ಬೆಂಗಳೂರು: ನೆಲಮಂಗಲ ತಾಲೂಕಿನ ಮಾದನಾಯಕನಹಳ್ಳಿಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. 20 ವರ್ಷದ ಯುವತಿಗೆ ತನ್ನ ತಂದೆಯೇ ದೌರ್ಜನ್ಯ ಮತ್ತು ಅಸಭ್ಯವಾಗಿ ವರ್ತಿಸಿರುವ ಘಟನೆ ನಡೆದಿದೆ. ಈ ಘಟನೆಯ ನಂತರ, ಯುವತಿ ಪೊಲೀಸರಿಗೆ ದೂರು ನೀಡಿ, ತಂದೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದಾಳೆ.
ಯುವತಿಯ ತಾಯಿಗೆ ಸುಮಾರು ನಾಲ್ಕು ವರ್ಷಗಳ ಹಿಂದೆ ಪಾರ್ಶ್ವಘಾತವಾಗಿದ್ದು, ಅವರು ಶಾಶ್ವತವಾಗಿ ಹಾಸಿಗೆ ಹಿಡಿದಿದ್ದಾರೆ. ಈ ಸ್ಥಿತಿಯನ್ನು ದುರ್ಬಳಕೆ ಮಾಡಿಕೊಂಡ ದೇವರಾಜು ಎಂಬುವವನು, ತನ್ನ ಮಗಳ ಮೇಲೆ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ದೂರಿನ ಪ್ರಕಾರ, ರಾತ್ರಿಯ ವೇಳೆ ದೇವರಾಜು ಯುವತಿಯನ್ನು ತನ್ನ ಕೊಠಡಿಗೆ ಕರೆದಿದ್ದು, ನಂತರ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಘಟನೆಯಿಂದ ಭಯಗೊಂಡ ಯುವತಿ, ತಂದೆಯಿಂದ ತಪ್ಪಿಸಿಕೊಂಡು ಪಕ್ಕದ ಮನೆಯವರ ಸಹಾಯ ಪಡೆದಿದ್ದಾಳೆ.
ಪಕ್ಕದ ಮನೆಯವರ ಸಹಕಾರದಿಂದ ಯುವತಿ ತಕ್ಷಣವೇ ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾಳೆ. ತನ್ನ ತಂದೆಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ನ್ಯಾಯ ಒದಗಿಸುವಂತೆ ಆಕೆ ಮನವಿ ಮಾಡಿದ್ದಾಳೆ. ಈ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆಯನ್ನು ಆರಂಭಿಸಿದ್ದಾರೆ.
ಮೂರ್ತಿ ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್, ನೆಲಮಂಗಲ
| Reported by: ಮೂರ್ತಿ ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್, ನೆಲಮಂಗಲ