• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ಬಿಜೆಪಿಯ ನಾಲ್ವರು ನಾಯಕರನ್ನು ಅವರ ಕ್ಷೇತ್ರದಲ್ಲೇ ಸೋಲಿಸ್ತೀನಿ’: ಸವಾಲು ಹಾಕಿದ ಪ್ರದೀಪ್‌ ಈಶ್ವರ್‌‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 14, 2025 - 3:40 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design (58)

ಚಿಕ್ಕಬಳ್ಳಾಪುರ: ಬಿಜೆಪಿಯ ನಾಲ್ವರು ಪ್ರಮುಖ ನಾಯಕರನ್ನು ಅವರದ್ದೇ ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಸೋಲಿಸುವ ತಾಕತ್ ನನಗಿದೆ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೊಡೆ ತಟ್ಟಿ ಸವಾಲು ಹಾಕಿದ್ದಾರೆ.

ಪ್ರದೀಪ್ ಈಶ್ವರ್, ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಿಜೆಪಿಯ ಮೊದಲ ಸಾಲಿನ ನಾಯಕರುಗಳಾದ ಮೂವರನ್ನು ಮತ್ತು ಪಕ್ಷದಿಂದ ಅಮಾನತುಗೊಂಡಿರುವ ಒಬ್ಬರನ್ನು ಸೋಲಿಸುವೆ ಎಂದು ಅವರು ಘೋಷಿಸಿದ್ದಾರೆ. ಈ ಸವಾಲು ಮಾತ್ರವಲ್ಲದೆ, ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧವೂ ಅವರು ಲೇವಡಿಯ ಮಾತುಗಳನ್ನಾಡಿದ್ದಾರೆ. “ಅವರೆಲ್ಲಾ ನನಗೆ ಸ್ಪರ್ಧಿಗಳೇ ಅಲ್ಲ, ಅವರು ಔಟ್‌ಡೇಟೆಡ್ ನಾಯಕರು. ನಮ್ಮ ಬ್ಲಾಕ್ ಪ್ರೆಸಿಡೆಂಟ್‌ಗಳು ಅವರನ್ನು ಸೋಲಿಸಲು ಸಾಕು, ನಾನು ಜಾಸ್ತಿ” ಎಂದು ಅವರು ಆತ್ಮವಿಶ್ವಾಸದೊಂದಿಗೆ ಹೇಳಿದ್ದಾರೆ.

RelatedPosts

114 ದೇಶಗಳ ಶಾಲೆಗಳಲ್ಲಿ ಫೋನ್ ಬಳಕೆ ನಿಷೇಧ: ಯುನೆಸ್ಕೋ ವರದಿ

ಇಂದು ಬಂಗಾರ ಖರೀದಿಸಲು ಸೂಕ್ತ ಸಮಯವೇ? ಚಿನ್ನ-ಬೆಳ್ಳಿಯ ಹೊಸ ದರಗಳು ಇಲ್ಲಿವೆ

ಅಲಿ ಖಮೇನಿ ಹತ್ಯೆ ಬಳಿಕ ಮೊಜ್ತಬಾಗಾಗಿ ಅಮೆರಿಕ-ಇಸ್ರೇಲ್ ಗುಪ್ತಚರ ತೀವ್ರ ಶೋಧ

ಇರಾನ್ ಸಂತ್ರಸ್ತರಿಗೆ ಚಿನ್ನ-ಹಣ ದಾನ ಮಾಡಿದ ಕಾಶ್ಮೀರ ಜನತೆ

ADVERTISEMENT
ADVERTISEMENT

ಕಳೆದ ಲೋಕಸಭಾ ಚುನಾವಣೆಯಲ್ಲಿ ಅವರು ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದರೆ ಮೀಸೆ ಬೋಳಿಸುವೆ ಮತ್ತು ರಾಜಕೀಯ ಸನ್ಯಾಸ ತೆಗೆದುಕೊಳ್ಳುತ್ತೇನೆ ಎಂದು ಭಾಷಣ ಮಾಡಿದ್ದರು. ಆದರೆ, ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಯ ಡಾ. ಸುಧಾಕರ್ ಅವರು ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರನ್ನು 1,63,460 ಮತಗಳ ಭಾರೀ ಅಂತರದಿಂದ ಸೋಲಿಸಿದ ನಂತರ, ಪ್ರದೀಪ್ ತಮ್ಮ ಮಾತನ್ನು ತಿರುಗಿಸಿದ್ದರು. ತೆಲುಗು ಸಿನಿಮಾ ಶೈಲಿಯಲ್ಲಿ ಭಾಷಣ ಮಾಡುವ ಅವರ ಶೈಲಿಯು ಹಲವು ಬಾರಿ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್‌ಗೆ ಕಾರಣವಾಗಿದೆ.

ಈಗ, ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ಪ್ರದೀಪ್ ಈಶ್ವರ್ ನಾಲ್ವರು ಬಿಜೆಪಿ ನಾಯಕರ ಹೆಸರುಗಳನ್ನು ಉಲ್ಲೇಖಿಸಿದ್ದಾರೆ. ಮೊದಲನೆಯದಾಗಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರನ್ನು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಕ್ಷೇತ್ರದಲ್ಲಿ ಸೋಲಿಸುತ್ತೇನೆ ಎಂದು ಹೇಳಿದ್ದಾರೆ. 2023ರ ವಿಧಾನಸಭಾ ಚುನಾವಣೆಯಲ್ಲಿ ವಿಜಯೇಂದ್ರ ಅವರು ಪಕ್ಷೇತರ ಅಭ್ಯರ್ಥಿ ಎಸ್.ಪಿ. ನಾಗರಾಜೇಗೌಡ ಅವರನ್ನು 11,008 ಮತಗಳ ಅಂತರದಿಂದ ಸೋಲಿಸಿ ಗೆಲುವು ಸಾಧಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಗೋಣಿ ಮಾಲತೇಶ್ ಅವರು ಠೇವಣಿ ಕಳೆದುಕೊಂಡಿದ್ದರು. ಶಿಕಾರಿಪುರ ಕ್ಷೇತ್ರವು ಬಿಜೆಪಿಯ ಬಲಿಷ್ಠ ಕ್ಷೇತ್ರವಾಗಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಕುಟುಂಬದ ಪ್ರಭಾವ ಹೊಂದಿದೆ. ಪ್ರದೀಪ್‌ ಅವರ ಈ ಸವಾಲು ವಿಜಯೇಂದ್ರ ಅವರ ನಾಯಕತ್ವಕ್ಕೆ ನೇರ ಸವಾಲು ಹಾಕಿದಂತಿದೆ.

ಎರಡನೆಯದಾಗಿ, ವಿಜಯಪುರ (ಬಿಜಾಪುರ) ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟಿಲ್ ಯತ್ನಾಳ್ ಅವರನ್ನು ಸೋಲಿಸುವ ಚಾಲೆಂಜ್ ಮಾಡಿದ್ದಾರೆ. ಕಳೆದ ಚುನಾವಣೆಯಲ್ಲಿ ಯತ್ನಾಳ್ ಅವರು ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರಿಫ್ ಅವರನ್ನು 8,233 ಮತಗಳ ಅಂತರದಿಂದ ಸೋಲಿಸಿದ್ದರು. ಯತ್ನಾಳ್ ಅವರು ಪಕ್ಷದ ಆಂತರಿಕ ರಾಜಕೀಯದಲ್ಲಿ ಸದಾ ಸುದ್ದಿಯಲ್ಲಿರುತ್ತಾರೆ.

ಮೂರನೆಯದಾಗಿ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರನ್ನು ಬೆಂಗಳೂರು ನಗರದ ಪದ್ಮನಾಭ ನಗರ ಕ್ಷೇತ್ರದಲ್ಲಿ ಸೋಲಿಸುತ್ತೇನೆ ಎಂದು ಸವಾಲು ಹಾಕಿದ್ದಾರೆ. 2023ರ ಚುನಾವಣೆಯಲ್ಲಿ ಅಶೋಕ್ ಅವರು ಜೆಡಿಎಸ್ ಅಭ್ಯರ್ಥಿ ವಿಕೆ ಗೋಪಾಲ್ ಅವರನ್ನು 32,166 ಮತಗಳ ಅಂತರದಿಂದ ಸೋಲಿಸಿದ್ದರು. ಅಶೋಕ್ ಅವರು ಬಿಜೆಪಿಯ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದು, ಬೆಂಗಳೂರಿನಲ್ಲಿ ಪಕ್ಷದ ಬಲವನ್ನು ಬೆಳೆಸಿದ ಕೀರ್ತಿ ಹೊಂದಿದ್ದಾರೆ.

ನಾಲ್ಕನೆಯದಾಗಿ, ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಅವರನ್ನು ಸೋಲಿಸುವ ತಾಕತ್ ನನಗಿದೆ ಎಂದು ಹೇಳಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಿ.ಟಿ ರವಿ ಅವರು ಕಾಂಗ್ರೆಸ್ ಅಭ್ಯರ್ಥಿ ಎಚ್.ಡಿ. ತಮ್ಮಯ್ಯ ಅವರ ವಿರುದ್ಧ 5,926 ಮತಗಳ ಅಂತರದಿಂದ ಸೋಲು ಕಂಡಿದ್ದರು. ಸಿಟಿ ರವಿ ಅವರು ಬಿಜೆಪಿಯಲ್ಲಿ ಸಕ್ರಿಯ ನಾಯಕರಾಗಿದ್ದು, ಮಲೆನಾಡು ಪ್ರದೇಶದಲ್ಲಿ ಪ್ರಭಾವ ಹೊಂದಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 23T105337.602

114 ದೇಶಗಳ ಶಾಲೆಗಳಲ್ಲಿ ಫೋನ್ ಬಳಕೆ ನಿಷೇಧ: ಯುನೆಸ್ಕೋ ವರದಿ

by ಶಾಲಿನಿ ಕೆ. ಡಿ
March 23, 2026 - 11:02 am
0

Untitled design 2026 03 23T101839.421

ಕರ್ನಾಟಕದ ಜಿಲ್ಲಾವಾರು ಪೆಟ್ರೋಲ್-ಡೀಸೆಲ್ ದರಗಳ ಸಂಪೂರ್ಣ ಪಟ್ಟಿ ಇಲ್ಲಿದೆ!

by ಶಾಲಿನಿ ಕೆ. ಡಿ
March 23, 2026 - 10:22 am
0

Untitled design 2026 03 23T100636.511

ಇಂದು ಬಂಗಾರ ಖರೀದಿಸಲು ಸೂಕ್ತ ಸಮಯವೇ? ಚಿನ್ನ-ಬೆಳ್ಳಿಯ ಹೊಸ ದರಗಳು ಇಲ್ಲಿವೆ

by ಶಾಲಿನಿ ಕೆ. ಡಿ
March 23, 2026 - 10:07 am
0

Untitled design 2026 03 23T093142.806

ಅಲಿ ಖಮೇನಿ ಹತ್ಯೆ ಬಳಿಕ ಮೊಜ್ತಬಾಗಾಗಿ ಅಮೆರಿಕ-ಇಸ್ರೇಲ್ ಗುಪ್ತಚರ ತೀವ್ರ ಶೋಧ

by ಶಾಲಿನಿ ಕೆ. ಡಿ
March 23, 2026 - 9:48 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 23T105337.602
    114 ದೇಶಗಳ ಶಾಲೆಗಳಲ್ಲಿ ಫೋನ್ ಬಳಕೆ ನಿಷೇಧ: ಯುನೆಸ್ಕೋ ವರದಿ
    March 23, 2026 | 0
  • Untitled design 2026 03 23T100636.511
    ಇಂದು ಬಂಗಾರ ಖರೀದಿಸಲು ಸೂಕ್ತ ಸಮಯವೇ? ಚಿನ್ನ-ಬೆಳ್ಳಿಯ ಹೊಸ ದರಗಳು ಇಲ್ಲಿವೆ
    March 23, 2026 | 0
  • Untitled design 2026 03 23T093142.806
    ಅಲಿ ಖಮೇನಿ ಹತ್ಯೆ ಬಳಿಕ ಮೊಜ್ತಬಾಗಾಗಿ ಅಮೆರಿಕ-ಇಸ್ರೇಲ್ ಗುಪ್ತಚರ ತೀವ್ರ ಶೋಧ
    March 23, 2026 | 0
  • Untitled design 2026 03 23T085922.698
    ಇರಾನ್ ಸಂತ್ರಸ್ತರಿಗೆ ಚಿನ್ನ-ಹಣ ದಾನ ಮಾಡಿದ ಕಾಶ್ಮೀರ ಜನತೆ
    March 23, 2026 | 0
  • Untitled design 2026 03 22T231737.105
    ಸಚಿವ ಶಿವರಾಜ್ ತಂಗಡಗಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
    March 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version