ಮುಖ್ಯಮಂತ್ರಿ ಬದಲಾವಣೆ ಗೊಂದಲಕ್ಕೆ ತಿರುಗೇಟು ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಬೆಳಗಾವಿಯಲ್ಲಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.
“ಸಿಎಂ ಸಿದ್ದರಾಮಯ್ಯ ಅವರೇ ಪೂರ್ಣ 5 ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಬದಲಾವಣೆ ಯಾವುದೇ ಸಾಧ್ಯತೆ ಇಲ್ಲ. ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನಾನು ಸಿಎಂ ಆಗಬೇಕೆಂದು ಹೇಳಿದ್ದರು. ಅವರ ಹೇಳಿಕೆಯಿಂದ ಮಾತ್ರ ಗೊಂದಲ ಮೂಡಿತ್ತು. ಹೈಕಮಾಂಡ್ ಈಗ ಸ್ಪಷ್ಟನೆ ನೀಡಿದೆ. ಯಾವುದೇ ಬದಲಾವಣೆ ಆಗುವುದಿಲ್ಲ” ಎಂದು ಯತೀಂದ್ರ ನೇರವಾಗಿ ಹೇಳಿದರು.
ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಹೈಕಮಾಂಡ್ ಕರೆಯುತ್ತದೆ, ದೆಹಲಿಗೆ ಹೋಗಿ ಮಾತಾಡಿಕೊಂಡು ಬಂದಾಗ ಎಲ್ಲಾ ಸ್ಪಷ್ಟವಾಗುತ್ತದೆ ಎಂದು ಯತೀಂದ್ರ ಹೇಳಿದರು. “ನನ್ನ ಪ್ರಕಾರ ಯಾವುದೇ ಬದಲಾವಣೆ ಆಗಲ್ಲ. ಸಿದ್ದರಾಮಯ್ಯ ಅವರೇ 2028ರವರೆಗೆ ಸಿಎಂ ಆಗಿ ಮುಂದುವರಿಯುತ್ತಾರೆ” ಎಂದು ದೃಢವಾಗಿ ಪುನರುಚ್ಛಾರ ಮಾಡಿದರು.
ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯಿಂದ ಗೊಂದಲ ಉಂಟಾಗಿತ್ತು ಎಂದು ಒಪ್ಪಿಕೊಂಡ ಯತೀಂದ್ರ, “ಅದು ಅವರ ಅಭಿಪ್ರಾಯ ಮಾತ್ರ. ಹೈಕಮಾಂಡ್ ತೀರ್ಮಾನವೇ ಅಂತಿಮ” ಎಂದು ಸ್ಪಷ್ಟಪಡಿಸಿದರು.
ಈ ಹೇಳಿಕೆಯು ಬೆಳಗಾವಿ ಅಧಿವೇಶನದಲ್ಲಿ ರಾಜಕೀಯ ಗೊಂದಲಕ್ಕೆ ತಿರುಗೇಟು ನೀಡಿದ್ದು, ಕಾಂಗ್ರೆಸ್ ಆಂತರಿಕ ಗುಂಪುಗುಚ್ಛು ಚರ್ಚೆಗೆ ಮತ್ತೊಮ್ಮೆ ಬ್ರೇಕ್ ಹಾಕಿದೆ.





