“4.30 ರಿಂದ 6 ಮುಹೂರ್ತ. ನಾಲ್ವರು ಕಾಣಿಸುತ್ತಿಲ್ಲ” ಎಂಬ ವಿಭಿನ್ನ ಶೀರ್ಷಿಕೆಯುಳ್ಳ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ರೇಣುಕಾಂಬ ಥಿಯೇಟರ್ ನಲ್ಲಿ ನೆರವೇರಿತು. ನೀಲಕಂಠ ಫಿಲಂಸ್ ಹಾಗೂ ಧರ್ಮಶ್ರೀ ಎಂಟರ್ ಪ್ರೈಸಸ್ ಲಾಂಛನದಲ್ಲಿ ಧರ್ಮಶ್ರೀ ಮಂಜುನಾಥ್(ರಥಾವರ) ಹಾಗೂ D ಯೋಗರಾಜ್ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ಪೂವೈ ಸುರೇಶ್ ಹಾಗೂ ಶಿವರಾಜ್ ನಿರ್ದೇಶಿಸುತ್ತಿದ್ದಾರೆ.
ಧರ್ಮಶ್ರೀ ಮಂಜುನಾಥ್ ಅವರ ಪುತ್ರ ಎಂ.ಎನ್ ಸುಚಿತ್ ನಾಯಕನಾಗಿ ಹಾಗೂ ಸಾತ್ವಿಕ ನಾಯಕಿಯಾಗಿ ನಟಿಸುತ್ತಿದ್ದಾರೆ. ನಾಯಕ ದ್ವಿತೀಯ ನಾಯಕನಾಗಿ ಅನಿಲ್ ಹಾಗೂ ಮತ್ತೊಬ್ಬ ನಾಯಕಿಯಾಗಿ ಮಂಗಳೂರಿನ ಧನ್ಯ ಅಭಿನಯಿಸುತ್ತಿದ್ದಾರೆ. ನಾಯಕ ಎಂ.ಎನ್ ಸುಚಿತ್ ಹುಟ್ಟುಹಬ್ಬದ ದಿನವೇ ಚಿತ್ರ ಆರಂಭವಾಗಿದ್ದು ವಿಶೇಷ. ಮುಹೂರ್ತ ಸಮಾರಂಭದ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.





