ಬಿಜೆಪಿ ಸರ್ಕಾರದ ವಿರುದ್ಧ ಕೇಳಿಬಂದಿದ್ದ 40% ಕಮಿಷನ್ ಆರೋಪಕ್ಕೆ ಸಂಬಂಧಿಸಿದ ತನಿಖೆಗೆ ಎಸ್ಐಟಿ (SIT) ರಚಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಕಾನೂನು ಸಚಿವ ಹೆಚ್. ಕೆ. ಪಾಟೀಲ್ ಅವರು ಹೇಳಿದರು.
ಇಂದು(ಏಪ್ರಿಲ್11) ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗುತ್ತಿಗೆದಾರರ ಸಂಘದ ಆರೋಪದ ಬಗ್ಗೆ ನಾಗಮೋಹನ್ ದಾಸ್ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಲಾಗಿತ್ತು. ನಾಗಮೋಹನ್ ದಾಸ್ ಅವರು ವಿಚಾರಣಾ ವರದಿ ಸಲ್ಲಿಸಿದ ಬಳಿಕ ಸಂಪುಟದಲ್ಲಿ ಮಂಡಿಸಲಾಗಿದ್ದು, ಕೆಲವು ವಿವರಗಳನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಯಿತು. ಇನ್ನಷ್ಟು ವಿವರವಾಗಿ ಚರ್ಚೆಯ ಅಗತ್ಯವಿದೆ ಎಂದು ಹೆಚ್. ಕೆ. ಪಾಟೀಲ್ ಹೇಳಿದರು.
ದೂರುಗಳ ಮಾಹಿತಿ ಕಲೆ ಹಾಕಿ ವರದಿಯನ್ನು ನೀಡಲಾಗಿದೆ. 3 ಲಕ್ಷ ಕಾಮಗಾರಿಗಳ ಪೈಕಿ 1729 ಕಾಮಗಾರಿಗಳ ಬಗ್ಗೆ ಆಪಾದನೆಗಳಿವೆ. ಯೋಜನೆ, ಹಣ ಬಿಡುಗಡೆ, ಎಲ್ಒಸಿ ಬಿಡುಗಡೆ ಸರಿಯಾದ ರೀತಿಯಲ್ಲಿ ಇಲ್ಲ. ಯಾವ ಪ್ರಮಾಣದಲ್ಲಿ ವ್ಯತ್ಯಾಸಗಳಾಗಿವೆ ಎಂಬುದನ್ನು ಚರ್ಚೆ ನಡೆಸಿದ್ದೇವೆ. ಅನುದಾನಕ್ಕಿಂತ ಹೆಚ್ಚು ಬಿಲ್ ಆಗಿದೆ, ಕಾಮಗಾರಿಗಳ ಬಗ್ಗೆ ಸಂಶಯಗಳಿವೆ.
ಕೆಲವು ಕಡೆ ಟೆಂಡರ್ ಹಂಚಿಕೆ ವೇಳೆಯೇ ಮಧ್ಯವರ್ತಿಗಳ ಕೆಲಸ ಆಗಿದೆ. ಗಂಭೀರವಾದ ವರದಿಯಾದ ಹಿನ್ನೆಲೆಯಲ್ಲಿ ಎಸ್ಐಟಿ ರಚನೆ ಮಾಡಲು ತೀರ್ಮಾನಿಸಿದ್ದೇವೆ. ಎರಡು ತಿಂಗಳಲ್ಲಿ ಕ್ರಮ ಕೈಗೊಳ್ಳಲು ಎಸ್ಐಟಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ ಅವರು, ನೈಸ್ ರಸ್ತೆ ಯೋಜನೆ ಬಗ್ಗೆ ಸಂಪುಟ ಸಭೆಯಲ್ಲಿ ವಿಷಯ ಪ್ರಸ್ತಾಪವಾಗಿದೆ. ನೈಸ್ ರಸ್ತೆ ವಿಚಾರಕ್ಕೆ ಸುಪ್ರೀಂ ಮತ್ತು ಹೈಕೋರ್ಟ್ನಲ್ಲಿ ವಿಚಾರಣೆ ನಡೆದಿದೆ.
ನೈಸ್ ರಸ್ತೆ ನಿರ್ಮಾಣ ಮುಂದೆ ಆಗಬೇಕಾ?, ಬೇಡ್ವಾ ಎಂಬ ಬಗ್ಗೆ ಸಂಪೂರ್ಣವಾಗಿ ಚರ್ಚೆ ಮಾಡುವುದು ಒಂದು ಸಭೆಯಲ್ಲಿ ಸಾಧ್ಯವಿಲ್ಲ. ಕಾನೂನಾತ್ಮಕ ಅಂಶಗಳನ್ನು ಪರಿಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ. ಸಂಪುಟ ಉಪ ಸಮಿತಿ ನೇಮಕ ಮಾಡಿ ಮುಂದಿನ ತೀರ್ಮಾನ ಮಾಡುತ್ತೇವೆ. 1699 ಎಕರೆಯನ್ನು ನೈಸ್ ಸಂಸ್ಥೆಯವರು ಬೇರೆಯವರಿಗೆ ಶುದ್ಧ ಕ್ರಯ ಮಾಡಿಕೊಡಲು ಮುಂದಾಗಿದ್ದಾರೆ. ಈ ಬಗ್ಗೆಯೂ ಕ್ಯಾಬಿನೆಟ್ ಸಬ್ ಕಮಿಟಿ ತೀರ್ಮಾನ ಕೈಗೊಳ್ಳುತ್ತೆ. ಕ್ಯಾಬಿನೆಟ್ ಸಬ್ ಕಮಿಟಿ ರಚನೆಯನ್ನು ಸಿಎಂ ಸಿದ್ದರಾಮಯ್ಯ ಮಾಡಲಿದ್ದಾರೆ ಎಂದು ತಿಳಿಸಿದರು.
ಕ್ಯಾಬಿನೆಟ್ನಲ್ಲಿ ಹಲವು ವಿಷಯಗಳಿಗೆ ಅನುಮೋದನೆ
ಲೋಕೋಪಯೋಗಿ ಇಲಾಖೆಯ ಚಿಕ್ಕಬಳ್ಳಾಪುರ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಂ. ಮುರಳೀಧರ್. ಕಾರ್ಯನಿರ್ವಾಹಕ ಇಂಜಿನಿಯರ್ ಮತ್ತು ಪಿ.ವಿ. ಶ್ರೀನಿವಾಸುಲು, ಗ್ರೂಪ್-ಡಿ ಇವರ ವಿರುದ್ಧ ಉಪ ಲೋಕಾಯುಕ್ತರು ಮಾಡಿರುವ ದಂಡನಾ ಶಿಫಾರಸನ್ನು ತಿರಸ್ಕರಿಸಿ ಕ್ಯಾಬಿನೆಟ್ ಅನುಮೋದನೆ ನೀಡಿದೆ.
ಬೆಂಗಳೂರು ಮೈಸೂರು ಮೂಲಸೌಕರ್ಯ ಕಾರಿಡಾರ್ ಯೋಜನೆ (BMICP)ಯ ಅನುಷ್ಠಾನದ ಬಗ್ಗೆ ಕ್ಯಾಬಿನೆಟ್ ಸಬ್ ಕಮಿಟಿ ರಚಸಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕರ್ಣಂಗೇರಿ ಗ್ರಾಮದ ಸರ್ವೆ ನಂಬರ್512/1ರಲ್ಲಿ 0.26 ಎಕರೆ (26 ಸೆಂಟ್) ಜಮೀನನ್ನು ಬಿಲ್ಲವ ಸಮಾಜ ಸೇವಾ ಸಂಘಕ್ಕೆ ಮಂಜೂರು ಮಾಡಲು ಕ್ಯಾಬಿನೆಟ್ ತೀರ್ಮಾನಿಸಿದೆ.
ಬೆಂಗಳೂರು ನಗರ ಜಿಲ್ಲೆ, ಉತ್ತರ (ಅಪರ) ತಾಲ್ಲೂಕು, ಹೊಸಹಳ್ಳಿ ಗ್ರಾಮದ ಸರ್ವೆ ನಂಬರ್ 21ರಲ್ಲಿ ಕೊಡವ ಸಮಾಜ, ಬೆಂಗಳೂರು ಇವರಿಗೆ ಮಂಜೂರು ಮಾಡಿರುವ 7 ಎಕರೆ ಜಮೀನಿಗೆ ವಿಧಿಸಿರುವ ಮೌಲ್ಯವನ್ನು ಪರಿಷ್ಕರಿಸಿ ಅನುಮೋದಿಸಲಾಗಿದೆ. ಗಿಗ್ ಕಾರ್ಮಿಕರ ವಿಧೇಯಕ ಮಂಡನೆಗೆ ಕ್ಯಾಬಿನೆಟ್ ತೀರ್ಮಾನ ಕೈಗೊಂಡಿದ್ದು, ಸುಗ್ರೀವಾಜ್ಞೆ ಮೂಲಕ ಬಿಲ್ ಜಾರಿಗೆ ತರಲಿದೆ ಎಂದು ಸಚಿವ ಹೆಚ್. ಕೆ. ಪಾಟೀಲ್ ತಿಳಿಸಿದರು.
ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
- Tata Play-1665
- U-Digital-ಮೈಸೂರು-160
- Metro Cast Network-ಬೆಂಗಳೂರು-ಬೆಳಗಾವಿ-30-828
- V4 digital network-623
- Abhishek network-817
- Malnad Digital network-45
- JBM network-ರಾಮದುರ್ಗ-54
- Channel net nine-ಧಾರವಾಡ-128
- Basava cable network-ಚಳ್ಳಕೆರೆ-54
- City channel network– ಚಳ್ಳಕೆರೆ-54
- RST digital-ಕಾರ್ಕಳ-101
- Vinayak cable-ಪಟ್ಟನಾಯಕನಹಳ್ಳಿ-54
- Mubarak digital-ಸಂಡೂರು-54
- SB cable-ಸವದತ್ತಿ-54
- Bhosale network-ವಿಜಯಪುರ-54
- Surya digital-ಜಗಳೂರು-54
- Gayatri network-ಸಿಂಧನೂರು-54
- Global vision-ದಾವಣಗೆರೆ-54
- Janani cable-ಮಂಡ್ಯ-54
- Hira cable-ಬೆಳಗಾವಿ-ಹುಬ್ಬಳ್ಳಿ-54
- UDC network-ಹಾರೋಗೇರಿ-54
- Moka cable-ಬಳ್ಳಾರಿ-100
- CAN network-ಚಿಕ್ಕೋಡಿ-54
- KK digital-ಗಂಗಾವತಿ-54
- Victory network-ದಾವಣಗೆರೆ-54





