• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, February 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೇಂದ್ರ ಬಜೆಟ್ 2026: ಎತ್ತಿನಹೊಳೆ ಯೋಜನೆಗೆ ಕೈ ಕೊಟ್ಟ ಕೇಂದ್ರ

ಯಶಸ್ವಿನಿ ಎಂ by ಯಶಸ್ವಿನಿ ಎಂ
February 1, 2026 - 4:39 pm
in Flash News, ಕರ್ನಾಟಕ, ದೇಶ
0 0
0
Untitled design 2026 02 01T163853.041

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ ತಮ್ಮ ಐತಿಹಾಸಿಕ 9ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ದೇಶದ ಆರ್ಥಿಕತೆಯನ್ನು ಬಲಪಡಿಸುವ ಹಲವು ಘೋಷಣೆಗಳು ಈ ಬಜೆಟ್‌ನಲ್ಲಿ ಕಂಡುಬಂದರೂ, ಕರ್ನಾಟಕದ ಪಾಲಿಗೆ ಇದು ಮತ್ತೊಮ್ಮೆ ನಿರಾಸೆಯ ಬಜೆಟ್ ಆಗಿ ಪರಿಣಮಿಸಿದೆ. ವಿಶೇಷವಾಗಿ ದಶಕಗಳ ಕನಸಾದ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಬಜೆಟ್‌ನಲ್ಲಿ ಯಾವುದೇ ಪ್ರಸ್ತಾಪ ಅಥವಾ ಅನುದಾನದ ಘೋಷಣೆ ಇಲ್ಲದಿರುವುದು ರಾಜ್ಯದ ಜನರಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ.

ಪಶ್ಚಿಮ ಘಟ್ಟಗಳ ನೇತ್ರಾವತಿ ನದಿಯ ಉಪನದಿಗಳಾದ ಎತ್ತಿನಹೊಳೆ, ಕಾಡುಮನೆ ಹೊಳೆ, ಕೇರಿಹೊಳೆ ಮತ್ತು ಹೊಂಗಡಹಳ್ಳದಲ್ಲಿ ಮಳೆಗಾಲದಲ್ಲಿ ವ್ಯರ್ಥವಾಗಿ ಹರಿಯುವ ಹೆಚ್ಚುವರಿ ನೀರನ್ನು ಬಳಸಿಕೊಳ್ಳುವುದು ಈ ಯೋಜನೆಯ ಮೂಲ ಉದ್ದೇಶವಾಗಿತ್ತು. ಬಯಲು ಸೀಮೆಯ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ತುಮಕೂರು, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೋಟ್ಯಂತರ ಜನರು ಈ ಬಗ್ಗೆ ಹೆಚ್ಚಿನ ನಿರೀಕ್ಷೆ ಇಟ್ಟಿಕೊಂಡಿದ್ದರು.

RelatedPosts

ರೈತರನ್ನು ಉದ್ಯಮಿಗಳನ್ನಾಗಿ ರೂಪಿಸುವುದು ಸರ್ಕಾರದ ಗುರಿ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ಫೆಬ್ರವರಿ 26ಕ್ಕೆ ಅಲ್ಲ.. ನಾಳೆಯೇ ರಶ್ಮಿಕಾ-ವಿಜಯ್ ಕಲ್ಯಾಣ ?

ಅತ್ತೆ ಕಾಟ ತಾಳಲಾಗದೇ 3 ಮಕ್ಕಳನ್ನ ನೇ*ಣಿಗೆ ಹಾಕಿ, ತಾನು ಡೀಸೆಲ್ ಕುಡಿದ ತಾಯಿ..!

ಜಾಗತಿಕ 3ನೇ ಆರ್ಥಿಕ ಶಕ್ತಿಯಾಗಿ ಬೆಳೆಯಲು ಪೂರಕ ಬಜೆಟ್: ಸ್ವರ್ಣಾ ಗ್ರೂಪ್ ಕಂಪನಿ ಎಂಡಿ ಡಾ.CH VSV ಪ್ರಸಾದ್‌ ಬಣ್ಣನೆ

ADVERTISEMENT
ADVERTISEMENT
ಕರ್ನಾಟಕಕ್ಕೆ 80 ಸಾವಿರ ಕೋಟಿ ರೂ. ನಷ್ಟ: ಕೇಂದ್ರದ ಮುಂದೆ ಹಲವು ಆರ್ಥಿಕ ಬೇಡಿಕೆಗಳನಿಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರದ ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಆಗುತ್ತಿರುವ ಸತತ ಅನ್ಯಾಯವನ್ನು ಸರಿಪಡಿಸಲು ರಾಜ್ಯ ಸರ್ಕಾರ ಈಗ ನ್ಯಾಯಕ್ಕಾಗಿ ಕನ್ನಡಿಗರ ಹೋರಾಟ ಎಂಬ ಅಭಿಯಾನ ಪ್ರಾರಂಭಿಸಿದೆ. 16ನೇ ಹಣಕಾಸು ಆಯೋಗದ ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ನ್ಯಾಯಸಮ್ಮತ ಮತ್ತು ಸಂವಿಧಾನಾತ್ಮಕ ಬೇಡಿಕೆಗಳನ್ನು ಮಂಡಿಸಿದ್ದು, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಪಾಲನ್ನು ಹೆಚ್ಚಿಸಲು ಆಗ್ರಹಿಸಿದ್ದಾರೆ.

ತೆರಿಗೆ ಪಾಲಿನಲ್ಲಿ ಘೋರ ಕುಸಿತ: ಅಂಕಿ-ಅಂಶಗಳ ಸಾಕ್ಷಿ

ಮುಖ್ಯಮಂತ್ರಿಗಳು ತಿಳಿಸಿದಂತೆ, 14ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ಶೇ. 4.71ರಷ್ಟು ತೆರಿಗೆ ಪಾಲು ಸಿಗುತ್ತಿತ್ತು. ಆದರೆ, 15ನೇ ಆಯೋಗದ ಅವಧಿಯಲ್ಲಿ ಇದು ಶೇ. 3.64ಕ್ಕೆ ಕುಸಿದಿತ್ತು. ರಾಜ್ಯಗಳಿಗೆ ಹಂಚುವ ಪ್ರತಿ 100 ರೂಪಾಯಿಯಲ್ಲಿ ಕರ್ನಾಟಕಕ್ಕೆ ಸಿಗುತ್ತಿದ್ದ ಪಾಲು ಕಡಿತವಾಗಿದ್ದರಿಂದ ರಾಜ್ಯಕ್ಕೆ ಸುಮಾರು 80 ಸಾವಿರ ಕೋಟಿ ರೂಪಾಯಿಗಳ ಬೃಹತ್ ನಷ್ಟವಾಗಿದೆ. ಆದಾಯ ದೂರ (Income Distance) ಎಂಬ ದೋಷಪೂರಿತ ಸೂತ್ರದಿಂದಾಗಿ, ಕರ್ನಾಟಕದ ಜನರ ತಲಾ ಆದಾಯ ಹೆಚ್ಚಿದೆ ಎಂಬ ಕಾರಣಕ್ಕೆ ನಮಗೆ ನೀಡುವ ಅನುದಾನವನ್ನು ಕಡಿತಗೊಳಿಸಲಾಗಿದೆ ಎಂದು ಸಿಎಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜನಸಂಖ್ಯಾ ನಿಯಂತ್ರಣಕ್ಕೆ ಸಿಕ್ಕಿತು ಶಿಕ್ಷೆ

1971ರ ಜನಗಣತಿಯ ಬದಲಿಗೆ 2011ರ ಜನಗಣತಿಯನ್ನು ಮಾನದಂಡವಾಗಿ ಬಳಸಿದ್ದರಿಂದ ಜನಸಂಖ್ಯಾ ನಿಯಂತ್ರಣ ಸಾಧಿಸಿದ ದಕ್ಷಿಣದ ರಾಜ್ಯಗಳಿಗೆ ಭಾರಿ ಹೊಡೆತ ಬಿದ್ದಿದೆ. ಜನಸಂಖ್ಯಾ ನಿಯಂತ್ರಣದ ಮೂಲಕ ಅಭಿವೃದ್ಧಿ ಸಾಧಿಸಿದ ನಮಗೆ ಪ್ರೋತ್ಸಾಹ ನೀಡುವ ಬದಲು ಶಿಕ್ಷೆ ನೀಡಲಾಗಿದೆ. ಇದನ್ನು ಸರಿಪಡಿಸಲು 1971ರ ಜನಸಂಖ್ಯೆಯನ್ನೇ ಮಾನದಂಡವಾಗಿಟ್ಟುಕೊಳ್ಳಬೇಕು ಎಂಬುದು ರಾಜ್ಯದ ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿದೆ.

ಪ್ರಾಕೃತಿಕ ವಿಕೋಪ ಮತ್ತು ವಿಶೇಷ ಪ್ಯಾಕೇಜ್‌ಗಳು

ಕಳೆದ ಐದು ವರ್ಷಗಳಲ್ಲಿ ಕರ್ನಾಟಕವು ಅತಿವೃಷ್ಟಿ ಮತ್ತು ಬರದಿಂದಾಗಿ 1.56 ಲಕ್ಷ ಕೋಟಿ ರೂ.ಗಳಷ್ಟು ನಷ್ಟ ಅನುಭವಿಸಿದೆ. ಪ್ರಕೃತಿ ವಿಕೋಪದ ‘ರಿಸ್ಕ್ ಫ್ಯಾಕ್ಟರ್’ ಅಂಕಗಳನ್ನು 5 ರಿಂದ 15ಕ್ಕೆ ಏರಿಸಬೇಕೆಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಜೊತೆಗೆ ಈ ಕೆಳಗಿನ ವಿಶೇಷ ಅನುದಾನಗಳ ಬೇಡಿಕೆಯನ್ನು ಇಟ್ಟಿದ್ದಾರೆ:

  • ಕಲ್ಯಾಣ ಕರ್ನಾಟಕ: ರಾಜ್ಯ ಸರ್ಕಾರ ಮೀಸಲಿಟ್ಟಿರುವ 25,000 ಕೋಟಿ ರೂ.ಗಳಿಗೆ ಸಮಾನವಾದ (Matching Grant) ಮೊತ್ತವನ್ನು ಕೇಂದ್ರ ನೀಡಬೇಕು.
  • ಪಶ್ಚಿಮ ಘಟ್ಟ ಮತ್ತು ಕರಾವಳಿ: ಪರಿಸರ ರಕ್ಷಣೆಗಾಗಿ ಮಲೆನಾಡು ಮತ್ತು ಕರಾವಳಿ ಭಾಗಕ್ಕೆ ವಿಶೇಷ ಪ್ಯಾಕೇಜ್ ನೀಡಬೇಕು.

  • ಬೆಂಗಳೂರು ಮೂಲಸೌಕರ್ಯ: ವಿಶ್ವದರ್ಜೆಯ ಸೌಲಭ್ಯಗಳಿಗಾಗಿ 16ನೇ ಆಯೋಗವು ಕನಿಷ್ಠ 27,793 ಕೋಟಿ ರೂ.ಗಳನ್ನು ಶಿಫಾರಸು ಮಾಡಬೇಕು.

ಸೆಸ್ ಮತ್ತು ಸರ್‌ಚಾರ್ಜ್‌ಗಳಿಗೆ ಮಿತಿ ಹೇರಿಕೆ

ಕೇಂದ್ರ ಸರ್ಕಾರವು ಸೆಸ್ ಮತ್ತು ಸರ್‌ಚಾರ್ಜ್‌ಗಳ ಮೂಲಕ ಸಂಗ್ರಹಿಸುವ ಹಣವನ್ನು ರಾಜ್ಯಗಳಿಗೆ ಹಂಚುತ್ತಿಲ್ಲ. ಇದನ್ನು ಕೇಂದ್ರದ ಆದಾಯದ ಶೇ. 5ಕ್ಕೆ ಸೀಮಿತಗೊಳಿಸಿ, ಉಳಿದ ಮೊತ್ತವನ್ನು ರಾಜ್ಯಗಳಿಗೂ ನೀಡಬೇಕು ಹಾಗೂ ರಾಜ್ಯಗಳ ತೆರಿಗೆ ಪಾಲನ್ನು ಪ್ರಸ್ತುತ ಇರುವ ಶೇ. 41 ರಿಂದ ಶೇ. 50ಕ್ಕೆ ಏರಿಕೆ ಮಾಡಬೇಕು ಎಂಬುದು ಸಿದ್ದರಾಮಯ್ಯ ಅವರ ಖಡಕ್ ಆಗ್ರಹವಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 01T191933.994

ರೈತರನ್ನು ಉದ್ಯಮಿಗಳನ್ನಾಗಿ ರೂಪಿಸುವುದು ಸರ್ಕಾರದ ಗುರಿ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

by ಯಶಸ್ವಿನಿ ಎಂ
February 1, 2026 - 7:33 pm
0

BeFunky collage 2026 02 01T184350.252

ಹಯಗ್ರೀವನ ವೇದಿಕೆಯಲ್ಲಿ ಡಿಬಾಸ್ ಹವಾ..‘D’ ಧನ್ವೀರ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 1, 2026 - 6:47 pm
0

BeFunky collage 2026 02 01T183239.602

ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಪ್ರದರ್ಶನ: ಪೋಷಕತ್ವ ಮತ್ತು ಉಳಿವಿನ ಹೋರಾಟದ ಕಥೆಯಿದು

by ಶ್ರೀದೇವಿ ಬಿ. ವೈ
February 1, 2026 - 6:37 pm
0

Untitled design 2026 02 01T183221.906

ಫೆಬ್ರವರಿ 26ಕ್ಕೆ ಅಲ್ಲ.. ನಾಳೆಯೇ ರಶ್ಮಿಕಾ-ವಿಜಯ್ ಕಲ್ಯಾಣ ?

by ಯಶಸ್ವಿನಿ ಎಂ
February 1, 2026 - 6:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 01T191933.994
    ರೈತರನ್ನು ಉದ್ಯಮಿಗಳನ್ನಾಗಿ ರೂಪಿಸುವುದು ಸರ್ಕಾರದ ಗುರಿ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ
    February 1, 2026 | 0
  • Untitled design 2026 02 01T183221.906
    ಫೆಬ್ರವರಿ 26ಕ್ಕೆ ಅಲ್ಲ.. ನಾಳೆಯೇ ರಶ್ಮಿಕಾ-ವಿಜಯ್ ಕಲ್ಯಾಣ ?
    February 1, 2026 | 0
  • Untitled design 2026 02 01T181724.889
    ಅತ್ತೆ ಕಾಟ ತಾಳಲಾಗದೇ 3 ಮಕ್ಕಳನ್ನ ನೇ*ಣಿಗೆ ಹಾಕಿ, ತಾನು ಡೀಸೆಲ್ ಕುಡಿದ ತಾಯಿ..!
    February 1, 2026 | 0
  • Untitled design 2026 02 01T174011.371
    ಕರ್ನಾಟಕಕ್ಕೆ ಬರೀ ಚೊಂಬು ಕೊಟ್ಟಿದ್ದಾರೆ-ಕೇಂದ್ರ ಬಜೆಟ್‌ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ
    February 1, 2026 | 0
  • Untitled design 2026 02 01T172153.804
    ಬಜೆಟ್‌ನಲ್ಲಿ ರಾಜ್ಯಕ್ಕೆ ಏನು ಇಲ್ಲ: ಕೇಂದ್ರದ ವಿರುದ್ದ ಈಶ್ವರ್‌ ಖಂಡ್ರೆ ಕಿಡಿ
    February 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version