• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಿಯಲ್ ಲೈಫ್ ನಾಗಿಣಿ..ನಾಪತ್ತೆಯಾದ ಯುವತಿಯ ಹಾಸಿಗೆಯಲ್ಲಿ ಹಾವಿನ ಪೊರೆ.!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 10, 2026 - 1:14 pm
in Flash News, ದೇಶ
0 0
0
Untitled design 2026 02 10T131052.783

RelatedPosts

IPL 2026: ಲಖನೌ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಆರ್‌ಸಿಬಿ

ಮಾಧ್ಯಮಗಳ ಮುಂದೆ ‘ದರ್ಶನ’ ಕೊಡ್ತಾರಂತೆ ಡಿಬಾಸ್ ಮ್ಯಾನೇಜರ್ ಮಲ್ಲಿ

8 ಚಿತ್ರಗಳ ನಡುವೆ ಬೆಳ್ಳಿತೆರೆಗೆ ಕೋಟಿಗೊಬ್ಬ ವಿಷ್ಣು ಬಾಸ್

ಯೋಗೇಶ್ ಗೌಡ ಕೊ*ಲೆ ಕೇಸ್‌‌ನಲ್ಲಿ ವಿನಯ್ ಕುಲಕರ್ಣಿ ಅಪರಾಧಿ: ಶಾಸಕ ಸ್ಥಾನಕ್ಕೂ ಕುತ್ತು

ADVERTISEMENT
ADVERTISEMENT

ಲಕ್ನೋ: ರಿಯಲ್ ಲೈಫ್ ನಾಗಿಣಿಯಂತೆ! ಯುವತಿಯೊಬ್ಬಳು ನಾಪತ್ತೆಯಾದ ಬಳಿಕ ಆಕೆಯ ಹಾಸಿಗೆಯಲ್ಲಿ ಹಾವಿನ ಪೊರೆ ಪತ್ತೆಯಾಗಿರುವ ಅಪರೂಪದ ವಿಚಿತ್ರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ನಾಗಿಣಿ ರೂಪ ತಾಳಿದ ಯುವತಿ ಮಾಯವಾಗಿದ್ದಾಳೆ ಎಂಬ ವದಂತಿಗಳು ಹರಡುತ್ತಿದ್ದಂತೆ, ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ ಆಗಿದೆ. ಆದರೆ ಪೊಲೀಸರು ನಡೆಸಿದ ತನಿಖೆಯಲ್ಲಿ ಈ ಭಯಾನಕ ಘಟನೆಯ ಹಿಂದೆ ಇದ್ದದ್ದು ಪೂರ್ತಿ ಫಿಲ್ಮೀ ಸ್ಟೈಲ್ ಪ್ಲಾನ್ ಎಂಬುದು ಬೆಳಕಿಗೆ ಬಂದಿದೆ.

ಈ ಘಟನೆ ಉತ್ತರ ಪ್ರದೇಶದ ಔರೈಯಾ ಜಿಲ್ಲೆಯ ಒಂದು ಗ್ರಾಮದಲ್ಲಿ ನಡೆದಿದೆ. 25 ವರ್ಷದ ಯುವತಿ ರೀನಾ ಮನೆಯಿಂದ ಹಠಾತ್ ನಾಪತ್ತೆಯಾಗಿದ್ದಾಳೆ. ಬೆಳಿಗ್ಗೆ ಆಕೆಯ ಕೊಠಡಿಗೆ ಹೋಗಿದ್ದ ಕುಟುಂಬಸ್ಥರಿಗೆ ಕಣ್ಣೆದುರು ಕಾಣಿಸಿದ ದೃಶ್ಯವೇ ಭಯ ಹುಟ್ಟಿಸುವಂತಿತ್ತು. ರೀನಾಳ ಹಾಸಿಗೆಯ ಮೇಲೆ ಸುಮಾರು ಐದು ಅಡಿ ಉದ್ದದ ಹಾವಿನ ಪೊರೆ ಇಡಲಾಗಿತ್ತು. ಇದನ್ನು ಕಂಡು ಕುಟುಂಬಸ್ಥರು ಬೆಚ್ಚಿಬಿದ್ದಿದ್ದಾರೆ. ಆದರೆ ಯುವತಿ ಹಾವು ಆಗಿ ಬದಲಾಗಿದೆ ಎಂಬ ಊಹಪೋಹಗಳು ಹರಿದಾಡುತ್ತಿದೆ..

ಈ ಸುದ್ದಿ ಕ್ಷಣಾರ್ಧದಲ್ಲಿ ಅಕ್ಕಪಕ್ಕದ ಮನೆಗಳಿಗೆ, ಅಲ್ಲಿಂದ ಇಡೀ ಗ್ರಾಮಕ್ಕೆ ಹರಡಿದೆ. “ಯುವತಿ ನಾಗಿಣಿಯಾಗಿದ್ದಾಳೆ”, “ಇದು ಪವಾಡ”, “ಹಾವಿನ ಶಾಪ” ಎಂಬ ಹಲವು ಇಲ್ಲಸಲ್ಲದ ಕಥೆಗಳು ಹುಟ್ಟಿಕೊಂಡಿವೆ. ಕುತೂಹಲಗೊಂಡ ಜನರು ರೀನಾಳ ಮನೆ ಮುಂದೆ ಜಮಾಯಿಸಿದ್ದು, ವಾತಾವರಣವೇ ಗೊಂದಲಮಯವಾಗಿದೆ. ಕೆಲವರು ಹಾವಿನ ಪೊರೆಯನ್ನು ದೇವರ ಸೂಚನೆ ಎಂದರೆ, ಇನ್ನೂ ಕೆಲವರು ಭಯದಿಂದ ಮನೆಗೆ ಬೀಗ ಹಾಕಿಕೊಂಡಿದ್ದಾರೆ.

ಇದೇ ನಡುವೆ ಯುವತಿ ಕಾಣೆಯಾಗಿರುವ ವಿಚಾರವನ್ನು ಗ್ರಾಮಸ್ಥರೊಬ್ಬರು ಪೊಲೀಸರಿಗೆ ತಿಳಿಸಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ರೀನಾಳ ಮೊಬೈಲ್ ಕರೆ ವಿವರಗಳು, ಸ್ನೇಹಿತರ ಮಾಹಿತಿ ಹಾಗೂ ಕುಟುಂಬ ಹಿನ್ನೆಲೆಯನ್ನು ಪರಿಶೀಲಿಸಿದಾಗ, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.

ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಂತೆ, ರೀನಾಳಿಗೆ ಕುಟುಂಬದವರು ನಿಶ್ಚಯಿಸಿದ್ದ ಮದುವೆ ಇಷ್ಟವಿರಲಿಲ್ಲ. ಈಗಾಗಲೇ ಆಕೆ ಮತ್ತೊಬ್ಬ ಯುವಕನನ್ನು ಪ್ರೀತಿಸುತ್ತಿದ್ದಳು. ಆದರೆ ಕುಟುಂಬದವರು ಬೇರೊಬ್ಬನೊಂದಿಗೆ ಮದುವೆ ಮಾಡಲು ಒತ್ತಡ ಹಾಕುತ್ತಿದ್ದ ಕಾರಣ, ರೀನಾ ಮನೆ ಬಿಟ್ಟು ಓಡಿ ಹೋಗಲು ನಿರ್ಧರಿಸಿದ್ದಾಳೆ.

ತಾನು ಮನೆ ಬಿಟ್ಟು ಹೋದ ಬಳಿಕ ಯಾರೂ ಹಿಂಬಾಲಿಸದಂತೆ ಮಾಡಲು, ಮತ್ತು ಎಲ್ಲರ ಗಮನವನ್ನು ಬೇರೆಡೆ ಸೆಳೆಯಲು ರೀನಾ ಈ ಖತರ್ನಾಕ್ ಪ್ಲಾನ್ ರೂಪಿಸಿದ್ದಾಳೆ. ಹಾವಿನ ಪೊರೆಯನ್ನು ತಂದು ಅದನ್ನು ತನ್ನ ಹಾಸಿಗೆಯ ಮೇಲೆ ಇಟ್ಟು, ಯಾರಿಗೂ ಗೊತ್ತಾಗದಂತೆ ರಾತ್ರಿ ಸಮಯದಲ್ಲಿ ಮನೆ ಬಿಟ್ಟು ಹೊರಟಿದ್ದಾಳೆ. ನಂತರ ತನ್ನ ಪ್ರಿಯಕರನೊಂದಿಗೆ ಪರಾರಿಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಾವಿನ ಪೊರೆ ಕಂಡು ಉಂಟಾದ ಭಯ ಮತ್ತು ಗೊಂದಲದಿಂದ, ರೀನಾ ತಕ್ಷಣ ಓಡಿ ಹೋಗಿದ್ದ ವಿಚಾರ ಯಾರಿಗೂ ಅನುಮಾನ ಬಂದಿರಲಿಲ್ಲ. ಈ ಕಾರಣದಿಂದ ಆಕೆಗೆ ಸಾಕಷ್ಟು ಸಮಯ ಸಿಕ್ಕಿದ್ದು, ಪೊಲೀಸರ ತನಿಖೆ ತಡವಾಗಲು ಕಾರಣವಾಗಿದೆ.

ಪೊಲೀಸರು ರೀನಾ ಹಾಗೂ ಆಕೆಯ ಪ್ರಿಯಕರನಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಈ ಘಟನೆ ಬಗ್ಗೆ ಪೊಲೀಸರು ಮಾತನಾಡುತ್ತಾ, “ಇದು ಪವಾಡವೂ ಅಲ್ಲ, ನಾಗಿಣಿಯ ಕಥೆಯೂ ಅಲ್ಲ. ಇದು ಯುವತಿಯೊಬ್ಬಳು ಮದುವೆಯಿಂದ ತಪ್ಪಿಸಿಕೊಳ್ಳಲು ರೂಪಿಸಿದ ನಾಟಕ” ಎಂದು ಸ್ಪಷ್ಟಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 15T201635.249

IPL 2026: ಲಖನೌ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಆರ್‌ಸಿಬಿ

by ಶಾಲಿನಿ ಕೆ. ಡಿ
April 15, 2026 - 8:17 pm
0

Untitled design 2026 04 15T192133.743

ಮಾಧ್ಯಮಗಳ ಮುಂದೆ ‘ದರ್ಶನ’ ಕೊಡ್ತಾರಂತೆ ಡಿಬಾಸ್ ಮ್ಯಾನೇಜರ್ ಮಲ್ಲಿ

by ಶಾಲಿನಿ ಕೆ. ಡಿ
April 15, 2026 - 7:36 pm
0

Untitled design 2026 04 15T191105.188

8 ಚಿತ್ರಗಳ ನಡುವೆ ಬೆಳ್ಳಿತೆರೆಗೆ ಕೋಟಿಗೊಬ್ಬ ವಿಷ್ಣು ಬಾಸ್

by ಶಾಲಿನಿ ಕೆ. ಡಿ
April 15, 2026 - 7:13 pm
0

Untitled design 2026 04 15T185619.802

ಯೋಗೇಶ್ ಗೌಡ ಕೊ*ಲೆ ಕೇಸ್‌‌ನಲ್ಲಿ ವಿನಯ್ ಕುಲಕರ್ಣಿ ಅಪರಾಧಿ: ಶಾಸಕ ಸ್ಥಾನಕ್ಕೂ ಕುತ್ತು

by ಶಾಲಿನಿ ಕೆ. ಡಿ
April 15, 2026 - 6:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 15T201635.249
    IPL 2026: ಲಖನೌ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಆರ್‌ಸಿಬಿ
    April 15, 2026 | 0
  • Untitled design 2026 04 15T192133.743
    ಮಾಧ್ಯಮಗಳ ಮುಂದೆ ‘ದರ್ಶನ’ ಕೊಡ್ತಾರಂತೆ ಡಿಬಾಸ್ ಮ್ಯಾನೇಜರ್ ಮಲ್ಲಿ
    April 15, 2026 | 0
  • Untitled design 2026 04 15T191105.188
    8 ಚಿತ್ರಗಳ ನಡುವೆ ಬೆಳ್ಳಿತೆರೆಗೆ ಕೋಟಿಗೊಬ್ಬ ವಿಷ್ಣು ಬಾಸ್
    April 15, 2026 | 0
  • Untitled design 2026 04 15T185619.802
    ಯೋಗೇಶ್ ಗೌಡ ಕೊ*ಲೆ ಕೇಸ್‌‌ನಲ್ಲಿ ವಿನಯ್ ಕುಲಕರ್ಣಿ ಅಪರಾಧಿ: ಶಾಸಕ ಸ್ಥಾನಕ್ಕೂ ಕುತ್ತು
    April 15, 2026 | 0
  • Untitled design 2026 04 15T183417.794
    ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ ಪ್ರಕಟ: ಈ ಬಾರಿಯೂ ಹುಡುಗಿಯರೇ ಮೇಲುಗೈ
    April 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version