• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಅ. 9ರಿಂದ 23ರವರೆಗೆ ಹಾಸನಾಂಬ ದೇವಿ ಉತ್ಸವ: ವಿಐಪಿ ಪಾಸ್ ವಿತರಣೆಗೆ ನಿರ್ಬಂಧ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 7, 2025 - 9:01 am
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 10 07t085027.712

ಬೆಂಗಳೂರು: ಹಾಸನಾಂಬ ದೇವಾಲಯದ ವಾರ್ಷಿಕ ಉತ್ಸವ ಈ ಬಾರಿ ಅಕ್ಟೋಬರ್‌ 9 ರಿಂದ 23 ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ಭಕ್ತರಿಗೆ ಸುಗಮ ದರ್ಶನಕ್ಕಾಗಿ ಹಾಗೂ ಗೊಂದಲ ತಪ್ಪಿಸಲು ವಿಐಪಿ ಪಾಸ್‌ ಸೇರಿದಂತೆ ಇತರೆ ಪಾಸ್‌ಗಳಿಗೆ ಕೆಲವು ನಿರ್ಬಂಧಗಳನ್ನು ಹೇರಲಾಗಿದೆ ಎಂದು ಹಾಸನ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಬೆಂಗಳೂರಿನ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷ 25 ಲಕ್ಷ ಭಕ್ತರು ದರ್ಶನಕ್ಕೆ ಆಗಮಿಸುವ ನಿರೀಕ್ಷೆಯಿದೆ ಎಂದು ಹೇಳಿದರು.

ಭಕ್ತರ ಸಂಖ್ಯೆಯಲ್ಲಿ ಏರಿಕೆ

ವರ್ಷದಿಂದ ವರ್ಷಕ್ಕೆ ಹಾಸನಾಂಬ ದರ್ಶನಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. 2021 ರಲ್ಲಿ 1 ಲಕ್ಷ ಭಕ್ತರಿದ್ದರೆ, 2024 ರ ವೇಳೆಗೆ ಈ ಸಂಖ್ಯೆ 20 ಲಕ್ಷಕ್ಕೆ ಏರಿತ್ತು. ಈ ವರ್ಷ 25 ಲಕ್ಷ ಭಕ್ತರು ಆಗಮಿಸುವ ಸಾಧ್ಯತೆಯಿದೆ. ಇದರಿಂದ ದರ್ಶನದ ವ್ಯವಸ್ಥೆಯನ್ನು ಸುಗಮಗೊಳಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

RelatedPosts

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ

ತಮಿಳುನಾಡಿಗೆ ಸದ್ಯಕ್ಕೆ ಕಾವೇರಿ ನೀರಿಲ್ಲ: ಯಥಾಸ್ಥಿತಿ ಕಾಯ್ದುಕೊಳ್ಳಲು CWMA ಸೂಚನೆ, ಕರ್ನಾಟಕಕ್ಕೆ ರಿಲೀಫ್

ಫುಟ್​ಪಾತ್​​ನಲ್ಲಿ ಬೈಕ್ ಚಲಾಯಿಸಿದ್ರೆ ಹುಷಾರ್!: ಇನ್ಮುಂದೆ ₹500 ಅಲ್ಲ..₹5,000 ದಂಡ ಫಿಕ್ಸ್‌?

ವಾಹನ ಸವಾರರಿಗೆ ಮತ್ತೊಂದು ಶಾಕ್: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ದರ ಮತ್ತೆ ಏರಿಕೆ

ADVERTISEMENT
ADVERTISEMENT
ವಿಐಪಿ ದರ್ಶನಕ್ಕೆ ಕಟ್ಟುನಿಟ್ಟಿನ ನಿಯಮ

ರಾಜ್ಯಪಾಲರು, ಮುಖ್ಯಮಂತ್ರಿಗಳು, ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ, ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳು ಹಾಗೂ ಮಾಜಿ ಪ್ರಧಾನಿಗಳಿಗೆ ಮಾತ್ರ ಎಸ್ಕಾರ್ಟ್‌ ಸೌಲಭ್ಯದೊಂದಿಗೆ ದೇವಸ್ಥಾನಕ್ಕೆ ನೇರ ಪ್ರವೇಶವಿರಲಿದೆ. ಇತರ ಸಚಿವರು, ಶಾಸಕರು, ನ್ಯಾಯಮೂರ್ತಿಗಳು ಮತ್ತು ಗಣ್ಯರಿಗೆ ನೇರ ಭೇಟಿಗೆ ಅವಕಾಶವಿಲ್ಲ. ಅವರು ತಾವು ಯಾವ ದಿನ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ ಎಂಬುದನ್ನು ಜಿಲ್ಲಾಡಳಿತಕ್ಕೆ ಇಮೇಲ್‌ ಅಥವಾ ದೂರವಾಣಿ ಮೂಲಕ ಮುಂಚಿತವಾಗಿ ತಿಳಿಸಬೇಕು. ನಂತರ, ನಿಗದಿತ ದಿನದಂದು ಅವರು ಹಾಸನದ ಪರಿವೀಕ್ಷಣಾ ಮಂದಿರಕ್ಕೆ ಆಗಮಿಸಬೇಕು. ಅಲ್ಲಿಂದ ಜಿಲ್ಲಾಡಳಿತದ ವಾಹನದಲ್ಲಿ ಅವರನ್ನು ಮತ್ತು ಅವರೊಂದಿಗಿನ ನಾಲ್ಕು ಜನರನ್ನು ದೇವಸ್ಥಾನಕ್ಕೆ ಕರೆದೊಯ್ಯಲಾಗುವುದು. ಈ ವ್ಯವಸ್ಥೆಯಿಂದ ಭದ್ರತೆ ಸಮಸ್ಯೆ ಮತ್ತು ಸಾರ್ವಜನಿಕರ ದರ್ಶನಕ್ಕೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲಾಗುವುದು.

ಗೋಲ್ಡ್‌ ಪಾಸ್‌ ಮತ್ತು ಸಾರ್ವಜನಿಕ ದರ್ಶನ

ಪ್ರತಿದಿನ 1,000 ಗೋಲ್ಡ್‌ ಪಾಸ್‌ಗಳನ್ನು ಗಣ್ಯ ವ್ಯಕ್ತಿಗಳಿಗೆ ವಿತರಿಸಲಾಗುವುದು. ಈ ಪಾಸ್‌ನೊಂದಿಗೆ ಒಬ್ಬ ವ್ಯಕ್ತಿಗೆ ಮಾತ್ರ ದೇವಾಲಯ ಪ್ರವೇಶಕ್ಕೆ ಅವಕಾಶವಿರಲಿದೆ. ಗೋಲ್ಡ್‌ ಪಾಸ್‌ ಹೊಂದಿರುವವರು ಬೆಳಗ್ಗೆ 7:30 ರಿಂದ 10 ಗಂಟೆಯವರೆಗೆ ದೇವಸ್ಥಾನಕ್ಕೆ ಭೇಟಿ ನೀಡಬಹುದು. ವಿಐಪಿಗಳಿಗೆ ಬೆಳಗ್ಗೆ 10:30 ರಿಂದ ಮಧ್ಯಾಹ್ನ 12:30 ರವರೆಗೆ ಅವಕಾಶವಿರಲಿದೆ. ಈ ಸಮಯದ ನಂತರ ಆ ಗೇಟ್‌ಗಳನ್ನು ಮುಚ್ಚಲಾಗುವುದು. ಸಾರ್ವಜನಿಕರಿಗೆ ₹300 ಮತ್ತು ₹1,000 ಬೆಲೆಯ ಪಾಸ್‌ಗಳನ್ನು ವಿತರಿಸಲಾಗುವುದು, ಇದರೊಂದಿಗೆ ದರ್ಶನ ಮತ್ತು ಪ್ರಸಾದವನ್ನು ಪಡೆಯಬಹುದು. ಪ್ರತಿದಿನ 70,000 ರಿಂದ 80,000 ಭಕ್ತರು ದರ್ಶನ ಪಡೆಯುವಂತೆ ವ್ಯವಸ್ಥೆ ಮಾಡಲಾಗಿದೆ.

ಹಾಸನಾಂಬ ದೇವಾಲಯವು ಅಕ್ಟೋಬರ್‌ 9 ರಿಂದ 23 ರವರೆಗೆ ತೆರೆದಿರಲಿದೆ. ಅಕ್ಟೋಬರ್‌ 9 ಮತ್ತು 23 ರಂದು ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧವಿರಲಿದ್ದು, ಆ ದಿನಗಳಲ್ಲಿ ಪೂಜಾ ಕೈಂಕರ್ಯಗಳು ನಡೆಯಲಿವೆ. ಅಕ್ಟೋಬರ್‌ 10 ರಿಂದ 22 ರವರೆಗೆ ಭಕ್ತರಿಗೆ ನಿರಂತರ ದರ್ಶನಕ್ಕೆ ಅವಕಾಶವಿರಲಿದೆ. ಇದರ ಜೊತೆಗೆ, ಭಕ್ತರಿಗೆ ಕರ್ನಾಟಕದ ಸಂಸ್ಕೃತಿ ಮತ್ತು ಜಾನಪದ ಕಲೆಗಳನ್ನು ಪರಿಚಯಿಸಲು ಮೂರು ವೇದಿಕೆಗಳನ್ನು ಸಿದ್ಧಪಡಿಸಲಾಗುತ್ತಿದೆ. ಒಂದು ವೇದಿಕೆಯಲ್ಲಿ ಜಾನಪದ ಕಲೆಗಳ ಪ್ರದರ್ಶನ, ಇನ್ನೊಂದರಲ್ಲಿ ಸ್ಥಳೀಯ ಯುವಕರ ಕಲಾ ಪ್ರದರ್ಶನ, ಮತ್ತು ಮೂರನೇ ವೇದಿಕೆಯಲ್ಲಿ ಸಾಂಪ್ರದಾಯಿಕ ನೃತ್ಯ ಪ್ರದರ್ಶನ ಆಯೋಜಿಸಲಾಗುವುದು.

ಹೆಲಿ ಟೂರಿಸಂ, ಫಲಪುಷ್ಪ ಪ್ರದರ್ಶನ, ಕರಕುಶಲ ವಸ್ತುಗಳ ಮಾರಾಟ ಮೇಳ ಸೇರಿದಂತೆ ಪ್ರವಾಸೋದ್ಯಮ ಇಲಾಖೆಯಿಂದ ಹಾಸನಾಂಬ ಪ್ರವಾಸಿ ಪ್ಯಾಕೇಜ್‌ ಆರಂಭಿಸುವ ಚಿಂತನೆ ನಡೆದಿದೆ. ಭದ್ರತೆಗಾಗಿ 2,000 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗುತ್ತಿದೆ. 280 ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳು, ಡ್ರೋನ್‌ ಕ್ಯಾಮೆರಾಗಳು ಮತ್ತು ಎಐ ತಂತ್ರಜ್ಞಾನವನ್ನು ಬಳಸಲಾಗುವುದು. ದೇವಾಲಯದ ಬಳಿ ಕಂಟ್ರೋಲ್‌ ರೂಂ ಸ್ಥಾಪಿಸಲಾಗುವುದು ಎಂದು ಸಚಿವರು ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (2)

ಜಂತರ್‌ ಮಂತರ್‌ನಲ್ಲಿ ಭುಗಿಲೆದ್ದ ಆಕ್ರೋಶ: ಪೊಲೀಸರ ಮೇಲೆ ಕಲ್ಲು ತೂರಾಟ, ಇಂಟರ್‌ನೆಟ್‌ ಸೇವೆ ಸ್ಥಗಿತ

by ಶಾಲಿನಿ ಕೆ. ಡಿ
July 22, 2026 - 11:21 pm
0

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (1)

NEET ವಿವಾದದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್ ಡಿಆಕ್ಟಿವೇಟ್ ಮಾಡಿದ ಧರ್ಮೇಂದ್ರ ಪ್ರಧಾನ್ ಪುತ್ರಿ

by ಶಾಲಿನಿ ಕೆ. ಡಿ
July 22, 2026 - 11:07 pm
0

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ

by ಶಾಲಿನಿ ಕೆ. ಡಿ
July 22, 2026 - 10:51 pm
0

Untitled design 2026 07 22T220224.716

ಚಹಾ ಕುಡಿಯಲು ಹೋದ ಚಾಲಕ: ಸರ್ಕಾರಿ ಬಸ್ ಎಗರಿಸಿ ಎಸ್ಕೆಪ್ ಆದ ಖದೀಮ

by ಶಾಲಿನಿ ಕೆ. ಡಿ
July 22, 2026 - 10:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ
    ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ
    July 22, 2026 | 0
  • ಪ್ರೊಟೆಸ್ಟ್ ಗೆ (8)
    ತಮಿಳುನಾಡಿಗೆ ಸದ್ಯಕ್ಕೆ ಕಾವೇರಿ ನೀರಿಲ್ಲ: ಯಥಾಸ್ಥಿತಿ ಕಾಯ್ದುಕೊಳ್ಳಲು CWMA ಸೂಚನೆ, ಕರ್ನಾಟಕಕ್ಕೆ ರಿಲೀಫ್
    July 22, 2026 | 0
  • ಪ್ರೊಟೆಸ್ಟ್ ಗೆ (7)
    ಫುಟ್​ಪಾತ್​​ನಲ್ಲಿ ಬೈಕ್ ಚಲಾಯಿಸಿದ್ರೆ ಹುಷಾರ್!: ಇನ್ಮುಂದೆ ₹500 ಅಲ್ಲ..₹5,000 ದಂಡ ಫಿಕ್ಸ್‌?
    July 22, 2026 | 0
  • ಪ್ರೊಟೆಸ್ಟ್ ಗೆ (5)
    ವಾಹನ ಸವಾರರಿಗೆ ಮತ್ತೊಂದು ಶಾಕ್: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ದರ ಮತ್ತೆ ಏರಿಕೆ
    July 22, 2026 | 0
  • ಪ್ರೊಟೆಸ್ಟ್ ಗೆ (4)
    ಸೌಜನ್ಯ ಅ*ತ್ಯಾಚಾರ-ಕೊ*ಲೆ ಕೇಸ್: ಮರುತನಿಖೆಗೆ ಸುಪ್ರೀಂ ಕೋರ್ಟ್ ಅಸ್ತು
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version