• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದುನಿಯಾ ವಿಜಯ್-ರಚಿತರಾಮ್ ಅಭಿನಯದ “ಲ್ಯಾಂಡ್ ಲಾರ್ಡ್” ಚಿತ್ರ ಜನವರಿ 23ಕ್ಕೆ ರಿಲೀಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 2, 2025 - 12:06 pm
in ಸಿನಿಮಾ
0 0
0
Untitled design 2025 11 02t120451.079

ನಾಡಿನೆಲ್ಲೆಡೆ ರಾಜ್ಯೋತ್ಸವದ ಸಂಭ್ರಮ. ಈ ಶುಭದಿನದಂದು ಸಾರಥಿ ಫಿಲಂಸ್ ಲಾಂಛನದಲ್ಲಿ ಕೆ.ವಿ. ಸತ್ಯಪ್ರಕಾಶ್ – ಹೇಮಂತ್ ಗೌಡ ಕೆ.ಎಸ್ ನಿರ್ಮಿಸಿರುವ, ಜಡೇಶ್ ಕೆ.ಹಂಪಿ ನಿರ್ದೇಶನದ ಹಾಗೂ ದುನಿಯಾ ವಿಜಯ್, ರಚಿತರಾಮ್ ಅಭಿನಯದ ‘ಲ್ಯಾಂಡ್ ಲಾರ್ಡ್’ ಚಿತ್ರದ ಸರ್ವೈವರ್ ಟೀಸರ್ ಬಿಡುಗಡೆ ಸಮಾರಂಭ ನವರಂಗ್ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನೆರವೇರಿತು. ಟೀಸರ್ ಮೂಲಕ ಚಿತ್ರತಂಡ ಬಿಡುಗಡೆಯ ದಿನಾಂಕ ಘೋಷಣೆ ಮಾಡಿದೆ.

RelatedPosts

ನಟ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ-ನಟಿ ರಕ್ಷಿತಾ

ಜನನಾಯಗನ್ ತೆಲುಗು ಚಿತ್ರದ ರಿಮೇಕ್ ಎಂದ ಡೈರೆಕ್ಟರ್ ವಿನೋದ್

ಫಸ್ಟ್ ಸಾಂಗ್ ಮೋಹಕ.. ಸೆಕೆಂಡ್ ಸಾಂಗ್ ಮನಮೋಹಕ..!

ದುನಿಯಾ ವಿಜಯ್ ಕಿರಿಮಗಳ ‘ಸಿಟಿಲೈಟ್ಸ್’ ದುನಿಯಾ

ADVERTISEMENT
ADVERTISEMENT

ಬಹು ನಿರೀಕ್ಷಿತ ಈ ಚಿತ್ರ 2026 ರ ಜನವರಿ 23 ರಂದು ಬಿಡುಗಡೆಯಾಗಲಿದೆ. ಜನವರಿ 20 ದುನಿಯಾ ವಿಜಯ್ ಅವರ ಹುಟ್ಟುಹಬ್ಬ. ಆ ಸಂದರ್ಭದಲ್ಲೇ ಈ ಚಿತ್ರ ಬಿಡುಗಡೆಯಾಗುತ್ತಿರುವುದು ಅಭಿಮಾನಿಗಳಿಗೆ ಖುಷಿಯಾಗಿದೆ. ಟೀಸರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ‌

ಇಂತಹ ಉತ್ತಮ ಸಂದೇಶವಿರುವ ಈ ಕಥೆಯನ್ನು ತೆರೆಗೆ ತರುತ್ತಿರುವ ನಿರ್ದೇಶಕ ಜಡೇಶ್ ಕೆ ಹಂಪಿ ಹಾಗೂ ನಿರ್ಮಾಣ ಮಾಡುತ್ತಿರುವ ಕೆ.ವಿ.ಸತ್ಯಪ್ರಕಾಶ್ ಹಾಗೂ ಕೆ.ಎಸ್ ಹೇಮಂತ್ ಗೌಡ ಅವರಿಗೆ ಧನ್ಯವಾದ ತಿಳಿಸಿ ಮಾತನಾಡಿದ ನಾಯಕ ದುನಿಯಾ ವಿಜಯ್, ಕಷ್ಟದ ಸಮಯದಲ್ಲಿ ‌ಕೈ‌ ಹಿಡಿದ ಅಭಿಮಾನಿಗಳಿಗೆ ವಿಶೇಷ ಧನ್ಯವಾದ ಹೇಳಿದರು. ಇನ್ನೂ, ನಾನು ಹಾಗೂ ರಚಿತರಾಮ್ ಅವರು ಒಂದೇ ಬಡಾವಣೆಯವರು.

ಮೊದಲಿನಿಂದಲೂ ಸ್ನೇಹಿತರು. ಅವರ ಜೊತೆಗೆ ಅಭಿನಯಿಸಿದ್ದು ಹಾಗೂ ತೆರೆಯ ಮೇಲೆ ಅಷ್ಟೇ ಅಲ್ಲ. ನಿಜಜೀವನದಲ್ಲೂ ನನ್ನನ್ನು ತಾಯಿಯ ತರಹ ಪ್ರೀತಿ ಮಾಡುವ ಹಿರಿಯ ನಟಿ ಉಮಾಶ್ರೀ ಅವರೊಂದಿಗೆ ನಟಿಸಿದ್ದು ಬಹಳ ಸಂತೋಷವಾಗಿದೆ. ನನ್ನ ಮಗಳು ರಿತನ್ಯ ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದಾಳೆ. ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ. ತಂತ್ರಜ್ಞರ ಕಾರ್ಯವೈಖರಿಯೂ ಚೆನ್ನಾಗಿದೆ. ನಮ್ಮ ಚಿತ್ರ ಜನವರಿ 23 ರಂದು ತೆರೆಗೆ ಬರಲಿದೆ. ಚಿತ್ರ ನಿಮ್ಮೆಲ್ಲರಿಗೂ ಮೆಚ್ಚುಗೆಯಾಗುವ ಭರವಸೆಯಿದೆ ಎಂದರು.

ಈ ಸಂದರ್ಭದಲ್ಲಿ ನಟಿ ರಚಿತಾರಾಮ್ ಮಾತನಾಡುತ್ತಾ, ನಾನು ಈ ಚಿತ್ರದ ಕಥೆ ಕೇಳುವಾಗಲೇ ಬಹಳ ಕುತೂಹಲ ಎನಿಸಿತು‌. ಕಥೆ ಕೇಳುತ್ತಿರುವಾಗಲೇ ಈ ಪಾತ್ರ ನಾನೇ ಮಾಡಬೇಕು ಅಂದುಕೊಂಡೆ. ಕಥೆ ಕೇಳಿದ ಮೇಲೆ‌ ನಾನು ದರ್ಶನ್ ಸರ್ ಹಾಗೂ ಲೋಕೇಶ್ ಕನಕರಾಜು ಅವರಿಗೆ ಈ ಚಿತ್ರದ ಬಗ್ಗೆ ಹೇಳಿದೆ.‌ ಅವರು ಕೂಡ ಕಥೆ ಚೆನ್ನಾಗಿದೆ ಎಂದರು. “ಜಾನಿ ಜಾನಿ ಎಸ್ ಪಪ್ಪ” ಚಿತ್ರದ ನಂತರ ನಾನು ದುನಿಯಾ ವಿಜಯ್ ಅವರ ಜೊತೆಗೆ ನಟಿಸಿದ್ದೇನೆ. ಈ ಚಿತ್ರತಂಡದೊಟ್ಟಿಗೆ ಕೆಲಸ ಮಾಡಿದ್ದು ಖುಷಿಯಾಗಿದೆ. ನಿಂಗವ್ವ ನನ್ನ ಪಾತ್ರದ ಹೆಸರು. ಟೀಸರ್ ಚೆನ್ನಾಗಿದೆ. ಚಿತ್ರ ಜನವರಿ 23 ತೆರೆಗೆ ಬರಲಿದೆ. ಎಲ್ಲರೂ ಚಿತ್ರ ನೋಡಿ. ಪ್ರೋತ್ಸಾಹ ನೀಡಿ ಎಂದರು.

ಇದೊಂದು 80ರ ಕಾಲಘಟ್ಟದಲ್ಲಿ ನಡೆಯುವ ಈ ನೆಲದ ಕಥೆ. 45 ವರ್ಷಗಳ ಹಿಂದಿನದ್ದನ್ನು ತೆರೆಯ ಮೇಲೆ ತರುವುದು ಅಷ್ಟು ಸುಲಭವಲ್ಲ. ನಾವು ಅಂದುಕೊಂಡ ಹಾಗೆ ಚಿತ್ರ ಬಂದಿದೆ ಅಂದರೆ ಅದಕ್ಕೆ ಚಿತ್ರತಂಡದ ಸಹಕಾರವೇ ಕಾರಣ. ಇನ್ನೂ ದುನಿಯಾ ವಿಜಯ್ ಅವರ ಅಭಿನಯಕ್ಕೆ ಅಭಿಮಾನಿ ನಾನು. ರಚಿತಾರಾಮ್ ಅವರು ಅಭಿನಯಿಸಲು ಸೆಟ್ ಗೆ ಬಂದರೆ ಅವರ ಸಂಭಾಷಣೆಗೆ ವಿಷಲ್ ಬೀಳುತ್ತಿತ್ತು. ರಿತನ್ಯ, ಶಿಶಿರ್,‌ ರಾಕೇಶ್ ಅಡಿಗ, ಅಚ್ಯುತ್ ಕುಮಾರ್, ಮಿತ್ರ, ಅಭಿಷೇಕ್ ದಾಸ್ ಹೀಗೆ ಎಲ್ಲರ ಅಭಿನಯವೂ‌ ಬಹಳ ಚೆನ್ನಾಗಿದೆ.

ಐವತ್ತಕ್ಕೂ ಹೆಚ್ಚು ರಂಗಭೂಮಿ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಅವರ ಸಂಗೀತ ನಿರ್ದೇಶನದಲ್ಲಿ ಹಾಡುಗಳು ಚೆನ್ನಾಗಿ ಬಂದಿದೆ. ಅದರಲ್ಲೂ ಯೋಗರಾಜ್ ಭಟ್ ಅವರು ಬರೆದು ದುನಿಯಾ ವಿಜಯ್ ಹಾಗೂ ರಚಿತರಾಮ್ ಅವರು ಅಭಿನಯಿಸಿರುವ ಹಾಡೊಂದು ಸದ್ಯದಲ್ಲೇ ಬಿಡುಗಡೆಯಾಗಲಿದ್ದು, ಅದು ಸರ್ವಕಾಲಿಕ ಹಿಟ್ ಹಾಡುಗಳ ಸಾಲಿಗೆ ಸೇರಲಿದೆ. ಚಿತ್ರವನ್ನು ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಪಕರು ನಿರ್ಮಾಣ ಮಾಡಿದ್ದಾರೆ. ಜನವರಿ 23 ನಮ್ಮ ಚಿತ್ರ ನಿಮ್ಮ ಮುಂದೆ ಬರಲಿದೆ ಎಂದರು ನಿರ್ದೇಶಕ ಜಡೇಶ್ ಕೆ. ಹಂಪಿ.

“ಸಾರಥಿ” ಚಿತ್ರದ ಬಳಿಕ ಹದಿನಾಲ್ಕು ವರ್ಷಗಳ ನಂತರ ನಮ್ಮ ಸಂಸ್ಥೆಯಿಂದ “ಲ್ಯಾಂಡ್ ಲಾರ್ಡ್” ಚಿತ್ರ ನಿರ್ಮಾಣವಾಗಿದೆ. ನಿರ್ದೇಶಕರು ಒಂದೊಳ್ಳೆ ಕಥೆ ಮಾಡಿದ್ದಾರೆ. ನೋಡುಗರು ಕೊಡುವ ದುಡ್ಡಿಗೆ ಐದು ಪಟ್ಟು ಹೆಚ್ಚು ಮನೋರಂಜನೆ ಕೊಡುವ ಚಿತ್ರವಿದು. ಚಿತ್ರ ಚೆನ್ನಾಗಿ ಮೂಡಿಬರಲು ಸಹಕಾರ ನೀಡಿದ ದುನಿಯಾ ವಿಜಯ್, ರಚಿತರಾಮ್ ಅವರು ಸೇರಿದಂತೆ ಎಲ್ಲಾ ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ಧನ್ಯವಾದ ಎಂದರು ನಿರ್ಮಾಪಕ ಕೆ.ವಿ.ಸತ್ಯಪ್ರಕಾಶ್. ನಮ್ಮ ಚಿತ್ರ ಜನವರಿ 23ರಂದು ಬಿಡುಗಡೆಯಾಗಲಿದೆ. ಮುಂದೆ ಕೂಡ ನಮ್ಮ ಸಂಸ್ಥೆಯಿಂದ ಉತ್ತಮ ಚಿತ್ರಗಳು ನಿರ್ಮಾಣವಾಗಲಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ತಂದೆ ಕೆ.ವಿ.ಸತ್ಯಪ್ರಕಾಶ್ ಅವರ ಜೊತೆಗೂಡಿ ಈ ಚಿತ್ರವನ್ನು ನಿರ್ಮಿಸಿರುವ ಕೆ.ಎಸ್.ಹೇಮಂತ್ ಗೌಡ ತಿಳಿಸಿದರು.

ಈ ಚಿತ್ರದಲ್ಲಿ ಅಭಿನಯಿಸಿದ್ದು ಬಹಳ ಖುಷಿಯಾಗಿದೆ. ದುನಿಯಾ ವಿಜಯ್ ತೆರೆ ಮೇಲೆ ಮಾತ್ರ ನನ್ನ ಮಗ ಅಲ್ಲ. ನಿಜಜೀವನದಲ್ಲೂ ನನ್ನ ಮಗ ಇದ್ದ ಹಾಗೆ. ಆರೀತಿಯ ಪ್ರೀತಿ ತೋರಿಸುತ್ತಾರೆ ಎಂದು ಹಿರಿಯ ನಟಿ ಉಮಾಶ್ರೀ ಹೇಳಿದರು.

ಈ ಚಿತ್ರದ ಮೂಲಕ ನಾನು ಚಿತ್ರರಂಗ ಪ್ರವೇಶಿಸುತ್ತಿದ್ದೇನೆ. ಈ ಚಿತ್ರದಲ್ಲೂ ನಾನು ದುನಿಯಾ ವಿಜಯ್ ಅವರ ಮಗಳಾಗಿಯೇ ಕಾಣಿಸಿಕೊಂಡಿದ್ದೇನೆ ಎಂದರು ದುನಿಯಾ ವಿಜಯ್ ಪುತ್ರ ರಿತನ್ಯ.

ಚಿತ್ರದಲ್ಲಿ ನಟಿಸಿರುವ ಮಿತ್ರ, ಶಿಶಿರ್, ಅಭಿಷೇಕ್ ದಾಸ್ ಛಾಯಾಗ್ರಾಹಕ ಸ್ವಾಮಿ ಜೆ ಗೌಡ, ಸಂಭಾಷಣೆ ಬರೆದಿರುವ ಮಾಸ್ತಿ, ಶ್ರೀಕಾಂತ್ ಮುಂತಾದ ಚಿತ್ರತಂಡದ ಸದಸ್ಯರು “ಲ್ಯಾಂಡ್ ಲಾರ್ಡ್” ಚಿತ್ರದ ಕುರಿತು ಮಾತನಾಡಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಹಾಗೂ ಚಿತ್ರರಂಗದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 21T212325.764

ಯುವಜನತೆ ಹೋರಾಟ ಹತ್ತಿಕ್ಕುತ್ತಿರುವ ಕೇಂದ್ರ ಸರ್ಕಾರ, ಸಂಸತ್ತಿನಲ್ಲಿ ಚರ್ಚಿಸಿ: ಸಿಎಂ ಡಿ.ಕೆ ಶಿವಕುಮಾರ್ ಆಗ್ರಹ

by ಶಾಲಿನಿ ಕೆ. ಡಿ
July 21, 2026 - 9:23 pm
0

Untitled design 2026 07 21T210422.806

ಪ್ರಧಾನಿ ನಿವಾಸದ ಬಳಿ ಪ್ರತಿಭಟನೆ ವೇಳೆ ರಾಹುಲ್ ಗಾಂಧಿಗೆ ಗಾಯ

by ಶಾಲಿನಿ ಕೆ. ಡಿ
July 21, 2026 - 9:05 pm
0

Untitled design 2026 07 21T203109.779

ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ: ಡಿಸಿಎಂ ಪರಮೇಶ್ವರ್ ಭರವಸೆ

by ಶಾಲಿನಿ ಕೆ. ಡಿ
July 21, 2026 - 8:32 pm
0

Untitled design 2026 07 21T192714.337

ಪ್ರಧಾನಿ ಮೋದಿ ನಿವಾಸಕ್ಕೆ ಮುತ್ತಿಗೆಗೆ ಯತ್ನ: ರಾಹುಲ್ ಗಾಂಧಿ, ಪ್ರಿಯಾಂಕಾ ಪೊಲೀಸ್ ವಶಕ್ಕೆ

by ಶಾಲಿನಿ ಕೆ. ಡಿ
July 21, 2026 - 7:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T174631.947
    ನಟ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ-ನಟಿ ರಕ್ಷಿತಾ
    July 21, 2026 | 0
  • Untitled design 2026 07 21T162239.970
    ಜನನಾಯಗನ್ ತೆಲುಗು ಚಿತ್ರದ ರಿಮೇಕ್ ಎಂದ ಡೈರೆಕ್ಟರ್ ವಿನೋದ್
    July 21, 2026 | 0
  • ಸ್ವ (25)
    ಫಸ್ಟ್ ಸಾಂಗ್ ಮೋಹಕ.. ಸೆಕೆಂಡ್ ಸಾಂಗ್ ಮನಮೋಹಕ..!
    July 21, 2026 | 0
  • ಸ್ವ (20)
    ದುನಿಯಾ ವಿಜಯ್ ಕಿರಿಮಗಳ ‘ಸಿಟಿಲೈಟ್ಸ್’ ದುನಿಯಾ
    July 21, 2026 | 0
  • ಸ್ವ (17)
    ‘ಟಾಕ್ಸಿಕ್’ನ ‘ಮನಮೋಹಕ’ ಹಾಡು ರಿಲೀಸ್: ಯಶ್-ತಾರಾ ರೊಮ್ಯಾನ್ಸ್‌ಗೆ ಫ್ಯಾನ್ಸ್ ಫಿದಾ!
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version