• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತೆಲಂಗಾಣದಲ್ಲಿ ಶಾಲೆಯ ಪ್ರಾಂಶುಪಾಲರನ್ನೇ ಕೊಂದ ಇಬ್ಬರು ವಿದ್ಯಾರ್ಥಿಗಳು..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 20, 2026 - 1:26 pm
in Flash News, ದೇಶ
0 0
0
ಡೀಸೆಲ್ ಬೆಲೆ (7)

ನಲ್ಗೊಂಡ: ಪೋಷಕರಿಗೆ ದೂರು ನೀಡುವುದಾಗಿ ಎಚ್ಚರಿಸಿದ್ದಕ್ಕೆ ಶಾಲೆಯ ಪ್ರಾಂಶುಪಾಲೆಯನ್ನೇ 10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯ ಕೊಂಡಮಲ್ಲೇಪಲ್ಲಿಯಲ್ಲಿ ನಡೆದಿದೆ. ಕಲ್ಲು ರೂಪಾ ರೆಡ್ಡಿ (48) ಎಂಬ ಪ್ರಾಂಶುಪಾಲೆಯನ್ನು ವಿದ್ಯಾರ್ಥಿಗಳು 27 ಬಾರಿ ಚಾಕುವಿನಿಂದ ಇರಿದು ಕೊಂದಿರುವ ಪ್ರಕರಣ ಬೆಳಕಿಗೆ ಬಂದಿದೆ. 

ಕೊಂಡಮಲ್ಲೇಪಲ್ಲಿಯ ನಾಗಾರ್ಜುನ್ ಪಬ್ಲಿಕ್ ಶಾಲೆಯಲ್ಲಿ ಪ್ರಾಂಶುಪಾಲೆಯಾಗಿ ಹಾಗೂ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ರೂಪಾ ರೆಡ್ಡಿ, ವಿದ್ಯಾರ್ಥಿಗಳ ದುಬಾರಿ ಜೀವನಶೈಲಿ ಮತ್ತು ಅತಿಯಾದ ಖರ್ಚಿನ ಬಗ್ಗೆ ಪ್ರಶ್ನಿಸಿದ್ದರು ಎನ್ನಲಾಗಿದೆ. ಹಾಸ್ಟೆಲ್‌ನಲ್ಲಿ ಒಂದೇ ಕೊಠಡಿಯಲ್ಲಿ ವಾಸಿಸುತ್ತಿದ್ದ ಇಬ್ಬರು ವಿದ್ಯಾರ್ಥಿಗಳ ಬಳಿ ಹಣ ಮತ್ತು ಮೊಬೈಲ್ ಪತ್ತೆಯಾಗಿದ್ದ ಹಿನ್ನೆಲೆ ಅವರನ್ನು ತರಾಟೆಗೆ ತೆಗೆದುಕೊಂಡಿದ್ದ ರೂಪಾ ರೆಡ್ಡಿ, ಈ ವಿಚಾರವನ್ನು ಪೋಷಕರಿಗೆ ತಿಳಿಸುವುದಾಗಿ ಎಚ್ಚರಿಸಿದ್ದರು. ಇದೇ ವಿಚಾರದಲ್ಲಿ ಇಬ್ಬರು ಬಾಲಕರಲ್ಲಿ ಆಕ್ರೋಶಕ್ಕೆ ಕಾರಣವಾಗಿ ಕೊಲೆ ಸಂಚಿಗೆ ದಾರಿ ಮಾಡಿಕೊಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

RelatedPosts

5 ಸಾವಿರ ಕಿ.ಮೀ ರಸ್ತೆ ನಿರ್ಮಾಣಕ್ಕೆ ಮುಂದಾದ ಭಾರತ: ಚೀನಾ-ಪಾಕ್‌‌ಗೆ ಶುರುವಾಯ್ತು ನಡುಕ

ಗಂಡ ವಾಪಸ್ ಬರುತ್ತಾನೆಂದು ಹೇಳಿದ್ದ ಸ್ವಾಮೀಜಿ: ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ

ದಾವಣಗೆರೆಯಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ

ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಇಂದಿನ ದರ ವಿವರ

ADVERTISEMENT
ADVERTISEMENT

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಇಬ್ಬರು ವಿದ್ಯಾರ್ಥಿಗಳು ಐಫೋನ್, ಬೈಕ್ ಸೇರಿದಂತೆ ದುಬಾರಿ ವಸ್ತುಗಳ ಖರೀದಿ ಹಾಗೂ ಐಷಾರಾಮಿ ಜೀವನ ನಡೆಸುವ ಆಸೆ ಹೊಂದಿದ್ದರು. ಸುಲಭವಾಗಿ ಹಣ ಸಂಪಾದಿಸುವ ಮಾರ್ಗಗಳಿಗಾಗಿ ಯೂಟ್ಯೂಬ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹುಡುಕಾಟ ನಡೆಸಿದ್ದರು ಎನ್ನಲಾಗಿದೆ. ಬಳಿಕ ಪ್ರಾಂಶುಪಾಲೆಯ ಮನೆಯಲ್ಲಿ ಹಣ ಇರುವ ಬಗ್ಗೆ ಮಾಹಿತಿ ಪಡೆದು ದರೋಡೆ ಹಾಗೂ ಹತ್ಯೆಗೆ ಯೋಜನೆ ರೂಪಿಸಿದ್ದರು ಎಂದು ತಿಳಿದುಬಂದಿದೆ.

ಕೊಲೆಗೂ ಮುನ್ನ ಸುಮಾರು ಒಂದು ವಾರದ ಕಾಲ ರೂಪಾ ರೆಡ್ಡಿ ಅವರ ಮನೆಯ ಸುತ್ತಮುತ್ತ ವಿದ್ಯಾರ್ಥಿಗಳು ಗಮನ ಹರಿಸಿದ್ದರು ಎನ್ನಲಾಗಿದೆ. ಬಳಿಕ ಚಾಕು, ಮುಖವಾಡ ಮತ್ತು ಕೈಗವಸುಗಳನ್ನು ಸಿದ್ಧಪಡಿಸಿಕೊಂಡು ಮನೆಯ ಹಿಂಬಾಗಿಲಿನಿಂದ ಒಳನುಗ್ಗಿದ್ದಾರೆ. ಆ ಸಂದರ್ಭದಲ್ಲಿ ರೂಪಾ ರೆಡ್ಡಿ ಅವರು ತಮ್ಮ ಸಂಬಂಧಿಯೊಂದಿಗೆ ದೂರವಾಣಿಯಲ್ಲಿ ಮಾತನಾಡುತ್ತಿದ್ದರು. ಕೆಲವೇ ಕ್ಷಣಗಳಲ್ಲಿ ಅವರ ಮೇಲೆ ದಾಳಿ ನಡೆಸಿ 27 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಯ ಬಳಿಕ ಮನೆಯಲ್ಲಿದ್ದ ನಗದು ಹಾಗೂ ಮೊಬೈಲ್‌ಗಳನ್ನು ಕದ್ದುಕೊಂಡು ಇಬ್ಬರೂ ವಿದ್ಯಾರ್ಥಿಗಳು ಪರಾರಿಯಾಗಿದ್ದರು. ತನಿಖೆ ನಡೆಸುತ್ತಿದ್ದ ಪೊಲೀಸರು ಡೊನಿಯಾಲ ಎಕ್ಸ್‌ರೋಡ್ ಬಳಿ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಇಬ್ಬರನ್ನು ತಡೆದು ವಿಚಾರಣೆ ನಡೆಸಿದ್ದಾರೆ. ಅವರ ಬಳಿ ಪತ್ತೆಯಾದ ನೋಟುಗಳ ಮೇಲೆ ರಕ್ತದ ಕಲೆಗಳು ಕಂಡುಬಂದಿದ್ದು, ಅನುಮಾನ ಮೂಡಿತ್ತು..

ಆರೋಪಿಗಳಿಂದ ₹1.54 ಲಕ್ಷ ನಗದು, ರಕ್ತಸಿಕ್ತ ಚಾಕು, ಕೈಗವಸುಗಳು ಹಾಗೂ ಕದ್ದ ಹಣದಲ್ಲಿ ಸುಮಾರು ₹60 ಸಾವಿರ ನೀಡಿ ಖರೀದಿಸಿದ್ದ ಹೊಸ ಐಫೋನ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ತನಿಖೆಯನ್ನು ನಲ್ಗೊಂಡ ಎಸ್‌ಪಿ ಶರತ್ ಚಂದ್ರ ಪವಾರ್ ನೇತೃತ್ವದಲ್ಲಿ ಐದು ವಿಶೇಷ ತಂಡಗಳು ನಡೆಸಿವೆ. ಸುಮಾರು 30 ಕಿಲೋಮೀಟರ್ ವ್ಯಾಪ್ತಿಯ 70ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ಪರಿಶೀಲಿಸಿ, 80ಕ್ಕೂ ಹೆಚ್ಚು ಮಂದಿಯನ್ನು ವಿಚಾರಣೆ ನಡೆಸಿದ ಬಳಿಕ ಆರೋಪಿಗಳ ಸುಳಿವು ಪತ್ತೆಯಾಗಿದೆ. ಇದೀಗ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸ್ತಿದ್ದಾರೆ. 

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 20T145102.047

ಸು ಫ್ರಮ್ ಸೋ ಶನೀಲ್ ಜೊತೆ ಕೈ ಜೋಡಿಸಿದ ಶಿಲ್ಪಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 20, 2026 - 2:53 pm
0

Untitled design 2026 08 20T143045.854

ಹಾಲಿವುಡ್ ನಿದ್ದೆಗೆಡಿಸಿದ ಟಾಕ್ಸಿಕ್ ಇಂಗ್ಲಿಷ್ ಟ್ರೈಲರ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 20, 2026 - 2:32 pm
0

ಡೀಸೆಲ್ ಬೆಲೆ (9)

ನಟಿ ಪವಿತ್ರಾ ಗೌಡ ಮಾಜಿ ಪತಿ ಸಂಜಯ್ ಸಿಂಗ್ ನಿಧನ..?!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 20, 2026 - 2:18 pm
0

ಡೀಸೆಲ್ ಬೆಲೆ (8)

5 ಸಾವಿರ ಕಿ.ಮೀ ರಸ್ತೆ ನಿರ್ಮಾಣಕ್ಕೆ ಮುಂದಾದ ಭಾರತ: ಚೀನಾ-ಪಾಕ್‌‌ಗೆ ಶುರುವಾಯ್ತು ನಡುಕ

by Hemanth Kumar S
August 20, 2026 - 1:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಡೀಸೆಲ್ ಬೆಲೆ (4)
    ಗಂಡ ವಾಪಸ್ ಬರುತ್ತಾನೆಂದು ಹೇಳಿದ್ದ ಸ್ವಾಮೀಜಿ: ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ
    August 20, 2026 | 0
  • ಡೀಸೆಲ್ ಬೆಲೆ (3)
    ದಾವಣಗೆರೆಯಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ
    August 20, 2026 | 0
  • ಡೀಸೆಲ್ ಬೆಲೆ
    ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಇಂದಿನ ದರ ವಿವರ
    August 20, 2026 | 0
  • Untitled design 2026 08 20T092423.195
    ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ: ಹೂವುಗಳ ಬೆಲೆ ಏರಿಕೆ, ಕೆ.ಆರ್. ಮಾರ್ಕೆಟ್‌ನಲ್ಲಿ ಜನಜಂಗುಳಿ
    August 20, 2026 | 0
  • Untitled design 2026 08 20T090444.072
    ಪ್ರಧಾನಿ ಮೋದಿ ರಾಜಕೀಯ ಜೀವನ ಅಂತ್ಯ ಕಂಡಿದೆ: ರಾಹುಲ್ ಗಾಂಧಿ
    August 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version