ಲಂಡನ್ ಸೆ.11: ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಸದ್ಯ ಏಕದಿನ ಕ್ರಿಕೆಟ್ಗೆ ಮಾತ್ರ ಸೀಮಿತವಾಗಿದ್ದು, ಆಟದ ವೇಳಾಪಟ್ಟಿ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕುಟುಂಬದೊಂದಿಗೆ ಲಂಡನ್ನಲ್ಲಿ ಹೆಚ್ಚಿನ ಸಮಯ ಕಳೆಯುತ್ತಿದ್ದಾರೆ. ಇದೇ ವೇಳೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಕೂಡ ಲಂಡನ್ ಪ್ರವಾಸದಲ್ಲಿದ್ದು, ವಿರಾಟ್ ಕೊಹ್ಲಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಶಿಂಧೆ ಅವರು ಕೊಹ್ಲಿಯನ್ನು ಭೇಟಿಯಾದ ಬಳಿಕ ಇದು ಸ್ನೇಹಪೂರ್ವಕ ಭೇಟಿ ಎಂದು ತಿಳಿಸಿದ್ದಾರೆ. ಕೊಹ್ಲಿ ವಿಶ್ವದ ಖ್ಯಾತ ಕ್ರಿಕೆಟಿಗರಾಗಿದ್ದರೂ ಅತ್ಯಂತ ಸರಳ ಸ್ವಭಾವದ ವ್ಯಕ್ತಿ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಬ್ಬರ ಭೇಟಿಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
#WATCH | Star Indian Cricketer Virat Kohli met Maharashtra Deputy Chief Minister Eknath Shinde in London.
They discussed a range of issues, including sports and infrastructure. pic.twitter.com/JAxC4cuTdy
— ANI (@ANI) September 11, 2026
ಇಬ್ಬರ ಮೊದಲ ನೇರ ಭೇಟಿ
ವಿರಾಟ್ ಕೊಹ್ಲಿಯನ್ನು ಈ ಹಿಂದೆ ನೋಡಿದ್ದರೂ, ಈ ಬಾರಿ ಅವರೊಂದಿಗೆ ನೇರವಾಗಿ ಭೇಟಿಯಾಗಿ ಮಾತುಕತೆ ನಡೆಸಿದ್ದಾಗಿ ಶಿಂಧೆ ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ವಿವಿಧ ಸರ್ಕಾರಿ ಯೋಜನೆಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕುರಿತು ಇಬ್ಬರೂ ಚರ್ಚಿಸಿದ್ದಾರೆ ಎನ್ನಲಾಗಿದೆ.
ಭೇಟಿಯ ವೇಳೆ ಏಕನಾಥ್ ಶಿಂಧೆ ಅವರು ವಿರಾಟ್ ಕೊಹ್ಲಿಗೆ ಶಾಲು ಹೊದಿಸಿ ಗೌರವಿಸಿದರು. ಇಬ್ಬರೂ ಆತ್ಮೀಯವಾಗಿ ಮಾತುಕತೆ ನಡೆಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆಯುತ್ತಿವೆ.
ಶಿಂಧೆಗೆ ‘ಗ್ಲೋಬಲ್ ಪ್ರೈಡ್ ಆಫ್ ಮಹಾರಾಷ್ಟ್ರ’ ಗೌರವ
ಲಂಡನ್ ಪ್ರವಾಸದ ವೇಳೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಮಂಡಳಿಯ ವತಿಯಿಂದ ಏಕನಾಥ್ ಶಿಂಧೆ ಅವರಿಗೆ ‘ಗ್ಲೋಬಲ್ ಪ್ರೈಡ್ ಆಫ್ ಮಹಾರಾಷ್ಟ್ರ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅಂತಾರಾಷ್ಟ್ರೀಯ ಮರಾಠಿ ಸಾಹಿತ್ಯ ಉತ್ಸವಕ್ಕೂ ಶಿಂಧೆ ಬೆಂಬಲ ನೀಡಿದರು.
ಇದರ ಬಳಿಕ ಅವರು ಲಂಡನ್ನಲ್ಲಿರುವ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ನಿವಾಸಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದರು.
ಕೊಹ್ಲಿ ಮತ್ತೆ ಯಾವಾಗ ಮೈದಾನಕ್ಕೆ?
ವಿರಾಟ್ ಕೊಹ್ಲಿ ಇತ್ತೀಚೆಗೆ ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಪರ ಆಡಿದ್ದರು. ಆ ಸರಣಿಯಲ್ಲಿ ಅವರು ಮೊದಲ ಪಂದ್ಯದಲ್ಲಿ 5 ರನ್, ಎರಡನೇ ಪಂದ್ಯದಲ್ಲಿ 65 ರನ್ ಹಾಗೂ ಮೂರನೇ ಪಂದ್ಯದಲ್ಲಿ 74 ರನ್ ಗಳಿಸಿದ್ದರು.
ಮುಂದಿನ ದಿನಗಳಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಕೊಹ್ಲಿ ಮತ್ತೆ ಭಾರತ ಪರ ಕಣಕ್ಕಿಳಿಯುವ ನಿರೀಕ್ಷೆಯಿದೆ. ಕೊಹ್ಲಿ ಏಕದಿನ ಕ್ರಿಕೆಟ್ಗೆ ಮಾತ್ರ ಸೀಮಿತವಾಗಿರುವ ಹಿನ್ನೆಲೆಯಲ್ಲಿ ಅವರ ಮುಂದಿನ ಪಂದ್ಯಗಳ ಮೇಲೆ ಅಭಿಮಾನಿಗಳ ಕುತೂಹಲ ಹೆಚ್ಚಾಗಿದೆ.





