• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜಲ ಜೀವನ್ ಮಿಷನ್ ಯೋಜನೆ ವಿಚಾರದಲ್ಲಿ ಸರ್ಕಾರ ಸತ್ಯ ಹೇಳಿದರೆ ನಾವು ಸಹಕಾರ ನೀಡುತ್ತೇವೆ: ಬೊಮ್ಮಾಯಿ

ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎನ್ನುವುದು ಶುದ್ಧ ಸುಳ್ಳು‌!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 16, 2025 - 7:36 pm
in Flash News, ಕರ್ನಾಟಕ
0 0
0
Basavaraj bommai

ಹಾವೇರಿ: ಜಲ ಜೀವನ್ ಮೀಷನ್ ಯೋಜನೆ ಅಡಿಯಲ್ಲಿ ರಾಜ್ಯಕ್ಕೆ 18 ಸಾವಿರ ಕೋಟಿ ರೂ. ಅನ್ಯಾಯವಾಗಿದೆ ಎನ್ನುವುದು ಶುದ್ಧ ಸುಳ್ಳು‌. ರಾಜ್ಯ ಸರ್ಕಾರ ಸುಳ್ಳು ಹೇಳುವುದನ್ನು ಬಿಟ್ಟು ಸತ್ಯವೇನಿದೆ ಎನ್ನುವುದನ್ನು ನಮಗೆ ತಿಳಿಸಿದರೆ ನಾವೂ ಸಹಕಾರ ಮಾಡುತ್ತೇವೆ. ಸಂಬಂಧ ಪಟ್ಟ ಸಚಿವರ ಜೊತೆ ಮಾತನಾಡಿ ಹಣ ಬಿಡುಗಡೆ ಮಾಡಿಸುವ ಕೆಲಸ ಮಾಡುತ್ತೇವೆ. ಇದರಲ್ಲಿ ರಾಜಕಾರಣ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

ಭಾನುವಾರ ಹಾವೇರಿಯಲ್ಲಿ ಜನ ಸಂಪರ್ಕ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ನಾಲ್ಕು ವರ್ಷಗಳಿಂದ ಜಲ ಜೀಪನ್ ಮಿಷನ್ ಯೋಜನೆ ನಡೆಯುತ್ತಿದೆ. ಕೇಂದ್ರ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಈ ಯೋಜನೆ ಜಾರಿಯಾಗಿದೆ. ರಾಜ್ಯ ಸರ್ಕಾರ ಖರ್ಚು ಮಾಡಿದ ಮೇಲೆ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡುತ್ತದೆ. ರಾಜ್ಯ ಸರ್ಕಾರ ತನ್ನ ಖಜಾನೆ ಖಾಲಿ ಮಾಡಿಕೊಂಡು ಸಂಪೂರ್ಣ ದಿವಾಳಿಯಾಗಿ ಹಣ ಖರ್ಚು ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ ಖರ್ಚು ಮಾಡಿದ ಮೇಲೆ ಅದರ ದಾಖಲೆಗಳನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿದರೆ, ಖರ್ಚು ಮಾಡಿದ ಎಲ್ಲ ಹಣವೂ ರಾಜ್ಯಸರ್ಕಾರಕ್ಕೆ ಬರುತ್ತದೆ. ನಾವೂ ಕೂಡ ರಾಜ್ಯ ಸರ್ಕಾರಕ್ಕೆ ಸಹಕಾರ ಮಾಡುತ್ತೇವೆ. ರಾಜ್ಯ ಸರ್ಕಾರ ಸುಳ್ಳು ಹೇಳುವುದನ್ನು ಬಿಟ್ಟು ಸತ್ಯ ಏನಿದೆ ಎನ್ನುವುದನ್ನು ನಮಗೆ ತಿಳಿಸಿದರೆ ನಾವೂ ಸಹಕಾರ ಮಾಡುತ್ತೇವೆ. ಸಂಬಂಧ ಪಟ್ಟ ಸಚಿವರ ಜೊತೆ ಮಾತನಾಡಿ ಹಣ ಬಿಡುಗಡೆ ಮಾಡಿಸುವ ಕೆಲಸ ಮಾಡುತ್ತೇವೆ. ಇದರಲ್ಲಿ ರಾಜಕಾರಣ. ಮಾಡಬಾರದು ಎಂದು ಆಗ್ರಹಿಸಿದರು.

RelatedPosts

ಬೆಂಗಳೂರಿನಲ್ಲಿ ಫುಟ್​ಪಾತ್ ತೆರವು ಕಾರ್ಯಾಚರಣೆ ಆರಂಭ; ಜೆಸಿಬಿಗಳ ಘರ್ಜನೆ

ಮುಂಬೈ ತೊರೆದು ಬೆಂಗಳೂರಿಗೆ ಶಿಫ್ಟ್ ಆದ ಹಾರ್ದಿಕ್ ಪಾಂಡ್ಯ: ಕಾರಣವೇನು ಗೊತ್ತಾ?

ಜುಲೈ ಮೊದಲ ದಿನ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಇಂದಿನ ದರ ವಿವರ

ಭಾರೀ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ

ADVERTISEMENT
ADVERTISEMENT

ವಿವಿ ಮುಚ್ಚುವುದು ಅನ್ಯಾಯ

ಇನ್ನು ರಾಜ್ಯ ಸರ್ಕಾರ ಹೊಸ ವಿಶ್ವ ವಿದ್ಯಾಲಯಗಳನ್ನು ಮುಚ್ಚಲು ಮುಂದಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವಿಶ್ವ ವಿದ್ಯಾಲಯಗಳ ಪರಿಕಲ್ಪನೆ ಬದಲಾವಣೆಯಾಗಿದೆ. ರಾಜ್ಯದಲ್ಲಿ ಐವತ್ತು ಆರವತ್ತನೇ ದಶಕದಲ್ಲಿ ವಿಶ್ವ ವಿದ್ಯಾಲಯಗಳು ಸ್ಥಾಪನೆಯಾಗಿದ್ದವು. ಆವತ್ತಿನ ಕಾಲೇಜು ಸಂಖ್ಯೆ. ವಿದ್ಯಾರ್ಥಿಗಳ ಸಂಖ್ಯೆಗೂ ಇಂದಿಗೂ ಬಹಳ ವ್ಯತ್ಯಾಸ ಇದೆ. ನಾವು ಹಿಂದುಳಿದ ಜಿಲ್ಲೆಯನ್ನು ಗಮನದಲ್ಲಿಟ್ಟುಕೊಂಡು ಎಸ್ಸಿ ಎಸ್ಟಿ, ಹಿಂದುಳಿದ ವಿದ್ಯಾರ್ಥಿಗಳಿಗೆ ಅನುಕೂಲ ಆಗಲಿ ಎಂದು ವಿಶ್ವ ವಿದ್ಯಾಲಯ ಮಾಡದ್ದೇವೆ. ಈ ವಿಶ್ವ ವಿದ್ಯಾಲಯಕ್ಕೆ ಹೆಚ್ಚಿನ ಅನುದಾನ ಬೇಕಿಲ್ಲ. ಆದರೂ ಕೂಡ ಒಂದು ನಯಾ ಪೈಸೆಯನ್ನು ಕಾಂಗ್ರೆಸ್‌ ಸರ್ಕಾರ ನೀಡಿಲ್ಲ, ಆದರೂ, ವಿದ್ಯಾರ್ಥಿಗಳು ನೀಡುವ ಫೀ ಇಂದಲೇ ವಿಶ್ವ ವಿದ್ಯಾಲಯಗಳನ್ನು ನಡೆಸುತ್ತಿದ್ದಾರೆ. ಎಲ್ಲವೂ ಪಿಜಿ ಕೇಂದ್ರದಲ್ಲಿಯೇ ನಡೆಯುತ್ತಿರುವುದರಿಂದ ಸರ್ಕಾರ ಯಾವುದೇ ಭೂಮಿಯನ್ನು ನೀಡಿಲ್ಲ. ಡಿಜಿಟಲ್ ಶಿಕ್ಷಣ, ದೂರ ಶಿಕ್ಷಣ ಎಲ್ಲವನ್ನೂ ಸಮರ್ಪಕವಾಗಿ ಮಾಡುತ್ತಿದ್ದಾರೆ. ಜಿಲ್ಲೆಯ ಎಸ್ಸಿ ಎಸ್ಟಿ, ಒಬಿಸಿ ವಿದ್ಯಾರ್ಥಿಗಳು ಹಾಗೂ ಹೆಣ್ಣು ಮಕ್ಕಳಿಗೆ ದೊಡ್ಡ ಪ್ರಮಾಣದಲ್ಲಿ ಅನುಕೂಲವಾಗಿದೆ. ಇದನ್ನು ಸ್ಥಗಿತಗೊಳಿಸಿದರೆ ಎಸಿ, ಎಸ್ಸಿ ಒಬಿಸಿ ಹಾಗೂ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಬಹಳ ದೊಡ್ಡ ಅನ್ಯಾಯ ಮಾಡಿದಂಗುತ್ತದೆ. ಈಗಾಗಲೇ ಎಲ್ಲ ಜಿಲ್ಲೆಯ ಜನರು, ವಿದ್ಯಾರ್ಥಿಗಳು, ಪೋಷಕರು, ಬುದ್ದಿ ಜೀವಿಗಳು ವಿರೋಧ ಮಾಡುತ್ತಿದ್ದಾರೆ. ಇವುಗಳನ್ನು ಅಲ್ಪ ದುಡ್ಡಿನಲ್ಲಿಯೇ ಬಲವರ್ಧನೆ ಮಾಡದೇ ಅವುಗಳನ್ನು ಮುಚ್ಚಿಸುವ ಕೆಲಸ ಮಾಡುತ್ತಿರುವುದು ಘೋರ ಅನ್ಯಾಯ ಎಂದರು.

ಈಗಾಗಲೇ ಇರುವ ಹಳೆಯ ವಿಶ್ವ ವಿದ್ಯಾಲಯಗಳಿಗೆ ನೂರಾರು ಕೋಟಿ ರೂ. ಖರ್ಚು ಮಾಡುತ್ತಾರೆ. ಅವುಗಳ ಸ್ಥಿತಿಗತಿ ಏನಿದೆ. ಖಾಲಿ ಹುದ್ದೆಗಳಿವೆ. ಎಷ್ಟೋ ಕೋರ್ಸ್‌ ಗಳಿಗೆ ವಿದ್ಯಾರ್ಥಿಗಳಿಲ್ಲ. ಅತ್ಯಂತ ಅಧೋಗತಿಗೆ ಹೋಗಿವೆ. ಭ್ರಷ್ಟಾಚಾರದ ಕೂಪಗಳಾಗಿವೆ. ಈಗಾಗಲೇ ಎರಡು ವರ್ಷದಲ್ಲಿ ಉತ್ತಮ ಕೆಲಸ ಮಾಡುತ್ತಿರುವ ಹೊಸ ವಿಶ್ವ ವಿದ್ಯಾಲಯಗಳನ್ನು ಮುಚ್ಚಲು ಹೋಗುತ್ತಿರುವುದು ನಿಜವಾಗಲು ಉನ್ನತ ಶಿಕ್ಷಣಕ್ಕೆ ದೊಡ್ಡ ಕೊಡಲಿ ಪೆಟ್ಟು ನೀಡಿದಂತಾಗುತ್ತದೆ, ಎನ್‌ಇಪಿ ವಿಚಾರದಲ್ಲಿಯೂ ರಾಜ್ಯ ಸರ್ಕಾರ ಇದೇ ರೀತಿ ಮಾಡಿತ್ತು. ಇದರ ವಿರುದ್ಧ ಬುದ್ದಿ ಜೀವಿಗಳಿಂದ ಹಿಡಿದು ಎಲ್ಲ ಜನರೂ ಹೋರಾಟ ಮಾಡಬೇಕು. ಕಾನೂನು ಸಮರ ಮಾಡಬೇಕು ಎಂದು ಹೇಳಿದರು.

ಗೋದಾವರಿ ಕಾವೇರಿ ನದಿ ಜೋಡಣೆ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿರುವ ವಿಚಾರದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ದೇವೇಗೌಡರಿಗೆ ಯಾವ ಮಾಹಿತಿ ಇದೆಯೋ ಗೊತ್ತಿಲ್ಲ. ಖಂಡಿತವಾಗಿಯೂ ರಾಜ್ಯಕ್ಕೆ ಅನ್ಯಾಯವಾಗಿದ್ದರೆ ನಾವು ಯಾವಾಗಲೂ ಪಕ್ಷಾತೀತವಾಗಿಯೇ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಇದೇ ವೇಳೆ, ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲುಳಿತದಿಂದ ಕುಂಭಮೇಳಕ್ಕೆ ತೆರಳುವ ಭಕ್ತರು ಸಾವಿಗೀಡಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಯಾರೋ ತಪ್ಪು ಮಾಹಿತಿ ನೀಡಿದ್ದರಿಂದ ಅಲ್ಲಿ. ದುರ್ಘಟನೆ ಸಂಭವಿಸಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಲಿ ಎಂದು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 01T114841.482

ಬೆಂಗಳೂರಿನಲ್ಲಿ ಫುಟ್​ಪಾತ್ ತೆರವು ಕಾರ್ಯಾಚರಣೆ ಆರಂಭ; ಜೆಸಿಬಿಗಳ ಘರ್ಜನೆ

by ಶಾಲಿನಿ ಕೆ. ಡಿ
July 1, 2026 - 11:51 am
0

Untitled design 2026 07 01T104327.875

ಮುಂಬೈ ತೊರೆದು ಬೆಂಗಳೂರಿಗೆ ಶಿಫ್ಟ್ ಆದ ಹಾರ್ದಿಕ್ ಪಾಂಡ್ಯ: ಕಾರಣವೇನು ಗೊತ್ತಾ?

by ಶಾಲಿನಿ ಕೆ. ಡಿ
July 1, 2026 - 10:54 am
0

Untitled design 2026 07 01T092718.054

ಜುಲೈ ಮೊದಲ ದಿನ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಇಂದಿನ ದರ ವಿವರ

by ಶಾಲಿನಿ ಕೆ. ಡಿ
July 1, 2026 - 9:30 am
0

Untitled design 2026 07 01T091504.219

ಭಾರೀ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ

by ಶಾಲಿನಿ ಕೆ. ಡಿ
July 1, 2026 - 9:17 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 01T114841.482
    ಬೆಂಗಳೂರಿನಲ್ಲಿ ಫುಟ್​ಪಾತ್ ತೆರವು ಕಾರ್ಯಾಚರಣೆ ಆರಂಭ; ಜೆಸಿಬಿಗಳ ಘರ್ಜನೆ
    July 1, 2026 | 0
  • Untitled design 2026 07 01T104327.875
    ಮುಂಬೈ ತೊರೆದು ಬೆಂಗಳೂರಿಗೆ ಶಿಫ್ಟ್ ಆದ ಹಾರ್ದಿಕ್ ಪಾಂಡ್ಯ: ಕಾರಣವೇನು ಗೊತ್ತಾ?
    July 1, 2026 | 0
  • Untitled design 2026 07 01T092718.054
    ಜುಲೈ ಮೊದಲ ದಿನ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಇಂದಿನ ದರ ವಿವರ
    July 1, 2026 | 0
  • Untitled design 2026 07 01T091504.219
    ಭಾರೀ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ
    July 1, 2026 | 0
  • Untitled design 2026 07 01T084656.045
    ಬೆಂಗಳೂರಿನಲ್ಲಿ ಇಂದಿನಿಂದ ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಆರಂಭ
    July 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version