• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕದ ಮಕ್ಕಳಲ್ಲಿ ಹೆಚ್ಚಾಗ್ತಿದೆ ಡೇಂಜರ್‌ ಕ್ಯಾನ್ಸರ್‌..!

ಗಂಡು ಮಕ್ಕಳನ್ನೇ ಹೆಚ್ಚು ಕಾಡ್ತಿದೆ ಕ್ಯಾನ್ಸರ್‌ ಮಾರಿ..!

ಭವ್ಯ ಶ್ರೀವತ್ಸ by ಭವ್ಯ ಶ್ರೀವತ್ಸ
March 12, 2025 - 5:16 pm
in Flash News, ಕರ್ನಾಟಕ
0 0
0
111 (15)

ಕರ್ನಾಟಕದ ಮಕ್ಕಳಲ್ಲಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ವಿಚಾರ ಪರಿಷತ್‌ ಕಲಾಪದಲ್ಲಿ ಚರ್ಚೆಯಾಗಿದ್ದು ರಾಜ್ಯದ ಪೋಷಕರಿಗೆ ಶಾಕ್‌ ನೀಡಿದೆ. 14 ವರ್ಷದೊಳಗಿನ ಮಕ್ಕಳಲ್ಲಿ ಪ್ರತಿ ವರ್ಷ 1533 ಕ್ಯಾನ್ಸರ್ ಪ್ರಕರಣಗಳು ಕಂಡು ಬರುತ್ತಿದ್ದು ಹೆಚ್ಚಾಗಿ ಗಂಡು ಮಕ್ಕಳೇ ಈ ಕ್ಯಾನ್ಸರ್‌ಗೆ ತುತ್ತಾಗುತ್ತಿದ್ದಾರೆ ಅನ್ನೋದು ಹೆಚ್ಚಿನ ಕಳವಳಕ್ಕೆ ಕಾರಣವಾಗಿದೆ. ಹೆಚ್ಚುತ್ತಿರುವ ಆಧುನಿಕ ಜೀವನಶೈಲಿಯಿಂದ ಮಕ್ಕಳ ಆರೋಗ್ಯ ದಿನೇ ದಿನೇ ಹದಗೆಡುತ್ತಿದ್ದು ಪೋಷಕರು ತ್ವರಿತವಾಗಿ ಮಕ್ಕಳ ಆರೋಗ್ಯದ ಕಡೇ ಗಮನಕೊಡಲೇ ಬೇಕಾಗಿದೆ.

ರಾಜ್ಯದ ಮಕ್ಕಳಲ್ಲಿ ಕ್ಯಾನ್ಸರ್ ರೋಗ ಪತ್ತೆಯಾಗುತ್ತಿರುವ ಆತಂಕಕಾರಿ ಬೆಳವಣಿಗೆ ಬಗ್ಗೆ ವಿಧಾನಪರಿಷತ್‌ನಲ್ಲಿ ಸದಸ್ಯೆ ಉಮಾಶ್ರೀ ಪ್ರಶ್ನೆ ಎತ್ತಿದ್ದಾರೆ. ಅಂಕಿ ಅಂಶಗಳ ಪ್ರಕಾರ ನಮ್ಮ ರಾಜ್ಯವೊಂದರಲ್ಲೇ ಪ್ರತಿ ವರ್ಷ 1533 ಪ್ರಕರಣ ದೃಢಪಡುತ್ತಿದೆ. ಬೆಂಗಳೂರ ಕಿದ್ವಾಯಿ ಆಸ್ಪತ್ರೆ ಒಂದರಲ್ಲೇ 630 ರೋಗಿಗಳು ದಾಖಲಾಗ್ತಿದ್ದಾರೆ. ಇನ್ನೂ ಶಾಕಿಂಗ್‌ ಅಂದ್ರೆ ರಾಜ್ಯದ ಗಂಡುಮಕ್ಕಳಲ್ಲೇ ಹೆಚ್ಚು ಕ್ಯಾನ್ಸರ್ ಪ್ರಕರಣ ಪತ್ತೆಯಾಗುತ್ತಿದೆ.

RelatedPosts

ಬಿಡದಿ ಟೌನ್‌ಶಿಪ್ ವಿರುದ್ಧ ಜೆಡಿಎಸ್ ಸಮರ: 2ನೇ ದಿನಕ್ಕೆ ಪಾದಯಾತ್ರೆ ಅಂತ್ಯ, ಆ.18ಕ್ಕೆ ಬೃಹತ್ ಹೋರಾಟ

ಕರಾವಳಿಯಲ್ಲಿ ಮಳೆ ಅಬ್ಬರ: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಹೊರಟ್ಟಿ ಸ್ಥಾನಕ್ಕೆ ಪುಟ್ಟಣ್ಣ: ಹಂಗಾಮಿ ಸಭಾಪತಿಯಾಗಿ ಸರ್ಕಾರದಿಂದ ನೇಮಕ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆಗೆ ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

ADVERTISEMENT
ADVERTISEMENT

ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವರು ನೀಡಿರುವ ಅಂಕಿ ಅಂಶಗಳ ಪ್ರಕಾರ ಕರ್ನಾಟಕವೊಂದರಲ್ಲೇ ಪ್ರತಿ ವರ್ಷ 1533 ಕ್ಯಾನ್ಸರ್ ಪ್ರಕರಣಗಳು 14 ವರ್ಷದೊಳಗಿನ ಮಕ್ಕಳಲ್ಲಿ ದೃಢಪಡುತ್ತಿದೆ. 876 ಗಂಡು ಮಕ್ಕಳು, 657 ಹೆಣ್ಣು ಮಕ್ಕಳು ಇದರಲ್ಲಿ ಸೇರ್ಪಡೆಯಾಗಿದೆ. ಹೆಚ್ಚಿನ ಮಕ್ಕಳಲ್ಲಿ ಬರುವ ಕ್ಯಾನ್ಸರ್‌ಗೆ ಕಾರಣವೇ ತಿಳಿಯುತ್ತಿಲ್ಲ. ಜೆನೆಟಿಕಲ್‌ ಕಾರಣಗಳು, ಪರಿಸರ ಹಾಗೂ ಮಾಡ್ರನ್‌ ಲೈಫ್‌ ಸ್ಟೈಲ್‌ ಕ್ಯಾನ್ಸರ್‌ಗೆ ಕಾರಣ ಎನ್ನಲಾಗಿದೆ.

ಗಂಡು ಮಕ್ಕಳಲ್ಲಿ ಶೇಕಡ 45ರಷ್ಟು ರಕ್ತದ ಕ್ಯಾನ್ಸರ್, ಶೇಕಡ 14.5ರಷ್ಟು ಲಿಂಪೋಮಾ ಕ್ಯಾನ್ಸರ್, ಶೇಕಡ 12.9ರಷ್ಟು ಮೆದುಳು ಹಾಗೂ ನರಗಳಿಗೆ ಸಂಬಂಧಿಸಿದ ಕ್ಯಾನ್ಸರ್ , ಶೇಕಡ 5.6 ಮೂಳೆಗೆ ಸಂಬಂಧಿಸಿದ ಕ್ಯಾನ್ಸರ್ , ಶೇಕಡ 3.6ರಷ್ಟು ಮೂತ್ರ ಪಿಂಡದ ಕ್ಯಾನ್ಸರ್ ಹಾಗೂ ಕಣ್ಣಿಗೆ ಸಂಬಂಧಪಟ್ಟ ಕ್ಯಾನ್ಸರ್ ಶೇಕಡ 2.6 ರಷ್ಟು ಕಂಡು ಬರುತ್ತಿದೆ.

ಹೆಣ್ಣು ಮಕ್ಕಳಲ್ಲಿ ಶೇಕಡ 44.6ರಷ್ಟು ರಕ್ತಕ್ಕೆ ಸಂಬಂಧಿಸಿದ ಕ್ಯಾನ್ಸರ್, ಶೇಕಡ 12.1ರಷ್ಟು ಮೆದುಳು ಹಾಗೂ ನರಗಳಿಗೆ ಸಂಬಂಧಪಟ್ಟ ಕ್ಯಾನ್ಸರ್, ಶೇಕಡ 5.8ರಷ್ಟು ಲಿಂಪೋಮಾ ಕ್ಯಾನ್ಸರ್ ಹಾಗೂ ಶೇಕಡ 3.4ರಷ್ಟು ಮೃದು ಅಂಗಾಂಶಕ್ಕೆ ಸಂಬಂಧಿಸಿದ ಕ್ಯಾನ್ಸರ್ ಕಂಡು ಬರುತ್ತದೆ.

ಮಕ್ಕಳಲ್ಲಿ ಕಂಡುಬರುವ ಕ್ಯಾನ್ಸರ್‌ ಚಿಕಿತ್ಸೆಗಾಗಿಯೇ ಬೆಂಗಳೂರಿನ ಕಿದ್ವಾಯಿ ಸಂಸ್ಥೆಯಲ್ಲಿ ಪ್ರತ್ಯೇಕ ಮಕ್ಕಳ ಕ್ಯಾನ್ಸರ್ ಚಿಕಿತ್ಸೆ ಮತ್ತು ಆರೈಕೆ ವಿಭಾಗವಿದ್ದು ಆಧುನಿಕ ಚಿಕಿತ್ಸೆಯನ್ನು ಸರ್ಕಾರ ವಿವಿಧ ಯೋಜನೆಗಳ ಅಡಿಯಲ್ಲಿ ನೀಡಲಾಗುತ್ತಿದೆ. ಮುಖ್ಯವಾಗಿ ಕಿಮೋಥೆರಪಿ ಚಿಕಿತ್ಸಾ ವಿಧಾನವನ್ನು ಶೇಕಡ 73 ರಷ್ಟು ಅನುಸರಿಸಲಾಗುತ್ತಿದೆ. ಶೇಕಡ 12 ರಷ್ಟು ರೋಗಿಗಳಿಗೆ ಲೇಜರ್‌ ಚಿಕಿತ್ಸೆ ಒದಗಿಸಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವರು ಹೇಳಿದ್ದಾರೆ.

ಮಕ್ಕಳಲ್ಲಿ ಹಾಗೂ ಪೋಷಕರಲ್ಲಿ ಪ್ರಾರಂಭಿಕ ಹಂತದಲ್ಲೇ ಅರಿವು ಮೂಡಿಸುವ ಕೆಲಸವಾಗಬೇಕು. ಸರ್ಕಾರ ಸೇರಿದಂತೆ ಸಂಘಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳು, ಸಾರ್ವಜನಿಕರು ಕೈಜೋಡಿಸುವ ಮೂಲಕ ಕ್ಯಾನ್ಸರ್‌ ತಡೆಗಟ್ಟಬಹುದು ಹಾಗೂ ಈ ಬಗ್ಗೆ ಜಾಗೃತಿ ಮೂಡಿಸಬಹುದಾಗಿದೆ.

ಮಕ್ಕಳಲ್ಲಿ ವರ್ಷದಿಂದ ವರ್ಷಕ್ಕೆ ವ್ಯಾಪಕವಾಗಿ ಹೆಚ್ಚಾಗುತ್ತಿರುವ ಬೋನ್ ಮ್ಯಾರೊ ಆಸ್ಪಿರೇಟ್ ಅಂಡ್ ಟ್ರಿಪೈನ್ ಬಯಾಪ್ಸಿ (ಬಿಎಂಎಟಿ) ಸಂಸ್ಥೆಗಳನ್ನು ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ಪ್ರಾರಂಭಿಸಲಾಗುವುದು, ರಾಜ್ಯದ ಎಲ್ಲಾ ಹೋಬಳಿಗಳಲ್ಲೂ ಈ ಕೇಂದ್ರಗಳನ್ನು ಸ್ಥಾಪಿಸಬೇಕೆಂಬ ಉದ್ದೇಶವಿದೆ. ಪ್ರಾರಂಭಿಕ ಹಂತದಲ್ಲಿ ಹುಬ್ಬಳ್ಳಿ ಮತ್ತು ಮೈಸೂರಿನಲ್ಲಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು. ಈಗಾಗಲೇ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ತಪಾಸಣಾ ಘಟಕ ಕಾರ್ಯ ನಿರ್ವಹಿಸುತ್ತಿದೆ. ಇದೇ ರೀತಿ ಕಲಬುರಗಿಯಲ್ಲೂ ಕೇಂದ್ರವನ್ನು ಪ್ರಾರಂಭ ಮಾಡಿದ್ದೇವೆ. ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯಲ್ಲೂ ಇದನ್ನು ತೆರೆಯಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಒಟ್ಟಿನಲ್ಲಿ ಆಧುನಿಕ ಜೀವನಶೈಲಿ ಹಾಗೂ ಒತ್ತಡದಿಂದ ಮಕ್ಕಳಲ್ಲಿ ಕ್ಯಾನ್ಸರ್‌ ಪ್ರಮಾಣ ಹೆಚ್ಚಾಗುತ್ತಿರೋ ಬಗ್ಗೆ ಪೋಷಕರೇ ಹೆಚ್ಚಿನ ಗಮನ ವಹಿಸಬೇಕಾಗಿದೆ. ಮಕ್ಕಳು ತಿನ್ನುವ ಆಹಾರದಿಂದ ಹಿಡಿದು ಅವರ ಆಟ-ಪಾಠ-ಪಠ್ಯೇತರ ಚಟುವಟಿಕೆಗಳ ಬಗ್ಗೆಯೂ ತಂದೆ-ತಾಯಂದಿರು ಹೆಚ್ಚಿನ ನಿಗಾ ವಹಿಸಬೇಕಾಗಿದೆ. ಇಂದಿನ ಪೋಷಕರು ಜಾಗರೂಕರಾಗಿ ಆರೋಗ್ಯವಂತ ಜೀವನಶೈಲಿಯನ್ನು ಮಕ್ಕಳಲ್ಲಿ ಅಳವಡಿಸಿದರೆ ನಮ್ಮ ಮುಂದಿನ ಪೀಳಿಗೆಯನ್ನು ಕ್ಯಾನ್ಸರ್‌ ಮುಕ್ತ ಮಾಡಬಹುದಾಗಿದೆ.

ShareSendShareTweetShare
ಭವ್ಯ ಶ್ರೀವತ್ಸ

ಭವ್ಯ ಶ್ರೀವತ್ಸ

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಕರೆಂಟ್ ಅಫೇರ್ಸ್ ವಿಭಾಗದಲ್ಲಿ ಸೀನಿಯರ್ ಪ್ರೋಗ್ರಾಂ ಪ್ರೊಡ್ಯೂಸರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಹಲವು ಹುದ್ದೆಗಳಲ್ಲಿ 12 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ಆಧ್ಯಾತ್ಮ, ರಾಜಕೀಯ, ಸಾಹಿತ್ಯ ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಆಧ್ಯಾತ್ಮ, ಜ್ಯೋತಿಷ್ಯ, ಹಸ್ತ ಸಾಮುದ್ರಿಕೆ ಬರಹ, ಸ್ತ್ರೀ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕಾಡು ಸುತ್ತಾಟ, ಪ್ರವಾಸ, ಕತೆ - ಕಾದಂಬರಿ ಓದುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 08 11T081029.919

ಬಿಡದಿ ಟೌನ್‌ಶಿಪ್ ವಿರುದ್ಧ ಜೆಡಿಎಸ್ ಸಮರ: 2ನೇ ದಿನಕ್ಕೆ ಪಾದಯಾತ್ರೆ ಅಂತ್ಯ, ಆ.18ಕ್ಕೆ ಬೃಹತ್ ಹೋರಾಟ

by ಶಾಲಿನಿ ಕೆ. ಡಿ
August 11, 2026 - 8:11 am
0

Untitled design 2026 08 11T075056.889

ಸೌರವ್ ಗಂಗೂಲಿ ಪತ್ನಿ ಡೋನಾಗೆ ಕೊಲೆ ಬೆದರಿಕೆ: ಕೋಲ್ಕತ್ತಾ ಪೊಲೀಸರಿಂದ ತನಿಖೆ ಶುರು

by ಶಾಲಿನಿ ಕೆ. ಡಿ
August 11, 2026 - 7:51 am
0

ಇಂದು ಕಾಲವೇ ಉತ್ತರ ನೀಡಲಿದೆ, (2)

ಕರಾವಳಿಯಲ್ಲಿ ಮಳೆ ಅಬ್ಬರ: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
August 11, 2026 - 7:31 am
0

ಇಂದು ಕಾಲವೇ ಉತ್ತರ ನೀಡಲಿದೆ, (1)

ನೆಲ್ಲಿಕಾಯಿ ತಿನ್ನುವುದರಿಂದ ಏನೆಲ್ಲಾ ಪ್ರಯೋಜನ? ಇಲ್ಲಿವೆ ಆರೋಗ್ಯ ಲಾಭಗಳು

by ಶಾಲಿನಿ ಕೆ. ಡಿ
August 11, 2026 - 7:10 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 11T081029.919
    ಬಿಡದಿ ಟೌನ್‌ಶಿಪ್ ವಿರುದ್ಧ ಜೆಡಿಎಸ್ ಸಮರ: 2ನೇ ದಿನಕ್ಕೆ ಪಾದಯಾತ್ರೆ ಅಂತ್ಯ, ಆ.18ಕ್ಕೆ ಬೃಹತ್ ಹೋರಾಟ
    August 11, 2026 | 0
  • ಇಂದು ಕಾಲವೇ ಉತ್ತರ ನೀಡಲಿದೆ, (2)
    ಕರಾವಳಿಯಲ್ಲಿ ಮಳೆ ಅಬ್ಬರ: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
    August 11, 2026 | 0
  • ದೇ (13)
    ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!
    August 10, 2026 | 0
  • ದೇ (9)
    ಜಾರ್ಖಂಡ್‌‌ನಲ್ಲಿ ವಿದ್ಯಾರ್ಥಿಗಳಿಂದ ಉಗ್ರ ಹೋರಾಟ: ಪೇಪರ್ ಲೀಕ್ ವಿರುದ್ಧ ‘ಅಸೆಂಬ್ಲಿ ಚಲೋ’
    August 10, 2026 | 0
  • ದೇ (8)
    ಅತಿಹೆಚ್ಚು ಟ್ರಾಫಿಕ್‌ನಲ್ಲಿ ಬೆಂಗಳೂರು ದೇಶದಲ್ಲೇ ನಂ.1!
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version