• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಜಮ್ಮು-ಕಾಶ್ಮೀರದಲ್ಲಿ ಮಳೆ ಆರ್ಭಟ: ಸಾವಿನ ಸಂಖ್ಯೆ 27ಕ್ಕೆ ಏರಿಕೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 22, 2026 - 7:27 am
in ದೇಶ
0 0
0
ಸ್ವ (35)

ಜಮ್ಮು-ಕಾಶ್ಮೀರದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಭೂಕುಸಿತಗಳು ಭಾರೀ ಅನಾಹುತಕ್ಕೆ ಕಾರಣವಾಗಿದ್ದು, ರಾಜ್ಯದ ಹಲವು ಜಿಲ್ಲೆಗಳು ಪ್ರವಾಹದ ಅಬ್ಬರಕ್ಕೆ ತತ್ತರಿಸಿವೆ. ಪೂಂಚ್ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿರುವ ದುರ್ಘಟನೆಯೊಂದಿಗೆ ಮಳೆ ಸಂಬಂಧಿತ ಸಾವಿನ ಸಂಖ್ಯೆ 27ಕ್ಕೆ ಏರಿಕೆಯಾಗಿದೆ.

ಪೂಂಚ್ ಜಿಲ್ಲೆಯ ಲೋರನ್ ದುಮಿಲಾನ್ ಗ್ರಾಮದಲ್ಲಿ ಬೆಟ್ಟದ ಮೇಲ್ಭಾಗದಲ್ಲಿದ್ದ ಮಣ್ಣಿನ ಮನೆಯ ಮೇಲೆ ಭೂಕುಸಿತ ಸಂಭವಿಸಿದೆ. ಘಟನೆ ವೇಳೆ ಮನೆಯೊಳಗಿದ್ದ ಏಳು ಮಂದಿ ಮಣ್ಣಿನಡಿ ಸಿಲುಕಿದ್ದು, ಸ್ಥಳೀಯರು, ಪೊಲೀಸರು ಹಾಗೂ ನಾಗರಿಕ ಆಡಳಿತದ ಸಿಬ್ಬಂದಿ ದಿನವಿಡೀ ನಡೆಸಿದ ಕಾರ್ಯಾಚರಣೆಯ ಬಳಿಕ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮೃತಪಟ್ಟವರಲ್ಲಿ ಜಾಹಿದಾ ಬೇಗಂ, ಅವರ ಇಬ್ಬರು ಮಕ್ಕಳು, ಸಂಬಂಧಿಕರು ಹಾಗೂ ಕುಟುಂಬದ ಇತರ ಸದಸ್ಯರು ಸೇರಿದ್ದಾರೆ. ಮೃತರೆಲ್ಲರೂ ಮಂಡಿ ತಹಸೀಲಿನ ಅರಿಗಾಂ ಗ್ರಾಮದ ನಿವಾಸಿಗಳಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

RelatedPosts

ವಿದ್ಯಾರ್ಥಿ ಸಮೂಹದಲ್ಲಿ ರಾಹುಲ್ ಗಾಂಧಿ ಅಪಪ್ರಚಾರ; ಜೋಶಿ ಆರೋಪ

NEET ಪ್ರತಿಭಟನೆಗೆ ಎನ್‌ಡಿಎ ಕೌಂಟರ್; ಸಂಸತ್‌ಗೂ ಮುನ್ನ ಶಕ್ತಿ ಪ್ರದರ್ಶನ

NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರತಿಭಟನೆಗೆ ಸಲ್ಮಾನ್ ಖಾನ್ ಬೆಂಬಲ

16 ವರ್ಷಗಳ ಬಳಿಕ ಭಾರತಕ್ಕೆ ಮರಳಲಿರುವ ಲಲಿತ್ ಮೋದಿ

ADVERTISEMENT
ADVERTISEMENT

ಇದೇ ವೇಳೆ, ರಾಜೌರಿ ಜಿಲ್ಲೆಯಲ್ಲೂ ಪ್ರವಾಹದಿಂದ ಭಾರೀ ಹಾನಿಯಾಗಿದೆ. ಸುರಾನ್ ನದಿಯ ಪ್ರವಾಹಕ್ಕೆ ಮನೆವೊಂದು ಕೊಚ್ಚಿಹೋಗಿ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿದ್ದರು. ಕಳೆದ ಎರಡು ದಿನಗಳ ಮಳೆಯಿಂದ ರಾಜೌರಿ ಮತ್ತು ಪೂಂಚ್ ಜಿಲ್ಲೆಗಳಲ್ಲಿ ಅನೇಕ ಮನೆಗಳು ಧ್ವಂಸವಾಗಿದ್ದು, ರಸ್ತೆ ಸಂಪರ್ಕ, ವಿದ್ಯುತ್ ಹಾಗೂ ದೂರಸಂಪರ್ಕ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಸಂತ್ರಸ್ತರಿಗೆ ಆಹಾರ ಮತ್ತು ಅಗತ್ಯ ವಸ್ತುಗಳನ್ನು ತಲುಪಿಸುವ ಕಾರ್ಯ ಮುಂದುವರಿದಿದೆ.

ಡೋಡಾ ಜಿಲ್ಲೆಯಲ್ಲೂ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಜಮ್ಮು–ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯ ರಗ್ಗಿ ನಲ್ಲಾ ಬಳಿ ಬೆಟ್ಟದಿಂದ ಉರುಳಿದ ಬಂಡೆ ಬಸ್‌ಗೆ ಅಪ್ಪಳಿಸಿದ ಪರಿಣಾಮ ಒಬ್ಬ ಪ್ರಯಾಣಿಕ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಮತ್ತೊಂದು ಘಟನೆಯಲ್ಲಿ ಮನೆಯ ಮೇಲೆ ಬಂಡೆ ಬಿದ್ದ ಪರಿಣಾಮ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.

ರಾಜೌರಿ ಪಟ್ಟಣದ ಬೇಲಾ ಕಾಲೋನಿಯಲ್ಲಿ ದರ್ಹಾಲಿ ನದಿಯ ಪ್ರವಾಹಕ್ಕೆ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಸುಮಾರು 30 ವಾಹನಗಳು ಕೊಚ್ಚಿಹೋಗಿವೆ. ಅನೇಕ ಮನೆಗಳು, ಅಂಗಡಿಗಳು ಹಾಗೂ ಕೃಷಿಭೂಮಿಗೂ ಹಾನಿಯಾಗಿದೆ. ಸುರನ್‌ಕೋಟೆ, ದರ್ಹಾಲ್, ಥಾನಮಂಡಿ, ಮಂಜಕೋಟೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮೊಬೈಲ್ ಟವರ್‌ಗಳು, ಆಪ್ಟಿಕಲ್ ಫೈಬರ್ ಕೇಬಲ್‌ಗಳು ಮತ್ತು ವಿದ್ಯುತ್ ಕಂಬಗಳು ಹಾನಿಗೊಳಗಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಭಾರತೀಯ ಹವಾಮಾನ ಇಲಾಖೆ ಜುಲೈ 25ರವರೆಗೆ ಭಾರೀ ಮಳೆ ಹಾಗೂ ಕೆಲವೆಡೆ ಮೇಘಸ್ಫೋಟ ಸಂಭವಿಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ನದಿ ತೀರ ಹಾಗೂ ತಗ್ಗು ಪ್ರದೇಶಗಳ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದ್ದು, ಅನಗತ್ಯವಾಗಿ ಅಪಾಯದ ಪ್ರದೇಶಗಳಿಗೆ ತೆರಳದಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ.

ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಪಹಲ್ಗಾಮ್ ಮತ್ತು ಬಾಲ್ತಾಲ್ ಮಾರ್ಗಗಳಿಂದ ನಡೆಯುತ್ತಿದ್ದ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಯಾತ್ರಾರ್ಥಿಗಳು ಸಮೀಪದ ಶಿಬಿರಗಳಲ್ಲಿ ಉಳಿದುಕೊಂಡು ಆಡಳಿತದ ಸೂಚನೆ ಪಾಲಿಸುವಂತೆ ಮನವಿ ಮಾಡಲಾಗಿದೆ.

ರಾಜ್ಯದ ಗಂಭೀರ ಪರಿಸ್ಥಿತಿಯನ್ನು ಗಮನಿಸಿದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ತಮ್ಮ ದೆಹಲಿ ಪ್ರವಾಸವನ್ನು ಅರ್ಧದಲ್ಲೇ ಮೊಟಕುಗೊಳಿಸಿ ಜಮ್ಮುವಿಗೆ ಮರಳಿದ್ದಾರೆ. ಪರಿಸ್ಥಿತಿಯ ಮೇಲೆ ನೇರ ನಿಗಾ ವಹಿಸುವುದಾಗಿ ಅವರು ತಿಳಿಸಿದ್ದಾರೆ. ಇದೇ ವೇಳೆ, ಬಿಜೆಪಿ ನಿಯೋಗವೂ ಪ್ರವಾಹಪೀಡಿತ ರಾಜೌರಿ ಹಾಗೂ ಪೂಂಚ್ ಜಿಲ್ಲೆಗಳಿಗೆ ಭೇಟಿ ನೀಡಿ ಹಾನಿಯ ಪರಿಶೀಲನೆ ನಡೆಸಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

1600 900 (16)

ಪಿಕಾಕ್ಸ್ ಮೌಂಟೇನ್ ವ್ಯೂಹವನ್ನು ಭೇದಿಸುತ್ತ ಅಮೆರಿಕಾ?

by Hemanth Kumar S
July 23, 2026 - 1:26 pm
0

1600 900 (15)

ಬಜ್ಜಿ-ಬೋಂಡಾ ಪ್ರಿಯರೇ ಎಚ್ಚರ..! ನಿಮ್ಮ ಆರೋಗ್ಯಕ್ಕೆ ಇದು ಡೇಂಜರ್!

by ಕವಿತಾ
July 23, 2026 - 1:01 pm
0

1600 900 (13)

ಚಿನ್ನ ಖರೀದಿಸುವ ಮುನ್ನ ಗಮನಿಸಿ: ಸತತ 5ನೇ ದಿನ ಚಿನ್ನದ ದರ ಜಿಗಿತ

by ಕವಿತಾ
July 23, 2026 - 12:34 pm
0

1600 900 (12)

ಡ್ರ್ಯಾಗನ್ ಟೀಂ ಖಬರ್; 10 ದಿನಗಳ ಹೈ-ವೋಲ್ಟೇಜ್ ಆ್ಯಕ್ಷನ್ ಶೂಟ್!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 23, 2026 - 12:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • 1600 900 (7)
    ವಿದ್ಯಾರ್ಥಿ ಸಮೂಹದಲ್ಲಿ ರಾಹುಲ್ ಗಾಂಧಿ ಅಪಪ್ರಚಾರ; ಜೋಶಿ ಆರೋಪ
    July 23, 2026 | 0
  • 1600 900 (4)
    NEET ಪ್ರತಿಭಟನೆಗೆ ಎನ್‌ಡಿಎ ಕೌಂಟರ್; ಸಂಸತ್‌ಗೂ ಮುನ್ನ ಶಕ್ತಿ ಪ್ರದರ್ಶನ
    July 23, 2026 | 0
  • 1600 900 (3)
    NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರತಿಭಟನೆಗೆ ಸಲ್ಮಾನ್ ಖಾನ್ ಬೆಂಬಲ
    July 23, 2026 | 0
  • 1600 900 (2)
    16 ವರ್ಷಗಳ ಬಳಿಕ ಭಾರತಕ್ಕೆ ಮರಳಲಿರುವ ಲಲಿತ್ ಮೋದಿ
    July 23, 2026 | 0
  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (2)
    ಜಂತರ್‌ ಮಂತರ್‌ನಲ್ಲಿ ಭುಗಿಲೆದ್ದ ಆಕ್ರೋಶ: ಪೊಲೀಸರ ಮೇಲೆ ಕಲ್ಲು ತೂರಾಟ, ಇಂಟರ್‌ನೆಟ್‌ ಸೇವೆ ಸ್ಥಗಿತ
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version