• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 17, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಜನರಿಗೆ ‘ಭೂ ಗ್ಯಾರಂಟಿ’: ಡಿ.ಕೆ. ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 19, 2025 - 4:31 pm
in Flash News, ಕರ್ನಾಟಕ
0 0
0
Untitled design 2025 05 19t163002.106

ಹೊಸಪೇಟೆ: “ರಾಜ್ಯ ಸರ್ಕಾರ ಕೇವಲ ಎರಡು ವರ್ಷದ ಸಂಭ್ರಮಾಚರಣೆ ಮಾಡುತ್ತಿಲ್ಲ. ಜನರಿಗೆ ‘ಭೂ ಗ್ಯಾರಂಟಿ’ ಯೋಜನೆ ಮೂಲಕ 1 ಕೋಟಿಗೂ ಹೆಚ್ಚು ಜನರಿಗೆ ಭೂ ದಾಖಲಾತಿ ಪತ್ರ ನೀಡಿ ಅವರ ಋಣ ತೀರಿಸುವ ಕೆಲಸ ಮಾಡುತ್ತಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ರಾಜ್ಯ ಸರಕಾರಕ್ಕೆ ಎರಡು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ವಿಜಯನಗರದ ಹೊಸಪೇಟೆಯಲ್ಲಿ ನಡೆಯಲಿರುವ ಸಾಧನೆ ಸಮಾವೇಶದ ಪೂರ್ವಸಿದ್ಧತೆ ಪರಿಶೀಲನೆ ಬಳಿಕ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳ ಜತೆ ಮಾತನಾಡಿದರು.

RelatedPosts

ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಕರಾವಳಿಗೆ ರೆಡ್ ಅಲರ್ಟ್!

ಇರಾನ್-ಇಸ್ರೇಲ್ ಯುದ್ಧದ ಬಿಸಿ: ಕರ್ನಾಟಕಕ್ಕೂ ತಟ್ಟಲಿದೆಯಾ?

ಬೆಂಗಳೂರಿಗರೇ ಎಚ್ಚರ..ಎಚ್ಚರ..ಎರಡು ದಿನ ಸಿಗೋದಿಲ್ಲಾ ಕಾವೇರಿ ವಾಟರ್!

ನ್ಯೂಸ್ ಓದುವಾಗಲೇ ಬಾಂಬ್ ದಾಳಿ: ಲೈವ್ ಶೋ ಬಿಟ್ಟು ಓಡಿದ ಸುದ್ದಿ ನಿರೂಪಕಿ!

ADVERTISEMENT
ADVERTISEMENT

“ನೂರು ವರ್ಷಗಳಲ್ಲಿ ಮಾಡಲಾಗದ ಕೆಲಸವನ್ನು ನಮ್ಮ ಸರ್ಕಾರ ಕಂದಾಯ ಇಲಾಖೆ ಮೂಲಕ ಮಾಡಿ, ಹೊಸ ಇತಿಹಾಸ ಬರೆಯುತ್ತಿದೆ. ಈ ಕಾರ್ಯಕ್ರಮದಲ್ಲಿ ಲೋಪದೋಷಗಳಿವೆಯೇ ಇಲ್ಲವೇ ಎಂದು ಅಧಿಕಾರಿಗಳ ಜತೆ ಭಾನುವಾರ ನಡೆಸಿದ ಸಭೆಯಲ್ಲಿ ಪರಿಶೀಲನೆ ಮಾಡಲಾಗಿದೆ. ಕಂದಾಯ ಇಲಾಖೆಯ ಮೂಲಕ ನೀಡುತ್ತಿರುವ ಈ ಭೂ ಗ್ಯಾರಂಟಿ ಇತಿಹಾಸದ ಪುಟ ಸೇರಲಿದೆ. ಪ್ರತಿಯೊಬ್ಬ ವ್ಯಕ್ತಿಗೂ ತಾನು ವಾಸವಿರುವ ಜಾಗವನ್ನು ತನ್ನದಾಗಿಸಿಕೊಳ್ಳುವ ಆಸೆ ಇರುತ್ತದೆ. ಪರಿಶಿಷ್ಟರು, ಹಿಂದುಳಿದವರು ಹಾಗೂ ಭೂರಹಿತವಾಗಿರುವವರು ಕಳೆದ ಹಲವು ವರ್ಷಗಳಿಂದ ದಾಖಲೆ ಇಲ್ಲದೆ ಮನೆ ಕಟ್ಟಿಕೊಂಡು ಪರದಾಡುತ್ತಿದ್ದರು. ಹೀಗಾಗಿ ನಮ್ಮ ಸರ್ಕಾರ ಇದಕ್ಕೆ ಪರಿಹಾರ ನೀಡಿದೆ” ಎಂದರು.

“ಬಿಜೆಪಿ ಸರ್ಕಾರ ಕಲಬುರ್ಗಿಯಲ್ಲಿ 20 ಕೋಟಿ ಖರ್ಚು ಮಾಡಿ ದಾಖಲೆ ನೀಡುತ್ತೇವೆ ಎಂದು ಕಾರ್ಯಕ್ರಮ ಮಾಡಿತ್ತಾದರೂ ಇದನ್ನು ಕಾರ್ಯರೂಪಕ್ಕೆ ಹೇಗೆ ತರಬೇಕು ಎಂದು ತಿಳಿಯದೇ ಯೋಜನೆ ಕೈಬಿಟ್ಟಿತ್ತು. ಸಚಿವ ಕೃಷ್ಣ ಭೈರೇಗೌಡರು ಹಾಗೂ ಅವರ ಅಧಿಕಾರಿಗಳ ತಂಡ ಅಧ್ಯಯನ ಮಾಡಿ ಇದಕ್ಕೆ ಶಾಶ್ವತ ಪರಿಹಾರ ನೀಡಿದ್ದಾರೆ. 4 ಸಾವಿರ ಅಡಿವರೆಗಿನ ಕಂದಾಯ ಅಥವಾ ಖಾಸಗಿ ಭೂಮಿಯಲ್ಲಿ ಅನೇಕ ವರ್ಷಗಳಿಂದ ವಾಸವಿರುವ ಜಾಗವನ್ನು ಸರ್ಕಾರದ ವಶಕ್ಕೆ ಪಡೆದು, ತಹಶೀಲ್ದಾರ್ ಅದರ ಮಾಲೀಕತ್ವರಾಗಿ, ನಂತರ ಅವರ ಮೂಲಕ ಉಪ ನೋಂದಣಿ ಕಚೇರಿಯಲ್ಲಿ ಕ್ರಯದ ರೂಪದಲ್ಲಿ ಜನರಿಗೆ ಈ ಭೂಮಿಯನ್ನು ಉಚಿತವಾಗಿ ನೀಡುವ ವ್ಯವಸ್ಥೆ ತರಲಾಗಿದೆ. 1,11,11,111 ಆಸ್ತಿ ದಾಖಲೆ ಸಿದ್ಧವಾಗಿದ್ದು, ಆಯಾ ತಾಲೂಕುಗಳಲ್ಲಿ ತಹಶೀಲ್ದಾರ್ ಅವರು ಆಸ್ತಿಯ ದಾಖಲೆ ನೀಡಲಿದ್ದಾರೆ. ಈ ರೀತಿ ದಾಖಲೆ ಪಡೆದ ಆಸ್ತಿಯನ್ನು ಯಾರೂ 15 ವರ್ಷಗಳ ಕಾಲ ಮಾರಾಟ ಮಾಡುವಂತಿಲ್ಲ. ಈ ದಾಖಲೆಗಳನ್ನು ತಹಶೀಲ್ದಾರ್ ಅವರು ನೋಂದಣಿ ಮಾಡಿ ಆಸ್ತಿ ಮಾಲೀಕರಿಗೆ ನೀಡುತ್ತಿದ್ದಾರೆ. ಪಿಡಿಒ ಇಲಾಖೆ ಜತೆಗೂಡಿ ಖಾತೆ ಮಾಡಿಸಿಕೊಡಲಾಗುವುದು. ಇದಕ್ಕೆ ನೀಡಬೇಕಾದ ಶುಲ್ಕ ಪಾವತಿಯನ್ನು ಮುಂದಕ್ಕೆ ಹಾಕಲಾಗಿದೆ” ಎಂದು ತಿಳಿಸಿದರು.

“ವಿಜಯನಗರ ಜಿಲ್ಲೆಯನ್ನು ಪೋಡಿ ಮುಕ್ತ ಜಿಲ್ಲೆಯನ್ನಾಗಿ ಮಾಡಿದ್ದು, 79 ಸಾವಿರ ರೈತರಿಗೆ ಪೋಡಿ ದಾಖಲೆ ನೀಡಲಾಗಿದೆ. ಇಡೀ ದೇಶಕ್ಕೆ ಇದು ಹೊಸ ಮಾದರಿ. ನಮ್ಮ ಸರ್ಕಾರ ಎರಡು ವರ್ಷ ಪೂರೈಸಿದ್ದು, ನಾವು ಕೇವಲ ಸಂಭ್ರಮಾಚರಣೆ ಮಾಡಲು ಈ ಕಾರ್ಯಕ್ರಮ ಮಾಡುತ್ತಿಲ್ಲ. ಜನರು ನಮಗೆ ಕೊಟ್ಟ ಅವಕಾಶ, ಆಶೀರ್ವಾದಕ್ಕೆ ಋಣ ತೀರಿಸಲು ಈ ಕಾರ್ಯಕ್ರಮ ಮಾಡುತ್ತಿದ್ದೇವೆ. ನಾವು ಕೇವಲ ಗ್ಯಾರಂಟಿ ಯೋಜನೆಗಳ ಮೇಲೆ, ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಿಲ್ಲ. ಜನರ ಬದುಕು ಕಟ್ಟಿಕೊಟ್ಟು ರಾಜಕಾರಣ ಮಾಡುತ್ತಿದ್ದೇವೆ” ಎಂದು ಹೇಳಿದರು.

ಇಂದಿರಾಗಾಂಧಿ ಪುತ್ಥಳಿ ಅನಾವರಣ

“ಈ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಆಗಮಿಸಲಿದ್ದಾರೆ. ನಮ್ಮ ಸರ್ಕಾರದ ಮಂತ್ರಿಗಳು ಶಾಸಕರು ಭಾಗವಹಿಸಲಿದ್ದಾರೆ. ವಿರೋಧ ಪಕ್ಷದ ಶಾಸಕರಿಗೂ ಗೌರವಯುತ ಆಹ್ವಾನ ನೀಡಲಾಗಿದೆ. ಮುಖ್ಯಮಂತ್ರಿಗಳೇ ಖುದ್ದಾಗಿ ವಿರೋಧ ಪಕ್ಷದ ನಾಯಕರಿಗೆ ಆಹ್ವಾನ ನೀಡಿದ್ದಾರೆ. ಇಂದಿರಾಗಾಂಧಿ ಅವರು ಈ ಪುಣ್ಯ ಭೂಮಿಯಲ್ಲಿ ಬಂದು ಭಾಷಣ ಮಾಡಿದ್ದರು. ನಮ್ಮ ಜಿಲ್ಲಾ ಉಸ್ತುವಾರಿ ಸಚಿವರು ಇಂದಿರಾ ಗಾಂಧಿ ಅವರ ಪುತ್ಥಳಿ ನಿರ್ಮಿಸಿದ್ದಾರೆ. ಇದನ್ನು ಸಹ ಅನಾವರಣ ಮಾಡಲಾಗುವುದು” ಎಂದು ತಿಳಿಸಿದರು.

ಪರಿಸ್ಥಿತಿಯ ಸಮರ್ಥ ನಿರ್ವಹಣೆ

ಮಳೆಯಿಂದಾಗಿ ಬೆಂಗಳೂರಿನ ರಸ್ತೆಗಳು ಜಲಾವೃತವಾಗಿದೆ ಎಂದು ಕೇಳಿದಾಗ, “ಮಳೆ ಬರಬೇಕು. ಹೆಚ್ಚಿಗೆ ಮಳೆ ಬಂದಷ್ಟು ಸರ್ಕಾರಕ್ಕೆ ಲಾಭ. ಭಾನುವಾರ ರಾತ್ರಿ ಸುರಿದ ಮಳೆಯಿಂದ ಗೋಡೆ ಕುಸಿದು ಒಂದು ಸಾವಾಗಿದೆ ಎಂದು ಮಾಹಿತಿ ಬಂದಿದೆ. ಉಳಿದಂತೆ ಯಾವುದೇ ಅವಘಡ ಸಂಭವಿಸಿಲ್ಲ. ನಮ್ಮ ಅಧಿಕಾರಿಗಳ ಪರಿಸ್ಥಿತಿಯನ್ನು ನಿಭಾಯಿಸುತ್ತಿದ್ದಾರೆ. ಕೆಲವು ತಗ್ಗು ಪ್ರದೇಶಗಳಲ್ಲಿ ಮನೆ ಕಟ್ಟಿಕೊಂಡಿರುವ ಜಾಗದಲ್ಲಿ ನೀರು ನುಗ್ಗಿದೆ. ಮಳೆ ಹಾನಿ ಪ್ರದೇಶಕ್ಕೆ ನಾನು ಮುಖ್ಯಮಂತ್ರಿಗಳು ಭೇಟಿ ನೀಡಿ ಪರಿಶೀಲನೆ ಮಾಡುತ್ತೇವೆ” ಎಂದರು.

ಕುಮಾರಸ್ವಾಮಿ ಅವರು ಟೀಕೆ ಮಾಡಿರುವ ಬಗ್ಗೆ ಕೇಳಿದಾಗ, “ನಾನು ಇಲ್ಲಿಗೆ ಪ್ರವಾಸ ಮಾಡುವುದಕ್ಕೆ ಬಂದಿದ್ದೇನೆಯೇ? ಜನರ ಬದುಕು ಸರಿ ಮಾಡುವ ಉದ್ದೇಶದೊಂದಿಗೆ ಬಂದಿದ್ದೇನೆ. ಅವರು ವಿರೋಧ ಪಕ್ಷದಲ್ಲಿದ್ದಾರೆ ಅವರಿಗೆ ಮತ್ತು ಆರ್.ಅಶೋಕ್ ಅವರಿಗೆ ಸರ್ಕಾರದ ವಿರುದ್ಧ ಟೀಕೆ ಮಾಡದಿದ್ದರೆ ಅವರಿಗೆ ಸಮಾಧಾನ ಆಗುವುದಿಲ್ಲ. ಅವರ ಸ್ಥಾನಕ್ಕೆ ಧಕ್ಕೆಯಾಗುತ್ತದೆ. ಹೀಗಾಗಿ ನಾಲ್ಕು ಮಾತು ಆಡಿದ್ದಾರೆ” ಎಂದರು.

ಶಾಶ್ವತ ಮಳೆನೀರು ಗಾಲುವೆಗೆ ಯೋಜನೆ

ಬೆಂಗಳೂರು ಮಳೆ ಅವಾಂತರಕ್ಕೆ ಶಾಶ್ವತ ಪರಿಹಾರವೇ ಇಲ್ಲವೇ ಎಂದು ಕೇಳಿದಾಗ, “ಮಳೆ ಪ್ರಕೃತಿ, ಅದು ಯಾರ ನಿಯಂತ್ರಣದಲ್ಲೂ ಇಲ್ಲ. ಮಳೆ ಬೀಳುವ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿತ್ತು. ನಮ್ಮ ಅಧಿಕಾರಿಗಳು ನಾಲ್ಕು ದಿನಗಳಿಂದಲೇ ಸಕಲ ಸಿದ್ಧತೆ ಮಾಡಿಕೊಂಡಿದ್ದರು. ಬೆಂಗಳೂರಿನಲ್ಲಿ ಮಳೆನೀರುಗಾಲುವೆಯನ್ನು ಶಾಶ್ವತವಾಗಿ ರೂಪಿಸಲು ಯೋಜನೆ ರೂಪಿಸಲಾಗಿದ್ದು, ಇದಕ್ಕಾಗಿ ವಿಶ್ವಬ್ಯಾಂಕಿನಿಂದ ಹಾಗೂ ವಿಪತ್ತು ನಿರ್ವಹಣಾ ಇಲಾಖೆಯಿಂದ 2 ಸಾವಿರ ಕೋಟಿಯಷ್ಟು ನೆರವು ಪಡೆಯಲಾಗಿದೆ” ಎಂದರು.

ಡಿ.ಕೆ. ಶಿವಕುಮಾರ್ ಅವರು ದೇಶದ ನಂಬರ್ 1 ಶ್ರೀಮಂತರಾಗಲು ಗ್ರೇಟರ್ ಬೆಂಗಳೂರು ಜಾರಿ ಮಾಡಿದ್ದಾರೆ ಎಂಬ ಶ್ರೀರಾಮುಲು ಅವರ ಟೀಕೆ ಬಗ್ಗೆ ಕೇಳಿದಾಗ, “ಅವರ ಆಶೀರ್ವಾದ ನನ್ನ ಮೇಲಿರಲಿ. ಶ್ರೀರಾಮುಲು ಅವರಿಗಾಗಲಿ, ಅಶೋಕ್ ಅವರಿಗಾಗಲಿ ನಾನು ಈಗ ಇಲ್ಲಿ ಉತ್ತರ ನೀಡುವುದಿಲ್ಲ. ಬಿಜೆಪಿ ಹಾಗೂ ವಿರೋಧ ಪಕ್ಷದವರು ಹೊಸಪೇಟೆಯಲ್ಲಿ 1 ಕೋಟಿಗೂ ಹೆಚ್ಚು ಜನರಿಗೆ ನೀಡುತ್ತಿರುವ ಭೂ ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡಲಿ” ಎಂದು ತಿರುಗೇಟು ನೀಡಿದರು.

ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ

ಗ್ಯಾರಂಟಿಗಳಿಂದ ಅಭಿವೃದ್ಧಿಯಾಗುತ್ತಿಲ್ಲ ಎಂದು ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ನಮ್ಮದು ಕಾಂಗ್ರೆಸ್ ಗ್ಯಾರಂಟಿ. ಅವರು ಮೋದಿ ಗ್ಯಾರಂಟಿ ಎಂದರು. ಮಹಾರಾಷ್ಟ್ರ, ಮಧ್ಯಪ್ರದೇಶ, ದೆಹಲಿ, ಹರಿಯಾಣ ರಾಜ್ಯಗಳಲ್ಲಿ ಅವರು ಏನು ಮಾಡಿದ್ದಾರೆ? ನಮ್ಮ ಯೋಜನೆ ನಕಲು ಮಾಡಿದರು. ಇಡೀ ದೇಶಕ್ಕೆ ಕಾಂಗ್ರೆಸ್ ಆಡಳಿತ ಮಾದರಿಯಾಗಿದೆ. ಪ್ರತಿ ಹಂತದಲ್ಲೂ ನಮ್ಮ ಕಾರ್ಯಕ್ರಮ ಮಾದರಿಯಾಗಿದೆ. ಬಿಜೆಪಿಯವರು ನರೇಗಾ ಯೋಜನೆ ಬಗ್ಗೆ ಅನೇಕ ಟೀಕೆ ಮಾಡಿದರು. ಆದರೂ ನರೇಗಾ ಯೋಜನೆ ತೆಗೆಯಲು ಸಾಧ್ಯವಾಯಿತೇ? ನಾವು ಭೂ ಸುಧಾರಣಾ ಕಾಯ್ದೆ ಜಾರಿಗೆ ತಂದೆವು, ಅದನ್ನು ಬಿಜೆಪಿಯವರಿಂದ ತೆಗೆದು ಹಾಕಲು ಸಾಧ್ಯವಾಯಿತೇ? ಯುಪಿಎ ಸರ್ಕಾರದಲ್ಲಿ ಬುಡಕಟ್ಟು ಜನರಿಗೆ ಭೂಮಿ ಕೊಟ್ಟೆವು. ಆಹಾರ ಭದ್ರತೆ ಕಾಯ್ದೆ ಜಾರಿಗೆ ತಂದೆವು, ಶೈಕ್ಷಣಿಕ ಹಕ್ಕು ಕಾಂಗ್ರೆಸ್ ಜಾರಿಗೆ ತಂದಿತು. ಬಿಜೆಪಿ ಇಂತಹ ಯೋಜನೆ ಜಾರಿ ಮಾಡಿದೆಯೇ? ಇಲ್ಲ. ಅವರು ಕೇವಲ ಟೀಕೆ ಮಾಡುತ್ತಾರೆ. ಟೀಕೆ ಮಾಡುವವರನ್ನು ತಡೆಯಲಾಗದು. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ” ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (5)

ಚಿನ್ನ ಪ್ರಿಯರಿಗೆ ಗುಡ್ ನ್ಯೂಸ್: ಸತತ ಎರಡನೇ ದಿನ ಚಿನ್ನದ ಬೆಲೆ ಭಾರೀ ಇಳಿಕೆ, ಇಲ್ಲಿದೆ ದರಪಟ್ಟಿ

by ಸಾಬಣ್ಣ ಎಚ್. ನಂದಿಹಳ್ಳಿ
June 17, 2025 - 11:04 am
0

Petrol

ಇಂದು ಎಷ್ಟಾಗಿದೆ ಪೆಟ್ರೋಲ್ ದರ? ರಾಜ್ಯದ ಜಿಲ್ಲೆಗಳ ಪಿನ್ ಟು ಪಿನ್ ಮಾಹಿತಿ ಇಲ್ಲಿದೆ!

by ಶ್ರೀದೇವಿ ಬಿ. ವೈ
June 17, 2025 - 10:54 am
0

Untitled design (57)

ICC ಮಹಿಳಾ ಏಕದಿನ ವಿಶ್ವಕಪ್ 2025: ಟೀಮ್ ಇಂಡಿಯಾ ವೇಳಾಪಟ್ಟಿ ಪ್ರಕಟ

by ಸಾಬಣ್ಣ ಎಚ್. ನಂದಿಹಳ್ಳಿ
June 17, 2025 - 10:47 am
0

Web 2025 06 17t102158.753

ಇನ್ಮೇಲೆ ಮಹಾನಟಿ ಸೀಸನ್​ 2ದೆ ಭರ್ಜರಿ ಸೌಂಡ್..! ಈ ಬಾರಿ ಯಾರೆಲ್ಲಾ ಆಯ್ಕೆ?

by ಶ್ರೀದೇವಿ ಬಿ. ವೈ
June 17, 2025 - 10:28 am
0

ಸಂಬಂಧಿಸಿದ ಪೋಸ್ಟ್‌ಗಳು

  • 1444 (5)
    ನ್ಯೂಸ್ ಓದುವಾಗಲೇ ಬಾಂಬ್ ದಾಳಿ: ಲೈವ್ ಶೋ ಬಿಟ್ಟು ಓಡಿದ ಸುದ್ದಿ ನಿರೂಪಕಿ!
    June 16, 2025 | 0
  • Untitled design 2025 06 16t165112.420
    ‘ವೃಕ್ಷಮಾತೆ’ ಸಿನಿಮಾ ತಂಡಕ್ಕೆ ಸಂಕಷ್ಟ: ಚಿತ್ರತಂಡದ ವಿರುದ್ಧ ದೂರು ನೀಡಿದ ಸಾಲುಮರದ ತಿಮ್ಮಕ್ಕ
    June 16, 2025 | 0
  • Gettyimages 591910329 56f6b5243df78c78418c3124
    ಜೂನ್ 19ರವರೆಗೆ ಕರ್ನಾಟಕದಲ್ಲಿ ಭಾರೀ ಮಳೆ: ರೆಡ್ ಅಲರ್ಟ್ ಘೋಷಣೆ!
    June 16, 2025 | 0
  • Web 2025 06 16t074843.491
    ಇಂದು ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿಯಲ್ಲಿ ಶಾಲೆಗಳಿಗೆ ರಜೆ! ಭಾರೀ ಮಳೆ ಎಚ್ಚರಿಕೆ
    June 16, 2025 | 0
  • Untitled design 2025 06 15t234245.867
    ಇಸ್ರೇಲ್‌ನಲ್ಲಿರುವ ಕನ್ನಡಿಗರ ಜತೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ
    June 15, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version