• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಕಲಿ ಸೇವಾನುಭವ ಪ್ರಮಾಣಪತ್ರ ನೀಡಿ ಸಾರಿಗೆ ಇಲಾಖೆಗೆ ಮೋಸ: ವಂಚಕ ಅಭ್ಯರ್ಥಿಗಳ ಬಂಧನಕ್ಕೆ ಶರವಣ ಆಗ್ರಹ..!

admin by admin
December 10, 2025 - 2:03 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
Untitled design 2025 12 10T140615.188

ಬೆಳಗಾವಿ: ವಿಧಾನ ಮಂಡಲದಲ್ಲಿ ಮೂರನೇ ದಿನವೂ ಚಳಿಗಾಲದ ಅಧಿವೇಶನ ಮುಂದುವರೆದಿದ್ದು, ಅಧಿವೇಶನದಲ್ಲಿ ಇಂದು ಶರವಣ ಸಾರಿಗೆ ಇಲಾಖೆಯ ವಿರುದ್ದ ನಕಲಿ ಸೇವಾನುಭವ ಪ್ರಮಾಣಪತ್ರ ನೀಡಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಸಾರಿಗೆ ಇಲಾಖೆಯಲ್ಲಿ ವಾಹನ ತಪಾಸಣೆಯ ಇನ್ಸ್ಪೆಕ್ಟರ್‌ ಹುದ್ದೆಗೆ ಬಡ್ತಿ ಪಡೆಯಲು ಸುಮಾರು 50 ಗ್ರೂಪ್‌ ʼಸಿʼ ಲಿಪಿಕ ಸಿಬ್ಬಂದಿ ತಾಂತ್ರಿಕ ಶಿಕ್ಷಣದ ನಕಲಿ ಸೇವಾನುಭವ ಪ್ರಮಾಣಪತ್ರ ನೀಡಿ, ಸಂಜೆ ಪಾಲಿಟೆಕ್ನಿಕ್‌ ಕಾಲೇಜ್‌ನಲ್ಲಿ ಓದುತ್ತಿರುವ ಆರೋಪವಿದೆ ಈ ಸಂಬಂಧ ಎಸ್‌ಐಟಿ ರಚಿಸಿ ತನಿಖೆ ನಡೆಸಬೇಕು ಎಂದು ವಿಧಾನ ಪರಿಷತ್‌ ಶಾಸಕ ಟಿ.ಎ.ಶರವಣ ಒತ್ತಾಯಿಸಿದರು.

RelatedPosts

ಬಸ್‌‌ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್: ವಿಡಿಯೋ ವೈರಲ್

ಸುಬ್ಬಾರೆಡ್ಡಿಗೆ ಕೈತಪ್ಪಿದ ಸಚಿವ ಸ್ಥಾನ: ಬಾಗೇಪಲ್ಲಿ ನಾಳೆ ಸಂಪೂರ್ಣ ಬಂದ್‌

ಉದಯನಿಧಿ ಸ್ಟಾಲಿನ್‌ರನ್ನು ಇಂದೇ ಬಿಡುಗಡೆ ಮಾಡಿ: ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ

ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಅವರಿಗೆ ಅಸಮಾಧಾನ ಇಲ್ಲ: ಯತೀಂದ್ರ ಸ್ಪಷ್ಟನೆ

ADVERTISEMENT
ADVERTISEMENT

ಸಾರಿಗೆ ಅಕ್ರಮದ ಕುರಿತು ಶರವಣ ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಉತ್ತರಿಸಿ, ಸಾರಿಗೆ ಇಲಾಖೆಯ ಲಿಪಿಕ ಸಿಬ್ಬಂದಿ ಕಾನೂನು ಬಾಹಿರವಾಗಿ ನಕಲಿ ಸೇವಾನುಭವ ಪ್ರಮಾಣ ಪತ್ರ ಪಡೆದಿರುವುದು ಇನ್ನೂ ತನಿಖೆಯ ಹಂತದಲ್ಲಿದೆ. ಈ ಆರೋಪ ನಿಜವಾಗಿದ್ದರೆ ಶೀಘ್ರದಲ್ಲಿ ತಪ್ಪಿತಸ್ಥರ ವಿರುದ್ಧ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರಾಮಲಿಂಗರೆಡ್ಡಿ ಭರವಸೆ ನೀಡಿದ್ದಾರೆ.

ಶಾಸಕ ಶರವಣರ ಆರೋಪವೇನು..?

ಸಾರಿಗೆ ಇಲಾಖೆ ಭಡ್ತಿ ಹಿಂದೆ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿರುವ ಅನುಮಾನವಿದೆ. ಇಲಾಖೆಯ ನೇಮಕಾತಿ ಹಾಗೂ ಬಡ್ತಿ ನಿಯಮಾವಳಿಯೇ ದೋಷಪೂರಿತವಾಗಿದೆ. ಇದರ ಹಿಂದೆ ವ್ಯವಸ್ಥಿತ ಜಾಲವೇ ಇದ್ದು, ಸರ್ಕಾರ ತಕ್ಷಣ ಎಸ್ಐಟಿ ರಚನೆ ಮಾಡಿ, ಶಿಕ್ಷಣ ಸಂಸ್ಥೆ ಮೇಲೆ ತನಿಖೆ ನಡೆಸಬೇಕು. ವ್ಯಾಸಂಗ ಮಾಡುತ್ತಿರುವ ಇಲಾಖಾ ಸಿಬ್ಬಂದಿಯ ದಾಖಲೆಗಳನ್ನು ವಶಪಡಿಸಿಕೊಂಡು ತನಿಖೆ ನಡೆಸಬೇಕು. ವಂಚನೆ ಮಾಡಿರುವ ಅಭ್ಯರ್ಥಿಗಳನ್ನು ಬಂಧಿಸಬೇಕು. ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಬೇಕು ಎಂದು ಶರವಣ ಆಗ್ರಹಿಸಿದರು.

ಅಕ್ರಮ ತಿದ್ದುಪಡಿ..!

ಎಸ್ಎಸ್ಎಲ್‌ಸಿ ಉತ್ತೀರ್ಣರಾದರೆ ಸಾಕು, ಇನ್ಸ್‌ಪೆಕ್ಟರ್‌ ಆಫ್ ಮೋಟಾರ್ ವೆಹಿಕಲ್ ಹುದ್ದೆಯನ್ನು ಪಡೆಯಬಹುದು ಎಂದು ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಈ ತಿದ್ದುಪಡಿಯೇ ಅಕ್ರಮವಾಗಿದೆ. ಇಲಾಖೆಯಲ್ಲಿ ಇರುವ ಸಿಬ್ಬಂದಿಗೆ ಬಡ್ತಿಯಲ್ಲಿ ಮೀಸಲಾತಿ ಕೊಡಬೇಕು ಎನ್ನುವ ನೆಪದಲ್ಲಿ ಶೇಕಡಾ 5ರಷ್ಟು ಮೀಸಲಾತಿ ನೀಡಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಮೂಲತಃ ಈ ತಿದ್ದುಪಡಿಯೇ ದೋಷಪೂರಿತವಾಗಿದೆ. ಇಂಥ ಉನ್ನತ ಹುದ್ದೆಗಳಿಗೆ ಇಲಾಖಾವಾರು ಬಡ್ತಿ ನೀಡಬೇಕಾದರೆ ತಾಂತ್ರಿಕ ಶಿಕ್ಷಣದ ಅಗತ್ಯವಿದೆ. ಎಸ್ಎಸ್ಎಲ್‌ಸಿ ಪಾಸ್ ಮಾಡಿಕೊಂಡು ಇಲಾಖೆಯಲ್ಲಿ ಚಾಲಕ, ಪ್ರಥಮ ದರ್ಜೆ ಸಹಾಯಕ(ಎಫ್‌ಡಿಎ) ಆದವರು ಇನ್ಸ್‌ಪೆಕ್ಟರ್‌ ಆಫ್ ಮೋಟಾರ್ ವೆಹಿಕಲ್ ಹುದ್ದೆಗೇರಲು ಹೇಗೆ ಸಾಧ್ಯವಿದೆ ಎಂದು ಶರವಣ ಅವರು ಪ್ರಶ್ನಿಸಿದರು. ಹಾಗಾಗಿ ಸರ್ಕಾರದ ನೇಮಕಾತಿಯೇ ದೋಷಪೂರಿತವಾಗಿ ಆಗಿದೆ. ಇದರಿಂದ ಹಿಂದೆ ದೊಡ್ಡ ಜಾಲವೇ ಕಾರ್ಯ ನಿರ್ವಹಿಸುತ್ತಿದೆ ಎಂದು ಆರೋಪ ಮಾಡಿದ್ದಾರೆ

ಎಸ್‌ಎಸ್‌ಎಲ್‌ಸಿ ಓದಿದ ಮೇಲೆ ನೋಂದಾಯಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಕನಿಷ್ಠ 2 ವರ್ಷ ಓದಿನ ಜೊತೆಗೆ ಕಾರ್ಯ ನಿರ್ವಹಣೆ ಮಾಡಿ ಅನುಭವ ಪಡೆದಿರಬೇಕು. ನಂತರ ಡಿಪ್ಲೊಮಾ ತಾಂತ್ರಿಕ ಶಿಕ್ಷಣಕ್ಕೆ ಅರ್ಹತೆ ಪಡೆಯುತ್ತಾರೆ. ಆ ನಂತರ ಇನ್ಸ್‌ಪೆಕ್ಟರ್‌ ಆಫ್ ಮೋಟಾರ್ ವೆಹಿಕಲ್ ಹುದ್ದೆಗೆ ಅವರು ಆಯ್ಕೆಯಾಗಲು ಅರ್ಹತೆ ಹೊಂದುತ್ತಾರೆ. ರಾತ್ರಿ ಡಿಪ್ಲೊಮಾ‌ ಕಾಲೇಜಿನಲ್ಲಿ ಓದಲು ಕಚೇರಿಯಿಂದ ಕಾಲೇಜ್ 30 ಕಿಮೀ ವ್ಯಾಪ್ತಿಯ ಒಳಗಿರಬೇಕು ಎಂದಿದೆ.  ಆದರೆ, ಬೆಂಗಳೂರು ಮಲ್ಲೇಶ್ವರಂ ಕಾಲೇಜಿನಲ್ಲಿ ತುಮಕೂರು, ಕಲಬುರಗಿ ಭಾಗದವರೂ ಓದಿದ್ದೇವೆ ಎಂದು ಪ್ರಮಾಣಪತ್ರ ನೀಡಿದ್ದಾರೆ. ಸಾಯಂಕಾಲ 5 ಗಂಟೆಯವರೆಗೆ ಕೆಲಸ ಮಾಡಿ,  ನೂರಾರು ಕಿಮೀ ದೂರದ ಕಾಲೇಜ್‌ಗೆ ಹೇಗೆ ಬರಲು ಸಾಧ್ಯ ಎಂದು ಶರವಣ ಅವರು ಪ್ರಶ್ನಿಸಿದರು.

ಎರಡು ವರ್ಷದ ತಾಂತ್ರಿಕ ಶಿಕ್ಷಣ ಪಡೆದರೆ ಮಾತ್ರ ಸಂಜೆ ಕಾಲೇಜ್‌ನಲ್ಲಿ ಡಿಪ್ಲೊಮಾ ಶಿಕ್ಷಣಕ್ಕೆ ಪ್ರವೇಶ ಪಡೆಯಲು ಅರ್ಹತೆ ಇರುತ್ತದೆ. ಆದರೆ, ಈ ಷರತ್ತುಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ. ತಾಂತ್ರಿಕ ಶಿಕ್ಷಣ, ಅನುಭವ ಇಲ್ಲದ ಕ್ಲಾರಿಕಲ್, ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕರು ಕೂಡ ನಕಲಿ ತಾಂತ್ರಿಕ ಶಿಕ್ಷಣದ ಅನುಭವದ ಪ್ರಮಾಣಪತ್ರ ನೀಡಿ, ಇನ್ಸ್ಪೆಕ್ಟರ್ ಆಫ್ ಮೋಟಾರ್ ವೆಹಿಕಲ್ ಆಗಬೇಕು ಅನ್ನುವ ಕಾರಣಕ್ಕೆ ಜೆಪಿ ನಗರದ ಆಕ್ಸ್‌ಫರ್ಡ್‌ ಸಂಜೆ ಪಾಲಿಟೆಕ್ನಿಕ್ ಕಾಲೇಜ್‌ನಲ್ಲಿ ಪ್ರವೇಶ ಪಡೆದಿದ್ದಾರೆ. 42 ಜನ ಅಲ್ಲಿಯದ್ದೇ ಪ್ರಮಾಣಪತ್ರ ನೀಡಿದ್ದಾರೆ. ಇದೊಂದು ಕಾನೂನು ಬಾಹಿರ ಅಪರಾಧವಾಗಿದೆ ಮತ್ತುಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಇಲಾಖೆಗೆ ಮಾಡುವ ವಂಚನೆಯಾಗಿದೆ. ಈ ಬಗ್ಗೆ ತನಿಖೆ ನಡೆಯಬೇಕು ಎಂದು ಶರವಣ ಒತ್ತಾಯಿಸಿದರು.

ಅರೆಕಾಲಿಕ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಾತಿಗೆ 2  ವರ್ಷಗಳ ತಾಂತ್ರಿಕ ಸೇವಾನುಭವದೊಂದಿಗೆ ಸಂಬಂಧಪಟ್ಟ ತಾಂತ್ರಿಕ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರಬೇಕು.  ದೂರಿನಲ್ಲಿ ನಮೂದಿಸಿದ 49 ಅಭ್ಯರ್ಥಿಗಳ ಪ್ರವೇಶದ ಸಂಪೂರ್ಣ ತನಿಖಾ ವರದಿಯನ್ನು ಲಗತ್ತಿಸಿ, 2 ವರ್ಷಗಳ ತಾಂತ್ರಿಕ ಸೇವಾನುಭವದ ನೈಜತೆಯನ್ನು ಪರಿಶೀಲಿಸಿ ಸೂಕ್ತ ತೀರ್ಮಾನ ಕೈಗೊಳ್ಳುವಂತೆ ವರದಿ ನೀಡಿದ್ದಾರೆ. ಆದರೆ, ಸಾರಿಗೆ ಇಲಾಖೆಯಿಂದ ತಾಂತ್ರಿಕ ಸೇವಾನುಭವದ ನೈಜತೆಯನ್ನು ಪರಿಶೀಲಿಸಲು ಅವಕಾಶ ಇಲ್ಲದಿರುವುದರಿಂದ ತಾಂತ್ರಿಕ ಶಿಕ್ಷಣ ಇಲಾಖೆಯಿಂದಲೇ ಪರಿಶೀಲನೆ ನಡೆಸಿ ಕೊಡಬೇಕು ಎಂದು ಸಾರಿಗೆ ಇಲಾಖೆ ಆಯುಕ್ತರು ಮರು ಪತ್ರ ಬರೆದಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 04T170315.939

ಬಸ್‌‌ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
August 4, 2026 - 5:04 pm
0

ಸುಬ್ಬಾರೆಡ್ಡಿಗೆ ಕೈತಪ್ಪಿದ ಸಚಿವ ಸ್ಥಾನ ಬಾಗೇಪಲ್ಲಿ ನಾಳೆ ಸಂಪೂರ್ಣ ಬಂದ್

ಸುಬ್ಬಾರೆಡ್ಡಿಗೆ ಕೈತಪ್ಪಿದ ಸಚಿವ ಸ್ಥಾನ: ಬಾಗೇಪಲ್ಲಿ ನಾಳೆ ಸಂಪೂರ್ಣ ಬಂದ್‌

by ಶಾಲಿನಿ ಕೆ. ಡಿ
August 4, 2026 - 4:38 pm
0

Untitled design 2026 08 04T160639.933

ಭಾರತೀಯ ಸಿನಿಮಾರಂಗದ ಇತಿಹಾಸದಲ್ಲಿಯೇ ದಾಖಲೆ ಬರೆದ ರಾಮಾಯಣ

by ಶಾಲಿನಿ ಕೆ. ಡಿ
August 4, 2026 - 4:08 pm
0

Untitled design 2026 08 04T154726.943

ಉದಯನಿಧಿ ಸ್ಟಾಲಿನ್‌ರನ್ನು ಇಂದೇ ಬಿಡುಗಡೆ ಮಾಡಿ: ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ

by ಶಾಲಿನಿ ಕೆ. ಡಿ
August 4, 2026 - 3:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 04T170315.939
    ಬಸ್‌‌ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್: ವಿಡಿಯೋ ವೈರಲ್
    August 4, 2026 | 0
  • ಸುಬ್ಬಾರೆಡ್ಡಿಗೆ ಕೈತಪ್ಪಿದ ಸಚಿವ ಸ್ಥಾನ ಬಾಗೇಪಲ್ಲಿ ನಾಳೆ ಸಂಪೂರ್ಣ ಬಂದ್
    ಸುಬ್ಬಾರೆಡ್ಡಿಗೆ ಕೈತಪ್ಪಿದ ಸಚಿವ ಸ್ಥಾನ: ಬಾಗೇಪಲ್ಲಿ ನಾಳೆ ಸಂಪೂರ್ಣ ಬಂದ್‌
    August 4, 2026 | 0
  • Untitled design 2026 08 04T154726.943
    ಉದಯನಿಧಿ ಸ್ಟಾಲಿನ್‌ರನ್ನು ಇಂದೇ ಬಿಡುಗಡೆ ಮಾಡಿ: ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ
    August 4, 2026 | 0
  • 4
    ಪೀಣ್ಯ ಫ್ಲೈಓವರ್‌ನಲ್ಲಿ ಆಗಸ್ಟ್ 12ರವರೆಗೆ ರಾತ್ರಿ ವಾಹನ ಸಂಚಾರ ನಿರ್ಬಂಧ
    August 4, 2026 | 0
  • ೪
    ರಾಜೀನಾಮೆ ಕೊಟ್ಟರೆ ತಕ್ಷಣ ಅಂಗೀಕಾರ: ಅಸಮಾಧಾನಿತ ಶಾಸಕರಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ
    August 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version