• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 16, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಧನ್ವೀರ್ ಅಭಿನಯದ “ವಾಮನ” ಚಿತ್ರದ ಟ್ರೇಲರ್ ಅನಾವರಣ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಚೇತನ್ ಗೌಡ ನಿರ್ಮಾಣದ ಈ ಚಿತ್ರ ಏಪ್ರಿಲ್ 10 ರಂದು ತೆರೆಗೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 28, 2025 - 7:58 pm
in ಸಿನಿಮಾ
0 0
0
122 (6)

ಇಕ್ವಿನಾಕ್ಸ್ ಗ್ಲೋಬಲ್ ಎಂಟರ್ಟೈನ್ಮೆಂಟ್ಸ್ ಬ್ಯಾನರ್ ಅಡಿಯಲ್ಲಿ ಚೇತನ್ ಗೌಡ ಅವರು ನಿರ್ಮಿಸಿರುವ, ಶಂಕರ್ ರಾಮನ್ ನಿರ್ದೇಶನದ ಹಾಗೂ ಧನ್ವೀರ್ ನಾಯಕರಾಗಿ ನಟಿಸಿರುವ “ವಾಮನ” ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಮಾಗಡಿ ರಸ್ತೆಯ ಪ್ರಸನ್ನ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನೆರವೇರಿತು. ರಾಜಸ್ಥಾನದಲ್ಲಿ ಚಿತ್ರೀಕರಣದಲ್ಲಿ ಭಾಗಿಯಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ವಿಡಿಯೋ ಮೂಲಕ “ವಾಮನ” ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು. ಪ್ರಸನ್ನ ಚಿತ್ರಮಂದಿರದಲ್ಲಿ ಸಹಸ್ರಾರು ದರ್ಶನ್ ಅವರ ಅಭಿಮಾನಿಗಳು ಈ ಅದ್ದೂರಿ ಸಮಾರಂಭಕ್ಕೆ ಸಾಕ್ಷಿಯಾದರು.

RelatedPosts

ನಟ ದರ್ಶನ್ ಮತ್ತೆ ಜೈಲಿಗೆ: ಬೇಸರ ವ್ಯಕ್ತಪಡಿಸಿದ ನಟಿ ರಮ್ಯಾ

ಐತಿಹಾಸಿಕ ‘ಹಲಗಲಿ’.. ಬೆಳ್ಳಿತೆರೆಗೆ ಬೇಡನಾಗಿ ಡಾಲಿ..!

ದರ್ಶನ್ ನೆನೆದು ಹಾರ್ಟ್ ಬ್ರೇಕ್ ಪೋಸ್ಟ್ ಮಾಡಿದ ಪತ್ನಿ ವಿಜ್ಜು!

ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು: ಪತ್ನಿ ಸ್ವಪ್ನಾ ವಿಚ್ಚೇದನ ಕೋರಿ ಕೋರ್ಟ್‌ಗೆ ಅರ್ಜಿ.!

ADVERTISEMENT
ADVERTISEMENT

ಧನ್ವೀರ್ ಅಭಿನಯದ ನಾಲ್ಕನೇ ಚಿತ್ರ “ವಾಮನ”. ಧನ್ವೀರ್ ಅವರ ಹಿಂದಿನ ಮೂರು ಚಿತ್ರಗಳೂ ವಿಭಿನ್ನವಾಗಿತ್ತು. ಅದರಲ್ಲೂ ” ಕೈವಾ” ನನ್ನಿಷ್ಟದ ಚಿತ್ರ. “ವಾಮನ” ಚಿತ್ರ ಕೂಡ ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿದೆ. ಈ ಚಿತ್ರದ “ಮುದ್ದು ರಾಕ್ಷಸಿ” ಹಾಡು ನನಗೆ ಬಹಳ ಇಷ್ಟ. ಇಂದು ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರ ಏಪ್ರಿಲ್ 10ರಂದು ತೆರೆಗೆ ಬರುತ್ತಿದೆ. ದಯವಿಟ್ಟು ಎಲ್ಲರೂ ಚಿತ್ರಮಂದಿರಗಳಿಗೆ ಬಂದು ಚಿತ್ರ ನೋಡಿ‌. ಕನ್ನಡ ಚಿತ್ರಗಳನ್ನು ಪ್ರೋತ್ಸಾಹಿಸಿ. ನಾನು ಕೂಡ “ವಾಮನ” ಚಿತ್ರವನ್ನು ಧನ್ವೀರ್ ಜೊತೆಗೆ ನೋಡುತ್ತೇನೆ ಎಂದು ದರ್ಶನ್ ತಿಳಿಸಿದರು.

ನಾನು ಮೊದಲಿಗೆ ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಹಾಗೂ ನಮ್ಮ ಚಿತ್ರದ ತಾಯಿ – ಮಗನ ಬಾಂಧವ್ಯ ಸಾರುವ ಹಾಡನ್ನು ಅನಾವರಣ ಮಾಡಿದ ವಿಜಯಲಕ್ಷ್ಮಿ ದರ್ಶನ್ ಅವರಿಗೆ ಧನ್ಯವಾದ ತಿಳಿಸುತ್ತೇನೆ. ದರ್ಶನ್ ಅವರು ಇಂದಿನ ಸಮಾರಂಭಕ್ಕೆ ಬರಬೇಕಿತ್ತು. ಆದರೆ ಅವರು ದೂರದ ಊರಿನಲ್ಲಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ನನ್ನಿಂದ ನಿರ್ಮಾಪಕರಿಗೆ ತೊಂದರೆಯಾಗಬಾರದು ಎಂಬ ಉದ್ದೇಶ ಅವರದು. ಹಾಗಾಗಿ ನನ್ನನ್ನು ಅವರಿರುವ ಕಡೆಗೆ ಕರೆಸಿಕೊಂಡು ಟ್ರೇಲರ್ ವೀಕ್ಷಿಸಿ ಚಿತ್ರದ ಕುರಿತು ಮೆಚ್ಚುಗೆಯ ಮಾತುಗಳಾಡಿದ್ದಾರೆ.

ಚಿತ್ರಮಂದಿರದಲ್ಲೇ “ವಾಮನ” ಚಿತ್ರವನ್ನು ನೋಡುವುದಾಗಿ ಹೇಳಿದ್ದಾರೆ. ಇಷ್ಟು ಜನರು ನಮ್ಮ ಚಿತ್ರದ ಸಮಾರಂಭಕ್ಕೆ ಬಂದಿರುವುದು ನನಗೆ ಬಹಳ ಖುಷಿಯಾಗಿದೆ. ನಮ್ಮ ಚಿತ್ರದಲ್ಲಿ ಕಲಾವಿದರ ದಂಡೇ ಇದೆ. ಹಿರಿಯ ಕಲಾವಿದರ ಜೊತೆಗೆ ಅಭಿನಯಿಸಿದ್ದು ಖುಷಿಯಾಗಿದೆ. ತಂತ್ರಜ್ಞರ ಸಹಕಾರ ಕೂಡ ಅಪಾರವಾಗಿದೆ ಎಂದು ನಾಯಕ ಧನ್ವೀರ್ ತಿಳಿಸಿದರು.

ನಮ್ಮ ಚಿತ್ರದ ಟ್ರೇಲರ್ ಹಾಗೂ ಹಾಡನ್ನು ಬಿಡುಗಡೆ ಮಾಡಿಕೊಟ್ಟ ದರ್ಶನ್ ಹಾಗೂ ವಿಜಯಲಕ್ಷ್ಮಿ ದರ್ಶನ್ ಅವರಿಗೆ ವಿಶೇಷ ಧನ್ಯವಾದ. “ವಾಮನ” ನಮ್ಮ ಸಂಸ್ಥೆಯ ನಿರ್ಮಾಣದ ಮೊದಲ ಚಿತ್ರ. ನಿರ್ದೇಶಕರು ಒಂದೊಳ್ಳೆ‌ ಚಿತ್ರ ಮಾಡಿಕೊಟ್ಟಿದ್ದಾರೆ. ಕಲಾವಿದರು ಹಾಗೂ ತಂತ್ರಜ್ಞರ ಸಹಕಾರದಿಂದ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಇದೇ ಏಪ್ರಿಲ್ 10 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಎಲ್ಲರು ನೋಡಿ.‌ಪ್ರೋತ್ಸಾಹ ನೀಡಿ ಎಂದರು ನಿರ್ಮಾಪಕ ಚೇತನ್ ಗೌಡ. ಸಹ ನಿರ್ಮಾಪಕಿ ರೂಪ ಚೇತನ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

“ವಾಮನ” ತಾಯಿ – ಮಗನ‌ ಬಾಂಧವ್ಯದ ಕಥೆ. ಇದರೆ ಜೊತೆಗೆ ನೋಡುಗರಿಗೆ ಬೇಕಾದ‌ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ. ಚಿತ್ರ ‌ಉತ್ತಮವಾಗಿ ಮೂಡಿ ಬರಲು ಇಡೀ ತಂಡದ ಸಹಕರವೇ ಕಾರಣ ಎಂದು ನಿರ್ದೇಶಕ ಶಂಕರ್ ರಾಮನ್ ತಿಳಿಸಿದರು.

ಈ ಚಿತ್ರದಲ್ಲಿ ನನ್ನ ಪಾತ್ರ ಚೆನ್ನಾಗಿದೆ. ಇಂದು ನಮ್ಮ‌ ಟ್ರೇಲರ್ ಬಿಡುಗಡೆ ಸಮಾರಂಭಕ್ಕೆ ಇಷ್ಟು ಜನ ಬಂದು ಹಾರೈಸಿದ್ದಾರೆ. ದಯವಿಟ್ಟು ಎಲ್ಲರೂ ನಮ್ಮ ಚಿತ್ರವನ್ನು ಚಿತ್ರಮಂದಿರಗಳಲ್ಲೇ ನೋಡಿ ಎಂದು ನಾಯಕಿ ರೀಷ್ಮಾ ನಾಣಯ್ಯ ಹೇಳಿದರು.

ಚಿತ್ರದಲ್ಲಿ ನಟಿಸಿರುವ ತಾರಾ ಅನುರಾಧ, ಬಹುಭಾಷಾ ನಟ ಸಂಪತ್ ರಾಜ್, ಚಿತ್ಕಲಾ ಬಿರಾದಾರ್, ಕೋಟೆ ಪ್ರಭಾಕರ್, ಪೆಟ್ರೋಲ್ ಪ್ರಸನ್ನ, ಕಾಕ್ರೋಜ್ ಸುಧೀ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್, ಸಿ.ಆರ್.ಬಾಬಿ ಹಾಗೂ ಗೀತರಚನೆಕಾರರಾದ ಡಾ||ವಿ.ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ ಹಾಗೂ ನೃತ್ಯ ನಿರ್ದೇಶಕ ಭೂಷಣ್ ಮುಂತಾದವರು “ವಾಮನ” ಚಿತ್ರದ ಕುರಿತು ಮಾತನಾಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 08 16t164055.039

ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ: ಕರಾವಳಿ, ಮಲೆನಾಡಿನಲ್ಲಿ ರೆಡ್ ಅಲರ್ಟ್

by ಶಾಲಿನಿ ಕೆ. ಡಿ
August 16, 2025 - 4:57 pm
0

Untitled design 2025 08 16t161255.408

ನಟ ದರ್ಶನ್ ಮತ್ತೆ ಜೈಲಿಗೆ: ಬೇಸರ ವ್ಯಕ್ತಪಡಿಸಿದ ನಟಿ ರಮ್ಯಾ

by ಶಾಲಿನಿ ಕೆ. ಡಿ
August 16, 2025 - 4:34 pm
0

Untitled design (7)

ಐತಿಹಾಸಿಕ ‘ಹಲಗಲಿ’.. ಬೆಳ್ಳಿತೆರೆಗೆ ಬೇಡನಾಗಿ ಡಾಲಿ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 16, 2025 - 3:32 pm
0

1 (73)

ದರ್ಶನ್ ನೆನೆದು ಹಾರ್ಟ್ ಬ್ರೇಕ್ ಪೋಸ್ಟ್ ಮಾಡಿದ ಪತ್ನಿ ವಿಜ್ಜು!

by ಸಾಬಣ್ಣ ಎಚ್. ನಂದಿಹಳ್ಳಿ
August 16, 2025 - 3:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 08 16t161255.408
    ನಟ ದರ್ಶನ್ ಮತ್ತೆ ಜೈಲಿಗೆ: ಬೇಸರ ವ್ಯಕ್ತಪಡಿಸಿದ ನಟಿ ರಮ್ಯಾ
    August 16, 2025 | 0
  • Untitled design (7)
    ಐತಿಹಾಸಿಕ ‘ಹಲಗಲಿ’.. ಬೆಳ್ಳಿತೆರೆಗೆ ಬೇಡನಾಗಿ ಡಾಲಿ..!
    August 16, 2025 | 0
  • 1 (73)
    ದರ್ಶನ್ ನೆನೆದು ಹಾರ್ಟ್ ಬ್ರೇಕ್ ಪೋಸ್ಟ್ ಮಾಡಿದ ಪತ್ನಿ ವಿಜ್ಜು!
    August 16, 2025 | 0
  • 1 (11)
    ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು: ಪತ್ನಿ ಸ್ವಪ್ನಾ ವಿಚ್ಚೇದನ ಕೋರಿ ಕೋರ್ಟ್‌ಗೆ ಅರ್ಜಿ.!
    August 16, 2025 | 0
  • 1 (68)
    ನಟ ದರ್ಶನ್‌ಗೆ ಜೀವಾವಧಿಯೋ..? ಮರಣದಂಡನೆಯೋ..?
    August 16, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version