• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಮ್ಮ ಹೋರಾಟ ರಾಜಕೀಯ ವಿರೋಧಿಗಳ ವಿರುದ್ಧ ಇರಬೇಕೇ ಹೊರತು, ನಮ್ಮೊಳಗೆ ಅಲ್ಲ: ಡಿ.ಕೆ ಶಿವಕುಮಾರ್

ನಮ್ಮ ಹೋರಾಟ ರಾಜಕೀಯ ವಿರೋಧಿಗಳ ವಿರುದ್ಧ ಇರಬೇಕೇ ಹೊರತು, ನಮ್ಮೊಳಗೆ ಅಲ್ಲ: ಡಿಕೆಶಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 21, 2025 - 7:42 am
in Flash News, ಕರ್ನಾಟಕ
0 0
0
DK Shivakumar

ಬೆಂಗಳೂರು: “ನಾವು ನಮ್ಮ ರಾಜಕೀಯ ವಿರೋಧಿಗಳ ವಿರುದ್ಧ ಹೋರಾಟ ಮಾಡಬೇಕೇ ಹೊರತು ನಮ್ಮ ನಮ್ಮಲ್ಲೇ ಹೋರಾಟ ಮಾಡಬಾರದು” ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶವನ್ನು ಶಿವಕುಮಾರ್ ಅವರು ಗುರುವಾರ ಪ್ರಕಟಿಸಿ, ನೂತನ ಪದಾಧಿಕಾರಿಗಳಿಗೆ ಕಿವಿಮಾತು ಹೇಳಿದರು.

RelatedPosts

Heavy Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆ ಆರಂಭ, IMD ಎಚ್ಚರಿಕೆ!

ವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾದ ನೀರಾನೆ ಹಂಸಿನಿ ಸಹ ಸಾ*ವು

ಕೂಸನ್ನೇ ಕೊಂದ ಕಟುಕ ತಂದೆ

ಏಪ್ರಿಲ್‌15ಕ್ಕೆ ಮಂಡ್ಯದ ಆದಿಚುಂಚನಗಿರಿಗೆ ಭೇಟಿ ನೀಡಲಿರುವ ಮೋದಿ

ADVERTISEMENT
ADVERTISEMENT

“ಚುನಾವಣೆ ಗೆಲ್ಲುವುದು ಮುಖ್ಯವಲ್ಲ, ಈಗ ಚುನಾವಣೆ ವಿಚಾರ ಮರೆತು ಯಾವುದೇ ಗುಂಪುಗಾರಿಕೆ ಮಾಡದೆ, ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ, ಕಾಂಗ್ರೆಸ್ ಪಕ್ಷದ ಸಿದ್ಧಾಂತ ನಂಬಿ ಪಕ್ಷದ ಸದಸ್ಯತ್ವ ಪಡೆದಿರುವ ಎಲ್ಲರನ್ನು ಸೇರಿಸಿಕೊಂಡು ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಹೋರಾಟ ಮಾಡಬೇಕು” ಎಂದು ತಿಳಿಸಿದರು.

“ಕಳೆದ ವಾರ ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶ ಹೊರಬಂದಿದ್ದು, ನಿನ್ನೆ ನಮ್ಮ ವರಿಷ್ಠರು ಮೂವರು ಅಭ್ಯರ್ಥಿಗಳನ್ನು ಸಂದರ್ಶನ ಮಾಡಿದರು. ಅಂತಿಮವಾಗಿ ಹೆಚ್.ಎಸ್ ಮಂಜುನಾಥ್ ಅವರನ್ನು ನಮ್ಮ ಪಕ್ಷದ ಯುವ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ” ಎಂದು ಹೇಳಿದರು.

“ಇಲ್ಲಿಯವರೆಗೂ ಮೊಹಮದ್ ನಲಪಾಡ್ ಹ್ಯಾರಿಸ್ ಅವರು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಬಹಳ ಜವಾಬ್ದಾರಿಯಿಂದ ಸಂಘಟನೆ ಮಾಡಿದ್ದರು. ಭಾರತ ಜೋಡೋ, ಚುನಾವಣೆ, ಗಾಂಧಿ ಭಾರತ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿದ್ದರು. ಅವರಿಗೆ ಹಾಗೂ ಅವರ ತಂಡದ ಸದಸ್ಯರಿಗೆ ಕೆಪಿಸಿಸಿ ಪರವಾಗಿ ತುಂಬು ಹೃದಯದ ಅಭಿನಂದನೆ ಸಲ್ಲಿಸುತ್ತೇನೆ” ಎಂದರು.

2.71 ಲಕ್ಷ ಮತಗಳ ಅಂತರದ ಗೆಲುವು

“ಈ ಬಾರಿ ಸುಮಾರು 25 ಲಕ್ಷಕ್ಕೂ ಹೆಚ್ಚು ಸದಸ್ಯತ್ವ ಮಾಡಿ, ಅಂದೇ ಆನ್ ಲೈನ್ ಮೂಲಕ ಮತದಾನ ಮಾಡಿದ್ದರು. ಸುಮಾರು ಶೇ.40‌ರಿಂದ 50 ರಷ್ಟು ಮತಗಳು ತಿರಸ್ಕಾರಗೊಂಡಿವೆ. ಅಬ್ದುಲ್ ದೇಸಾಯಿ ಅವರು 45,968 ಮತಗಳನ್ನು ಪಡೆದರೆ, ದೀಪಿಕಾ ರೆಡ್ಡಿ ಅವರು 2,92,705 ಮತಗಳನ್ನು ಪಡೆದಿದ್ದರು. ಹೆಚ್.ಎಸ್ ಮಂಜುನಾಥ್ ಅವರು 5,67,343 ಮತಗಳನ್ನು ಪಡೆದಿದ್ದರು. 2,71,638 ಮತಗಳ ಅಂತರದಿಂದ ಮಂಜುನಾಥ್ ಅವರು ಗೆಲುವು ಸಾಧಿಸಿದ್ದಾರೆ” ಎಂದು ಫಲಿತಾಂಶ ಪ್ರಕಟಿಸಿದರು.

“ಈ ಚುನಾವಣಾ ಪ್ರಕ್ರಿಯೆಯಲ್ಲಿ ಕೆಪಿಸಿಸಿಯ ಯಾವುದೇ ಹಸ್ತಕ್ಷೇಪವಿಲ್ಲ. ಅಭ್ಯರ್ಥಿಗಳು ತಮ್ಮದೇ ಆದ ರೀತಿ ಹೋರಾಟ ಮಾಡಿದ್ದಾರೆ. ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಉದಯ ಭಾನು ಅವರು ಮಂಜುನಾಥ್ ಅವರನ್ನು ಆಯ್ಕೆ ಮಾಡಿದ್ದು, ಅವರಿಗೆ ಕೆಪಿಸಿಸಿ ವತಿಯಿಂದ ಅಭಿನಂದನೆ ಸಲ್ಲಿಸುತ್ತೇನೆ” ಎಂದರು.

“ಕಾಲೇಜುಗಳಲ್ಲಿ ವಿದ್ಯಾರ್ಥಿ ಚುನಾವಣೆಗಳು ಇಲ್ಲ, ಹೀಗಾಗಿ ನಾಯಕತ್ವ ಬೆಳೆಯಲಿ ಎಂದು ಯುವ ಕಾಂಗ್ರೆಸ್ ಚುನಾವಣೆ ಮಾಡುತ್ತಿದ್ದೇವೆ. ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆ, ಸೋನಿಯಾ ಗಾಂಧಿ ಅವರ ಮುಖಂಡತ್ವ ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ಮಂಜುನಾಥ್ ಅವರಿಗೆ ಯುವ ಕಾಂಗ್ರೆಸ್ ಅಧ್ಯಕ್ಷ ಜವಾಬ್ದಾರಿ ವಹಿಸಲಾಗುತ್ತಿದೆ” ಎಂದು ಹೇಳಿದರು.

ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಜ್ಜಾಗಿ

“ನೂತನವಾಗಿ ಆಯ್ಕೆಯಾಗಿರುವ ಯುವ ಕಾಂಗ್ರೆಸ್ ಪದಾಧಿಕಾರಿಗಳು ಅವರು ಮುಂದೆ ಯಾವ ರೀತಿ ಕೆಲಸ ಮಾಡಬೇಕು ಎಂದು ಮುಂದಿನ ದಿನಗಳಲ್ಲಿ ನಾನು ಎಲ್ಲಾ ಪದಾಧಿಕಾರಿಗಳ ಸಭೆ ಮಾಡಿ ಪಕ್ಷದ ಪರವಾಗಿ ಮಾರ್ಗದರ್ಶನ ನೀಡಲಾಗುವುದು. ಮುಂದಿನ ಎರಡು ಮೂರು ತಿಂಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಬರುತ್ತಿದೆ. ಜತೆಗೆ ಬಿಬಿಎಂಪಿ ಚುನಾವಣೆ ಸಮೀಪಿಸುತ್ತಿದೆ. ನಾವು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ನ್ಯಾಯಾಲಯಕ್ಕೆ ನಾವು ಅಫಿಡವಿಟ್ ಸಲ್ಲಿಕೆ ಮಾಡಿದ್ದೇವೆ. ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಕೆಲಸ ನಡೆಯುತ್ತಿದ್ದು ಕೆಲವೇ ದಿನಗಳಲ್ಲಿ ನಾವು ಯಾವಾಗ ಚುನಾವಣೆ ನಡೆಸಬಹುದು ಎಂದು ನ್ಯಾಯಾಲಯಕ್ಕೆ ತಿಳಿಸಲಿದ್ದೇವೆ. ಬಿಬಿಎಂಪಿ ವಿಚಾರವಾಗಿ ಶಾಸಕ ರಿಜ್ವಾನ್ ಆರ್ಷದ್ ಅವರ ನೇತೃತ್ವದಲ್ಲಿ ಸಮಿತಿ ಮಾಡಿ ಅಭಿಪ್ರಾಯ ಸಂಗ್ರಹಿಸುತ್ತಿದ್ದೇವೆ. ನೀವೆಲ್ಲರೂ ಈಗಿನಿಂದಲೇ ಬೂತ್ ಮಟ್ಟದಲ್ಲಿ ಸಜ್ಜಾಗಿ” ಎಂದು ಕರೆ ನೀಡಿದರು.

“ಮಹಿಳೆಯರಿಗೆ ಶೇ. 50 ಮೀಸಲಾತಿ ನೀಡಲಾಗುವುದು. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ನಾಯಕತ್ವ ಹೆಚ್ಚಾಗಿ ಬೆಳೆಸಬೇಕು. ಯುವ ಕಾಂಗ್ರೆಸ್ ಪಕ್ಷದ ಅಂಗ ಸಂಸ್ಥೆಯಾಗಿದ್ದು ಕೆಪಿಸಿಸಿಯ ಸಂಪೂರ್ಣ ಬೆಂಬಲ ಸಿಗಲಿದೆ” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಸನಗೌಡ ಬಾದರ್ಲಿ, ಶಿಗ್ಗಾವಿ ಕ್ಷೇತ್ರದ ಶಾಸಕರಾದ ಯಾಸಿರ್ ಅಹ್ಮದ್ ಖಾನ್ ಪಠಾಣ್, ಆನಂದ್ ಗಡ್ಡದೇವರ ಮಠ, ಅಬ್ದುಲ್ ದೇಸಾಯಿ, ಮತ್ತಿತರರು ಉಪಸ್ಥಿತರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (69)

Heavy Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆ ಆರಂಭ, IMD ಎಚ್ಚರಿಕೆ!

by ಶ್ರೀದೇವಿ ಬಿ. ವೈ
April 15, 2026 - 7:27 am
0

BeFunky collage (68)

ಚಿಕ್ಕಮಗಳೂರಿನಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಕಾರು ಹರಿದು 7 ವರ್ಷದ ಬಾಲಕಿ ಸಾವು, 9 ಮಂದಿ ಗಂಭೀರ ಗಾಯ

by ಶ್ರೀದೇವಿ ಬಿ. ವೈ
April 15, 2026 - 6:57 am
0

Rashi bavishya

ದಿನ ಭವಿಷ್ಯ : ಇಂದು ಈ ರಾಶಿಯವರು ಹಣದ ವಿಚಾರದಲ್ಲಿ ಎಚ್ಚರಿಕೆ

by ಶ್ರೀದೇವಿ ಬಿ. ವೈ
April 15, 2026 - 6:39 am
0

Hippo Attack

ವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾದ ನೀರಾನೆ ಹಂಸಿನಿ ಸಹ ಸಾ*ವು

by ಶಾಲಿನಿ ಕೆ. ಡಿ
April 14, 2026 - 10:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (69)
    Heavy Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆ ಆರಂಭ, IMD ಎಚ್ಚರಿಕೆ!
    April 15, 2026 | 0
  • Untitled design 2026 04 14T142954.745
    ನಾಳೆ RCB vs LSG ಮುಖಾಮುಖಿ: ರಸ್ತೆ ಮಾರ್ಗ ಬದಲಾವಣೆ, ಪಾರ್ಕಿಂಗ್ ಸ್ಥಳಗಳ ಸಂಪೂರ್ಣ ಪಟ್ಟಿ ಇಲ್ಲಿದೆ
    April 14, 2026 | 0
  • Untitled design 2026 04 14T132636.185
    IPL ಕ್ರೀಡಾಂಗಣದಲ್ಲಿ ₹50 ಚಿಪ್ಸ್ ಪ್ಯಾಕೆಟ್ ₹100 ಗೆ ಮಾರಾಟ: ವಿಡಿಯೋ ವೈರಲ್
    April 14, 2026 | 0
  • Untitled design 2026 04 14T125049.153
    SRH vs RR: ಗೋಲ್ಡನ್ ಡಕ್‌ಗೆ ಔಟಾದ ವೈಭವ್; ಕಾವ್ಯಾ ಮಾರನ್ ರಿಯಾಕ್ಷನ್ ವೈರಲ್
    April 14, 2026 | 0
  • Untitled design 2026 04 14T122123.569
    ಮೊದಲ ರಾತ್ರಿ 90 ಲಕ್ಷಕ್ಕೆ ಡಿಮ್ಯಾಂಡ್: ವಧುವಿನ ಡ್ರಾಮಾ ನೋಡಿ ಬೆಚ್ಚಿಬಿದ್ದ ವರ
    April 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version