• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, January 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಆತನದು 5 ಕೊಲೆ, ಆಕೆಯದ್ದು1: ಜೀವಾವಧಿ ಶಿಕ್ಷೆಗೊಳಗಾದ ಇಬ್ಬರು ಅಪರಾಧಿಗಳಿಗೆ ಮದುವೆಯಾಗಲು ಕೋರ್ಟ್ ಪೆರೋಲ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
January 23, 2026 - 8:26 am
in ದೇಶ
0 0
0
BeFunky collage (38)

ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಇಬ್ಬರು ಕೈದಿಗಳ ನಡುವೆ ಜೈಲಿನೊಳಗೇ ಪ್ರೀತಿ ಮೂಡಿ ಮದುವೆಯಾಗುವ ನಿರ್ಧಾರಕ್ಕೆ ರಾಜಸ್ಥಾನ ಹೈಕೋರ್ಟ್ ಸಹಕಾರ ನೀಡಿದೆ. ಭೀಕರ ಕೊಲೆ ಪ್ರಕರಣಗಳಲ್ಲಿ ಶಿಕ್ಷೆಗೊಳಗಾದ 34 ವರ್ಷದ ಪ್ರಿಯಾ ಸೇಠ್ ಮತ್ತು 29 ವರ್ಷದ ಹನುಮಾನ್ ಪ್ರಸಾದ್ ಎಂಬವರು ಜೈಲಿನಲ್ಲೇ ಪರಿಚಯವಾಗಿ ಪ್ರೇಮ ಸಂಬಂಧ ಬೆಳೆಸಿಕೊಂಡಿದ್ದಾರೆ. ಈ ಜೋಡಿಯ ಮದುವೆಗಾಗಿ ಹೈಕೋರ್ಟ್ 15 ದಿನಗಳ ಪೆರೋಲ್ ಮಂಜೂರು ಮಾಡಿದ್ದು, ಈ ನಿರ್ಧಾರ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಪ್ರಿಯಾ ಸೇಠ್ 2018ರಲ್ಲಿ ಜೈಪುರದಲ್ಲಿ ಡೇಟಿಂಗ್ ಆ್ಯಾಪ್ ಮೂಲಕ ಪರಿಚಯವಾದ ದುಷ್ಯಂತ್ ಶರ್ಮಾ (27) ಎಂಬುವವನ್ನು ಬಂಧಿಸಿ ಕೊಲೆ ಮಾಡಿ ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿ ಎಸೆದ ಪ್ರಕರಣದಲ್ಲಿ ದೋಷಿಯಾಗಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾಳೆ. ಆಕೆಯ ಬಾಡಿಗೆ ಫ್ಲಾಟ್‌ನಲ್ಲಿ ದುಷ್ಯಂತ್‌ನ್ನು ಬಂಧಿಸಿ ಕೊಲೆ ಮಾಡಿದ್ದ ಆಕೆಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು.

RelatedPosts

ಗಣರಾಜ್ಯೋತ್ಸವ 2026: ಪಥಸಂಚಲನಕ್ಕೆ ರೆಡಿಯಾಯ್ತು ಕರ್ನಾಟಕದ ಹೆಮ್ಮೆಯ ಸ್ತಬ್ಧಚಿತ್ರ

ರಾಜ್ಯಪಾಲರ ಕಚೇರಿಗೆ ಬಾಂಬ್ ಬೆದರಿಕೆ..!

ಆಂಧ್ರದಲ್ಲೂ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ? ಆಸ್ಟ್ರೇಲಿಯಾ ಸ್ಟೈಲ್ ಕಾಯ್ದೆ ಅಧ್ಯಯನ

ಬ್ಯಾಂಕ್ ವ್ಯವಹಾರ ಇದ್ರೆ ಇಂದೆ ಮುಗಿಸಿ..! ನಾಳೆಯಿಂದ ನಾಲ್ಕು ದಿನ ಬ್ಯಾಂಕ್ ರಜಾ

ADVERTISEMENT
ADVERTISEMENT

ಇನ್ನು ಹನುಮಾನ್ ಪ್ರಸಾದ್ ಇಬ್ಬರಿಗಿಂತಲೂ ಭಯಾನಕ ಅಪರಾಧಿ. 2017ರಲ್ಲಿ ಅಲ್ವಾರ್ ಜಿಲ್ಲೆಯಲ್ಲಿ ವಿವಾಹಿತ ಮಹಿಳೆ ಸಂತೋಷ್ ಶರ್ಮಾ ಜೊತೆ ಅನೈತಿಕ ಸಂಬಂಧ ಬೆಳೆಸಿದ್ದ ಆತ, ಆಕೆಯ ಗಂಡ, ಮೂವರು ಗಂಡು ಮಕ್ಕಳು ಮತ್ತು ಸೋದರಳಿಯನನ್ನು ಸೇರಿ ಒಟ್ಟು ಐವರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ದೋಷಿಯಾಗಿದ್ದಾನೆ. ಈ ಭೀಕರ ಕೃತ್ಯಕ್ಕೆ ಆತನಿಗೂ 2023ರಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.

ಇಬ್ಬರೂ ಸಂಗನೇರ್‌ನ ತೆರೆದ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ವೇಳೆ ಸುಮಾರು ಒಂದು ವರ್ಷದಿಂದ ಪರಸ್ಪರ ಪರಿಚಯವಾಗಿ ಪ್ರೇಮ ಸಂಬಂಧ ಬೆಳೆಸಿಕೊಂಡಿದ್ದರು. ಮದುವೆಯಾಗುವ ಇಚ್ಛೆ ವ್ಯಕ್ತಪಡಿಸಿದ ಇಬ್ಬರೂ ಪೆರೋಲ್ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಜನವರಿ 7ರಂದು ಹೈಕೋರ್ಟ್ ಪೆರೋಲ್ ಸಮಿತಿಗೆ ಏಳು ದಿನಗಳಲ್ಲಿ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಿತ್ತು. ಆ ಆದೇಶದಂತೆ ಸಮಿತಿ ಇಬ್ಬರಿಗೂ 15 ದಿನಗಳ ಪೆರೋಲ್ ಮಂಜೂರು ಮಾಡಿದೆ. ಹನುಮಾನ್ ಪ್ರಸಾದ್‌ನ ಹುಟ್ಟೂರಾದ ಅಲ್ವಾರ್ ಜಿಲ್ಲೆಯ ಬರೋದಮಿಯೊದ ಗ್ರಾಮದಲ್ಲಿ ಇವರ ಮದುವೆ ನಿಗದಿಯಾಗಿದೆ ಎಂದು ತಿಳಿದುಬಂದಿದೆ.

ರಾಜಸ್ಥಾನ ಕೈದಿಗಳ ಮುಕ್ತ ವಾಯು ಶಿಬಿರ ನಿಯಮ 1972ರ ಅಡಿಯಲ್ಲಿ ಆರು ಸದಸ್ಯರ ಸಮಿತಿ ಇಬ್ಬರನ್ನು ತೆರೆದ ಗಾಳಿ ಶಿಬಿರಕ್ಕೆ ವರ್ಗಾಯಿಸುವ ಬಗ್ಗೆ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಿದೆ. ಈ ಶಿಬಿರದಲ್ಲಿ ಕೈದಿಗಳು ಬೆಳಗ್ಗೆ ಕೆಲಸಕ್ಕೆ ಹೋಗಿ ಸಂಜೆ ಮರಳಬಹುದು ಎಂಬ ಸೌಲಭ್ಯವಿದೆ.

ಆದರೆ ಈ ನಿರ್ಧಾರಕ್ಕೆ ಕೊಲೆ ಸಂತ್ರಸ್ತರ ಕುಟುಂಬಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಪ್ರಿಯಾ ಸೇಠ್ ಪ್ರಕರಣದ ಸಂತ್ರಸ್ತ ದುಷ್ಯಂತ್ ಶರ್ಮಾ ಕುಟುಂಬದ ವಕೀಲ ಸಂದೀಪ್ ಲೋಹರಿಯಾ, ಪೆರೋಲ್ ಮಂಜೂರಾತಿಗೆ ಸಂತ್ರಸ್ತರ ಕುಟುಂಬಕ್ಕೆ ಮಾಹಿತಿ ನೀಡದೇ ಇರುವುದನ್ನು ಖಂಡಿಸಿ, ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಘೋಷಿಸಿದ್ದಾರೆ. “ಇಂತಹ ಭೀಕರ ಅಪರಾಧಿಗಳಿಗೆ ಪೆರೋಲ್ ನೀಡುವುದು ಸಮಾಜಕ್ಕೆ ತಪ್ಪು ಸಂದೇಶ ರವಾನಿಸುತ್ತದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೈಲಿನೊಳಗೇ ಪ್ರೀತಿ ಬೆಳೆಸಿ ಮದುವೆಯಾಗುತ್ತಿರುವ ಈ ಜೋಡಿಯ ನಿರ್ಧಾರ ನ್ಯಾಯ ವ್ಯವಸ್ಥೆಯ ಮಾನವೀಯ ಮುಖವನ್ನು ತೋರಿಸುತ್ತದೆಯೇ ಅಥವಾ ಸಂತ್ರಸ್ತರ ಕುಟುಂಬಗಳಿಗೆ ಅನ್ಯಾಯವೇ? ಈ ಪ್ರಶ್ನೆ ಈಗ ಎಲ್ಲೆಡೆ ಚರ್ಚೆಯಾಗುತ್ತಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (56)

‘ಬಿಗ್‌ಬಾಸ್‌ 12’ ಟ್ರೋಫಿ ಗೆದ್ದು ಬಂದ ಗಿಲ್ಲಿಗೆ ಬಂತು ದೊಡ್ಡ ರಾಜಕಾರಣಿಗಳಿಂದ ಮದುವೆ ಆಫರ್!

by ಶ್ರೀದೇವಿ ಬಿ. ವೈ
January 23, 2026 - 2:26 pm
0

BeFunky collage (55)

ಚಿನ್ನ-ಬೆಳ್ಳಿ ದರ ದಿನದಿಂದ ದಿನಕ್ಕೆ ದಾಖಲೆ ಮಟ್ಟದಲ್ಲಿ ಏರಿಕೆ

by ಶ್ರೀದೇವಿ ಬಿ. ವೈ
January 23, 2026 - 2:12 pm
0

Untitled design 2026 01 23T135347.897

ರಾಜ್ಯಪಾಲರು ಓಡಿ ಹೋದ್ರು ಎಂದ ಸಿಎಂ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ ಆರ್‌.ಅಶೋಕ್‌

by ಯಶಸ್ವಿನಿ ಎಂ
January 23, 2026 - 1:55 pm
0

BeFunky collage (53)

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ V/S ಬಿಜೆಪಿ: ರಾಜ್ಯಪಾಲರ ನಡೆ ಬಗ್ಗೆ ಸದಸ್ಯರ ಮಧ್ಯೆ ಟಾಕ್ ವಾರ್

by ಶ್ರೀದೇವಿ ಬಿ. ವೈ
January 23, 2026 - 1:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 23T131251.639
    ಗಣರಾಜ್ಯೋತ್ಸವ 2026: ಪಥಸಂಚಲನಕ್ಕೆ ರೆಡಿಯಾಯ್ತು ಕರ್ನಾಟಕದ ಹೆಮ್ಮೆಯ ಸ್ತಬ್ಧಚಿತ್ರ
    January 23, 2026 | 0
  • Untitled design 2026 01 23T121216.624
    ರಾಜ್ಯಪಾಲರ ಕಚೇರಿಗೆ ಬಾಂಬ್ ಬೆದರಿಕೆ..!
    January 23, 2026 | 0
  • BeFunky collage (47)
    ಆಂಧ್ರದಲ್ಲೂ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ? ಆಸ್ಟ್ರೇಲಿಯಾ ಸ್ಟೈಲ್ ಕಾಯ್ದೆ ಅಧ್ಯಯನ
    January 23, 2026 | 0
  • Untitled design 2026 01 23T113650.222
    ಬ್ಯಾಂಕ್ ವ್ಯವಹಾರ ಇದ್ರೆ ಇಂದೆ ಮುಗಿಸಿ..! ನಾಳೆಯಿಂದ ನಾಲ್ಕು ದಿನ ಬ್ಯಾಂಕ್ ರಜಾ
    January 23, 2026 | 0
  • Untitled design 2026 01 23T110440.655
    ತಂಬಾಕು ಬಳಕೆ ಸಂಪೂರ್ಣವಾಗಿ ನಿಷೇಧಿಸಿದ ಒಡಿಶಾ ಸರ್ಕಾರ
    January 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version