• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕೆಂಪೇಗೌಡ ಸ್ಮಾರಕಗಳ ಅಭಿವೃದ್ಧಿಗೆ ₹103 ಕೋಟಿ ಮೀಸಲು: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 4, 2025 - 11:43 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 10 04t234218.418

ಬೆಂಗಳೂರು, ಅ.04: “ನಾಡಪ್ರಭು ಕೆಂಪೇಗೌಡರ ಎಲ್ಲಾ ಸ್ಮಾರಕಗಳನ್ನು ಪುನರುಜ್ಜೀವನಗೊಳಿಸಲು ₹103 ಕೋಟಿ ಅನುದಾನ ಹಾಗೂ ನಾಡಪ್ರಭು ಕೆಂಪೇಗೌಡರ ಹೆಸರಿನಲ್ಲಿ ನಗರ ವಿನ್ಯಾಸ ಕಾಲೇಜು ಸ್ಥಾಪನೆಗೆ ₹100 ಕೋಟಿ ಅನುದಾನ ಮೀಸಲಿಡಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಬೆಂಗಳೂರಿನಲ್ಲಿ ಶಿವಕುಮಾರ್ ಅವರು, “ಮಾಗಡಿ ಕೋಟೆಯ ಪುನರುಜ್ಜೀವನ ಕೆಲಸ ಶೇ. 50ರಷ್ಟು ಮುಗಿದಿದೆ. ಆಂತರಿಕ ಸಮನ್ವಯತೆ ಸಾಧಿಸಲು ಸಮಿತಿಯನ್ನು ರಚಿಸಲಾಗುವುದು. ಕೆಂಪೇಗೌಡರ ಸಮಾಧಿ ಸ್ಥಳದಲ್ಲಿ 10 ಎಕರೆ ಜಮೀನು ಸ್ವಾಧೀನ ಪಡಿಸಿಕೊಳ್ಳುತ್ತಿದ್ದು ಶೇ.90 ಸ್ವಾಧೀನ ಕಾರ್ಯ ಪೂರ್ಣಗೊಂಡಿದೆ. ಇದಕ್ಕೂ ಅನುದಾನವನ್ನು ಮೀಸಲಿಡಲಾಗಿದೆ” ಎಂದರು.

RelatedPosts

ಯಾದಗಿರಿಯಲ್ಲಿ ಕೂಲ್ ಡ್ರಿಂಕ್ಸ್ ಕುಡಿದು ಯುವಕ ಸಾ*ವು

ಸರ್ಕಾರಿ ಕಾಲೇಜಿನಲ್ಲಿ ಕುಸಿದು ಬಿದ್ದ ಛಾವಣಿ: ಐವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನ ಪಡೆದ ವಿಜಯ್: ದೇವಿಗೆ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್: ಕೊಲ್ಲೂರು ಕಡೆ ಪ್ರಯಾಣ

ADVERTISEMENT
ADVERTISEMENT

“ನಗರ ವಿನ್ಯಾಸ ಕಾಲೇಜಿನಲ್ಲಿ ಸುಮಾರು 300 ಜನ ವಿದ್ಯಾರ್ಥಿಗಳು ಅಭ್ಯಾಸ ಮಾಡುವಂತೆ ನಾವು ಆಲೋಚನೆ ಮಾಡಿದ್ದೇವೆ. ಇದಕ್ಕಾಗಿ ವಿಟಿಯು ಅವರು ತಯಾರಿಸಿದ ಪಠ್ಯಕ್ರಮ ಅಳವಡಿಸಿಕೊಳ್ಳುವ ಸಂಬಂಧ ಅವರ ಜೊತೆ ಚರ್ಚೆ ನಡೆಸಲಾಗುವುದು. ಸುಮ್ಮನಹಳ್ಳಿಯ ಬಳಿ ಐದು ಎಕರೆ ಪ್ರದೇಶದಲ್ಲಿ ನಿರ್ಮಾಣ ಮಾಡುತ್ತಿರುವ ಕೆಂಪೇಗೌಡ ಭವನಕ್ಕೆ ಅತ್ಯುತ್ತಮ ಕಟ್ಟಡ ವಿನ್ಯಾಸವನ್ನು ನೀಡಲು ವಾಸ್ತುಶಿಲ್ಪಿಗಳಿಂದ ವಿನ್ಯಾಸ ನೀಡಲು ಆಹ್ವಾನ ನೀಡಲಾಗಿದೆ” ಎಂದರು.

“ನಗರ ವಿನ್ಯಾಸ ಅಧ್ಯಯನ ಮಾಡಿದವರಿಗೆ ಬಿಜಿಎ ಮತ್ತು ಪಾಲಿಕೆಗಳಲ್ಲಿ ಉದ್ಯೋಗ ನೀಡಬೇಕಿದೆ. ಏಕೆಂದರೆ ಬೆಂಗಳೂರಿಗೆ ನಗರ ವಿನ್ಯಾಸಕಾರರ ಅವಶ್ಯಕತೆ ಹೆಚ್ಚಿದೆ. ಕಾಲೇಜು ನಿರ್ಮಾಣಕ್ಕಾಗಿ ನಗರಾಭಿವೃದ್ದಿ ಇಲಾಖೆ, ಕೆಂಪೇಗೌಡ ಪ್ರಾಧಿಕಾರ ಮತ್ತು ಜಿಬಿಎಯಿಂದ ಅನುದಾನ ಮೀಸಲಿಡಲಾಗಿದೆ. ಏರ್ ಪೋರ್ಟ್ ಬಳಿಯ ಕೆಂಪೇಗೌಡ ಪ್ರತಿಮೆ ಬಳಿ ಥೀಮ್ ಪಾರ್ಕ್ ನಿರ್ಮಾಣ ಸಂಬಂಧ ಸಚಿವರಾದ ಕೃಷ್ಣೇಭೈರೇಗೌಡರಿಗೆ ಜವಾಬ್ದಾರಿ ವಹಿಸಲಾಗಿದೆ” ಎಂದರು.

ಎಲ್ಲೆಂದರಲ್ಲಿ ‌ಕಸ ಸಮಸ್ಯೆ ನಿವಾರಣೆಗೆ ಅಭಿಯಾನ

“ಐದು ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಹಾಗೂ ರಸ್ತೆ ದುರಸ್ತಿಗಳನ್ನು ಅತ್ಯಂತ ವೇಗವಾಗಿ ಅಧಿಕಾರಿಗಳು ಮಾಡುತ್ತಿದ್ದಾರೆ. ದಸರಾ ರಜೆ ಇದ್ದ ಕಾರಣಕ್ಕೆ ಎಲ್ಲೆಂದರಲ್ಲಿ ಕಸದ ಸಮಸ್ಯೆ ಹೆಚ್ಚಿದೆ. ಇದಕ್ಕೂ ಸಹ ಒಂದು ಅಭಿಯಾನ ನಡೆಸಲಾಗುವುದು. ಎಲ್ಲೆಂದರಲ್ಲಿ ಕಟ್ಟಡ ತ್ಯಾಜ್ಯ ಹಾಗೂ ಕಸವನ್ನು ಎಸೆಯುವರನ್ನು ಗುರುತಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಿ ಎಂದು ಪೊಲೀಸರಿಗೆ ಸೂಚನೆ ನೀಡಿದ್ದೇವೆ. ಬೆಂಗಳೂರನ್ನು ಸ್ವಚ್ಛವಾಗಿ ಇಡಲು ಎಲ್ಲೆಂದರಲ್ಲಿ ಸುರಿದಿರುವ ಕಟ್ಟಡ ತ್ಯಾಜ್ಯಗಳನ್ನು ಶೀಘ್ರ ವಿಲೇವಾರಿ ಮಾಡಲಾಗುವುದು” ಎಂದರು.

“ನಗರದಾದ್ಯಂತ ಎಲ್ಲೆಂದರಲ್ಲಿ ಕೇಬಲ್ ಗಳನ್ನು ಎಳೆಯಲಾಗಿದೆ. ಬೆಸ್ಕಾಂಗೆ ಸೇರಿದ ಕಂಬಗಳಲ್ಲಿ ಟಿವಿ ಕೇಬಲ್ ಗಳು ನೇತಾಡುತ್ತಿದ್ದು ನಗರ ಸೌಂದರ್ಯಕ್ಕೆ ಕಪ್ಪುಚುಕ್ಕೆಯಾಗಿದೆ. ಸಮಸ್ಯೆ ಬಗೆಹರಿಸಲು ಸಚಿವರಾದ ಕೆ.ಜೆ.ಜಾರ್ಜ್ ಅವರೊಟ್ಟಿಗೆ ಮತ್ತೊಂದು ಸುತ್ತಿ‌ನ ಸಭೆ ನಡೆಸಲಾಗುವುದು. ಡೆಕ್ ಒಳಗಡೆ ಕೇಬಲ್‌‌ ಗಳನ್ನು ಸಾಗಿಸಲು ಯಾರೂ ಸಹ ಸಹಕಾರ ‌ನೀಡುತ್ತಿಲ್ಲ. ಎಂಟನೇ ತಾರಿಕೀನ ನಂತರ 4 ಲಕ್ಷ ವಿದ್ಯುತ್ ಸಂಪರ್ಕ ನೀಡುವುದರ ಬಗ್ಗೆ ಮುಖ್ಯಮಂತ್ರಿಯವರು ಸಭೆ ಕರೆದಿದ್ದಾರೆ. ಇದರ ಜೊತೆಗೆ ಮುಂದಿನ ವಾರ ಎ ಹಾಗೂ ಬಿ ಖಾತಾ ವಿಚಾರವಾಗಿ ಮಾಹಿತಿ ನೀಡಲಾಗುವುದು” ಎಂದರು.

ಭೂಗರ್ಭದಲ್ಲಿ ಕೇಬಲ ಅಳವಡಿಕೆ ಯೋಜನೆ ಕಳೆದ 10 ವರ್ಷಗಳಿಂದ ಯಶಸ್ವಿಯಾಗದಿರುವ ಬಗ್ಗೆ ಕೇಳಿದಾಗ, “ನಗರದ ಕೆಲವೊಂದು ಕಡೆ ಈ ಡೆಕ್ ಸೌಲಭ್ಯ ನೀಡಲಾಗಿದೆ. ಅವಕಾಶ ಇರುವ ಕಡೆಯಲ್ಲಿ ಹಾಕಿಕೊಳ್ಳಿ ಎಂದು ತಿಳಿಸಿದ್ದೇವೆ. ಇದಕ್ಕಾಗಿ ಬೆಸ್ಕಾಂ, ಪಾಲಿಕೆಗಳು ಸೇರಿ ಸಭೆ ನಡೆಸಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು” ಎಂದರು.

ಸಾರ್ವಜನಿಕ ಸ್ಥಳಗಳಲ್ಲಿ ಕಸವನ್ನು ಹಾಕಲು ಡಬ್ಬಿಗಳನ್ನು ಇಡುವ ಕುರಿತು ಕೇಳಿದಾಗ, “ಈ ಬಗ್ಗೆ ಪಾಲಿಕೆಗಳ ಆಯುಕ್ತರಿಗೆ ವರದಿ ನೀಡಿ ಎಂದು ಹೇಳಿದ್ದೇನೆ. ಜಿಬಿಎ ಹಾಗೂ ಐದು ಪಾಲಿಕೆಗಳ ಆಯುಕ್ತರು ಸೇರಿ ಇತರೆ ನಗರಗಳಲ್ಲಿ ಯಾವ ರೀತಿ ವ್ಯವಸ್ಥೆ ಇದೆ ಎಂಬುದನ್ನು ತಿಳಿದುಕೊಂಡು ವರದಿ ನೀಡಿ ಎಂದು ತಿಳಿಸಿದ್ದೇನೆ. ಜನರು ರಸ್ತೆ ಬದಿ ಹಾಗೂ ಎಲ್ಲೆಂದರಲ್ಲಿ ಕಸವನ್ನು ಎಸೆಯುತ್ತಿದ್ದಾರೆ. ಇದನ್ನು ತಪ್ಪಿಸಲು ಕ್ರಮ ತೆಗೆದುಕೊಳ್ಳುತ್ತೇವೆ. ಸಾರ್ವಜನಿಕರು ಸಹ ಇದಕ್ಕೆ ಸಹಕಾರ ನೀಡಬೇಕು. ಎಲ್ಲೆಂದರಲ್ಲಿ ಅದರ ಫೋಟೋ ತೆಗೆದು ಪಾಲಿಕೆಗಳು ಸೂಚಿಸಿರುವ ದೂರವಾಣಿ ಸಂಖ್ಯೆಗೆ ಕಳುಹಿಸಬೇಕು” ಎಂದರು.

₹1 ಕೋಟಿ ದಂಡ ಸಂಗ್ರಹ

ಎಲ್ಲಿಂದರಲ್ಲಿ ಕಸ ಎಸೆಯುವವರಿಗೆ ದಂಡ ವಿಧಿಸುತ್ತಿರುವ ಪ್ರಕ್ರಿಯೆ ನಿಂತು ಹೋಗಿದೆ, ಮಾರ್ಷಲ್ ಗಳ ನಿಯೋಜನೆಯಾಗಿಲ್ಲ ಎಂದು ಕೇಳಿದಾಗ, ” ಈ ಪ್ರಕ್ರಿಯೆ ನಿಂತಿಲ್ಲ. ಏಕ ಬಳಕೆಯ ಪ್ಲಾಸ್ಟಿಕ್ ಸೇರಿದಂತೆ ಎಲ್ಲೆಂದರಲ್ಲಿ ಕಸ ಎಸೆಯುವವರಿಂದ ₹ 1 ಕೋಟಿ ದಂಡ ಸಂಗ್ರಹ ಮಾಡಲಾಗಿದೆ. ಜೊತೆಗೆ ಕಸ ಸಂಗ್ರಹ ವಾಹನಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತದೆ. ಈ ಮೊದಲು 198 ವಾರ್ಡ್ ಗಳು ಮಾತ್ರ ಇದ್ದವು ಈಗ 300ಕ್ಕೂ ಹೆಚ್ಚು ವಾರ್ಡ್‌ ಗಳು ಆಗುತ್ತಿರುವುದರಿಂದ ಕಸ ಸಂಗ್ರಹ ಸಾಮರ್ಥ್ಯವನ್ನು ಸಹ ಹೆಚ್ಚಿಸಲಾಗುವುದು. ಅಲ್ಲದೇ ಬೆಂಗಳೂರಿನ ವ್ಯಾಪ್ತಿಗೆ ಸೇರದ ಆದರೆ ಪಕ್ಕ ಪಕ್ಕದ ಪ್ರದೇಶಗಳ ಹಕ್ಕು ಸೂಚನೆ ನೀಡಲಾಗಿದೆ. ಏಕೆಂದರೆ ಅದರಿಂದಲೂ ಬೆಂಗಳೂರಿಗೆ ತೊಂದರೆ ಆಗುತ್ತದೆ” ಎಂದರು.

“ಎ ಮತ್ತು ಬಿ ಖಾತಾ ವಿಚಾರದಲ್ಲಿ ಕ್ರಾಂತಿಕಾರಿ ಕೆಲಸಗಳು ನಡೆದಿವೆ. ಈ ಮೊದಲು ಹೇಗಿತ್ತು, ಏನಾಗಿದೆ ಎಂದು ಇದರ ಬಗ್ಗೆ ಮುಂದಿನ ದಿನಗಳಲ್ಲಿ ಪಿಪಿಟಿ ತಯಾರಿಸಿ ಪ್ರತಿಯೊಂದೂ ಮಾಹಿತಿ ನೀಡಲಾಗುವುದು. ಟೀಕೆ ಮಾಡುವವರಿಗೂ ಇದರಿಂದ ಉತ್ತರ ದೊರೆಯಲಿದೆ” ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 12T190826.754

ಜೂನ್ 20ರಿಂದ ರಚಿತಾ ರಾಮ್‌-ಸತೀಶ್ ಅಯೋಗ್ಯ-2 ಗಾನಬಜಾನ

by ಶಾಲಿನಿ ಕೆ. ಡಿ
June 12, 2026 - 7:09 pm
0

Untitled design 2026 06 12T185346.768

ಬದುಕಿರುವಾಗಲೇ ಶ್ರದ್ಧಾಂಜಲಿ ಪೋಸ್ಟರ್..ದೊಡ್ಡಣ್ಣನಿಗೆ ಶಾಕ್

by ಶಾಲಿನಿ ಕೆ. ಡಿ
June 12, 2026 - 6:54 pm
0

Untitled design 2026 06 12T181043.725

ಯಾದಗಿರಿಯಲ್ಲಿ ಕೂಲ್ ಡ್ರಿಂಕ್ಸ್ ಕುಡಿದು ಯುವಕ ಸಾ*ವು

by ಶಾಲಿನಿ ಕೆ. ಡಿ
June 12, 2026 - 6:12 pm
0

Untitled design 2026 06 12T174712.765

ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 12, 2026 - 5:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 12T181043.725
    ಯಾದಗಿರಿಯಲ್ಲಿ ಕೂಲ್ ಡ್ರಿಂಕ್ಸ್ ಕುಡಿದು ಯುವಕ ಸಾ*ವು
    June 12, 2026 | 0
  • Untitled design 2026 06 12T171411.763
    ಸರ್ಕಾರಿ ಕಾಲೇಜಿನಲ್ಲಿ ಕುಸಿದು ಬಿದ್ದ ಛಾವಣಿ: ಐವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ
    June 12, 2026 | 0
  • Untitled design 2026 06 12T162943.799
    ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನ ಪಡೆದ ವಿಜಯ್: ದೇವಿಗೆ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ
    June 12, 2026 | 0
  • Untitled design 2026 06 12T141804.880
    ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್: ಕೊಲ್ಲೂರು ಕಡೆ ಪ್ರಯಾಣ
    June 12, 2026 | 0
  • Untitled design 2026 06 12T140936.003
    ಮಾವಿನ ಹಣ್ಣು ಸೇವಿಸಿ ಅಸ್ವಸ್ಥ, ಇಬ್ಬರು ಸಹೋದರಿಯರು ಅನುಮಾನಾಸ್ಪದ ಸಾವು
    June 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version