2ನೇ ವಿಮಾನ ನಿಲ್ದಾಣದ ವಿಚಾರವಾಗಿ ನಾಯಕರ ನಡುವೆ ಜಟಾಪಟಿ ಶುರುವಾಗಿದೆ. ಸರ್ಕಾರ ಗುರುತಿಸಿರೋ 3 ಸ್ಥಳಗಳನ್ನ ಬಿಟ್ಟು ಶಿರಾದಲ್ಲಿ ನೂತನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪಿಸಲು ಕೂಗು ಎದ್ದಿದೆ. ಸಿಎಂ ಸಿದ್ದರಾಮಯ್ಯಗೆ ಟಿ.ಬಿ ಜಯಚಂದ್ರ ನೇತೃತ್ವದಲ್ಲಿ 30ಕ್ಕೂ ಹೆಚ್ಚು ಶಾಸಕರು ಪಕ್ಷಾತೀತವಾಗಿ ಪತ್ರ ಬರೆದಿದ್ದಾರೆ.
ಕನಕಪುರದಲ್ಲೂ ವಿಮಾನ ನಿಲ್ದಾಣಕ್ಕೆ ಜಾಗ ಪರಿಶೀಲಿಸಲಾಗಿದೆ. ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಒತ್ತಡವೇ ಕಾರಣ ಎಂದು ಕೆಲವರಿಂದ ಬೇಸರ ವ್ಯಕ್ತವಾಗಿದೆ. ಏರ್ಪೋರ್ಟ್ ಸ್ಥಾಪನೆ ವಿಚಾರದಲ್ಲೂ ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗ್ತಿದೆ ಎಂದು 30ಕ್ಕೂ ಹೆಚ್ಚು ಶಾಸಕರು ಧ್ವನಿ ಎತ್ತಿದ್ದಾರೆ.
ಕನಕಪುರ ರಸ್ತೆಯ ಭಾಗದಲ್ಲಿ 2ನೇ ಏರ್ಪೋರ್ಟ್ ಬೇಡವೇ ಬೇಡ. ತುಮಕೂರು ಅಥವಾ ಶಿರಾ ಭಾಗದಲ್ಲಿ ಎಲ್ಲೇ ನಿರ್ಮಿಸಿದ್ರೂ ಓಕೆ ಎಂದು ಉತ್ತರ ಕರ್ನಾಟಕ ಭಾಗದ ಶಾಸಕರು, ಸಚಿವರ ಮಾತು. ಆದರೆ, ಶಿರಾ ಭಾಗದಲ್ಲಿ ಏರ್ ಪೋರ್ಟ್ ಮಾಡಲು ಮೂಲಸೌಕರ್ಯ ಸಚಿವ ಎಂಬಿ ಪಾಟೀಲ್ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಇನ್ನು ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು, ತುಮಕೂರು ಜಿಲ್ಲೆಯ ಶಿರಾ ಸಮೀಪ ಸರ್ಕಾರಿ ಭೂಮಿ ಇದೆ. ಅಲ್ಲೇ ಅಂತಾರಾಷ್ಟ್ರೀಯ ಏರ್ಪೋರ್ಟ್ ನಿರ್ಮಾಣ ಆಗಲಿ ಎಂದು 6 ತಿಂಗಳ ಹಿಂದೆಯೇ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಹುಬ್ಬಳ್ಳಿ, ಬೆಳಗಾವಿ, ಶಿವಮೊಗ್ಗ ಸೇರಿ ಎಲ್ಲದಕ್ಕೂ ಹತ್ತಿರ ಆಗುತ್ತೆ. ಅಧಿಕಾರಿಗಳು ಮೂರು ಸ್ಥಳ ವೀಕ್ಷಿಸಿದ್ದಾರೆ, ಅದರಲ್ಲಿ ಶಿರಾ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನ ಹೊರಹಾಕಿದ್ದಾರೆ.
ಅಂತಿಮವಾಗಿ ಎಲ್ಲಿ ಮಾಡಬೇಕು ಎನ್ನುವುದನ್ನು ವಿಮಾನ ನಿಲ್ದಾಣ ಪ್ರಾಧಿಕಾರದವರು ತೀರ್ಮಾನ ಮಾಡಲಿದ್ದಾರೆ ಶಿರಾದಲ್ಲಿ ಏರ್ಪೋರ್ಟ್ ಆಗಲಿ ಎಂದು ಜಯಚಂದ್ರ ಬೇಡಿಕೆ ಕೂಡ ಇದೆ. ಶಿರಾ ಅಥವಾ ತುಮಕೂರು ಮಧ್ಯೆ ನಿರ್ಮಾಣವಾದರೂ ಪರವಾಗಿಲ್ಲ. ಈ ಬಗ್ಗೆ ಕೇಂದ್ರ ವಿಮಾನಯಾನ ಸಚಿವರನ್ನು ಭೇಟಿ ಮಾಡಿ ಬಂದಿದ್ದೇನೆ. ಶಿರಾ ಭಾಗದಲ್ಲಿ ಏರ್ಪೋರ್ಟ್ ಮಾಡೋದು ಎಎಐಗೆ ಬಿಟ್ಟಿದ್ದು. ಬೆಂಗಳೂರನ್ನು ಟ್ರಾಫಿಕ್ ಮುಕ್ತ ಮಾಡಬೇಕೆಂಬುದು ನಮ್ಮ ಉದ್ದೇಶ. ಈ ಕುರಿತು ಸಿಎಂ ಜೊತೆ ಪರಮೇಶ್ವರ್, ಟಿ.ಬಿ.ಜಯಚಂದ್ರ ಮಾತನಾಡಿದ್ದಾರೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಕುತೂಹಲ ಮೂಡಿಸಿದ ಸ್ಥಳ
ಕನಕಪುರ ರಸ್ತೆಯಲ್ಲಿ ಗುರುತಿಸಲಾಗಿರುವ ಎರಡು ಪ್ರದೇಶಗಳಲ್ಲಿ ಮತ್ತು ನೆಲಮಂಗಲ-ಕುಣಿಗಲ್ ರಸ್ತೆಯಲ್ಲಿರುವ ಒಂದು ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈ ಮೂಲಕ, ಎರಡನೇ ವಿಮಾನ ನಿಲ್ದಾಣದ ರೇಸ್ನಲ್ಲಿದ್ದ ಬಿಡದಿ ಸ್ಪರ್ಧೆಯಿಂದ ಹೊರಡೆ ಬಿದ್ದಂತಾಗಿದೆ. ಅಲ್ಲದೆ ಸಚಿವ ಜಿ.ಪರಮೇಶ್ವರ್ ಹಾಗೂ ವಿ.ಸೋಮಣ್ಣ ಅವರ ಮನವಿಗೂ ಕ್ಯಾರೆ ಅನ್ನದೇ, ಈಗಾಗಲೇ ತುಮಕೂರನ್ನು ಸಹ ಕೈಬಿಡಲಾಗಿದೆ ಎನ್ನಲಾಗುತ್ತಿದೆ.
ಕನಕಪುರ ರಸ್ತೆ ಅಥವಾ ನೆಲಮಂಗಲ ಭಾಗದಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಆಗಬಾರದು. ಶಿರಾದಲ್ಲಿ ಆಗಲಿ ಎಂದು 30ಕ್ಕೂ ಹೆಚ್ಚು ಶಾಸಕರು ಪಟ್ಟು ಹಿಡಿದಿದ್ದಾರೆ. ಆದರೆ, ಅಂತಿಮವಾಗಿ ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಯಾವ ಸ್ಥಳ ಗುರುತು ಮಾಡಲಾಗುತ್ತೆ? ಯಾರ ಕೈ ಮೇಲಾಗುತ್ತೆ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.
ರಾಜಕೀಯ ಲೆಕ್ಕಾಚಾರ. ಪರ ವಿರೋಧ ಏನೇ ಇದ್ದರೂ ಅಂತಿಮವಾಗಿ ಕೇಂದ್ರದ ನಾಗರಿಕ ವಿಮಾನಯಾನ ಇಲಾಖೆ ಮತ್ತು ಕೇಂದ್ರ ಸರ್ಕಾರವೇ ಜಾಗ ಫೈನಲ್ ಮಾಡಲಿದೆ. ಸದ್ಯ ಯಾವ ಸ್ಥಳ ಅಂತಿಮವಾಗುತ್ತದೆ ಎನ್ನುವುದೇ ಕುತೂಹಲ ಮೂಡಿಸಿದೆ.
ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
- Tata Play-1665
- U-Digital-ಮೈಸೂರು-160
- Metro Cast Network-ಬೆಂಗಳೂರು-ಬೆಳಗಾವಿ-30-828
- V4 digital network-623
- Abhishek network-817
- Malnad Digital network-45
- JBM network-ರಾಮದುರ್ಗ-54
- Channel net nine-ಧಾರವಾಡ-128
- Basava cable network-ಚಳ್ಳಕೆರೆ-54
- City channel network– ಚಳ್ಳಕೆರೆ-54
- RST digital-ಕಾರ್ಕಳ-101
- Vinayak cable-ಪಟ್ಟನಾಯಕನಹಳ್ಳಿ-54
- Mubarak digital-ಸಂಡೂರು-54
- SB cable-ಸವದತ್ತಿ-54
- Bhosale network-ವಿಜಯಪುರ-54
- Surya digital-ಜಗಳೂರು-54
- Gayatri network-ಸಿಂಧನೂರು-54
- Global vision-ದಾವಣಗೆರೆ-54
- Janani cable-ಮಂಡ್ಯ-54
- Hira cable-ಬೆಳಗಾವಿ-ಹುಬ್ಬಳ್ಳಿ-54
- UDC network-ಹಾರೋಗೇರಿ-54
- Moka cable-ಬಳ್ಳಾರಿ-100
- CAN network-ಚಿಕ್ಕೋಡಿ-54
- KK digital-ಗಂಗಾವತಿ-54
- Victory network-ದಾವಣಗೆರೆ-54