• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಾಸ್ಯ ನಟ ರಾಜು ತಾಳಿಕೋಟಿ ರಂಗಭೂಮಿ ಸೇರಿದ್ದು ಹೇಗೆ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 13, 2025 - 8:07 pm
in Flash News, ಸಿನಿಮಾ
0 0
0
Untitled design (49)

ಕನ್ನಡ ಚಲನಚಿತ್ರ ರಂಗದ ಹಿರಿಯ ಹಾಸ್ಯ ನಟ ಮತ್ತು ರಂಗಕರ್ಮಿ ರಾಜು ತಾಳಿಕೋಟೆ ಅವರು ಬದುಕಿನ ಪಯಣವನ್ನು ಮುಗಿಸಿದ್ದಾರೆ. ಹೃದಯಾಘಾತದಿಂದ ಬಳಲುತ್ತಿದ್ದ ಅವರು ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದಿಂದ ಕನ್ನಡ ಚಿತ್ರರಂಗ ಮತ್ತು ರಂಗಭೂಮಿ ಕಂಬನಿ ಮಿಡಿಯುತ್ತಿದೆ.

ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ 1965 ಡಿಸೆಂಬರ್ 18ರಂದು ಜನಿಸಿದ ರಾಜೇಸಾಬ್ ಮುಕ್ತಂ ಸಾಬ್ ಯಂಕಂಚಿ, ಅಂದರೆ ಜನಪ್ರಿಯ ಕಲಾವಿದ ರಾಜು ತಾಳಿಕೋಟೆ. ಬಾಲ್ಯದಲ್ಲೇ ರಂಗಭೂಮಿಯ ಮೆಚ್ಚುಗೆ ಗಳಿಸಿದ ರಾಜು ತಾಳಿಕೋಟೆ, ತಮ್ಮ ವಿಶಿಷ್ಟ ಅಭಿನಯದ ಮೂಲಕ ಉತ್ತರ ಕರ್ನಾಟಕದ ಜನಮನಗಳಲ್ಲಿ ಅಚ್ಚಳಿಯ ಗುರುತು ಮೂಡಿಸಿದರು.

RelatedPosts

ಶರ್ಮಿಳಾ-ಸುಧನ್ ಎಂಗೇಜ್: ಸೇತುವೆಯಾದ ಸಂಯುಕ್ತಾ

3 ದಿನದಲ್ಲೇ 93 ಕೋಟಿ ರೂ. ಕಲೆಕ್ಷನ್ ಮಾಡಿದ ‘ವೆಲ್ಕಮ್ ಟು ದಿ ಜಂಗಲ್’

ವಿನಯ್ ರಾಜ್‌ಕುಮಾರ್ ‘ಗ್ರಾಮಾಯಣ’ ಟ್ರೈಲರ್ ರಿಲೀಸ್

ದೇಶಾದ್ಯಂತ ಜುಲೈನಲ್ಲಿ 13 ದಿನ ಬ್ಯಾಂಕ್ ರಜೆ: ಯಾವ್ಯಾವ ದಿನ? ಇಲ್ಲಿದೆ ಸಂಪೂರ್ಣ ಪಟ್ಟಿ

ADVERTISEMENT
ADVERTISEMENT
ಬಾಲ್ಯ ಮತ್ತು ರಂಗಭೂಮಿ ಪಯಣ

ತಂದೆ ಮುಕ್ತಂ ಸಾಬ್ ಹಾಗೂ ತಾಯಿ ಮೆಹಬೂಬ್ ಜಾನ್ ಅವರ ಪುತ್ರನಾದ ರಾಜು, ಕೇವಲ ಏಳನೇ ವಯಸ್ಸಿನಲ್ಲೇ ತಂದೆಯವರ “ಶ್ರೀ ಖಾನ್ಗತೇಶ್ವರ ನಾಟ್ಯ ಸಂಘ”ದ ವೇದಿಕೆಯಲ್ಲಿ ಮೊದಲ ಬಾರಿಗೆ ನಟನೆ ಮಾಡಿದರು. ಸತ್ಯ ಹರೀಶ್ಚಂದ್ರ ನಾಟಕದ ಲೋಹಿತಾಶ್ವ, ರೇಣುಕಾ ಎಲ್ಲಮ್ಮ ನಾಟಕದ ಬಾಲ ಪರಶುರಾಮ, ಬಾಲಚಂದ್ರ ನಾಟಕದ ಬಾಲಚಂದ್ರ ಪಾತ್ರಗಳಲ್ಲಿ ಮಿಂಚಿದ್ದರು.

ತಾಯಿಯ ಕ್ಯಾನ್ಸರ್ ಮತ್ತು ತಂದೆಯ ಪಾರ್ಶ್ವವಾಯದ ಸಂಕಷ್ಟದಲ್ಲಿ ರಾಜು ತಾಳಿಕೋಟೆ ಹೋಟೆಲ್‌ನಲ್ಲಿ ಕೆಲಸ ಮಾಡಿ, ಲಾರಿ ಕ್ಲೀನರ್ ಆಗಿ ಜೀವನ ಸಾಗಿಸಿದರು. ರಾಜು ತಾಳಿಕೋಟಿ ಅವರಿಗೆ ಇಬ್ಬರು ಮಡದಿಯರು, ಐದು ಜನ ಮಕ್ಕಳು.
ಬಸೀರ, ದಾವಲ್, ಮತ್ತು ಮೂರು ಜನ ಹೆಣ್ಣುಮಕ್ಕಳಿದ್ದಾರೆ. ಅವರಿಗೆ ಕಲೆಯ ಮೇಲಿನ ಪ್ರೀತಿ ಅವರನ್ನು ಮತ್ತೆ ರಂಗಭೂಮಿಯತ್ತ ಕರೆತಂದಿತ್ತು. 1977ರಿಂದ “ಶ್ರೀ ಗುರುಪ್ರಸಾದ ನಾಟ್ಯ ಸಂಘ”, “ಪಂಚಾಕ್ಷರಿ ವಿಜಯ ನಾಟ್ಯ ಸಂಘ”ಗಳಲ್ಲಿ ಕೆಲಸ ಮಾಡಿ, ನಂತರ ನಟನವಾಗಿ ಪ್ರೇಕ್ಷಕರ ಮನ ಗೆದ್ದರು.

ತಾವು ಅಭಿನಯಿಸಿದ ತಾಳಿತಕರಾರು ನಾಟಕದ ಕಿವುಡ ಸ್ತ್ರೀಯಾದ ಸುಮಿತ್ರ ಪಾತ್ರ ಜನಮನ್ನಣೆ ಗಳಿಸಿತ್ತು. ನಂತರದ ಕಣ್ಣಿದ್ದರೂ ಬುದ್ಧಿ ಬೇಕು, ಹೂವಿನ ಅಂಗಡಿ, ಭಾಗ್ಯ ಬಂತು ಬುದ್ಧಿ ಹೋಯಿತು ಮೊದಲಾದ ನಾಟಕಗಳಲ್ಲಿ ಅವರ ಹಾಸ್ಯ ಮತ್ತು ಅಭಿನಯದ ಪ್ರೇಕ್ಷಕರ ಮನಸೆಳೆಯಿತು.

1984ರಲ್ಲಿ ತಮ್ಮದೇ “ಶ್ರೀ ಶರೀಫ ಶಿವಯೋಗಿ ವಿಜಯ ನಾಟ್ಯ ಸಂಘ”ವನ್ನು ಸ್ಥಾಪಿಸಿ ಅನೇಕ ಸಾಮಾಜಿಕ ನಾಟಕಗಳನ್ನು ಪ್ರದರ್ಶಿಸಿದರು.

ಕಲಿಯುಗದ ಕುಡುಕ: ಜನಮನದ ನಾಟಕ

ರಾಜು ತಾಳಿಕೋಟೆಯ “ಕಲಿಯುಗದ ಕುಡುಕ” ನಾಟಕವು 40 ಸಾವಿರಕ್ಕೂ ಹೆಚ್ಚು ಪ್ರದರ್ಶನ ಕಂಡು ಅಪಾರ ಜನಪ್ರಿಯತೆ ಪಡೆದಿತ್ತು. ಈ ನಾಟಕದ ಧ್ವನಿಮುದ್ರಿಕೆಗಳು ಮನೆಮಾತಾದವು. ನಂತರ ಕುಡುಕರ ಸಾಮ್ರಾಜ್ಯ, ಲತ್ತುಗುಣಿ ಲಕ್ಕವ್ವ, ಅಸಲಿ ಕುಡುಕ ನಾಟಕಗಳು ಕೂಡ ಯಶಸ್ಸು ಕಂಡವು.

ರಂಗಭೂಮಿಯ ಪಯಣದ ನಂತರ ರಾಜು ತಾಳಿಕೋಟೆ ಕನ್ನಡ ಚಿತ್ರರಂಗದತ್ತ ಕಾಲಿಟ್ಟರು. ಹೆಂಡ್ತಿ ಅಂದರೆ ಹೆಂಡತಿ, ಮನಸಾರೆ, ಪಂಚರಂಗಿ, ಮೈನಾ, ಸುಗ್ರೀವ, ಲೈಫು ಇಷ್ಟೇನೆ, ರಾಜಧಾನಿ, ಶ್ರೀಮಂತ ಸೇರಿದಂತೆ 35ಕ್ಕೂ ಹೆಚ್ಚು ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ಅಭಿನಯಿಸಿದರು. ನಟನೆ ಶೈಲಿಗೆ ವಿಶೇಷ ಮೆಚ್ಚುಗೆ ದೊರಕಿತು.

ಗೌರವ ಮತ್ತು ಪ್ರಶಸ್ತಿಗಳು

ರಾಜು ತಾಳಿಕೋಟೆ “ಹಾಸ್ಯ ರತ್ನಾಕರ”, “ಹಾಸ್ಯ ಸಾಮ್ರಾಟ”, “ಕಾಮಿಡಿ ಕಿಂಗ್”, “ಕನ್ನಡದ ಸೆಂದಿಲ್” ಎಂಬ ಬಿರುದುಗಳಿಂದ ಗೌರವಿಸಲ್ಪಟ್ಟಿದ್ದರು. 2010ರಲ್ಲಿ ಸುವರ್ಣ ವಾಹಿನಿಯ ಬೆಸ್ಟ್ ಕಾಮಿಡಿಯನ್ ಅವಾರ್ಡ್, 2011ರಲ್ಲಿ ಫಿಲ್ಮ್‌ಫೇರ್ ಪ್ರಶಸ್ತಿ, 2013ರಲ್ಲಿ ಬೆಸ್ಟ್ ಕಾಮಿಡಿಯನ್ ಪ್ರಶಸ್ತಿ, 2015ರಲ್ಲಿ ರಾಜ್ಯೋತ್ಸವ ಪಾಪ್ಯುಲರ್ ಅವಾರ್ಡ್ ಹಾಗೂ 2017ರಲ್ಲಿ ಕೊಲಂಬಿಯಾ ವಿಶ್ವವಿದ್ಯಾನಿಲಯದ ಡಾಕ್ಟರೇಟ್ ಪದವಿ ಪಡೆದಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 29T203221.827

ಚಿತ್ರದುರ್ಗದಲ್ಲಿ ಭೀಕರ ಬರ: ಕಂಗಾಲಾದ ರೈತರು

by ಕವಿತಾ
June 29, 2026 - 8:33 pm
0

Untitled design 2026 06 29T201700.776

ಟ್ರಂಪ್ ಘೋಷಣೆ: ಇರಾನ್ ಮನವಿಗೆ ಸ್ಪಂದಿಸಿ ನಾಳೆ ಮಹತ್ವದ ಸಭೆ

by ಕವಿತಾ
June 29, 2026 - 8:17 pm
0

Untitled design 2026 06 29T193314.897

ಶರ್ಮಿಳಾ-ಸುಧನ್ ಎಂಗೇಜ್: ಸೇತುವೆಯಾದ ಸಂಯುಕ್ತಾ

by ಕವಿತಾ
June 29, 2026 - 7:34 pm
0

Untitled design 2026 06 29T190953.871

ಕರಾವಳಿಯಲ್ಲಿ ಮಳೆ ಮುನ್ಸೂಚನೆ: ಅರೆಂಜ್ ಅಲರ್ಟ್ ಘೋಷಣೆ!

by ಕವಿತಾ
June 29, 2026 - 7:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 29T145640.949
    ದೇಶಾದ್ಯಂತ ಜುಲೈನಲ್ಲಿ 13 ದಿನ ಬ್ಯಾಂಕ್ ರಜೆ: ಯಾವ್ಯಾವ ದಿನ? ಇಲ್ಲಿದೆ ಸಂಪೂರ್ಣ ಪಟ್ಟಿ
    June 29, 2026 | 0
  • Untitled design 2026 06 29T143459.440
    ರಾಮಮಂದಿರ ದೇಣಿಗೆ ಲೂಟಿ ಕೇಸ್‌: ರಾಮನ ದುಡ್ಡಿನಲ್ಲಿ ಆರೋಪಿಗಳ ಬಿಂದಾಸ್ ಲೈಫ್.!
    June 29, 2026 | 0
  • Untitled design 2026 06 29T135944.235
    ಬಿ.ವೈ. ವಿಜಯೇಂದ್ರ ವಿರುದ್ಧ ನಡೀತಿದ್ಯಾ ಸಂಚು? ಸದಾನಂದಗೌಡರದ್ದು ಎನ್ನಲಾದ ಆಡಿಯೋ ರಿಲೀಸ್
    June 29, 2026 | 0
  • Untitled design 2026 06 29T122648.814
    ರಾಮ ಮಂದಿರ ದೇಣಿಗೆ ಅಕ್ರಮ ಪ್ರಕರಣ: ಟ್ರಸ್ಟ್ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ವಿಚಾರಣೆ
    June 29, 2026 | 0
  • Untitled design 2026 06 29T112440.911
    ಜುಲೈ 1ರಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ
    June 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version