• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸೀರೆ ಕೊಡಿಸಲಿಲ್ಲವೆಂದು ಪತಿಯನ್ನೇ ಕೊಂದ ಪತ್ನಿ: ಕುಕ್ಕರ್ ಮುಚ್ಚಳದಿಂದ ಹೊಡೆದು ಉಸಿರುಗಟ್ಟಿಸಿ ಹತ್ಯೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 22, 2026 - 4:02 pm
in Flash News, ದೇಶ
0 0
0
Untitled design 2026 07 22T160146.813

ಮುಂಬೈ: ಸಣ್ಣ ವಿಷಯಗಳು ದೊಡ್ಡ ದುರಂತಗಳಿಗೆ ಕಾರಣವಾಗಬಹುದು ಎನ್ನುವುದಕ್ಕೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬದ್ಲಾಪುರ ಪೂರ್ವದಲ್ಲಿ ನಡೆದ ಘಟನೆ ಮತ್ತೊಂದು ಉದಾಹರಣೆಯಾಗಿದೆ. ಸೀರೆ ಕೊಡಿಸದ ವಿಚಾರವಾಗಿ ಆರಂಭವಾದ ದಂಪತಿ ನಡುವಿನ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಪತಿಯನ್ನೇ ಕುಕ್ಕರ್ ಮುಚ್ಚಳದಿಂದ ಹಲ್ಲೆ ನಡೆಸಿ ಬಳಿಕ ಉಸಿರುಗಟ್ಟಿಸಿ ಹತ್ಯೆ ಮಾಡಿದ ಆರೋಪದ ಮೇಲೆ 30 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಮೃತ ವ್ಯಕ್ತಿಯನ್ನು ಹರೇರಾಮ್ ಕಿಶುಂಜಿ ಸಿಂಗ್ (35) ಎಂದು ಗುರುತಿಸಲಾಗಿದ್ದು, ಆರೋಪಿಯಾಗಿರುವ ಪತ್ನಿ ಸುನಿತಾದೇವಿ ಹರೇರಾಮ್ ಸಿಂಗ್ (30) ಮೂಲತಃ ಬಿಹಾರದ ರೋಹ್ರಾಸ್ ಜಿಲ್ಲೆಯ ನಿವಾಸಿಗಳು. ಉದ್ಯೋಗ ನಿಮಿತ್ತ ಇಬ್ಬರೂ ಮಹಾರಾಷ್ಟ್ರದ ಬದ್ಲಾಪುರ ಪೂರ್ವದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.

RelatedPosts

ಶಿಕ್ಷಣ ವ್ಯವಸ್ಥೆಯಲ್ಲಿ ಮಹಾ ವಂಚನೆ, ಕಳೆದ 10 ವರ್ಷಗಳಲ್ಲಿ 152 ಪೇಪರ್‌ ಲೀಕ್‌: ರಾಹುಲ್‌‌ ಗಾಂಧಿ

ಭೀಕರ ರಸ್ತೆ ಅಪಘಾತ: ಸರ್ಕಾರಿ ಬಸ್ ಪಲ್ಟಿಯಾಗಿ ಓರ್ವ ಮಹಿಳೆ ಸಾ*ವು

ಶಾಸಕ ಬಿ.ಪಿ ಹರೀಶ್ ಮೇಲೆ ಮೊಟ್ಟೆ ಎಸೆತ: ಕಮೀಷನರ್‌‌ಗೆ ದೂರು ನೀಡಿದ ಬಿಜೆಪಿ ನಿಯೋಗ

ಮೊಟ್ಟೆ ನೋಡಿ ಬಾಂಬ್ ಎನ್ನುವವರನ್ನು ಮೆಚ್ಚಬೇಕು: R. ಅಶೋಕ್ ವಿರುದ್ಧ ಬಿ.ಕೆ ಹರಿಪ್ರಸಾದ್ ಆಕ್ರೋಶ

ADVERTISEMENT
ADVERTISEMENT

ಜುಲೈ 19ರಂದು ಕೆಲಸ ಮುಗಿಸಿ ಮನೆಗೆ ಬಂದ ಹರೇರಾಮ್ ಅವರಿಗೆ ಪತ್ನಿ ಸೀರೆ ತಂದಿಲ್ಲ ಎಂದು ಪ್ರಶ್ನಿಸಿದ್ದಾಳೆ. ಇದೇ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ ಕೆಲವೇ ಕ್ಷಣಗಳಲ್ಲಿ ತೀವ್ರ ವಾಗ್ವಾದಕ್ಕೆ ತಿರುಗಿದೆ. ಆಕ್ರೋಶಗೊಂಡ ಸುನಿತಾದೇವಿ ಮನೆಯಲ್ಲಿದ್ದ ಪ್ರೆಷರ್ ಕುಕ್ಕರ್‌ನ ಮುಚ್ಚಳವನ್ನು ತೆಗೆದುಕೊಂಡು ಪತಿಯ ತಲೆಗೆ ಹಲವು ಬಾರಿ ಬಲವಾಗಿ ಹೊಡೆದಿದ್ದಾಳೆ ಎನ್ನಲಾಗಿದೆ.

ತೀವ್ರವಾಗಿ ಗಾಯಗೊಂಡ ಪತಿ ನೆಲಕ್ಕುರುಳಿದ ಬಳಿಕವೂ ಆತನ ಕುತ್ತಿಗೆಯನ್ನು ಹಿಸುಕಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾಳೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಘಟನೆ ನಡೆದ ನಂತರ ಆರೋಪಿಯು ಪೊಲೀಸರನ್ನು ದಾರಿ ತಪ್ಪಿಸಲು ಯತ್ನಿಸಿದ್ದಳು. ಪತಿ ಮನೆಯಲ್ಲಿ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿ ಇದನ್ನು ಅಪಘಾತದ ರೂಪಕ್ಕೆ ತರುವ ಪ್ರಯತ್ನ ಮಾಡಿದ್ದಾಳೆ. ಈ ಮಾಹಿತಿ ಆಧರಿಸಿ ಆರಂಭದಲ್ಲಿ ಪೊಲೀಸರು ಅಪಘಾತಕಾರಿ ಸಾವು (ADR) ಪ್ರಕರಣ ದಾಖಲಿಸಿಕೊಂಡಿದ್ದರು.

ಆದರೆ ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಈ ಪ್ರಕರಣ ದಿಕ್ಕೇ ಬದಲಾಯಿತು. ಸರ್ಕಾರಿ ಆಸ್ಪತ್ರೆಯ ವೈದ್ಯರು ನೀಡಿದ ವರದಿಯಲ್ಲಿ ಹರೇರಾಮ್ ಅವರ ಸಾವಿಗೆ ಕುತ್ತಿಗೆ ಹಿಸುಕಿದ್ದರಿಂದ ಉಸಿರುಗಟ್ಟುವಿಕೆ ಕಾರಣವಾಗಿದೆ ಎಂದು ಸ್ಪಷ್ಟಪಡಿಸಲಾಗಿತ್ತು. ಜೊತೆಗೆ ತಲೆಯ ಮೇಲೂ ಗಂಭೀರ ಗಾಯಗಳಿರುವುದು ವರದಿಯಲ್ಲಿ ಉಲ್ಲೇಖವಾಗಿತ್ತು. ಇದರಿಂದ ಪ್ರಕರಣದ ಬಗ್ಗೆ ಪೊಲೀಸರಿಗೆ ಅನುಮಾನ ಮೂಡಿತು.

ಬದ್ಲಾಪುರ ಈಸ್ಟ್ ಪೊಲೀಸ್ ಠಾಣೆಯ ಹಿರಿಯ ಇನ್ಸೆಕ್ಟರ್ ನಿತಿನ್ ಪಾಟೀಲ್ ನೇತೃತ್ವದ ತನಿಖಾ ತಂಡ ಮೃತನ ಕುಟುಂಬಸ್ಥರು, ನೆರೆಹೊರೆಯವರು ಹಾಗೂ ಬಾಡಿಗೆ ಮನೆಯ ಮಾಲೀಕರನ್ನು ವಿಚಾರಣೆಗೆ ಒಳಪಡಿಸಿತು. ತನಿಖೆಯಲ್ಲಿ ಹಲವು ಮಾಹಿತಿ ಬೆಳಕಿಗೆ ಬಂದ ಹಿನ್ನೆಲೆ ಸುನಿತಾದೇವಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಯಿತು. ವಿಚಾರಣೆ ವೇಳೆ ಆಕೆಯ ಹೇಳಿಕೆಗಳಲ್ಲಿ ಕಂಡುಬಂದ ವ್ಯತ್ಯಾಸಗಳು ಮತ್ತು ವೈದ್ಯಕೀಯ ಸಾಕ್ಷ್ಯಾಧಾರಗಳು ಪ್ರಕರಣವನ್ನು ಕೊಲೆ ಎಂದು ದೃಢಪಡಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದಾದ ಬಳಿಕ ಸುನಿತಾದೇವಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಹೆಚ್ಚಿನ ತನಿಖೆಗಾಗಿ ನ್ಯಾಯಾಲಯ ಆರೋಪಿಯನ್ನು ಜುಲೈ 29ರವರೆಗೆ ಪೊಲೀಸ್ ವಶಕ್ಕೆ ಒಪ್ಪಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪ್ರೊಟೆಸ್ಟ್ ಗೆ

NEET‌ ಪ್ರೊಟೆಸ್ಟ್‌‌ಗೆ ತಾರಾಬಲ..ಯಾವ್ಯಾವ ಸ್ಟಾರ್ ಏನಂದ್ರು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 22, 2026 - 6:06 pm
0

Untitled design 2026 07 22T173658.791

ಶಿಕ್ಷಣ ವ್ಯವಸ್ಥೆಯಲ್ಲಿ ಮಹಾ ವಂಚನೆ, ಕಳೆದ 10 ವರ್ಷಗಳಲ್ಲಿ 152 ಪೇಪರ್‌ ಲೀಕ್‌: ರಾಹುಲ್‌‌ ಗಾಂಧಿ

by ಶಾಲಿನಿ ಕೆ. ಡಿ
July 22, 2026 - 5:38 pm
0

Untitled design 2026 07 22T172349.876

ಭೀಕರ ರಸ್ತೆ ಅಪಘಾತ: ಸರ್ಕಾರಿ ಬಸ್ ಪಲ್ಟಿಯಾಗಿ ಓರ್ವ ಮಹಿಳೆ ಸಾ*ವು

by ಶಾಲಿನಿ ಕೆ. ಡಿ
July 22, 2026 - 5:24 pm
0

Untitled design 2026 07 22T170743.088

ಶಾಸಕ ಬಿ.ಪಿ ಹರೀಶ್ ಮೇಲೆ ಮೊಟ್ಟೆ ಎಸೆತ: ಕಮೀಷನರ್‌‌ಗೆ ದೂರು ನೀಡಿದ ಬಿಜೆಪಿ ನಿಯೋಗ

by ಶಾಲಿನಿ ಕೆ. ಡಿ
July 22, 2026 - 5:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 22T173658.791
    ಶಿಕ್ಷಣ ವ್ಯವಸ್ಥೆಯಲ್ಲಿ ಮಹಾ ವಂಚನೆ, ಕಳೆದ 10 ವರ್ಷಗಳಲ್ಲಿ 152 ಪೇಪರ್‌ ಲೀಕ್‌: ರಾಹುಲ್‌‌ ಗಾಂಧಿ
    July 22, 2026 | 0
  • Untitled design 2026 07 22T172349.876
    ಭೀಕರ ರಸ್ತೆ ಅಪಘಾತ: ಸರ್ಕಾರಿ ಬಸ್ ಪಲ್ಟಿಯಾಗಿ ಓರ್ವ ಮಹಿಳೆ ಸಾ*ವು
    July 22, 2026 | 0
  • Untitled design 2026 07 22T170743.088
    ಶಾಸಕ ಬಿ.ಪಿ ಹರೀಶ್ ಮೇಲೆ ಮೊಟ್ಟೆ ಎಸೆತ: ಕಮೀಷನರ್‌‌ಗೆ ದೂರು ನೀಡಿದ ಬಿಜೆಪಿ ನಿಯೋಗ
    July 22, 2026 | 0
  • Untitled design 2026 07 22T164540.801
    ಮೊಟ್ಟೆ ನೋಡಿ ಬಾಂಬ್ ಎನ್ನುವವರನ್ನು ಮೆಚ್ಚಬೇಕು: R. ಅಶೋಕ್ ವಿರುದ್ಧ ಬಿ.ಕೆ ಹರಿಪ್ರಸಾದ್ ಆಕ್ರೋಶ
    July 22, 2026 | 0
  • Untitled design 2026 07 22T153424.835
    ಕಾಂಗ್ರೆಸ್ ಕಚೇರಿ ಬಳಿ ಶಾಸಕ ಬಿಪಿ ಹರೀಶ್ ಮೇಲೆ ಮೊಟ್ಟೆ ಎಸೆತ
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version