• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರಕ್ಕೆ ಮನವಿ: ಡಿ.ಕೆ.ಶಿವಕುಮಾರ್

ವಿಧಾನ ಪರಿಷತ್ ಸ್ಥಾನ ನಿರುದ್ಯೋಗಿಗಳಿಗೆ ಕೊಟ್ಟಂತೆ ಆಗಬಾರದು

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 4, 2025 - 3:46 pm
in Flash News, ಕರ್ನಾಟಕ
0 0
0
Film 2025 04 04t153914.677

ಮೇಕೆದಾಟು, ಭದ್ರಾ ಮೇಲ್ದಂಡೆ, ಕಳಸಾ- ಬಂಡೂರಿ,ಎತ್ತಿನಹೊಳೆ ಹಾಗೂ ಕಾವೇರಿ, ಕೃಷ್ಣ, ಗೋದಾವರಿ ನದಿ ಜೋಡಣೆ ವಿಚಾರವಾಗಿ ಕೇಂದ್ರ ಜಲಶಕ್ತಿ ಸಚಿವರಿಗೆ ಪ್ರಸ್ತಾವನೆ
“ಆಲಮಟ್ಟಿ ಅಣೆಕಟ್ಟು ಎತ್ತರದ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಕೇಂದ್ರ ಜಲಶಕ್ತಿ ಸಚಿವರು ಕೃಷ್ಣಾ ನದಿ ಜಲಾನಯನ ಪ್ರದೇಶದ ರಾಜ್ಯಗಳ ಪ್ರತಿನಿಧಿಗಳನ್ನು ಕರೆಸಿ ಅಣೆಕಟ್ಟು ಎತ್ತರ ಹೆಚ್ಚಳದ ಬಗ್ಗೆ ಮುಂದಿನ 15 ದಿನಗಳಲ್ಲಿ ಸಭೆ ನಡೆಸಿ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ನವದೆಹಲಿಯ ಕರ್ನಾಟಕ ಭವನ-1 “ಕಾವೇರಿ”ಯಲ್ಲಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ಉದ್ದೇಶಿಸಿ ಶುಕ್ರವಾರ ಮಾತನಾಡಿದರು.

RelatedPosts

ಟ್ರಂಪ್ ಡೆಡ್ ಲೈನ್ ನಡುವಲ್ಲೇ ಇರಾನ್ ಜೊತೆ ಸಂಧಾನ ಸರ್ಕಸ್.!

ಬಂಗಾರ ಖರೀದಿಗೆ ಇಂದು ಸುವರ್ಣಾವಕಾಶ: ಚಿನ್ನ-ಬೆಳ್ಳಿ ದರ ಇಲ್ಲಿದೆ

ದೇಶವೇ ನರಕ ಆಗಲಿದೆ: ಅಮೆರಿಕ ಬೆದರಿಕೆಗೆ ಇರಾನ್ ಕೌಂಟರ್‌‌

ಅಮೆರಿಕ ಬೆದರಿಕೆ ನಡುವೆಯೂ ಇಸ್ರೇಲ್ ವಿರುದ್ಧ ಇರಾನ್ ದಾಳಿ: ಬಹುಮಹಡಿ ಕಟ್ಟಡಗಳು ಧ್ವಂಸ

ADVERTISEMENT
ADVERTISEMENT

“ಕೇಂದ್ರ ಜಲಶಕ್ತಿ ಸಚಿವರಾದ ಸಿ‌.ಆರ್.ಪಾಟೀಲ್ ಅವರನ್ನು ರಾಜ್ಯಖಾತೆ ಸಚಿವರಾದ ಸೋಮಣ್ಣ ಅವರ ಜೊತೆ ಭೇಟಿ ಮಾಡಲಾಗಿತ್ತು. ಮಹಾರಾಷ್ಟ್ರ, ಆಂಧ್ರ, ತೆಲಂಗಾಣ ಮತ್ತು ನಮಗೆ ಎಷ್ಟು ನೀರು ಸಿಗಬೇಕು ಹಾಗೂ ಅಣೆಕಟ್ಟು ಎಷ್ಟು ಎತ್ತರ ಮಾಡಬೇಕು ಎಂದು ಹಿಂದೆಯೇ ತೀರ್ಮಾನವಾಗಿದೆ. 524 ಅಡಿ ಎತ್ತರಕ್ಕೆ ಎಷ್ಟು ಭೂಮಿ ಬೇಕಾಬಹುದು ಎಂದು ಅಂದಾಜಿಸಿ ಭೂಸ್ವಾಧೀನಕ್ಕೆ ಸಿದ್ದತೆ ಮಾಡಿಕೊಳ್ಳಲಾಗಿದೆ. ಈ ಕೆಲಸವನ್ನು ಬೇಗ ಮುಗಿಸುವ ಬದ್ಧತೆ ನಮ್ಮ ಸರ್ಕಾರಕ್ಕಿದೆ. ಇದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವ ಬಗ್ಗೆಯೂ ಮನವಿ ಮಾಡಿದ್ದೇವೆ” ಎಂದರು.

“ಭದ್ರಾ ಮೇಲ್ದಂಡೆ ವಿಚಾರವಾಗಿ ಕೇಂದ್ರ ಸರ್ಕಾರ‌‌ ಕೆಲಸ ಮಾಡುತ್ತಿದೆ. ಕೇಂದ್ರದ ಕ್ಯಾಬಿನೆಟ್ ಮುಂದೆ ಈ ವಿಚಾರ ತೆಗೆದುಕೊಡು ಹೋಗಲಾಗಿದೆ ಎಂದು ಹೇಳಿದ್ದಾರೆ. ಮೇಕೆದಾಟು ವಿಚಾರದಲ್ಲಿ 15 ದಿನಗಳಲ್ಲಿ ಸುಪ್ರೀಂ ‌ಕೋರ್ಟ್ ಕರ್ನಾಟಕದ‌ ವಾದ ಆಲಿಸುವುದಾಗಿ ಹೇಳಿತ್ತು. ಆದರೆ ದಿನಾಂಕ ನಿಗದಿ ಮಾಡಿಲ್ಲ. ತಮಿಳುನಾಡಿನವರು ರಾಜಕೀಯವಾಗಿ ಸಹಕಾರ ನೀಡುವುದಿಲ್ಲ‌‌ ಎನ್ನುವುದು ನಮಗೆ ಅರಿವಿದೆ. ಅವರು ಸಣ್ಣಪುಟ್ಟ ಅಣೆಕಟ್ಟುಗಳನ್ನು ಅವರ ವಲಯದಲ್ಲಿ ಕಟ್ಟಿಕೊಳ್ಳುತ್ತಿದ್ದಾರೆ. ಇದರ ಬಗ್ಗೆ ನಾವು ತೊಂದರೆ ಕೊಡಲು ಹೋಗುವುದಿಲ್ಲ. ಈ ವಿಚಾರವನ್ನೂ ಸಚಿವರ ಗಮನಕ್ಕೆ ತರಲಾಗಿದೆ” ಎಂದರು.

“ಕಳಸಾ ಬಂಡೂರಿ ಕಾಮಗಾರಿಗೆ ಪರಿಸರ ಇಲಾಖೆಯ ಅನುಮತಿ ಸಿಗದಿರುವ ಬಗ್ಗೆ ಗಮನಕ್ಕೆ ತರಲಾಗಿದೆ. ಈಗಾಗಲೇ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ. ಈ ಹಿಂದೆ ಪ್ರಹ್ಲಾದ್ ಜೋಶಿ ಹಾಗೂ ಕೇಂದ್ರ ಅರಣ್ಯ ಸಚಿವರನ್ನೂ ಸಹ ಭೇಟಿ ಮಾಡಲಾಗಿತ್ತು. ಎತ್ತಿನಹೊಳೆ ಕಾಮಗಾರಿ ಕುಡಿಯುವ ನೀರಿನ ಯೋಜನೆಯಾದ ಕಾರಣ ಒಂದಷ್ಟು ಅನುದಾನ ನೀಡಬೇಕು ಎಂದು ಮನವಿ ಮಾಡಲಾಗಿದೆ. ಜೊತೆಗೆ ಅರಣ್ಯ ಭೂಮಿ ಬಳಕೆ, ಬದಲಿ ಭೂಮಿ ನೀಡುವ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಇದರ ಡಿಪಿಆರ್ ಅನ್ನು ನೋಡುವುದಾಗಿ ಭರವಸೆ ನೀಡಿದ್ದಾರೆ” ಎಂದರು.

“ಕಾವೇರಿ, ಕೃಷ್ಣಾ,ಗೋದಾವರಿ ನದಿ ಜೋಡಣೆ ಸಂಬಂಧ ನಮ್ಮ ರಾಜ್ಯದ ವಾದವನ್ನು ನಾನು ಹಾಗೂ ಮುಖ್ಯಮಂತ್ರಿಯವರು ಸಲ್ಲಿಸಿದ್ದೇವೆ. ಇದರ ಬಗ್ಗೆ ಧನಾತ್ಮಕವಾಗಿ ಕೇಂದ್ರ ಸಚಿವರು ಪ್ರತಿಕ್ರಿಯಿಸಿದ್ದಾರೆ. ನಮ್ಮ ಭೇಟಿ ಫಲದಾಯಕವಾಗಿದೆ ಎನ್ನುವುದು ಸಂತಸದ ವಿಚಾರ” ಎಂದರು.

ಕೃಷ್ಣಾ ನ್ಯಾಯಾಧೀಕರಣ ವಿಚಾರ ಸುಪ್ರೀಂ ಕೋರ್ಟಿನಲ್ಲಿ ತಡೆಯಾಜ್ಞೆ ಇರುವ ಬಗ್ಗೆ ಕೇಳಿದಾಗ, “ಶೆಡ್ಯೂಲ್ 524ಕ್ಕೆ ಸೇರಿದ ವಿಚಾರವಾದ ಕಾರಣ ಈ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರು ಆಂತರಿಕ ಸಭೆ ನಡೆಸುವುದಾಗಿ ತಿಳಿಸಿದ್ದಾರೆ. ಇದರ ಬಗ್ಗೆ ಈಗಾಗಲೇ ಚರ್ಚೆ ಮಾಡಲಾಗಿದೆ. ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ” ಎಂದರು.

ಕಾಲುವೆ ನೀರು ಬಿಡುವಂತೆ ಕೋರ್ಟ್ ಆದೇಶದ ಬಗ್ಗೆ ಕೇಳಿದಾಗ, “ಕಾಲುವೆಗಳಿಗೆ ಕೃಷ್ಣ ನದಿ ನೀರನ್ನು ಏಕಾಏಕಿ ಬಿಡಲು ಆಗುವುದಿಲ್ಲ. ಅಲ್ಲದೇ ಈ ವಿಚಾರದಲ್ಲಿ ನ್ಯಾಯಾಲಯ ಕೂಡ ಆದೇಶ ನೀಡಲು ಬರುವುದಿಲ್ಲ. ಏಕ ಸದಸ್ಯ ಪೀಠ ನೀರು ಬಿಡುವಂತೆ ಹೇಳಿತ್ತು. ದ್ವಿ ಸದಸ್ಯ ಪೀಠ ಆದೇಶಕ್ಕೆ ತಡೆ ನೀಡಿದೆ. ಕಾಲುವೆಗಳಿಗೆ ನೀರು ಬಿಡುವ ಬಗ್ಗೆ ನಾನೇ ತಾಂತ್ರಿಕ ವರದಿ ತರಿಸಿ ಕೊಳ್ಳುವವನಿದ್ದೆ. ಯಾದಗಿರಿ ಸೇರಿದಂತೆ ಆ ಭಾಗದ ಶಾಸಕರು ರೈತರ ಎರಡನೇ ಬೆಳೆಗೆ ನೀರು ಬಿಡುವಂತೆ ಮನವಿ ಮಾಡಿದ್ದರು. ಈ ಮಧ್ಯೆ ಯಾರೋ ನ್ಯಾಯಾಲಯಕ್ಕೆ ಹೋಗಿದ್ದಾರೆ” ಎಂದರು.

“ಕಾಲುವೆಗೆ ನೀರುಬಿಟ್ಟ ಸಮಯದಲ್ಲಿ ಮಧ್ಯದಲ್ಲಿಯೇ ಪಂಪ್ ಗಳನ್ನು ಬಿಟ್ಟು ನೀರು ಎತ್ತಲಾಗುತ್ತದೆ. ಇದಕ್ಕೆಲ್ಲಾ ಅವಕಾಶ ನೀಡಬಾರದು ಎಂದು ಹೇಳಲಾಗಿದೆ. ರೈತರ ಪಾಲಿನ ನೀರು ನಾವು ನೀಡುತ್ತೇವೆ ಆದರೆ ಕಾಲುವೆಯ ಕೊನೆ ಭಾಗಕ್ಕೆ ನೀರು ತಲುಪಬೇಕಲ್ಲವೇ? ಇದು ಆಗದೇ ಮಧ್ಯದಲ್ಲಿಯೇ ನೀರು ಎಳೆಯಲಾಗುತ್ತಿದೆ” ಎಂದು ಹೇಳಿದರು.

“ಕಾಲುವೆಯಿಂದ ನೀರು ಎತ್ತುವುದನ್ನು ತಡೆಯಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ವಿದ್ಯುತ್ ಸಂಪರ್ಕಗಳನ್ನು ತಪ್ಪಿಸಿ ಹಗಲು ಹಾಗೂ ರಾತ್ರಿ ವೇಳೆ ನೀರನ್ನು ರಕ್ಷಣೆ ಮಾಡುವ ಬಗ್ಗೆ ಚಿಂತನೆ ಮಾಡಲಾಗುತ್ತಿದೆ. ರೈತರು ಎರಡನೇ ಬೆಳೆ ಹಾಕಿಕೊಂಡಿದ್ದಾರೆ. ಆದರೆ ಕುಡಿಯುವ ನೀರು ನಮ್ಮ ಮೊದಲ ಆದ್ಯತೆ” ಎಂದರು.

“ನಿರುದ್ಯೋಗಿಗಳಿಗೆ ಪರಿಷತ್ ಸ್ಥಾನ ಕೊಟ್ಟಂತೆ ಆಗಬಾರದು

ವಿಧಾನಪರಿಷತ್ ನಾಮನಿರ್ದೇಶನದ ಬಗ್ಗೆ ಕೇಳಿದಾಗ, “ಪಕ್ಷದ ಕಾರ್ಯಕರ್ತರಿಗೆ ಹಾಗೂ ಪಕ್ಷದ ಪರವಾಗಿ ದನಿ ಎತ್ತುವವರಿಗೆ ನೀಡಬೇಕು ಎಂಬುದು ನನ್ನ ಅಭಿಲಾಷೆ. ಸುಮ್ಮನೆ ಇರುವ ನಿರುದ್ಯೋಗಿಗಳಿಗೆ ಕೊಟ್ಟಂತೆ ಆಗಬಾರದು. ಉತ್ತಮವಾಗಿ ಮಾತನಾಡುವಂತಹ ಪ್ರತಿನಿಧಿಗಳಿಗೆ ಸ್ಥಾನ ನೀಡಬೇಕು ಎಂಬುದು ನನ್ನ ಪ್ರಾಶಸ್ತ್ಯ. ಇದರ ಬಗ್ಗೆ ಮುಖ್ಯಮಂತ್ರಿಗಳು ನಾನು ಹೈಕಮಾಂಡ್ ಬಳಿ ಮಾತನಾಡಿದ್ದೇವೆ‌. ಹೈಕಮಾಂಡ್ ಇಬ್ಬರನ್ನು ಸಂಪರ್ಕಿಸುತ್ತದೆ” ಎಂದರು.

ಮೇಕೆದಾಟು ಹಾಗೂ ಭದ್ರಾ ಮೇಲ್ದಂಡೆ ಬಗ್ಗೆ ಪ್ರತಿ ಬಾರಿ ದೆಹಲಿಗೆ ಬಂದಾಗಲೂ ಚರ್ಚೆ ಮಾಡುವ ಬಗ್ಗೆ ಕೇಳಿದಾಗ, “ಇದು ಮೋದಿ ಅವರ ನಾಯಕತ್ವದ ಕೇಂದ್ರ ಸರ್ಕಾರದ ತೀರ್ಮಾನಕ್ಕೆ ಬಿಟ್ಟ ವಿಚಾರ‌. ನಿರ್ಮಲಾ ಸೀತಾರಾಮನ್ ಅವರು ಭದ್ರಾ ಯೋಜನೆಗೆ ರೂ.5,300 ಕೋಟಿ ಅನುದಾನ ನೀಡುವುದಾಗಿ ಹೇಳಿದ್ದರು. ನಾವು ಗುತ್ತಿಗೆದಾರರಿಗೆ ಹಣ ನೀಡಬೇಕಿದೆ” ಎಂದರು.

ಮೇಕೆದಾಟು ಬಗ್ಗೆ ಕೆಲಸಗಳೇ ನಡೆಯುತ್ತಿಲ್ಲ ಎಂದು ಕೇಳಿದಾಗ, “ಈಗಾಗಲೇ ರಾಜ್ಯದಲ್ಲಿ ಕಚೇರಿಯನ್ನೂ ತೆರೆಯಲಾಗಿದೆ. ಸ್ಥಳ ಗುರುತಿಸುವಿಕೆ ಸೇರಿದಂತೆ ಅನೇಕ ಕೆಲಸಗಳು ನಡೆಯುತ್ತಿದೆ. ದೆಹಲಿಯಲ್ಲೂ ಈ ಬಗ್ಗೆ ಕೆಲಸ ಪ್ರಾರಂಭ ಮಾಡಲಾಗುವುದು” ಎಂದರು‌.

ಬೆಲೆಏರಿಕೆ ವಿರುದ್ದ ಬಿಜೆಪಿಯವರಿಂದ ಸಿಎಂ ಮನೆ ಮುತ್ತಿಗೆ ಬಗ್ಗೆ ಕೇಳಿದಾಗ, “ಬಿಜೆಪಿಯವರ ಕಾಲದಲ್ಲಿ ಪೆಟ್ರೊಲ್, ಡೀಸೆಲ್, ಅಡುಗೆ ಎಣ್ಣೆ ಯ ಬೆಲೆ ಏರಿಕೆಯಾದಾಗ ಏಕೆ ಮನೆ ಮುತ್ತಿಗೆ ಮಾಡಿಕೊಳ್ಳಲಿಲ್ಲ? ನಾವು 100 ನಾಟ್ ಔಟ್ ಎನ್ನುವ ಹೋರಾಟ ಮಾಡಿದ್ದೆವು. ಕಬ್ಬಿಣ, ಉಕ್ಕು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಎಲ್ಲವೂ ಹೆಚ್ಚಾಯಿತು. ಕಸದ ಸಂಗ್ರಹ ಶುಲ್ಕಕ್ಕೆ ಆದೇಶ ನೀಡಿದವರೇ ಬಿಜೆಪಿಯವರು. ನಾನು ಅವರು ಮಾಡಿದ ಬೆಲೆಗಿಂತ ಕಡಿಮೆ ಮಾಡಿದ್ದೇನೆ. ದೊಡ್ಡದಾಗಿ ಹಾಕಬೇಕಾಗಿತ್ತು. ಹಳೆಯದನ್ನು ಬಿಡಿ ಎಂದು ಅಧಿಕಾರಿಗಳಿಗೆ ಹೇಳಿದ್ದೇನೆ” ಎಂದು ಹೇಳಿದರು.

ಸಿದ್ದರಾಮಯ್ಯ ಅವರು ಹಾಗೂ ನೀವು ವರಿಷ್ಠರನ್ನು ಭೇಟಿಯಾಗುತ್ತಾ ಇದ್ದೀರಿ. ಸಚಿವರ ದಂಡು ಸಹ ದೆಹಲಿಯಲ್ಲಿದೆ. ಸರ್ಕಾರದಲ್ಲಿ ಬದಲಾವಣೆಯಾಗಲಿದೆಯೇ ಎಂದು ಕೇಳಿದಾಗ, “ಪಕ್ಷದ ನಾಯಕರನ್ನು ನಾವು ಭೇಟಿಯಾಗುವುದು ಸಾಮಾನ್ಯ. ನಾನು ವೇಣುಗೋಪಾಲ್ ಹಾಗೂ ಸುರ್ಜೇವಾಲ ಅವರನ್ನು ಭೇಟಿಯಾಗಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ಅವರನ್ನು ಕರ್ನಾಟಕ ಭವನದಲ್ಲಿಯೇ ಭೇಟಿ ಮಾಡಲಾಯಿತು” ಎಂದರು.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ನಿಮ್ಮ ನಿಲುವೇನು ಎಂದು ಪ್ರಶ್ನಿಸಿದಾಗ, “ಪಕ್ಷ ಹೇಗೆ ಹೇಳುತ್ತದೆಯೋ ಆ ರೀತಿ ಮುನ್ನಡೆಯುವುದು. ಐದು ವರ್ಷ ಸೇವೆ ಸಲ್ಲಿಸಿದ್ದೇನೆ. ಪಕ್ಷಕ್ಕೆ ಒಳ್ಳೆಯದಾಗುವುದು ಮುಖ್ಯ. ವ್ಯಕ್ತಿಗಿಂತ ಪಕ್ಷ ಮುಖ್ಯ” ಎಂದು ಮಾರ್ಮಿಕವಾಗಿ ನುಡಿದರು.

ಕಳೆದ ಹಲವಾರು ದಿನಗಳಿಂದ ಸೋನಿಯಾ ಗಾಂಧಿ ಅವರನ್ನು ಶಿವಕುಮಾರ್ ಅವರು ಭೇಟಿಯಾಗಿಲ್ಲ. ಭೇಟಿಯಾದರೆ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ನಿಶ್ಚಿತ ಎನ್ನುವ ಮಾತುಗಳ ಬಗ್ಗೆ ಕೇಳಿದಾಗ, “ಭೇಟಿಯಾಗಿಲ್ಲ ಎಂದು ಹೇಳಿದವರು ಯಾರು? ಸಾಕ್ಷಿಗೆ ಫೋಟೊಗಳನ್ನು ತೋರಿಸಲೇ” ಎಂದಾಗ ಅಧಿಕೃತವಾಗಿ ಫೋಟೊಗಳು ದೊರೆತಿಲ್ಲ ಎಂದು ಮರುಪ್ರಶ್ನಿಸಿದಾಗ, “ನಿಮಗೆ ಏಕೆ ತೋರಿಸಬೇಕು. ನನಗೆ ಬೇಕಾಗಿದ್ದು ಬಿಡುಗಡೆ ಮಾಡಲಾಗುವುದು, ಬೇಡದ್ದು ಇಲ್ಲ” ಎಂದು ಹೇಳಿದರು.

ಡಿಎಂಕೆ ಜೊತೆ ರಾಜಕೀಯ ಉದ್ದೇಶದ ಮೈತ್ರಿ

ನೀವು ಡಿಎಂಕೆ ಜೊತೆ ಉತ್ತಮ ಸಖ್ಯ ಹೊಂದಿದ್ದೀರಿ ಎನ್ನುವ ಬಗ್ಗೆ ಕೇಳಿದಾಗ, “ಇದು ಕೇವಲ ರಾಜಕೀಯ ಉದ್ದೇಶದ ಮೈತ್ರಿ. ಒಟ್ಟಿಗೆ ಕೆಲಸ ಮಾಡುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ” ಎಂದರು.

ತಮಿಳುನಾಡಿಗೆ ಶಿವಕುಮಾರ್ ಅವರು ಹೆಚ್ಚು ಭೇಟಿ ನೀಡುತ್ತಿದ್ದಾರೆ. ಇದರಿಂದ ನೀರಿನ ಸಮಸ್ಯೆ ಬಗೆಹರಿಯಲಿದೆಯೇ ಎನ್ನುವ ಬಿಜೆಪಿಯವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರ ರಾಜಕಾರಣ ಅವರು ಮಾಡುತ್ತಾರೆ. ನಮ್ಮ ರಾಜಕಾರಣ ನಾವು ಮಾಡುತ್ತೇವೆ. ಅವರ ರಕ್ಷಣೆ ಅವರು ನೋಡಿಕೊಳ್ಳುತ್ತಾರೆ. ನಮ್ಮ ರಾಜ್ಯದ ಹಿತವನ್ನು ನಾವು ಮಾಡಿಕೊಳ್ಳುತ್ತೇವೆ” ಎಂದು ತಿಳಿಸಿದರು.

ನಿಯೋಗಕ್ಕೆ ಸಂಸದ ತುಕಾರಾಂ ನೇಮಕ

ಸಂಸತ್ ಕ್ಷೇತ್ರಗಳ ಮರುವಿಂಗಡಣೆ ವಿರುದ್ಧದ ಹೋರಾಟದ ಬೆಳವಣಿಗೆಯ ಬಗ್ಗೆ ಕೇಳಿದಾಗ, “ಕ್ಷೇತ್ರ ಮರುವಿಂಗಡಣೆ ಹೋರಾಟದ ನಿಯೋಗಕ್ಕೆ ಹೈಕಮಾಂಡ್ ಸೂಚನೆಯಂತೆ ನಮ್ಮ ಕರ್ನಾಟಕದಿಂದ ಸಂಸದರಾದ ತುಕಾರಾಂ ಅವರನ್ನು ನೇಮಿಸಲಾಗಿದೆ” ಎಂದರು.

ವಕ್ಫ್ ಬಿಲ್ ಗೆ ಜೆಡಿಎಸ್, ಟಿಡಿಪಿ, ಚಂದ್ರಬಾಬು ನಾಯ್ಡು, ದೇವೇಗೌಡರು ಬೆಂಬಲ ನೀಡಿರುವ ಬಗ್ಗೆ ಕೇಳಿದಾಗ, “ಎನ್‌ಡಿಎ ಮೈತ್ರಿಯಲ್ಲಿ ಇರುವ ಕಾರಣ ಒಪ್ಪಿಗೆ ನೀಡಿದ್ದಾರೆ” ಎಂದು ಹೇಳಿದರು.

ಸಂಪುಟ ಪುನಾರಚನೆ ಬಗ್ಗೆ ಕೇಳಿದಾಗ, “ಇದರ ಬಗ್ಗೆ ಮುಖ್ಯಮಂತ್ರಿಯವರನ್ನು ಕೇಳಬೇಕು” ಎಂದರು.

ಬಿಜೆಪಿ ಕಾರ್ಯಕರ್ತ ಪೊನ್ನಣ್ಣ ಅವರ ಹೆಸರನ್ನು ಬರೆದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಕೇಳಿದಾಗ, “ಇದರ ಬಗ್ಗೆ ಮಾಹಿತಿಯಿಲ್ಲ, ತಿಳಿದುಕೊಂಡು ಹೇಳುತ್ತೇನೆ” ಎಂದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 06T121331.521

ಟ್ರಂಪ್ ಡೆಡ್ ಲೈನ್ ನಡುವಲ್ಲೇ ಇರಾನ್ ಜೊತೆ ಸಂಧಾನ ಸರ್ಕಸ್.!

by ಶಾಲಿನಿ ಕೆ. ಡಿ
April 6, 2026 - 12:14 pm
0

Untitled design 2026 04 06T113537.267

ಬಂಗಾರ ಖರೀದಿಗೆ ಇಂದು ಸುವರ್ಣಾವಕಾಶ: ಚಿನ್ನ-ಬೆಳ್ಳಿ ದರ ಇಲ್ಲಿದೆ

by ಶಾಲಿನಿ ಕೆ. ಡಿ
April 6, 2026 - 11:52 am
0

Untitled design 2026 04 06T112544.016

ದೇಶವೇ ನರಕ ಆಗಲಿದೆ: ಅಮೆರಿಕ ಬೆದರಿಕೆಗೆ ಇರಾನ್ ಕೌಂಟರ್‌‌

by ಶಾಲಿನಿ ಕೆ. ಡಿ
April 6, 2026 - 11:26 am
0

Untitled design 2026 04 06T105810.887

ಮಧ್ಯಪ್ರಾಚ್ಯ ಉದ್ವಿಗ್ನತೆ ಮಧ್ಯೆ ಭಾರತದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
April 6, 2026 - 11:00 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 06T121331.521
    ಟ್ರಂಪ್ ಡೆಡ್ ಲೈನ್ ನಡುವಲ್ಲೇ ಇರಾನ್ ಜೊತೆ ಸಂಧಾನ ಸರ್ಕಸ್.!
    April 6, 2026 | 0
  • Untitled design 2026 04 06T113537.267
    ಬಂಗಾರ ಖರೀದಿಗೆ ಇಂದು ಸುವರ್ಣಾವಕಾಶ: ಚಿನ್ನ-ಬೆಳ್ಳಿ ದರ ಇಲ್ಲಿದೆ
    April 6, 2026 | 0
  • Untitled design 2026 04 06T112544.016
    ದೇಶವೇ ನರಕ ಆಗಲಿದೆ: ಅಮೆರಿಕ ಬೆದರಿಕೆಗೆ ಇರಾನ್ ಕೌಂಟರ್‌‌
    April 6, 2026 | 0
  • Untitled design 2026 04 06T094749.590
    ಅಮೆರಿಕ ಬೆದರಿಕೆ ನಡುವೆಯೂ ಇಸ್ರೇಲ್ ವಿರುದ್ಧ ಇರಾನ್ ದಾಳಿ: ಬಹುಮಹಡಿ ಕಟ್ಟಡಗಳು ಧ್ವಂಸ
    April 6, 2026 | 0
  • Untitled design 2026 04 06T093833.594
    ಇಡೀ ಇರಾನ್ ದೇಶವನ್ನೇ ಉಡಾಯಿಸಿ ಬಿಡುತ್ತೇನೆ: ಡೆಡ್ ಲೈನ್ ಕೊಟ್ಟ ಡೊನಾಲ್ಡ್ ಟ್ರಂಪ್
    April 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version