• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಆನೆಗುಡ್ಡೆ ಶ್ರೀವಿನಾಯಕನ ಸನ್ನಿಧಿಯಲ್ಲಿ ‘ವೀರ ಚಂದ್ರಹಾಸ’ ಟ್ರೇಲರ್ ಅನಾವರಣ

ರವಿ ಬಸ್ರೂರ್ ಸಾಹಸಕ್ಕೆ ಹೊಂಬಾಳೆ ಫಿಲಂಸ್ ಸಹಕಾರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 8, 2025 - 5:03 pm
in ಸಿನಿಮಾ
0 0
0
Untitled design 2025 04 08t170059.546

ಕೆ.ಜಿ.ಎಫ್, ಸಲಾರ್, ಭೈರತಿ ರಣಗಲ್, ಉಗ್ರಂ ನಂಥಹ ಸೂಪರ್ ಹಿಟ್ ಚಿತ್ರಗಳಿಗೆ ಸಂಗೀತ ಸಂಯೋಜಿಸುವ ಮೂಲಕ ಸಂಗೀತ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ರವಿ ಬಸ್ರೂರು, ಈಗ ದಕ್ಷಿಣ ಕನ್ನಡ ಭಾಗದ ಸಂಸ್ಕೃತಿಯ ಪ್ರತೀಕವಾದ‌ ಯಕ್ಷಗಾನ ಕಲೆಯ ಹಿರಿಮೆಯನ್ನು ಜಗತ್ತಿಗೆ ಹೇಳಲು ಹೊರಟಿದ್ದಾರೆ, ಯಕ್ಷಗಾನ ಪ್ರಸಂಗ ಆಧಾರಿತ “ವೀರ ಚಂದ್ರಹಾಸ” ಎಂಬ ಚಿತ್ರವನ್ನು ಅವರು ನಿರ್ದೇಶಿಸಿದ್ದು, ಆ ಚಿತ್ರ ಇದೇ ತಿಂಗಳ 18 ರಂದು ಬಿಡುಗಡೆಯಾಗುತ್ತಿದೆ.

RelatedPosts

ಬಿಗ್‌ಬಾಸ್‌ ಸ್ಪರ್ಧಿ ರಜತ್‌ ವಿರುದ್ದ ದಾಖಲಾಯ್ತು ಮತ್ತೊಂದು ಕೇಸ್‌..!

ಹೊಂಬಾಳೆ ಫಿಲ್ಮ್ಸ್ ಜೊತೆ ಹೃತಿಕ್ ರೋಷನ್ ಬಿಗ್ ಪ್ರಾಜೆಕ್ಟ್..!

ವಿಷ್ಣುದಾದಾ ಕೋಟಿಗೊಬ್ಬನಿಗೆ ಬೆಳ್ಳಿ ಮಹೋತ್ಸವ.. ಯಾರೆಲ್ಲಾ ಬರ್ತಾರೆ..?!

ಡಿವೋರ್ಸ್ ಗದ್ದಲ ಮಧ್ಯೆ ತ್ರಿಶಾ ಜೊತೆ ವಿಜಯ್ ಒಂದೇ ಕಾರಿನಲ್ಲಿ ಎಂಟ್ರಿ..!

ADVERTISEMENT
ADVERTISEMENT

ಎಸ್ ಎಸ್ ರಾಜಕುಮಾರ್ ನಿರ್ಮಾಣದ, ಪ್ರತಿಷ್ಠಿತ ಹೊಂಬಾಳೆ ಫಿಲಂಸ್ ಅರ್ಪಿಸುತ್ತಿರುವ ಈ ಚಿತ್ರದ ಮೂಲಕ ಚಿತ್ರರಂಗದ ಇತಿಹಾಸದಲ್ಲೇ ಮೊದಲ ಬಾರಿಗೆ, ಕರಾವಳಿ ಕರ್ನಾಟಕದ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾದ ಯಕ್ಷಗಾನವನ್ನು ಬೆಳ್ಳಿ ಪರದೆಯಲ್ಲಿ ತೋರಿಸುವ ಪ್ರಯತ್ನ ಮಾಡಲಾಗಿದೆ. ಚಿತ್ರದ ಟ್ರೇಲರ್ ಬಿಡುಗಡೆ ಹಾಗೂ ಯಕ್ಷಗಾನ ಕಲಾವಿದರನ್ನು ಗೌರವಿಸುವ ಸಮಾರಂಭ ಕುಂದಾಪುರದ ಆನೆಗುಡ್ಡೆ ಶ್ರೀವಿನಾಯಕನ ಸನ್ನಿಧಿಯಲ್ಲಿ ನಡೆಯಿತು.

ವೇದಿಕೆಯಲ್ಲಿ ನಿರ್ದೇಶಕ ರವಿ ಬಸ್ರೂರ್ ಮಾತನಾಡುತ್ತಾ, ಇದು ನನ್ನ ಸುಮಾರು ವರ್ಷಗಳ ಕನಸು. ಯಕ್ಷಗಾನವನ್ನು ವಿಶ್ವಮಾನ್ಯ ಮಾಡಬೇಕೆಂದು ಈ ಚಿತ್ರ ಮಾಡಲು ಹೊರಟಾಗ ನಾಗರಾಜ್ ನೈಕಂಬ್ಳಿ, ನವೀನ್ ಶೆಟ್ಟಿ ಅವರುಗಳು ನನ್ನ ಬೆನ್ನಿಗೆ ನಿಂತರು. ಚಂದ್ರಹಾಸನಾಗಿ ಶಿತಿಲ್ ಶೆಟ್ಟಿ, ದುಷ್ಟಬುದ್ದಿಯಾಗಿ ಪ್ರಸನ್ನ ಶೆಟ್ಟಿಗಾರ್ ಅಲ್ಲದೆ ಪ್ರತಿಯೊಬ್ಬರೂ ಚಿತ್ರಕ್ಕಾಗಿ ಕೊಟ್ಟ ಡೆಡಿಕೇಶನ್ ದೊಡ್ಡದು. ಚಿತ್ರದ ಎಲ್ಲಾ ಪಾತ್ರಗಳನ್ನು ನಿಜವಾದ ಯಕ್ಷಗಾನ ಕಲಾವಿದರೇ ಮಾಡಿದ್ದಾರೆ. ಹಿಂದೆಂದೂ ನೋಡಿರದ ಅದ್ಭುತವಾದ ಸಾಹಿತ್ಯ ಚಿತ್ರದಲ್ಲಿದ್ದು, ಹಿನ್ನೆಲೆ ಸಂಗೀತಕ್ಕಾಗಿ 600 ರಿಂದ 700 ಮ್ಯೂಸಿಕ್ ಟ್ರ್ಯಾಕ್ಸ್ ಬಳಸಿದ್ದೇವೆ‌.

400 ರಿಂದ 500 ಯಕ್ಷಗಾನ ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದಾರೆ. ಕಲಾನಿರ್ದೇಶಕ ಪ್ರಭು ಬಡಿಗೇರ್ ನಮ್ಮ ಕಲ್ಪನೆಗೂ ಮೀರಿ ಕಲಾ ನಿರ್ದೇಶನ ಮಾಡಿಕೊಟ್ಟರು. ವಿಶೇಷವಾಗಿ ಸಿನಿಮಾದಲ್ಲಿ ಸೆಟ್ ಲೈಟ್ ಬಳಸದೆ, ನೈಜ ಬೆಳಕಲ್ಲೇ ಶೂಟ್ ಮಾಡಿದ್ದೇವೆ. 8 ರಿಂದ 10 ಕೋಟಿ ಬಜೆಟ್ ನಲ್ಲಿ ಹೆಬ್ಬಾಳದ ಬಳಿ ಒಂದು ಗ್ರೌಂಡ್ ನಲ್ಲಿ ಬೇರೆ ಬೇರೆ ಸೆಟ್ ಹಾಕಿ 35 ರಿಂದ 40 ದಿನ ಶೂಟ್ ಮಾಡಿದ್ದೇವೆ ಎಂದು ವಿವರಿಸಿದರು.

ನಾಗರಾಜ್ ನೈಕಂಬ್ಳಿ ಮಾತನಾಡಿ ಜೈಮಿನಿ ಭಾರತದ ಒಂದು ಭಾಗವಾದ ವೀರ ಚಂದ್ರಹಾಸನ ಕಥೆಯನ್ನು ಈ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಗಂಡು ಕಲೆಯನ್ನು ರವಿ ಬಸ್ರೂರ್ ತೆರೆಮೇಲೆ ತೋರಿಸುತ್ತಿದ್ದಾರೆ. ಕೆಲ ಸೋಷಿಯಲ್ ಮೀಡಿಯಾಗಳಲ್ಲಿ ಈ ಕಲೆಯ ಬಗ್ಗೆ ಅವಹೇಳನಕಾರಿಯಾಗಿ ತೋರಿಸಲಾಗುತ್ತಿದೆ. ಈ ಚಿತ್ರವನ್ನು ಶಕ್ತಿಯಿಂದ ಮಾಡಿಲ್ಲ, ಭಕ್ತಿಯಿಂದ ಮಾಡಿದ್ದೇವೆ ಎಂದರು.

ಚಂದ್ರಹಾಸನ ಪಾತ್ರಧಾರಿ ಶಿಥಿಲ್ ಶೆಟ್ಟಿ ಮಾತನಾಡಿ ಕೇವಲ ನಾಲ್ಕೈದು ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದ್ದ ನಮ್ಮ ಯಕ್ಷಗಾನ ಕಲೆಯನ್ನು ವಿಶ್ವಮಾನ್ಯ ಮಾಡಬೇಕೆಂದು ರವಿ ಬಸ್ರೂರ್ ಅವರು ಈ ಸಿನಿಮಾ ಮಾಡಿದ್ದಾರೆ. ಪ್ರತಿಭೆ ಇರುವವರಿಗೆ ಕರೆದು ಅವಕಾಶ ನೀಡಿದ್ದಾರಲ್ಲದೆ, ಎಲ್ಲಿಯೂ ಲೋಪವಾಗದ ಹಾಗೆ ಸಿನಿಮಾ ನಿರ್ದೇಶಿಸಿದ್ದಾರೆ. ಅವರು ಸ್ಥಳದಲ್ಲೇ ಸನ್ನಿವೇಶವನ್ನು ವಿವರಿಸುತ್ತಿದ್ದರು. ಸಿನಿಮಾಗಾಗಿ ಅವರ ಡೆಡಿಕೇಶನ್ ದೊಡ್ಡದು. ನಾವೆಲ್ಲ ಕುದುರೆ ಸವಾರಿ ಕಲಿತು ಅಭಿನಯಿಸಿದ್ದೇವೆ. ಯಕ್ಷಗಾನ ವಿಶ್ವಗಾನ ಆಗಬೇಕು ಎಂದು ಹೇಳ್ತಾರಷ್ಟೇ. ಆದರೆ ಅದನ್ನು ರವಿ ಬಸ್ರೂರು ಕಾರ್ಯಗತ ಮಾಡಿ ತೋರಿಸಿದ್ದಾರೆ ಎಂದರು.

ದುಷ್ಟಬುದ್ದಿ ಪಾತ್ರಧಾರಿ ಪ್ರಸನ್ನ ಶೆಟ್ಟಿಗಾರ್ ಮಾತನಾಡುತ್ತ, ರವಿ ಬಸ್ರೂರ್ 12 ವರ್ಷಗಳ ಹಿಂದಿನ ಕನಸನ್ನು ನನಸು ಮಾಡಿದ್ದಾರೆ. ದುಷ್ಟಬುದ್ದಿ ಪಾತ್ರ ಮಾಡಿ ಖ್ಯಾತರಾದವರನ್ನು ಬಿಟ್ಟು ನನ್ನ ಕೈಲಿ ಅದನ್ನು ಮಾಡಿಸಿದ್ದಾರೆ. ಅವರಲ್ಲಿ ಬೆಳಗ್ಗೆ ಇರೋ ಉತ್ಸಾಹವೇ ಸಂಜೆ 6 ಗಂಟೆಗೂ ಇರುತ್ತಿತ್ತು. ಇದು ಯಕ್ಷಗಾನಕ್ಕೆ ಸಿಕ್ಕಂಥ ದೊಡ್ಡ ಬೆಳವಣಿಗೆ ಎಂದರು.

ಸಾಹಿತಿ ಪ್ರಮೋದ್ ಮೊಗಬೆಟ್ಟು ಮಾತನಾಡಿ ಇದರಲ್ಲಿ ನಾನು 60 ರಿಂದ 70 ಹಾಡುಗಳನ್ನು ಬರೆದಿದ್ದೇನೆ. ಬೆಳ್ಳಿತೆರೆಯಲ್ಲಿ ಇಂಥಹ ಅದ್ಭುತ ಬೆಳವಣಿಗೆ ಆಗುತ್ತೆ ಅಂತ ನಾವ್ಯಾರೂ ಊಹಿಸಿರಲಿಲ್ಲ. ಅದನ್ನು ನಮ್ಮವರೇ ಆದ ರವಿ ಬಸ್ರೂರ್ ಮಾಡಿದ್ದಾರೆ. ಪ್ರಾಚೀನ ಕಲೆ ಯಕ್ಷಗಾನಕ್ಕೆ ಸಿಕ್ಕಂಥ ಗೌರವ ಇದು. ಯಕ್ಷಗಾನ ಕಲಾವಿದರು ಮಾಡಬೇಕಿದ್ದ ಕೆಲಸವನ್ನು ರವಿ ಅವರು ಮಾಡಿದ್ದಾರೆ. ಯಕ್ಷಗಾನ ಕಲಾವಿದರ ಪ್ರತಿಭೆಯನ್ನು ಅವರು ಹೊರತಂದಿದ್ದಾರೆ ಎಂದರು.

ಒಂದೇ ಸಿನಿಮಾಕ್ಕಾಗಿ ಇಷ್ಟೊಂದು ಹಾಡುಗಳನ್ನು ಯಾರೂ ಬರೆದಿದ್ದಿಲ್ಲ. ಇದನ್ನು ಗಿನ್ನಸ್ ದಾಖಲೆಗೆ ಕಳುಹಿಸುತ್ತಿದ್ದೇವೆ ಎಂದೂ ಹೇಳಿದ ರವಿ ಬಸ್ರೂರ್, ಶಿವರಾಜಕುಮಾರ್ ಅವರ ಪಾತ್ರದ ಬಗ್ಗೆ ಮಾತನಾಡುತ್ತ ವೀರಕಾಳಗದ ವಿಜೇತರಿಗೆ ಪ್ರಶಸ್ತಿ ನೀಡುವ, ವಿಶ್ಯುಯಲಿ ಟ್ರೀಟ್ ಕೊಡುವಂಥ ಪಾತ್ರವದು. ಅನಾರೋಗ್ಯವಿದ್ದರೂ, ಹೇಳಿದ ಸಮಯಕ್ಕೆ ಸರಿಯಾಗಿ ಬಂದು ಮುಗಿಸಿಕೊಟ್ಟರು. ಹೆಬ್ಬಾಳದ ಸೆಟ್ ನಲ್ಲಿ ನಮ್ಮ ಜತೆ ಸಂಜೆವರೆಗೂ ಇದ್ದರು. ನಾನು ಒಂದು ಹೆಜ್ಜೆ ಇಟ್ಟಿದ್ದಕ್ಕೆ ಈ ಥರದ ಸಪೋರ್ಟ್ ಸಿಗುತ್ತೆ ಅಂದುಕೊಂಡಿರಲಿಲ್ಲ. ಚಂದನ್ ಶೆಟ್ಟಿ, ಪುನೀತ್, ಗರುಡರಾಮ್ ಅವರ ಪಾತ್ರಗಳು ಪ್ರಮುಖ ಘಟ್ಟದಲ್ಲಿ ಬರುತ್ತವೆ.

ಮೊದಲಬಾರಿಗೆ ಯಕ್ಷಗಾನ ಕಥೆಯೊಂದು ತೆರೆಗೆ ಬರುತ್ತಿದ್ದು ಹೊಂಬಾಳೆ ಫಿಲಂಸ್ ಸಂಸ್ಥೆ ನಮ್ಮ ಜೊತೆಗೆ ನಿಂತಿದ್ದು. 50ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ಏಪ್ರಿಲ್ 18ರಂದು ಬಿಡುಗಡೆಯಾಗುತ್ತಿದೆ. ನಮ್ಮ ಯಕ್ಷಗಾನ ಕಲೆ ಗೋದಾವರಿ ಕಡೆ ಹೋಲಿಕೆಯಿದೆ ಎಂದು ತೆಲುಗು ನಿರ್ಮಾಪಕರೊಬ್ಬರು ತೆಲುಗು ರೈಟ್ಸ್ ಪಡೆದುಕೊಂಡಿದ್ದಾರೆ. ಚಿತ್ರದ ಅವಧಿ 2 ಗಂಟೆ 36 ನಿಮಿಷ ಇದೆ‌. ಹಾಡುಗಳು ಬಿಟ್ ಥರ ಇರುತ್ತದೆ. ಎಲ್ಲಾ ಸರ್ಕಾರಿ ಶಾಲೆ ಮಕ್ಕಳಿಗೆ ಈ ಚಿತ್ರವನ್ನು ತೋರಿಸಲು ಅವಕಾಶ ಕೊಡಬೇಕು ಎಂದು ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿದ್ದೇವೆ. ಜನರಿಗೆ ತಲುಪಿಸಲು ಹೊಂಬಾಳೆ ಸಂಸ್ಥೆ ದೊಡ್ಡ ಮಟ್ಟದ ಸಹಕಾರ ನೀಡಿದೆ ಎಂದರು.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (79)

ಸದಾ ಎದೆ ಉರಿ, ಅಜೀರ್ಣ ಕಾಡುತ್ತಿದೆಯೇ ? ಅದು ಕೇವಲ ಗ್ಯಾಸ್ಟ್ರಿಕ್ ಅಲ್ಲ, ಕ್ಯಾನ್ಸರ್ ಇರಬಹುದು ಎಚ್ಚರ

by ಯಶಸ್ವಿನಿ ಎಂ
March 6, 2026 - 11:39 pm
0

Untitled design (77)

ಒತ್ತಡದಿಂದ ನಿದ್ದೆ ಬರುತ್ತಿಲ್ಲವೇ ? ಬೇಗ ಮಲಗಲು ಇಲ್ಲಿವೆ ನೋಡಿ ಬೆಸ್ಟ್ ಐಡಿಯಾಗಳು

by ಯಶಸ್ವಿನಿ ಎಂ
March 6, 2026 - 11:13 pm
0

Untitled design (78)

ಜಾಗತಿಕ ಯುದ್ದಕ್ಕೆ ಉತ್ತರ ಕೊರಿಯಾ ಎಂಟ್ರಿ ? ಇರಾನ್ ಕೇಳಿದರೆ ಕ್ಷಿಪಣಿ ಪೂರೈಸಲು ಸಿದ್ಧ ಎಂದ ಕಿಮ್ ಜಾಂಗ್ ಉನ್..!

by ಯಶಸ್ವಿನಿ ಎಂ
March 6, 2026 - 10:22 pm
0

Untitled design (76)

ಬಿಗ್‌ಬಾಸ್‌ ಸ್ಪರ್ಧಿ ರಜತ್‌ ವಿರುದ್ದ ದಾಖಲಾಯ್ತು ಮತ್ತೊಂದು ಕೇಸ್‌..!

by ಯಶಸ್ವಿನಿ ಎಂ
March 6, 2026 - 9:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (76)
    ಬಿಗ್‌ಬಾಸ್‌ ಸ್ಪರ್ಧಿ ರಜತ್‌ ವಿರುದ್ದ ದಾಖಲಾಯ್ತು ಮತ್ತೊಂದು ಕೇಸ್‌..!
    March 6, 2026 | 0
  • Untitled design (74)
    ಹೊಂಬಾಳೆ ಫಿಲ್ಮ್ಸ್ ಜೊತೆ ಹೃತಿಕ್ ರೋಷನ್ ಬಿಗ್ ಪ್ರಾಜೆಕ್ಟ್..!
    March 6, 2026 | 0
  • Untitled design (69)
    ವಿಷ್ಣುದಾದಾ ಕೋಟಿಗೊಬ್ಬನಿಗೆ ಬೆಳ್ಳಿ ಮಹೋತ್ಸವ.. ಯಾರೆಲ್ಲಾ ಬರ್ತಾರೆ..?!
    March 6, 2026 | 0
  • Untitled design (66)
    ಡಿವೋರ್ಸ್ ಗದ್ದಲ ಮಧ್ಯೆ ತ್ರಿಶಾ ಜೊತೆ ವಿಜಯ್ ಒಂದೇ ಕಾರಿನಲ್ಲಿ ಎಂಟ್ರಿ..!
    March 6, 2026 | 0
  • Untitled design (67)
    ಇರಾನ್ ಇಸ್ರೇಲ್ ಉದ್ವಿಗ್ನತೆ… ಬಣ್ಣದ ಲೋಕಕ್ಕೆ ಹೊಡೆತ..!
    March 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version