• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾನೂನು ಚೌಕಟ್ಟಿನಲ್ಲಿ ಜನರ ಸಮಸ್ಯೆಗೆ ಪರಿಹಾರ ಹುಡುಕಿ: ಸರ್ಕಾರಿ ನೌಕರರಿಗೆ ಡಿ.ಕೆ ಶಿವಕುಮಾರ್ ಕಿವಿಮಾತು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 11, 2026 - 6:43 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ಟಾ (1)

ಬೆಂಗಳೂರು, ಜು.11: “ಕಷ್ಟ ಹೇಳಿಕೊಂಡು ಬರುವ ಜನರಿಗೆ ಮಾನವೀಯತೆಯಿಂದ ಸ್ಪಂದಿಸಿ, ಕಾನೂನು ಚೌಕಟ್ಟಿನಲ್ಲಿ ಜನರ ಸಮಸ್ಯೆಗೆ ಪರಿಹಾರ ಹುಡುಕಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ವತಿಯಿಂದ ಅರಮನೆ ಮೈದಾನದಲ್ಲಿ ಶನಿವಾರ ನಡೆದ ನಮ್ಮಭಿಮಾನದ ಅಭಿನಂದನಾ ಸಮಾರಂಭ ಕಾರ್ಯಕ್ರಮದಲ್ಲಿ ಸಿಎಂ ಡಿ.ಕೆ ಶಿವಕುಮಾರ್ ಅವರು ಮಾತನಾಡಿದರು.

RelatedPosts

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

‘ನಾವು 100 ಕೋಟಿ ಮಾಡಿದ್ವಿ’: ಚಿತ್ರ ಯಶಸ್ಸಿಗೆ ಸಮಂತಾ ಕ್ಯೂಟ್ ರಿಯಾಕ್ಷನ್..ವಿಡಿಯೋ ವೈರಲ್

ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ

ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ADVERTISEMENT
ADVERTISEMENT

“ಜನರು ದೇವರ ಬಳಿ ತಮಗೆ ಬೇಕಾಗಿರುವುದನ್ನು ಪ್ರಾರ್ಥಿಸಲು ದೇವಾಲಯಗಳಿಗೆ ಹೋಗುತ್ತಾರೆ. ಅದೇ ರೀತಿ ಜನರು ತಮ್ಮ ಕಷ್ಟಗಳಿಗೆ ಪರಿಹಾರ ಪಡೆಯಲು ಸರ್ಕಾರಿ ನೌಕರರು, ಶಾಸಕರು ಹಾಗೂ ಮಂತ್ರಿಗಳ ಬಳಿ ಬರುತ್ತಾರೆ. ನಾವು ಎಷ್ಟು ಶ್ರದ್ಧೆಯಿಂದ ಅವರ ಸೇವೆ ಮಾಡುತ್ತೇವೆ ಎಂಬುದು ಮುಖ್ಯ. ನೀವೆಲ್ಲರೂ ವಿಶ್ವರೂಪ ದರ್ಶನದ ಪ್ರತಿಮೆ ನೀಡಿ ನನಗೆ ಸನ್ಮಾನ ಮಾಡಿದಿರಿ. ಪರಮೇಶ್ವರ್ ಅವರಿಗೆ ಬುದ್ಧನ ಪ್ರತಿಮೆ ನೀಡಿದಿರಿ. ವಿಶ್ವರೂಪ ದರ್ಶನ ಬರುವುದು ಧರ್ಮದ ಪರವಾದ ಯುದ್ಧಕ್ಕೆ ನಿಂತಾಗ. ದುರ್ಯೋಧನ ಯುದ್ಧ ಮಾಡುವ ಮುನ್ನ ತಾಯಿಯ ಆಶೀರ್ವಾದ ಪಡೆಯಲು ಹೋದಾಗ ಆ ತಾಯಿ ಎಲ್ಲಿ ಧರ್ಮ‌ ಇರುತ್ತದೆಯೋ ಅಲ್ಲಿ ಗೆಲುವು ಇದ್ದೇ ಇರುತ್ತದೆ ಎಂದು ಆಶೀರ್ವಾದ ಮಾಡುತ್ತಾಳೆ. ಅರ್ಜುನ ಯುದ್ಧದ ನಡುವೆ ತನ್ನ ಅಸ್ತ್ರವನ್ನು ಇಳಿಸಿದಾಗ ಶ್ರೀಕೃಷ್ಣ ಪರಮಾತ್ಮ ವಿಶ್ವರೂಪ ದರ್ಶನ ತೋರುತ್ತಾನೆ” ಎಂದರು.

“ನೊಂದು ಬಂದ ಜನರಿಗೆ ಸರಿಯಾದ ರೀತಿಯಲ್ಲಿ ಸೇವೆ ಮಾಡುವುದು ನಮ್ಮ ನಿಮ್ಮ ಕರ್ತವ್ಯ. ನೀವೆಲ್ಲರೂ ಕರ್ನಾಟಕದ ರಾಯಭಾರಿಗಳು. ನೀವು ಸಾರ್ವಜನಿಕರ ಬದುಕಿನಲ್ಲಿ ಸೇವೆ ಮಾಡುತ್ತಿದ್ದೀರಿ. ಈ ಅಧಿಕಾರ ಕೇವಲ ನನ್ನದಲ್ಲ, ನಿಮ್ಮೆಲ್ಲರದ್ದು. ಹುದ್ದೆಯಿಂದ ಯಾರೂ ದೊಡ್ಡವರಾಗಲು ಸಾಧ್ಯವಿಲ್ಲ. ಆ ಹುದ್ದೆಗೆ ಯಾವ ರೀತಿ ಗೌರವ ಕಾಪಾಡುತ್ತೇವೆ ಎಂಬುದು ಮುಖ್ಯ. ಪದವಿ ಮನುಷ್ಯನ ಹಿಂದೆ ಇರುತ್ತದೆ. ಆದರೆ ಮನುಷ್ಯತ್ವದ ಗುಣ ನಮ್ಮ ಮುಂದೆ ಕಾಣಲು ಅವಕಾಶವಿದೆ” ಎಂದು ತಿಳಿಸಿದರು.

ಜನರ ಮನೆ ಬಾಗಿಲಿಗೆ ಸರ್ಕಾರ ಕೊಂಡೊಯ್ಯಲು ಪ್ರಜಾಸೇವೆ ಇಲಾಖೆ

“ನಾನು ಅಧಿಕಾರ ಸ್ವೀಕಾರ ಮಾಡಿದ ಬಳಿಕ ಹೊಸ ಇಲಾಖೆ ರಚನೆ ಮಾಡಿದ್ದೇನೆ. ನಮ್ಮ ರಾಜ್ಯದಲ್ಲಿ ಅನೇಕ ಹೋರಾಟಗಳು ನಡೆಯುತ್ತವೆ. ನೀವು ನಮ್ಮ ಬೇಡಿಕೆ ನಮ್ಮ ಮುಂದೆ ಇಟ್ಟಾಗ, ಇದನ್ನು ಕಾನೂನು ಚೌಕಟ್ಟಿನಲ್ಲಿ ಹೇಗೆ ಬಗೆಹರಿಸಬಹುದು, ಆರ್ಥಿಕ ಪರಿಸ್ಥಿತಿ ಏನು ಎಂದು ಪರಿಶೀಲನೆ ಮಾಡಲಾಗುವುದು. ಹೀಗೆ ಜನಸಾಮಾನ್ಯರ ನೋವು ಬಗೆಹರಿಸಲು ಪ್ರಜಾಸೇವೆ ಎಂಬ ಪ್ರತ್ಯೇಕ ಸಚಿವಾಲಯ ಪ್ರಾರಂಭಕ್ಕೆ ತೀರ್ಮಾನಿಸಲಾಗಿದೆ. ಎಲ್ಲಾ ಮಂತ್ರಿಗಳು ಮೊದಲನೇ ಹಾಗೂ ಮೂರನೇ ಶನಿವಾರ ಒಂದೊಂದು ತಾಲ್ಲೂಕು ಕಚೇರಿಗೆ ಹೋಗಿ ಅಲ್ಲಿನ ಜನರ ಸಮಸ್ಯೆ ಆಲಿಸಬೇಕು. ಜನರ ಮನೆ ಬಾಗಿಲಿಗೆ ಸರ್ಕಾರವನ್ನು ಕೊಂಡೊಯ್ಯಲು ಈ ತೀರ್ಮಾನ ಮಾಡಲಾಗಿದೆ. ನೀವುಗಳು ಯಾವಾಗ ಜನರ ಸಮಸ್ಯೆಯನ್ನು ಪ್ರಾಮಾಣಿಕವಾಗಿ ಬಗೆಹರಿಸುತ್ತೀರಾ ಆಗ ಯಶಸ್ಸು ಸಾಧಿಸಲು ಸಾಧ್ಯ” ಎಂದು ತಿಳಿಸಿದರು.

“ದೀಪದ ಬೆಳಕು ನಮ್ಮೆಲ್ಲರಿಗೂ ಕಾಣುತ್ತದೆ. ಆದರೆ ದೀಪದ ಹಿಂದೆ ಇರುವ ಬತ್ತಿ ಹಾಗೂ ಎಣ್ಣೆ ಯಾರಿಗೂ ಕಾಣುವುದಿಲ್ಲ. ನಾವು ನಿಸ್ವಾರ್ಥ ಸೇವೆ ಮಾಡಿದಾಗ, ನಮ್ಮ ಕರ್ತವ್ಯಕ್ಕೆ ಗೌರವವಿರುತ್ತದೆ. ಅವಕಾಶ ಸಿಕ್ಕಾಗ ಪುಣ್ಯ ಕಾರ್ಯ ಮಾಡಬೇಕು. ಮಗ ತಂದೆಗೆ ಸೇವೆ ಮಾಡುವುದು, ತಂದೆ ಕುಟುಂಬ ಕಾಪಾಡುವುದು ಕರ್ತವ್ಯ. ರಾಜ, ಮಂತ್ರಿ, ನೌಕರರು ಜನಸೇವೆಯನ್ನು ದೇಶಸೇವೆ ಎಂದು ಭಾವಿಸಿ ಮಾಡಿದಾಗ ಮಾತ್ರ ಗೌರವ ಸಿಕ್ಕಂತಾಗುತ್ತದೆ. ಜನರ ಸಮಸ್ಯೆ ಬಗೆಹರಿಸಲು ಮಾರ್ಗ ಹುಡುಕಬೇಕೇ ಹೊರತು, ಕೊಂಕು ಹುಡುಕಿ ಅವರನ್ನು ತಿರುಗಿಸಬಾರದು. ಕಾನೂನು ಚೌಕಟ್ಟಿನಲ್ಲಿ ಬಡ ಜನರಿಗೆ ಯಾವ ರೀತಿ ಸಹಾಯ ಮಾಡಬಹುದು ಎಂಬುದನ್ನು ಗಮನದಲ್ಲಿಟ್ಟುಕೊಂಡು ಸೇವೆ ಮಾಡಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನೀವುಗಳು ಆಧಾರಸ್ತಂಭ. ನೀವು ನಾವೆಲ್ಲ ಸೇರಿ ಒಟ್ಟಾಗಿ ಕೆಲಸ ಮಾಡಬೇಕು” ಎಂದು ಕರೆ ನೀಡಿದರು.

“ಮರಕ್ಕೆ ಬೇರು ಮುಖ್ಯ ಅದರಂತೆ ನಂಬಿಕೆ ಮನುಷ್ಯನಿಗೆ ಮುಖ್ಯ. ನಿಮ್ಮ ನಮ್ಮ ಸಂಬಂಧ ನಂಬಿಕೆಯ ಮೇಲೆ ನಡೆಯಬೇಕು. ನಮ್ಮ ಮೇಲೆ ನಂಬಿಕೆಯನ್ನಿಡಿ. ದೇವರು ವರ ಹಾಗೂ ಶಆಪ ನೀಡುವುದಿಲ್ಲ. ಕೇವಲ ಅವಕಾಶ ಮಾತ್ರ ನೀಡುತ್ತಾನೆ. ಕೊಟ್ಟ ಅಕಾಶದಲ್ಲಿ ನಾವು ಯಾವ ರೀತಿ ಸೇವೆ ಮಾಡುತ್ತೇವೆ ಎಂಬುದು ಮುಖ್ಯ. ನಮಗೆ ಸಿಕ್ಕಿರುವ ಅವಕಾಶದಲ್ಲಿ ನಿಮ್ಮ ಹೃದಯ ಗೆಲ್ಲುವ ಕೆಲಸ ಮಾಡಲಾಗುವುದು. ನಿಮ್ಮ ಪ್ರೀತಿ, ವಿಶ್ವಾಸ ನಮ್ಮ ಮೇಲೆ ಹೀಗೆ ಇರಲಿ. ನಾವು ನೀವು ಜೀವನದಲ್ಲಿ ಹೋರಾಟ ಮಾಡಿಕೊಂಡೆ ಬಂದವರು. ನೀವು ನಿಮ್ಮದೇ ಆದ ಹೋರಾಟ ಮಾಡುತ್ತಿದ್ದೀರಿ. ಸಾಧನೆ ಇಲ್ಲದೇ ಸತ್ತರೆ ಸಾವಿಗೆ ಅವಮಾನ, ಆದರ್ಶ ಇಲ್ಲದೇ ಬದುಕಿದರೆ ಬದುಕಿಗೆ ಅವಮಾನ. ಸಾಧನೆ ಹಾಗೂ ಆದರ್ಶ ಎರಡೂ ಇರಬೇಕು” ಎಂದು ತಿಳಿಸಿದರು.

“ಇತಿಹಾಸ ಮರೆತವನು ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ ಎಂದು ಅಂಬೇಡ್ಕರ್ ಅವರು ಹೇಳಿದ್ದಾರೆ. ಅದಕ್ಕೆ ನಮ್ಮ ಸರ್ಕಾರ ಜನರ ಬದುಕಿನಲ್ಲಿ ಅನೇಕ ಬದಲಾವಣೆಗಳನ್ನು ತರಲಾಗಿದೆ. ಇದರ ಮೂಲಕ ಇತಿಹಾಸ ನಿರ್ಮಾಣ ಮಾಡಲಾಗುತ್ತಿದೆ. ಐದು ಗ್ಯಾರಂಟಿಗಳನ್ನು ನೀಡಿ ಇಡೀ ದೇಶಕ್ಕೆ ಮಾದರಿಯಾಗಿದ್ದೇವೆ. ಅನೇಕ ರಾಜ್ಯಗಳು ಹೆಸರು ಬದಲಾವಣೆ ಮಾಡಿ ಕರ್ನಾಟಕ ಮಾದರಿಯನ್ನು ಅನುಸರಿಸಿವೆ. ನಮ್ಮ ಕೆಲಸಗಳ ಬಗ್ಗೆ ಮಾಡಿದ ಟೀಕೆಗಳು ಸತ್ತಿವೆ. ನಮ್ಮ ಕೆಲಸಗಳು ಮಾತ್ರ ಉಳಿದಿವೆ” ಎಂದರು.

ನಿಮ್ಮ ಬೇಡಿಕೆಗಳ ಬಗ್ಗೆ ಆಲೋಚನೆ ಮಾಡುತ್ತೇವೆ, ನಮ್ಮ ಜೊತೆ ನೀವಿರಿ, ನಿಮ್ಮ ಜೊತೆ ನಾವಿರುತ್ತೇವೆ

“ನನ್ನ ಹಾಗೂ ಪರಮೇಶ್ವರ್ ಅವರ ಮುಂದೆ ಇಟ್ಟಿರುವ ಬೇಡಿಕೆಗಳನ್ನು ಇಟ್ಟಿದ್ದೀರಿ ಅದರ ಬಗ್ಗೆ ನಾವು ಆಲೋಚನೆ ಮಾಡುತ್ತೇವೆ. ಸಮಿತಿಯ ವರದಿ ಬಂದ ಮೇಲೆ ಕ್ಯಾಬಿನೆಟ್ ಅಲ್ಲಿ ಚರ್ಚೆ ನಡೆಸಿ ನಂತರ ನಿಮ್ಮ ಜೊತೆಯೂ ಚರ್ಚೆ ನಡೆಸಲಾಗುವುದು. ನಮ್ಮ ಕೈಯಲ್ಲಿ ಏನು ಸಹಾಯ ಆಗುವುದೋ ಅದನ್ನು ಮಾಡುತ್ತೇವೆ. ಎಲ್ಲದಕ್ಕೂ ಶುಭ ಕಾಲ ಶುಭ ಗಳಿಗೆ ಬರಬೇಕು ಎಂದು ಹೇಳಿದ್ದೇನೆ. ನೀವು ತಾಳ್ಮೆಯಿಂದ ಇರಿ. ಬಸವಣ್ಣನ ನಾಡಿನಲ್ಲಿ ಹುಟ್ಟಿರುವವರು ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವವರು. ನುಡಿದಂತೆ ನಡೆವ ಸರ್ಕಾರ ಕಾಂಗ್ರೆಸ್ ಸರ್ಕಾರ ಮಾತ್ರ. ಇದು ನಿಮ್ಮ ಸರ್ಕಾರ” ಎಂದರು.

“ಓಪಿಎಸ್, ಎನ್ ಪಿಎಸ್ ಬಗ್ಗೆ ನಮಗೆ ಗಮನವಿದೆ. ನೀವು ಆಡಳಿತ ಯಂತ್ರದ ರಥ. ನೀವು ಚೆನ್ನಾಗಿದ್ದರೆ ಇಡೀ ಆಡಳಿತ ಯಂತ್ರ ಚೆನ್ನಾಗಿ ನಡೆಯುತ್ತದೆ. ಕುಟುಂಬದ ರೀತಿಯಲ್ಲಿ ನಾವುಗಳು ಕೆಲಸ ಮಾಡಬೇಕು. ಮಾತು ಕೊಡುವುದೂ ಮುಖ್ಯವಲ್ಲ. ಮಾತು ಉಳಿಸಿಕೊಳ್ಳುವುದು ಮುಖ್ಯ. ನೀವು ನಮ್ಮ ಜೊತೆಯಲ್ಲಿ ಇರುತ್ತೇವೆ ಎಂದು ಹೇಳಿದ್ದೀರಿ” ಎಂದರು.

ನಮ್ಮ – ನಿಮ್ಮ ಒಪ್ಪಂದಕ್ಕೆ ಇಬ್ಬರು ಸ್ವಾಮೀಜಿಗಳೇ ಸಾಕ್ಷಿ

” ನಾನು ಹಾಗೂ ಪರಮೇಶ್ವರ್ ಅವರು ನಿಮ್ಮ ಜೊತೆ ಇರುತ್ತೇವೆ ಎಂದು ಮಾತು ಕೊಡುತ್ತೇನೆ. ನಮ್ಮ ನಡುವಿನ‌ ಈ ಒಪ್ಪಂದಕ್ಕೆ ನಿರ್ಮಲಾನಂದನಾಥ ಹಾಗೂ ಸಿದ್ದಲಿಂಗ ಸ್ವಾಮಿಜಿಗಳಿಬ್ಬರು ಸಾಕ್ಷಿ. ಪರಮೇಶ್ವರ್ ಅವರ ಬಳಿ ಬಾಂಡ್ ಪೇಪರ್ ಇದೆ. ಎಲ್ಲರೂ ಸೇರಿ ಇದಕ್ಕೆ ಸಹಿ ಹಾಕಬೇಕು. ಅದರಲ್ಲಿ ಮುಂದಿನ ಬಾರಿಗೆ ನಿಮ್ಮ- ನಮ್ಮ ಸರ್ಕಾರ ಒಟ್ಟಿಗೆ ಕೆಲಸ ಮಾಡಬೇಕು. ಯಾವುದೇ ಹೆಚ್ಚು ಕಡಿಮೆ ಆಗುವುದಿಲ್ಲ ತಾನೇ?” ಎಂದು ಹೇಳಿದರು.

“ಉಳಿ ಪೆಟ್ಟು ಬೀಳದೆ ಯಾವುದೇ ಶಿಲೆ ಪ್ರತಿಮೆಯಾಗುವುದಿಲ್ಲ. ಉಳುಮೆ ಮಾಡದೇ ಯಾವ ಭೂಮಿಯೂ ಮಟ್ಟ ಆಗುವುದಿಲ್ಲ. ನಿಮ್ಮ ಬದುಕಿನ ಬಗ್ಗೆ ನಮಗೆ ಅರಿವಿದೆ. ಈ ನಿಟ್ಟಿನಲ್ಲಿ ನಾವು ನಿಮ್ಮ ಜೊತೆ ನಿಲ್ಲುತ್ತೇವೆ. ಪರಮೇಶ್ವರ್ ಅವರ ಬಾಂಡ್ ಪೇಪರ್ ಅನ್ನು ಭದ್ರವಾಗಿ ಇಟ್ಟುಕೊಳ್ಳಿ. ಈ ವರ್ಷ ನಮ್ಮ ರಾಜ್ಯದಲ್ಲಿ ಒಳ್ಳೆ ಮಳೆ ಬೆಳೆ ಬರಲಿ ಎಂದು ಪ್ರಾರ್ಥಿಸುತ್ತೇನೆ” ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಹೆಚ್ಚಳ (17)

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

by ಶಾಲಿನಿ ಕೆ. ಡಿ
July 12, 2026 - 11:18 pm
0

ಹೆಚ್ಚಳ (15)

‘ನಾವು 100 ಕೋಟಿ ಮಾಡಿದ್ವಿ’: ಚಿತ್ರ ಯಶಸ್ಸಿಗೆ ಸಮಂತಾ ಕ್ಯೂಟ್ ರಿಯಾಕ್ಷನ್..ವಿಡಿಯೋ ವೈರಲ್

by ಶಾಲಿನಿ ಕೆ. ಡಿ
July 12, 2026 - 10:56 pm
0

ಹೆಚ್ಚಳ (14)

ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ

by ಶಾಲಿನಿ ಕೆ. ಡಿ
July 12, 2026 - 10:36 pm
0

ಹೆಚ್ಚಳ (13)

ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

by ಶಾಲಿನಿ ಕೆ. ಡಿ
July 12, 2026 - 10:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಚ್ಚಳ (17)
    ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ
    July 12, 2026 | 0
  • ಹೆಚ್ಚಳ (15)
    ‘ನಾವು 100 ಕೋಟಿ ಮಾಡಿದ್ವಿ’: ಚಿತ್ರ ಯಶಸ್ಸಿಗೆ ಸಮಂತಾ ಕ್ಯೂಟ್ ರಿಯಾಕ್ಷನ್..ವಿಡಿಯೋ ವೈರಲ್
    July 12, 2026 | 0
  • ಹೆಚ್ಚಳ (14)
    ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ
    July 12, 2026 | 0
  • ಹೆಚ್ಚಳ (13)
    ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು
    July 12, 2026 | 0
  • ಹೆಚ್ಚಳ (12)
    ಆಂಧ್ರದಲ್ಲಿ ಕೋವಿಡ್‌ಗೆ ಇಬ್ಬರು ಬಲಿ, 8 ಸಕ್ರಿಯ ಪ್ರಕರಣ
    July 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version