• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭಾರತ್ ಬಂದ್..ಬೆಂಗಳೂರು ಸೇರಿದಂತೆ ರಾಜ್ಯಾದಾದ್ಯಂತ ಕಾರ್ಮಿಕರ ಪ್ರತಿಭಟನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 9, 2025 - 1:10 pm
in Flash News, ಕರ್ನಾಟಕ
0 0
0
Your paragraph text (11)

ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ರೈತ ವಿರೋಧಿ ನೀತಿಗಳ ವಿರುದ್ಧ ದೇಶಾದ್ಯಂತ ಭಾರತ್ ಬಂದ್‌ಗೆ ಕರೆ ನೀಡಲಾಗಿತ್ತು. ಈ ಬಂದ್‌ನ ಬಿಸಿ ಬೆಂಗಳೂರು, ತುಮಕೂರು, ಮಂಡ್ಯ, ಶಿವಮೊಗ್ಗ ಮತ್ತು ಧಾರವಾಡದಂತಹ ಕರ್ನಾಟಕದ ವಿವಿಧ ಭಾಗಗಳಿಗೆ ತಟ್ಟಿದೆ. 10 ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆಯ ನೇತೃತ್ವದಲ್ಲಿ, ರೈತ ಸಂಘಟನೆಗಳು ಮತ್ತು ಕಾರ್ಮಿಕ ಗುಂಪುಗಳ ಬೆಂಬಲದೊಂದಿಗೆ ಸುಮಾರು 25 ಕೋಟಿ ಜನ ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ ಎಂದು ಅಂದಾಜಿಸಲಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನೂರಾರು ಕಾರ್ಮಿಕರು ಒಟ್ಟುಗೂಡಿ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.

ಬೆಂಗಳೂರಿನಲ್ಲಿ ಬಂದ್‌ನ ಬಿಸಿ

ಬೆಂಗಳೂರಿನಲ್ಲಿ AITUC, CITU, HMS, INTUC, SEWA ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಗಳು ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದವು. ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳಿಂದಾಗಿ ನಿರುದ್ಯೋಗ ಹೆಚ್ಚುತ್ತಿದೆ, ಅಗತ್ಯ ವಸ್ತುಗಳ ಬೆಲೆ ಏರುತ್ತಿದೆ, ವೇತನ ಕುಸಿಯುತ್ತಿದೆ ಮತ್ತು ಶಿಕ್ಷಣ, ಆರೋಗ್ಯ ಹಾಗೂ ಮೂಲಭೂತ ಸೌಲಭ್ಯಗಳ ಮೇಲಿನ ಸಾಮಾಜಿಕ ವೆಚ್ಚ ಕಡಿಮೆಯಾಗುತ್ತಿದೆ ಎಂದು ಕಾರ್ಮಿಕ ಸಂಘಟನೆಗಳು ಆರೋಪಿಸಿವೆ.

RelatedPosts

ಶ್ರೀರಾಮನ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್: ಪ್ರಕರಣ ದಾಖಲು

ಚಲಿಸುತ್ತಿದ್ದ ಕಾರು ಬ್ಲಾಸ್ಟ್: ಓರ್ವ ವ್ಯಕ್ತಿ ಸಜೀವ ದಹನ

ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ? ಸುಳಿವು ನೀಡಿದ ಸಚಿವ ಬೈರತಿ ಸುರೇಶ್

ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ: ರಾಜ್ಯಾಧ್ಯಕ್ಷ ವಿಜಯೇಂದ್ರಗೆ ತನಿಖಾ ಸಮಿತಿ ವರದಿ ಸಲ್ಲಿಕೆ

ADVERTISEMENT
ADVERTISEMENT
ತುಮಕೂರಿನಲ್ಲಿ ಪ್ರತಿಭಟನೆ

ತುಮಕೂರಿನ ಟೌನ್ ಹಾಲ್ ಬಳಿ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರು ಒಟ್ಟುಗೂಡಿದರು. ಗುತ್ತಿಗೆ ಕಾರ್ಮಿಕರಿಗೆ ಸಹಕಾರ ಸಂಘದ ಅಗತ್ಯವಿಲ್ಲ, ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು, ಕಾರ್ಮಿಕ ಸಂಹಿತೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು. ಟೌನ್ ಹಾಲ್‌ನಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಕಾಲ್ನಡಿಗೆ ಜಾಥ ನಡೆಸಿ, ಮನವಿ ಸಲ್ಲಿಸಿದರು. ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮಂಡ್ಯದಲ್ಲಿ ಬೃಹತ್ ಮೆರವಣಿಗೆ

ಮಂಡ್ಯದ ಸಿಲ್ವರ್ ಜ್ಯುಬಲಿ ಪಾರ್ಕ್‌ನಿಂದ ಸಂಜಯ್ ವೃತ್ತದವರೆಗೆ ರೈತ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಮೆರವಣಿಗೆ ನಡೆಯಿತು. ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಕಾರ್ಮಿಕರು ರಸ್ತೆ ತಡೆ ನಡೆಸಿ, ಸಾಮೂಹಿಕವಾಗಿ ಬಂಧನಕ್ಕೊಳಗಾದರು. ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದರಿಂದ ಯಾವುದೇ ಅಹಿತಕರ ಘಟನೆಗಳು ದಾಖಲಾಗಲಿಲ್ಲ. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳೊಂದಿಗೆ ಕಾರ್ಮಿಕರ ಆಕ್ರೋಶ ತೀವ್ರವಾಗಿತ್ತು.

ಶಿವಮೊಗ್ಗದಲ್ಲಿ ಕಾರ್ಮಿಕರ ಜಾಥ

ಶಿವಮೊಗ್ಗದಲ್ಲಿ ಕಾರ್ಮಿಕ ಮತ್ತು ರೈತ ಸಂಘಟನೆಗಳು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದವು. 22 ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ, ಕಾರ್ಮಿಕ ವಿರೋಧಿ ಮತ್ತು ರೈತ ವಿರೋಧಿ ಕಾಯ್ದೆಗಳನ್ನು ತಕ್ಷಣ ಹಿಂಪಡೆಯಬೇಕೆಂದು ಆಗ್ರಹಿಸಿದರು.

ಧಾರವಾಡದಲ್ಲಿ ಧಿಕ್ಕಾರದ ಕೂಗು

ಧಾರವಾಡದ ಜಿಲ್ಲಾಧಿಕಾರಿಗಳ ಕಚೇರಿ ಎದುರು 8ಕ್ಕೂ ಹೆಚ್ಚು ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಕೇಂದ್ರ ಸರ್ಕಾರವು 4 ಕಾರ್ಮಿಕ ಸಂಹಿತೆಗಳನ್ನು ಕೈಬಿಡಬೇಕು, ಜೀವನಕ್ಕೆ ಕನಿಷ್ಠ 26 ಸಾವಿರ ವೇತನ ನಿಗದಿಪಡಿಸಬೇಕು ಮತ್ತು ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣವನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದರು. ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಕೂಗುಗಳೊಂದಿಗೆ ಕಾರ್ಮಿಕರು ತಮ್ಮ ಆಕ್ರೋಶವನ್ನು ತೋಡಿಕೊಂಡರು.

ಬೇಡಿಕೆಗಳು ಮತ್ತು ಆಕ್ರೋಶ

ಕಾರ್ಮಿಕ ಸಂಘಟನೆಗಳು ಮತ್ತು ರೈತರು ಕೇಂದ್ರ ಸರ್ಕಾರದ ಕಾರ್ಪೊರೇಟ್ ಪರ ನೀತಿಗಳನ್ನು ತೀವ್ರವಾಗಿ ಖಂಡಿಸಿದರು. ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯುವುದು, ಬೆಲೆ ಏರಿಕೆ ನಿಯಂತ್ರಣ, ಕನಿಷ್ಠ ವೇತನ ಖಾತರಿ, ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಿಸುವುದು ಸೇರಿದಂತೆ ಒಟ್ಟು 22 ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 27T163428.586

ಶ್ರೀರಾಮನ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್: ಪ್ರಕರಣ ದಾಖಲು

by ಶಾಲಿನಿ ಕೆ. ಡಿ
June 27, 2026 - 4:40 pm
0

Untitled design 2026 06 27T161038.596

ಚಲಿಸುತ್ತಿದ್ದ ಕಾರು ಬ್ಲಾಸ್ಟ್: ಓರ್ವ ವ್ಯಕ್ತಿ ಸಜೀವ ದಹನ

by ಶಾಲಿನಿ ಕೆ. ಡಿ
June 27, 2026 - 4:11 pm
0

Web Photo Editor (70)

ಪ್ರಜ್ವಲ್ ದೇವರಾಜ್-ರಾಜ್ ಬಿ. ಶೆಟ್ಟಿ ಕರಾವಳಿ ಜುಗಲ್‌ಬಂದಿ!

by ದಿಶಾ ಕೆ. ಎಸ್.
June 27, 2026 - 2:41 pm
0

Web Photo Editor (72)

ಫ್ಯಾನ್ಸ್ ಗೆ ಡಾಲಿ ಕೊಟ್ಟ ಮದರ್ ಪ್ರಾಮಿಸ್ ಟ್ರೈಲರ್ ಗಿಫ್ಟ್‌‌

by ದಿಶಾ ಕೆ. ಎಸ್.
June 27, 2026 - 2:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 27T163428.586
    ಶ್ರೀರಾಮನ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್: ಪ್ರಕರಣ ದಾಖಲು
    June 27, 2026 | 0
  • Untitled design 2026 06 27T161038.596
    ಚಲಿಸುತ್ತಿದ್ದ ಕಾರು ಬ್ಲಾಸ್ಟ್: ಓರ್ವ ವ್ಯಕ್ತಿ ಸಜೀವ ದಹನ
    June 27, 2026 | 0
  • 4
    ವೆನೆಜುವೆಲಾದಲ್ಲಿ ಜೋಡಿ ಭೂಕಂಪ: ಸಾವಿನ ಸಂಖ್ಯೆ 200 ಮುಂದುವರೆದ ರಕ್ಷಣಾ ಕಾರ್ಯಾಚರಣೆ
    June 26, 2026 | 0
  • 3
    BMTC, KSRTC ಬಸ್ ಟಿಕೆಟ್ ದರ ಮತ್ತೆ ಏರಿಕೆ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಸಾರಿಗೆ ನಿಗಮಗಳು
    June 26, 2026 | 0
  • 2
    ಹೋರ್ಮುಜ್ ಜಲಸಂಧಿಯಲ್ಲಿ ಮತ್ತೆ ಕೆರಳಿದ  ಉದ್ವಿಗ್ನತೆ: ಒಮಾನ್ ಸಮೀಪ ಸರಕು ಹಡಗು ಮೇಲೆ ದಾಳಿ..!
    June 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version