ಶಿವಮೊಗ್ಗ, ಆಗಸ್ಟ್ 05, 2025: ಬೈಕ್ನಲ್ಲಿ ಸಂಚರಿಸುತ್ತಿರುವಾಗ ಹೃದಯಾಘಾತದಿಂದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬಳಸಗೋಡು ಗ್ರಾಮದ ಬಳಿ ನಡೆದಿದೆ. ದಾವಣಗೆರೆಯಿಂದ ಸಿಗಂದೂರು ಚೌಡೇಶ್ವರಿ ದೇವಿಯ ದರ್ಶನಕ್ಕೆ ತೆರಳುತ್ತಿದ್ದ 29 ವರ್ಷದ ಯುವಕ ಆಕರ್ಷ್ ಕೆ. ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಆಕರ್ಷ್ ಕೆ., ತಮ್ಮ ಸ್ನೇಹಿತರೊಂದಿಗೆ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಲು ಬೈಕ್ನಲ್ಲಿ ತೆರಳುತ್ತಿದ್ದರು. ದಾವಣಗೆರೆಯಿಂದ ಸಾಗರ ತಾಲೂಕಿನ ಬಳಸಗೋಡು ಗ್ರಾಮದ ಸಮೀಪಕ್ಕೆ ಬಂದಾಗ, ಆಕರ್ಷ್ಗೆ ಎದೆಯಲ್ಲಿ ತೀವ್ರವಾದ ನೋವು ಕಾಣಿಸಿಕೊಂಡಿತ್ತು. ಕೂಡಲೇ ಬೈಕ್ನಿಂದ ಕೆಳಗೆ ಬಿದ್ದ ಅವರು, ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಸ್ನೇಹಿತರು ಆಕರ್ಷ್ನನ್ನು ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದರೂ, ಅವರು ಆಸ್ಪತ್ರೆಗೆ ತಲುಪುವ ಮೊದಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕಾರಿಯಾಗಿದೆ. ವೈದ್ಯಕೀಯ ತಜ್ಞರ ಪ್ರಕಾರ, ಒತ್ತಡ, ಜೀವನಶೈಲಿಯ ಬದಲಾವಣೆ, ಮತ್ತು ಆರೋಗ್ಯದ ಕಡೆಗೆ ಗಮನ ಕೊಡದಿರುವುದು ಇಂತಹ ಘಟನೆಗಳಿಗೆ ಕಾರಣವಾಗಬಹುದು.