್ಲಿ ಮೊದಲ ಬಾರಿಗೆ ಈ ತಂತ್ರಜ್ಞಾನದ ಬಳಕೆಗೆ ಅಧಿಕೃತ ಅನುಮೋದನೆ ದೊರೆತಿದೆ. ಇದು ದೇಶದ ವೈದ್ಯಕೀಯ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲಾಗಿದೆ.

ಏನಿದು ಏಟ್ರಿಯಲ್ ಫಿಬ್ರಿಲೇಷನ್?

ಏಟ್ರಿಯಲ್ ಫಿಬ್ರಿಲೇಷನ್ ಹೃದಯದ ಮೇಲ್ಭಾಗದಲ್ಲಿ (ಏಟ್ರಿಯಾ) ವಿದ್ಯುತ್ ಸಂಕೇತಗಳ ಏರುಪೇರಿನಿಂದ ಬರುವ ಸಮಸ್ಯೆಯಾಗಿದೆ. ಇದರಿಂದ ಹೃದಯಬಡಿತ ಅನಿಯಮಿತವಾಗಿ ಮತ್ತು ಅತಿ ವೇಗವಾಗಿ ಹೊಡೆದುಕೊಳ್ಳುತ್ತದೆ. ವಯಸ್ಸು, ಜೀವನಶೈಲಿ ಮತ್ತು ಇತರ ಆರೋಗ್ಯ ಸಮಸ್ಯೆಗಳಿಂದಾಗಿ ಇದು ಕಾಣಿಸಿಕೊಳ್ಳಬಹುದು. ಒಂದೊಮ್ಮೆ ಸಕಾಲದಲ್ಲಿ ಚಿಕಿತ್ಸೆ ಪಡೆಯದಿದ್ದರೆ ಇದು ಪಾರ್ಶ್ವವಾಯು, ಹೃದಯ ವೈಫಲ್ಯ ಮತ್ತು ಅಕಾಲಿಕ ಮರಣಕ್ಕೂ ಕಾರಣವಾಗಬಹುದು.

RelatedPosts

ಪ್ರತಿದಿನ ಬಾಳೆಹಣ್ಣು ತಿನ್ನುವುದರಿಂದ ತೂಕ ಹೇಗೆ ಇಳಿಯುತ್ತದೆ? ಪೂರ್ಣ ವಿವರ

ಮಹಿಳೆಯರಲ್ಲಿ ಹಾರ್ಮೋನ್ ಅಸಮತೋಲನ ಆಗೋದು ಏಕೆ? ಕಾರಣಗಳು ಮತ್ತು ಪರಿಹಾರಗಳು

ಅಧಿಕ ರಕ್ತದೊತ್ತಡಕ್ಕೆ ಕಾರಣವಾಗುವ ಈ ಅಭ್ಯಾಸಗಳನ್ನು ತಪ್ಪಿಸಿ.!

ರಾತ್ರಿ ಮಲಗುವ ಮುನ್ನ ನೀರು ಕುಡಿಯುವುದು ಅಪಾಯವೇ? ಇಲ್ಲಿದೆ ವೈದ್ಯರ ಸಲಹೆ

ADVERTISEMENT
ADVERTISEMENT
ಹೇಗೆ ಕೆಲಸ ಮಾಡುತ್ತದೆ ಈ ವೇರಿಪಲ್ಸ್ ತಂತ್ರಜ್ಞಾನ?

ಈ ಹೊಸ ವೇರಿಪಲ್ಸ್ ಪ್ಲಾಟ್‌ಫಾರ್ಮ್ ‘ಪಲ್ಸ್ಡ್ ಫೀಲ್ಡ್ ಅಬ್ಲೇಶನ್’ (ಪಿಎಫ್‌ಎ) ಎಂಬ ತಂತ್ರಜ್ಞಾನದ ಆಧಾರದ ಮೇಲೆ ಕೆಲಸ ಮಾಡುತ್ತದೆ. ಇದರ ವಿಶೇಷತೆ ಎಂದರೆ, ಇದನ್ನು ‘ಕಾರ್ಟೊ 3’ ಎಂಬ 3ಡಿ ಮ್ಯಾಪಿಂಗ್ ಸಿಸ್ಟಮ್‌ಗೆ ಜೋಡಿಸಲಾಗಿದೆ.

ಇದರಿಂದ ವೈದ್ಯರಿಗೆ ಹೃದಯದ ಒಳಭಾಗದ ನೈಜ ಚಿತ್ರಣ ಕಂಪ್ಯೂಟರ್ ಪರದೆಯ ಮೇಲೆ ಸ್ಪಷ್ಟವಾಗಿ ಕಾಣುತ್ತದೆ. ಇದರಿಂದ ಸಮಸ್ಯೆಯಿರುವ ನಿರ್ದಿಷ್ಟ ಜಾಗವನ್ನು ನಿಖರವಾಗಿ ಗುರುತಿಸಿ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ. ಪ್ರಪಂಚದಾದ್ಯಂತ ಈಗಾಗಲೇ 80 ಸಾವಿರಕ್ಕೂ ಹೆಚ್ಚು ರೋಗಿಗಳಿಗೆ ಈ ತಂತ್ರಜ್ಞಾನದ ಮೂಲಕ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಗಿದೆ ಎಂದು ಕಂಪನಿ ತಿಳಿಸಿದೆ.

ರೋಗಿಗಳಿಗೆ ಇದರಿಂದ ಏನೆಲ್ಲಾ ಲಾಭ?

* ಇದು ಚಿಕಿತ್ಸೆಯ ಸಮಯವನ್ನು ಕಡಿಮೆ ಮಾಡುತ್ತದೆ ಮತ್ತು ವೈದ್ಯರಿಗೆ ಹೆಚ್ಚು ನಿಖರತೆ ಒದಗಿಸುತ್ತದೆ.
* ಸಾಂಪ್ರದಾಯಿಕ ಚಿಕಿತ್ಸೆಗಳಲ್ಲಿ ಬಳಸಲಾಗುವ ಎಕ್ಸ್-ರೇ ವಿಕಿರಣಗಳ ಬಳಕೆಯನ್ನು ಇದು ಗಣನೀಯವಾಗಿ ಕಡಿಮೆ ಮಾಡುತ್ತದೆ ಅಥವಾ ಸಂಪೂರ್ಣವಾಗಿ ತಡೆಯುತ್ತದೆ. ಇದರಿಂದ ರೋಗಿಗಳಿಗೆ ವಿಕಿರಣದ ಅಪಾಯವಿರುವುದಿಲ್ಲ.
* ರೋಗಿಗೆ ಅರಿವಳಿಕೆ ನೀಡಿಯೂ ಈ ಚಿಕಿತ್ಸೆಯನ್ನು ಅತ್ಯಂತ ಸುರಕ್ಷಿತವಾಗಿ ಮಾಡಬಹುದು.

ಈ ಬಗ್ಗೆ ವಿವರ ನೀಡಿರುವ ಜಾನ್ಸನ್ & ಜಾನ್ಸನ್ ಮೆಡ್‌ಟೆಕ್ ಇಂಡಿಯಾದ ಜನರಲ್ ಮ್ಯಾನೇಜರ್ ರಣದೀಪ್ ಶರ್ಮಾ, “ಭಾರತದಲ್ಲಿ ವೇರಿಪಲ್ಸ್ ಪ್ಲಾಟ್‌ಫಾರ್ಮ್‌ಗೆ ಅನುಮೋದನೆ ಸಿಕ್ಕಿರುವುದು ಹೃದಯದ ಚಿಕಿತ್ಸೆಯಲ್ಲಿ ಒಂದು ದೊಡ್ಡ ಹೆಜ್ಜೆಯಾಗಿದೆ. ಜಾಗತಿಕವಾಗಿ ಪಿಎಫ್‌ಎ ತಂತ್ರಜ್ಞಾನ ಜನಪ್ರಿಯವಾಗುತ್ತಿದ್ದು, ಏಟ್ರಿಯಲ್ ಫಿಬ್ರಿಲೇಷನ್ ರೋಗಿಗಳಿಗೆ ಹೆಚ್ಚು ನಿಖರ ಹಾಗೂ ತ್ವರಿತ ಚಿಕಿತ್ಸೆ ನೀಡಲು ಇದು ಭಾರತೀಯ ವೈದ್ಯರಿಗೆ ಅನುಕೂಲ ಮಾಡಿಕೊಡಲಿದೆ,” ಎಂದರು.

ಕ್ಯಾನ್ಸಾಸ್ ಸಿಟಿ ಹಾರ್ಟ್ ರಿದಮ್ ಇನ್‌ಸ್ಟಿಟ್ಯೂಟ್‌ನ ಎಕ್ಸಿಕ್ಯೂಟಿವ್ ಮೆಡಿಕಲ್ ಡೈರೆಕ್ಟರ್ ಡಾ. ಧನುಂಜಯ ಲಕ್ಕಿರೆಡ್ಡಿ ಪ್ರತಿಕ್ರಿಯಿಸಿ, “ಭಾರತದಲ್ಲಿ ಹೃದಯ ಸಂಬಂಧಿ ಕಾಯಿಲೆಗಳ ಹೊರೆ ಹೆಚ್ಚಾಗಿದೆ. ಇಂತಹ ಸಮಯದಲ್ಲಿ ನವೀನ ಚಿಕಿತ್ಸಾ ವಿಧಾನಗಳ ಅಗತ್ಯವಿದೆ. ‘ಪಲ್ಸ್ಡ್ ಫೀಲ್ಡ್ ಅಬ್ಲೇಶನ್’ ಜಗತ್ತಿನಾದ್ಯಂತ ಮಾಡಿರುವ ಕ್ರಾಂತಿಯನ್ನು ಭಾರತದಲ್ಲೂ ಮಾಡಬಲ್ಲದು. 3ಡಿ ಮ್ಯಾಪಿಂಗ್‌ನೊಂದಿಗಿನ ಇದನ್ನು ಜೋಡಿಸಲಾಗಿದ್ದು, ಇದು ವೈದ್ಯರಿಗೆ ಅತ್ಯುತ್ತಮ ಸಾಧನವಾಗಿದೆ. ಆದರೆ, ಇದರ ಸುರಕ್ಷಿತ ಬಳಕೆಗಾಗಿ ವೈದ್ಯರಿಗೆ ಸೂಕ್ತ ತರಬೇತಿಯ ಅವಶ್ಯಕತೆಯಿದೆ,” ಎಂದು ವಿವರಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 04T221348.911

ಡಿ.ಕೆ ಶಿವಕುಮಾರ್‌‌ ಕ್ಯಾಬಿನೆಟ್‌ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ

by ಶಾಲಿನಿ ಕೆ. ಡಿ
June 4, 2026 - 10:15 pm
0

Untitled design 2026 06 04T212752.135

ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್: ಸರ್ಕಾರದಿಂದ ಅಧಿಕೃತ ಆದೇಶ

by ಶಾಲಿನಿ ಕೆ. ಡಿ
June 4, 2026 - 9:28 pm
0

Untitled design 2026 06 04T210336.876

ಅಕ್ರಮ ಸಂಬಂಧದ ಶಂಕೆ: ಚಾಕುವಿನಿಂದ ಇರಿದು ವ್ಯಕ್ತಿಯ ಕೊ*ಲೆ

by ಶಾಲಿನಿ ಕೆ. ಡಿ
June 4, 2026 - 9:04 pm
0

Untitled design 2026 06 04T203952.916

ದಾವೂದ್‌ ಡಿ-ಕಂಪನಿಯಿಂದ ಕೊ*ಲೆ ಬೆದರಿಕೆ: ಐಪಿಲ್‌ ತೊರೆದ ಬಗ್ಗೆ ರಹಸ್ಯ ಬಿಚ್ಚಿಟ್ಟ ಲಲಿತ್ ಮೋದಿ

by ಶಾಲಿನಿ ಕೆ. ಡಿ
June 4, 2026 - 8:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (37)
    ಪ್ರತಿದಿನ ಬಾಳೆಹಣ್ಣು ತಿನ್ನುವುದರಿಂದ ತೂಕ ಹೇಗೆ ಇಳಿಯುತ್ತದೆ? ಪೂರ್ಣ ವಿವರ
    June 2, 2026 | 0
  • BeFunky collage 2026 05 28T223105.372
    ಮಹಿಳೆಯರಲ್ಲಿ ಹಾರ್ಮೋನ್ ಅಸಮತೋಲನ ಆಗೋದು ಏಕೆ? ಕಾರಣಗಳು ಮತ್ತು ಪರಿಹಾರಗಳು
    May 28, 2026 | 0
  • Untitled design 2026 05 28T071632.863
    ಅಧಿಕ ರಕ್ತದೊತ್ತಡಕ್ಕೆ ಕಾರಣವಾಗುವ ಈ ಅಭ್ಯಾಸಗಳನ್ನು ತಪ್ಪಿಸಿ.!
    May 28, 2026 | 0
  • Untitled design 2026 05 27T070746.127
    ರಾತ್ರಿ ಮಲಗುವ ಮುನ್ನ ನೀರು ಕುಡಿಯುವುದು ಅಪಾಯವೇ? ಇಲ್ಲಿದೆ ವೈದ್ಯರ ಸಲಹೆ
    May 27, 2026 | 0
  • Untitled design 2026 05 26T071901.203
    ಪ್ರತಿದಿನ ಹಾಲಿನ ಜೊತೆ ಒಣದ್ರಾಕ್ಷಿ ಸೇವಿಸಿ: ಆರೋಗ್ಯದಲ್ಲಿ ಸಿಗುವ ಲಾಭಗಳ ಬಗ್ಗೆ ತಿಳಿಯಿರಿ
    May 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version