• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರನ್ಯಾ ರಾವ್‌ ಪ್ರಕರಣ; ಸಮಗ್ರ ತನಿಖೆಯಾಗಲಿ: ಬಸವರಾಜ ಬೊಮ್ಮಾಯಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 10, 2025 - 5:52 pm
in Flash News, ಕರ್ನಾಟಕ
0 0
0
Untitled design (12)

ಬೆಂಗಳೂರು: ಚಿತ್ರನಟಿ ರನ್ಯಾ ರಾವ್ ಅಕ್ರಮ ಚಿನ್ನ ಸಾಗಾಣಿಕೆ ಮಾಡಿರುವ ಜಾಲದಲ್ಲಿ ಇರುವವರನ್ನು ಪತ್ತೆ ಹಚ್ಚಲು ಸಮಗ್ರವಾಗಿ, ಆಳವಾದ ತನಿಖೆ ನಡೆಸಬೇಕು ನಮ್ಮ ಅವಧಿಯಲ್ಲಿ ರನ್ಯಾರಾವ್‌ ನಿರ್ದೇಶಕಿಯಾದ ಕಂಪನಿಗೆ ಜಮೀನು ನೀಡಿರುವುದು ಮುಖ್ಯಮಂತ್ರಿಯ ಹಂತದವರೆಗೂ ಬಂದಿರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿರಾ ಕೈಗಾರಿಕಾ ಪ್ರದೇಶದಲ್ಲಿ ಮೆ. ಕ್ಸಿರೋಡಾ ಇಂಡಿಯಾ ಪ್ರೈ. ಲಿ. ಸಂಸ್ಥೆಗೆ ಜಮೀನು ನೀಡಿದ್ದೇವೆ. ಆ ಕಂಪನಿಯಲ್ಲಿ ಈಗ ಆರೋಪಿತೆಯಾಗಿರುವ ರನ್ಯಾರಾವ್ ಅವರು ನಿರ್ದೇಶಕಿಯಾದ್ದಾರೆ. ಯಾರೇ ಉದ್ದಿಮೆ ಮಾಡುತ್ತೇವೆ ಎಂದು ಬಂದರೂ ನಾವು ಅವರಿಗೆ ಅಗತ್ಯ ಕರಾರುಗಳನ್ನು ಹಾಕುತ್ತೇವೆ. ಲ್ಯಾಂಡ್ ಆಡಿಟ್ ಕಮಿಟಿ ಅಂತ ಇರುತ್ತದೆ. ಆ ಸಮಿತಿಯಲ್ಲಿ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳು ಇರುತ್ತಾರೆ. ಅವರು ಸಂಬಂಧಪಟ್ಟ ಕಂಪನಿಗೆ ಎಷ್ಟು ಜಮೀನು ಬೇಕು, ಯಾವ ಭಾಗದಲ್ಲಿ ಜಮೀನು ಬೇಕಿದೆ ಎನ್ನುವುದನ್ನು ಪರಿಶೀಲಿಸಿ ಶಿಫಾರಸ್ಸು ಮಾಡುತ್ತಾರೆ. 500 ಕೋಟಿ ರೂ ಗಳ ವರೆಗಿನ ಯೋಜನೆಗಳಿಗೆ ಸಂಬಂಧಪಟ್ಟ ಮಂತ್ರಿಗಳ ಹಂತದಲ್ಲಿ ತೀರ್ಮಾನ ಆಗುತ್ತದೆ ಮುಖ್ಯಮಂತ್ರಿಯವರೆಗೂ ಬರುವುದಿಲ್ಲ ನನ್ನ ಹಂತದವರೆಗೂ ಅದು ಬಂದಿಲ್ಲ. ಕೈಗಾರಿಕಾ ಸಚಿವರ ನೇತೃತ್ವದಲ್ಲಿ ಸಿಂಗಲ್‌ ವಿಂಡೊ ಪ್ರೊಸಿಡಿಂಗ್ ಮೂಲಕ ಹಂಚಿಕೆ ಮಾಡುತ್ತಾರೆ. ಅವರಿಗೆ ಜಮೀನು ಹಂಚಿಕೆ ಮಾಡಿದ ಮೇಲೆ ಅವರಿಗೆ ಹಣ ಕಟ್ಟುವಂತೆ ನೊಟೀಸ್ ನೀಡಲಾಗಿದೆ. ಅವರು ಹಣ ಕಟ್ಟದಿರುವುದರಿಂದ ಅವರಿಗೆ ಭೂಮಿ ಹಂಚಿಕೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

RelatedPosts

ವಿಯೆಟ್ನಾಂನಲ್ಲಿ ಭಾರತೀಯ ಪ್ರವಾಸಿಗರಿದ್ದ ಬೋಟ್ ಪಲ್ಟಿ: 15 ಜನ ಜಲಸಮಾಧಿ

14ರ ಹರೆಯದಲ್ಲೇ ತಾಯಿಯಾದ ಬಾಲಕಿ

ಶಿಕ್ಷಕಿ ಬೈದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹ*ತ್ಯೆ ಕೇಸ್: ಶಿಕ್ಷಕಿ ಸೇರಿ ಇಬ್ಬರು ವಜಾ

ಪೊಲೀಸ್ ಇಲಾಖೆಗೆ 32 ಫೋರೆನ್ಸಿಕ್ ವ್ಯಾನ್‌, 75 ಬೊಲೆರೋ

ADVERTISEMENT
ADVERTISEMENT

ಉದ್ದಿಮೆ ಸ್ಥಾಪಿಸಲು ಹಲವಾರು ಅರ್ಜಿಗಳು ಬಂದಾಗ ರಾಜ್ಯದ ‘ಅಭಿವೃದ್ಧಿ ದೃಷ್ಟಿಯಿಂದ ಉದ್ಯಮಗಳಿಗೆ ಜಮೀನು ನೀಡುತ್ತೇವೆ. ಈಗಿನ ಸರ್ಕಾರವೂ ಕೂಡ ಲಕ್ಷಾಂತರ ಕೋಟಿ ರೂ. ಜಮೀನು ಹಂಚಿಕೆ ಮಾಡಿರುತ್ತದೆ. ಯಾರೋ ಮುಂದೆ ಅಪರಾಧ ಮಾಡುತ್ತಾರೆ ಎಂದು ಯಾರಿಗೂ ಗೊತ್ತಿರುವುದಿಲ್ಲ. ಅದನ್ನು ಊಹೆ ಮಾಡಲು ಆಗುವುದಿಲ್ಲ. ನಟಿ ದುಬೈನಿಂದ ಅಕ್ರಮವಾಗಿ ಚಿನ್ನ ತಂದಿರುವ ಬಗ್ಗೆ ತನಿಖೆ ನಡೆಯುತ್ತಿದೆ. ‘ಎಲ್ಲ ಆಯಾಮದಿಂದಲೂ ತನಿಖೆ ನಡೆಯಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ಹೇಳಿದರು.

ಮಾಧ್ಯಮಗಳಲ್ಲಿ ಇಬ್ಬರು ಸಚಿವರು ಇದರ ಹಿಂದೆ ಇದ್ದಾರೆ ಎಂದು ತೋರಿಸಲಾಗುತ್ತಿದೆ. ಈ ಬಗ್ಗೆ ತನಿಖೆ ಆಗಬೇಕು. ಇದು ಒಂದು ಬಾರಿ ನಡೆದಿರುವಂತೆ ಕಾಣಿಸುತ್ತಿಲ್ಲ. ಇದಕ್ಕೆ ಬೆಂಬಲವಾಗಿ ಇರುವುವವರ ಬಗ್ಗೆ ಸಮಗ್ರವಾಗಿ, ಆಳವಾಗಿ ತನಿಖೆಯಾಗಲಿ, ಅಧಿಕಾರಿಗಳ ಪಾತ್ರ ಇಲ್ಲದೆ ಇಷ್ಟುದೊಡ್ಡ ಅಕ್ರಮ ನಡೆಯಲು ಸಾಧ್ಯವಿಲ್ಲ. ಇದರ ಹಿಂದಿರುವ ಜಾಲವನ್ನು ಸಂಪೂರ್ಣವಾಗಿ ಭೇಧಿಸಬೇಕು. ಸಿಬಿಐ ತನಿಖೆಯಿಂದ ಯಾರ್ ಪಾತ್ರ ಇದೆ ಅನ್ನುವುದು ಹೊರ ಬರುತ್ತದೆ. ಹೀಗಾಗಿ ಇದರ ಬಗ್ಗೆ ಆಳವಾಗಿ ತನಿಖೆಯಾದರೆ ಎಲ್ಲ ಸತ್ಯವೂ ಹೊರ ಬರಲಿದೆ ಎಂದು ಹೇಳಿದರು.

ತಪ್ಪು ಮುಚ್ಚಿಕೊಳ್ಳಲು ಗ್ರೇಟರ್ ಬೆಂಗಳೂರು

ಬೆಂಗಳೂರು ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ರಸ್ತೆಗಳ ರಿಪೇರಿಯಿಂದ ಹಿಡಿದು ಹೊಸ ರಸ್ತೆ ನಿರ್ಮಾಣ ಮಾಡುವುದರಿಂದ ಹಿಡಿದು, ಚರಂಡಿ ನಿರ್ವಹಣೆ ಮಾಡುವುದನ್ನು ಸರಿಯಾಗಿ ಮಾಡಿಲ್ಲ ಸುಮ್ಮನೆ ಎರಡು ವರ್ಷ ಬ್ರಾಂಡ್ ಬೆಂಗಳೂರು ಅಂತ ಅರ್ಜಿ ತೆಗೆದುಕೊಂಡು ಎಲ್ಲಿ ಹಾಕಿದ್ದಾರೊ ಗೊತ್ತಿಲ್ಲ. ಬಜೆಟ್‌ನಲ್ಲಿಯೂ ಕೂಡ ಕಾರ್ಯಸಾಧುವಾಗುವಂತೆ ಯಾವುದೇ ಯೋಜನೆ ಘೋಷಣೆ ಮಾಡಿಲ್ಲ. ನಮ್ಮ ಕಾಲದಲ್ಲಿ ತೀರ್ಮಾನ ಮಾಡಿರುವ ವಿಶ್ವ ಬ್ಯಾಂಕಿನಿಂದ 1700 ಕೋಟಿ ರೂ ಸಾಲ ನೀಡುವ ಯೋಜನೆ ಈಗ ಅಂತಿಮವಾಗಿದೆ. ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳಲು, ದೇವರು ಬಂದರೂ ಇದನ್ನು ಸರಿ ಮಾಡಲು ಸಾಧ್ಯವಿಲ್ಲ ಎಂಬ ಸರ್ಕಾರದ ಧೋರಣೆಯಿದೆ. ಬೆಂಗಳೂರಿನ ವಿಸ್ತರಣೆ ಎಷ್ಟಿದೆ ಅಷ್ಟೇ ಇದೆ. ಈಗಾಗಲೇ ವಲಯಗಳಿಗೊಬ್ಬರು ಮುಖ್ಯ ಎಂಜನೀಯರ್ ಇದ್ದಾರೆ. ಈಗ ಎಲ್ಲ ವಲಯಗಳಿಗೆ ಆಯುಕ್ತರನ್ನು ಮಾಡಲು ಹೊರಟಿದ್ದಾರೆ. ಅದು ಪರಿಹಾರವಲ್ಲ. ಅದರ ಬದಲು ಯೋಜನಾಬದ್ಧವಾಗಿ ಹಣಕಾಸು ಒದಗಿಸಬೇಕು. ನಮ್ಮ ಕಾಲದಲ್ಲಿ ಎರಡು ಉಪ ನಗರಗಳನ್ನು ಮಾಡಲು ಯೋಚಿಸಿದ್ದೇವು. ಅವುಗಳನ್ನು ಮಾಡಿ ಸಂಪರ್ಕ ಕಲ್ಪಿಸಿ, ಅದರ ಬಗ್ಗೆ ಸರ್ಕಾರ ಚಿಂತನೆ ಮಾಡಬೇಕು ಎಂದು ಸಲಹೆ ನೀಡಿದರು.

ಪರಿಷ್ಕರಣೆಗೆ ಅವಸರ ಬೇಡ

ಇದೇ ವೇಳೆ ರಾಜ್ಯ ಸರ್ಕಾರ ರೇಷನ್ ಕಾರ್ಡ್ ಪರಿಷ್ಕರಣೆ ಮಾಡಲು ಮುಂದಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರೇಷನ್ ಕಾರ್ಡ್ ಪರಿಷ್ಕರಣೆ ಮಾಡುವ ಮೊದಲು ರಾಜ್ಯ ಸರ್ಕಾರ ಅವಸರದ ತೀರ್ಮಾನ ಮಾಡಬಾರದು. ಅರ್ಹ ಫಲಾನುಭವಿಗಳಿಗೆ ಯಾವುದೇ ರೀತಿಯಲ್ಲಿ ಅನ್ಯಾಯವಾಗದಂತೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಎಲ್ಲ ಪಕ್ಷದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಮೊದಲು ಎರಡು ತಾಲೂಕುಗಳಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನ ಮಾಡಿ, ಅಲ್ಲಿ ಬರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡು ನಂತರ ರಾಜ್ಯಾದ್ಯಂತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಟಾ

ವಿಯೆಟ್ನಾಂನಲ್ಲಿ ಭಾರತೀಯ ಪ್ರವಾಸಿಗರಿದ್ದ ಬೋಟ್ ಪಲ್ಟಿ: 15 ಜನ ಜಲಸಮಾಧಿ

by ಶಾಲಿನಿ ಕೆ. ಡಿ
July 11, 2026 - 6:20 pm
0

Untitled design 2026 07 11T174525.443

ತನ್ನ ಮ್ಯಾನೇಜರ್‌ಗೆ ಗೇಟ್‌ಪಾಸ್ ಕೊಟ್ರಾ ಧ್ರುವ ಸರ್ಜಾ..?!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 11, 2026 - 5:45 pm
0

Untitled design 2026 07 11T173757.843

14ರ ಹರೆಯದಲ್ಲೇ ತಾಯಿಯಾದ ಬಾಲಕಿ

by ದಿಶಾ ಕೆ. ಎಸ್.
July 11, 2026 - 5:40 pm
0

Untitled design 2026 07 11T172712.469

ಶಿಕ್ಷಕಿ ಬೈದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹ*ತ್ಯೆ ಕೇಸ್: ಶಿಕ್ಷಕಿ ಸೇರಿ ಇಬ್ಬರು ವಜಾ

by ಶಾಲಿನಿ ಕೆ. ಡಿ
July 11, 2026 - 5:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಾ
    ವಿಯೆಟ್ನಾಂನಲ್ಲಿ ಭಾರತೀಯ ಪ್ರವಾಸಿಗರಿದ್ದ ಬೋಟ್ ಪಲ್ಟಿ: 15 ಜನ ಜಲಸಮಾಧಿ
    July 11, 2026 | 0
  • Untitled design 2026 07 11T172712.469
    ಶಿಕ್ಷಕಿ ಬೈದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹ*ತ್ಯೆ ಕೇಸ್: ಶಿಕ್ಷಕಿ ಸೇರಿ ಇಬ್ಬರು ವಜಾ
    July 11, 2026 | 0
  • ಆಸ್ಟ್ರೇಲಿಯಾದಲ್ಲಿ (10)
    ಪ್ರೇಯಸಿಗೆ ಚಾಕು ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (9)
    ಕಾಡುಗೋಡಿ ಬಾಲಕಿ ವೆನ್ನೆಲಾ ಕೊಲೆ ಪ್ರಕರಣ: ಆರೋಪಿ ಪ್ರಿಯಾಂಕಾಗೆ ಜಾಮೀನು ಮಂಜೂರು
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (7)
    ಧರ್ಮ, ಸಂಸ್ಕೃತಿ ಬಗ್ಗೆ ಡಿಕೆಶಿಗೆ ಅರಿವಿದೆ: ಮಠದ ಅಭಿವೃದ್ಧಿಗೆ ಸಿಎಂ ಬಳಿ ಅನುದಾನ ಕೇಳಿದ ರಂಭಾಪುರಿ ಶ್ರೀ
    July 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version