ಕಾಲ ಬದಲಾದಂತೆ ಮನುಷ್ಯನ ಮನಸ್ಥಿತಿಯಲ್ಲೂ ಬದಲಾವಣೆಗಳುಂಟಾಗಿ ಸಮಾಜದಲ್ಲಿ ಮೌಲ್ಯಗಳೂ ಕ್ಷೀಣಿಸುತ್ತಿದೆ. ಇಂತಹ ಕಾಲಘಟ್ಟದಲ್ಲಿ ಮರೆಯಾಗುತ್ತಿರುವ ಬದ್ಧತೆಯನ್ನು ನೆನಪಿಸಲು ನಟ, ನಿರ್ದೇಶಕ ಯತಿರಾಜ್ ಕಿರುಚಿತ್ರವೊಂದನ್ನು ನಿರ್ಮಿಸಿ, ನಿರ್ದೇಶನ ಮಾಡಿದ್ದಾರೆ.
‘ಇದ್ರೆ ನೆಟ್ಟಗಿರ್ಬೇಕು’ ಎಂಬ ಶೀರ್ಷಿಕೆಯಡಿಯಲ್ಲಿ yethics ಯೂ ಟ್ಯೂಬ್ ಚಾನಲ್ನಲ್ಲಿ ಬಿಡುಗಡೆಯಾಗಿರುವ ಕಿರುಚಿತ್ರ ಜನ ಮೆಚ್ಚುಗೆ ಡೆಯುವಲ್ಲಿ ಯಶಸ್ವಿಯಾಗಿದೆ. ತಣ್ಣಗೆ ಶುರುವಾಗುವ ಕಥೆ ಅನಿರೀಕ್ಷಿತವಾದ ತಿರುವುಗಳು ಪಡೆದು, ಅಂತಿಮ ಹಂತ ತಲುಪುವ ವೇಳೆಗೆ ದೊಡ್ಡದ್ದೊಂದು ಸಂದೇಶ ಸಾರಿ ಹೇಳುವಲ್ಲಿ ಸಫಲವಾಗಿದೆ.
ಯತಿರಾಜ್ ನಿರ್ಮಿಸಿ, ನಿರ್ದೇಶನ ಮಾಡಿರುವ ಜೊತೆಗೆ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ರಂಜಿತ, ತನಿಷ, ಮಹೇಶ್, ಅನು, ದಿವ್ಯ, ಗುರು ಮತ್ತು ಅಭಿಷೇಕ್ ತಮ್ಮ ಪಾತ್ರಗಳಿಗೆ ನ್ಯಾಯ ಒದಗಿಸಿದ್ದಾರೆ. ಜೀವಾ ಅವರ ಕ್ಯಾಮೆರಾ ಕೆಲಸ, ವಿಜಯ್ ಹರಿತ್ಸ ಅವರ ಸಂಗೀತ ಮತ್ತು ಜೀವನ್ ಪ್ರಕಾಶ್ ರವರ ಸಂಕಲನ ಉತ್ತಮವಾಗಿದೆ.
ಅಮ್ಮ ಬರೆದ ಕಥೆಗೆ ಮಗನೇ ನಾಯಕ: ಜನಪ್ರಿಯವಾಗುತ್ತಿದೆ “ಪ್ರೇಮಿ”ಸಿನಿಮಾದ ಮೊದಲ ಹಾಡು
ಶ್ರೀ ಗುರು ಕರಿಬಸವೇಶ್ವರ ಪ್ರೊಡಕ್ಷನ್ ಲಾಂಛನದಲ್ಲಿ ಬಿ.ಸಿದ್ದಲಿಂಗಯ್ಯ ಅವರು ನಿರ್ಮಿಸುತ್ತಿರುವ ಹಾಗೂ ಎಸ್ ಪ್ರದೀಪ್ ವರ್ಮ ಅವರು ನಿರ್ದೇಶಿಸುತ್ತಿರುವ ಪ್ರೇಮಿ ಚಿತ್ರಕ್ಕಾಗಿ ನಿಖಿಲ್ ರಾಜ್ ಶೆಟ್ಟಿ ಬರೆದಿರುವ, ಚೇತನ್ ಗಂಧರ್ವ ಹಾಡಿರುವ ಹಾಗೂ ಪ್ರದೀಪ್ ವರ್ಮ ಸಂಗೀತ ನೀಡಿರುವ “ಮನಸ್ಸು ಏನೋ ಕಾಡಿದೆ” ಎಂಬ ಹಾಡು ಇತ್ತೀಚೆಗೆ A2 ಮ್ಯೂಸಿಕ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ಈ ಸುಮಧುರ ಗೀತೆಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಗುರುಗಳಾದ ಚಿಂತಲಪಲ್ಲಿ ಶ್ರೀ ನಿವಾಸರವರು ಹಾಡು ಬಿಡುಗಡೆ ಮಾಡಿ ಯಶಸ್ವಿಯಾಗಲೆಂದು ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
ನಟನೆ ಬಗ್ಗೆ ಆಸಕ್ತಿಯುಳ್ಳ ಅದ್ವಿಕ್ ಈ ಚಿತ್ರದ ಮೂಲಕ ನಾಯಕನಾಗಿ ಚಂದನವನಕ್ಕೆ ಅಡಿ ಇಡುತ್ತಿದ್ದಾರೆ. ಅವರ ತಂದೆ ಸಿದ್ದಲಿಂಗಯ್ಯ ಅವರೆ ಈ ಚಿತ್ರ ನಿರ್ಮಾಣ ಮಾಡುತ್ತಿದ್ದು, ತಾಯಿ ಅಕ್ಕಮಹಾದೇವಿ ಅವರು ಕಥೆ ಬರೆದಿದ್ದಾರೆ. ಮಗನ ಆಸೆಗೆ ಅಪ್ಪ – ಅಮ್ಮ ಬೆನ್ನೆಲುಬಾಗಿ ನಿಂತಿದ್ದಾರೆ. ಅಕ್ಕಮಹಾದೇವಿಯ ಅವರು ಖ್ಯಾತ ಲೇಖಕಿ ಟಿ.ಗಿರಿಜಾ ಅವರ ಸಹೋದರಿ. ನೈಜ ಕಥೆ ಆದರಿಸಿದ ಈ ಚಿತ್ರ ಪ್ರೇಮ ಕಥಾಹಂದರ ಹೊಂದಿದೆ.
ಪ್ರೇಮಕಥೆಯೇ ಪ್ರಧಾನವಾದರೂ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು “ಪ್ರೇಮಿ” ಚಿತ್ರದಲ್ಲಿದೆ. ಜ್ಯೋತಿಷ್ಯದ ಕುರಿತದ ವಿಷಯವೂ ಇದರಲ್ಲಿದೆ. ಐದು ಹಾಡುಗಳ ಪೈಕಿ ಮೊದಲ ಹಾಡು ಇಂದು ಬಿಡುಗಡೆಯಾಗಿದೆ. ನಾನೇ ಸಂಗೀತ ನಿರ್ದೇಶನದ ಜೊತೆಗೆ ನಿರ್ದೇಶನವನ್ನು ಮಾಡಿದ್ದೇನೆ. ಖಳನಾಯಕನಾಗೂ ಅಭಿನಯಿಸಿದ್ದೇನೆ ಎಂದು ಪ್ರದೀಪ್ ವರ್ಮ ಹೇಳಿದರು.
ಬಾಲ್ಯದಿಂದಲೂ ನಟನಾಗಬೇಕೆಂಬ ಕನಸು. ಅದು ಈಗ ಈಡೇರಿದೆ. ಅಪ್ಪ – ಅಮ್ಮ ನನ್ನ ಆಸೆಗೆ ಆಸರೆಯಾದರು. ಪ್ರದೀಪ್ ವರ್ಮ ಅವರು ನನ್ನ ಮೊದಲ ಚಿತ್ರ ನಿರ್ದೇಶನ ಮಾಡಿದ್ದಾರೆ. ಸಂಗೀತ ನಿರ್ದೇಶಕರು ಅವರು ಅಂತ ಮೊದಲ ತಿಳಿದಿತ್ತು. ಪ್ರದೀಪ್ ವರ್ಮ ಅವರ ನಿರ್ದೇಶನದ “ಕುರುಡು ಕಾಂಚಾಣ” ಚಿತ್ರದ ಕಥೆ ಕೇಳಿ ಈ ಚಿತ್ರವನ್ನು ಅವರಿಂದಲೇ ನಿರ್ದೇಶಿಸಬೇಕೆಂದು ತೀರ್ಮಾನ ಮಾಡಲಾಯಿತು. ಚಿತ್ರತಂಡದ ಸಹಕಾರದಿಂದ “ಪ್ರೇಮಿ” ಒಂದೊಳ್ಳೆ ಚಿತ್ರವಾಗಿ ಮೂಡಿಬಂದಿದೆ. ಸದ್ಯದಲ್ಲೇ ಬಾಕಿಯಿರುವ ಹಾಡುಗಳು, ಟೀಸರ್ ಹಾಗೂ ಟ್ರೇಲರ್ ಅನಾವರಣವಾಗಲಿದೆ ಎಂದರು ನಾಯಕ ಅದ್ವಿಕ್.
ನಾನು ಜನಪ್ರಿಯ ಲೇಖಕಿ ಟಿ.ಗಿರಿಜಾ ಅವರ ಸಹೋದರಿ. ವೃತ್ತಿಯಲ್ಲಿ ಶಿಕ್ಷಕಿ. ಹಲವು ಕಥೆಗಳನ್ನು ಬರೆದಿದ್ದೇನೆ. ಪ್ರೇಮಕಥೆಗಳೆ ಹೆಚ್ಚು. ಇದು ನೈಜ ಕಥೆ. ಈ ಕಥೆ ಸಿನಿಮಾ ರೂಪ ಪಡೆದುಕೊಂಡು ನನ್ನ ಮಗನೇ ನಾಯಕನಾಗಿರುವುದು ಖುಷಿಯಾಗಿದೆ ಎಂದು ಅಕ್ಕಮಹಾದೇವಿ ತಿಳಿಸಿದರು.
ನಾನು ಹೋಟೆಲ್ ಉದ್ಯಮಿ. ಸಿನಿಮಾ ರಂಗ ಹೊಸತು. ಮಗನಿಗಾಗಿ ಸಿನಿಮಾ ನಿರ್ಮಾಣ ಮಾಡಿರುವುದಾಗಿ ನಿರ್ಮಾಪಕ ಸಿದ್ದಲಿಂಗಯ್ಯ ಹೇಳಿದರು. ಈ ಚಿತ್ರಕ್ಕೆ ಸಂಭಾಷಣೆ ಬರೆದವರು N M ವಿಮಲ್ ರಾಜ್ ಹಾಗೂ ಸಂಕಲನ ಸಂಜೀವ್ ರೆಡ್ಡಿ ಮತ್ತು ಅಸೋಸಿಯೇಟ್ ಡೈರೆಕ್ಟರ್ ಪೂರ್ಣಚಂದ್ರ ದೇವಾನಂದ್, ನನ್ನ ಪಾತ್ರ ಚೆನ್ನಾಗಿದೆ. ಹಳ್ಳಿ ಹುಡುಗಿಯಾಗಿ ಕಾಣಿಸಿಕೊಂಡಿದ್ದೇನೆ ಎಂದರು ನಾಯಕಿ ಸಾತ್ವಿಕ.
ಎರಡನೇ ನಾಯಕಿಯಾಗಿ ಅಭಿನಯಿಸಿರುವ ಶೋಭಿತ, ಕಲಾವಿದರಾದ, ದ್ವಿತ k ಗೌಡ, “ಪ್ರೇಮ ಲೋಕ” ಸುರೇಶ್ S, ರಾಘವೇಂದ್ರ, ಕಿರಣ್ ರಾಜ್, ಹರ್ಷಿತಾ, ಹರೀಶ್ ಉಕ್ಕಡಗಾತ್ರಿ, ವೀರೇಶ್ ಹಿರೇಮಠ್ , ಮಾಸ್ಟರ್ ಸಂತೃಪ್ತಿ, ಮಾಸ್ಟರ್ ಹರ್ಷಲ್ ಹಾಗೂ ಛಾಯಾಗ್ರಾಹಕ ಗೌತಮ್ ಮಟ್ಟಿ ಮುಂತಾದವರು “ಪ್ರೇಮಿ’ ಚಿತ್ರದ ಕುರಿತು ಮಾತನಾಡಿದರು.





