• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 9, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗ್ರೇಟರ್ ಬೆಂಗಳೂರು ವಿಧೇಯಕ 2024’ಕ್ಕೆ ಪರಿಷತ್‌ನಲ್ಲಿ ಗ್ರೀನ್‌ ಸಿಗ್ನಲ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 12, 2025 - 9:12 pm
in Flash News, ಕರ್ನಾಟಕ
0 0
0
111 (28)

ಬೆಂಗಳೂರು: ಆಡಳಿತ ವೀಕೆಂದ್ರಿಕರಣ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಂಖ್ಯೆಯನ್ನು ಹೆಚ್ಚು ಮಾಡುವ ಉದ್ದೇಶದ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ಕ್ಕೆ ವಿಧಾನ ಪರಿಷತ್ತಿನಲ್ಲಿ ಬುಧವಾರ ಅಂಗೀಕಾರ ದೊರೆಯಿತು.

ವಿಧಾನಸಭೆಯಲ್ಲಿ ಅಂಗೀಕೃತವಾದ ರೂಪದಲ್ಲಿರುವ ʼಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ʼ ಅನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನ ಪರಿಷತ್ತಿನಲ್ಲಿ ಮಂಡಿಸಿ, ವಿಧೇಯಕದ ಉದ್ದೇಶವನ್ನು ವಿವರಿಸಿದರು.

RelatedPosts

ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಕಿಡಿ

ಲಕ್ಷ್ಮಣ ಸವದಿ ಕಾರಿಗೆ ಗೂಡ್ಸ್ ವಾಹನ ಡಿಕ್ಕಿ: ಶಾಸಕರ ಕಾರು ಜಖಂ

ಛತ್ತೀಸ್‌ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ; ಹಿರಿಯ ಪೊಲೀಸ್ ಅಧಿಕಾರಿ ಸಾವು

ವಿಜಯ್ ಮಲ್ಯರ ಈಗಿನ ಒಟ್ಟು ಆಸ್ತಿ ಎಷ್ಟು? ₹9,000 ಕೋಟಿ ಸಾಲದ ಬಗ್ಗೆ ಮಲ್ಯ ಹೇಳಿದ್ದೇನು?

ADVERTISEMENT
ADVERTISEMENT

ನಂತರ ಆಡಳಿತ ಮತ್ತು ವಿರೋಧ ಪಕ್ಷಗಳ ನಾಯಕರು ವಿಧೇಯಕ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯ, ಆಕ್ಷೇಪಗಳನ್ನು ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ವಿರೋಧ ಪಕ್ಷಗಳ ಸದಸ್ಯರು ಅನೇಕ ಉತ್ತಮ ಸಲಹೆಗಳನ್ನು ನೀಡಿದ್ದಾರೆ. ಅಂದು ಕೆಂಪೇಗೌಡರು ಬೆಂಗಳೂರಿಗೆ ಹೇಗೆ ಅಡಿಪಾಯ ಹಾಕಿದರೋ ಅದೇ ರೀತಿ ನಾವು ಕೂಡ ಕಾಲಮಾನಕ್ಕೆ ತಕ್ಕಂತೆ ಸುಭದ್ರ ಅಡಿಪಾಯ ಹಾಕಲು ಮುಂದಾಗಿದ್ದೇವೆ. ಕಲ್ಲು ಪ್ರಕೃತಿ, ಕಡೆದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ಈ ದೃಷ್ಟಿಯಿಂದ ನಿಮ್ಮೆಲ್ಲರ ಸಲಹೆ ಪಡೆದು ಈ ವಿಧೇಯಕವನ್ನು ಉತ್ತಮ ಮೂರ್ತಿ ಮಾಡಲು ಮುಂದಾಗಿದ್ದೇವೆ” ಎಂದು ತಿಳಿಸಿದರು.

“ಬೆಂಗಳೂರನ್ನು ನಾವು ಛಿದ್ರಗೊಳಿಸುತ್ತಿಲ್ಲ, ಗಟ್ಟಿಗೊಳಿಸಲು ಮುಂದಾಗಿದ್ದೇವೆ. ಉತ್ತರಾಖಂಡ, ಜಾರ್ಖಂಡ್, ತೆಲಂಗಾಣಾದಲ್ಲಿ ಇಂತಹ ಪ್ರಯತ್ನ ಮಾಡಿದ್ದಾರೆ. ಮೈಸೂರು ಜಿಲ್ಲೆ ನಂತರ ಚಾಮರಾಜನಗರವಾಗಿ ವಿಭಜನೆಯಾಯಿತು. ಬೆಂಗಳೂರು ಜಿಲ್ಲೆ ನಗರ, ಗ್ರಾಮಾಂತರ ಹಾಗೂ ರಾಮನಗರವಾಗಿ ಮೂರು ಜಿಲ್ಲೆಯಾದವು. ಗದಗ ಜಿಲ್ಲೆ ಹಾವೇರಿಯಾಗಿ ವಿಭಜನೆಯಾಯಿತು. ಇದೆಲ್ಲವು ಆಗಿದ್ದು ಜನಸಂಖ್ಯೆ ಹೆಚ್ಚಳಕ್ಕೆ ಅನುಗುಣವಾಗಿ ಹಾಗೂ ಆಡಳಿತಾತ್ಮಕ ಉದ್ದೇಶದಿಂದ. ಹೀಗಾಗಿ ಇಲ್ಲಿ ಯಾರೂ ಆತಂಕಪಡುವ ಅಗತ್ಯವಿಲ್ಲ. ಅಧಿಕಾರ ವಿಕೇಂದ್ರೀಕರಣ, ಆರ್ಥಿಕ ಸ್ವಾಯತ್ತತೆ, ತೆರಿಗೆ ಸಂಗ್ರಹ ಉದ್ದೇಶದಿಂದ ಈ ವಿಧೇಯಕ ಮಾಡಲು ಹೊರಟಿದ್ದೇವೆ. ಜಿಬಿಎ ಇದ್ದರೆ ಒಂದು ಪಾಲಿಕೆಯಲ್ಲಿ ತೆರಿಗೆ ಪ್ರಮಾಣ ಹೆಚ್ಚಳ, ಮತ್ತೊಂದು ಪಾಲಿಕೆಯಲ್ಲಿ ತೆರಿಗೆ ಕಡಿಮೆ ಮಾಡಲು ಸಾಧ್ಯವಾಗುವುದಿಲ್ಲ” ಎಂದು ತಿಳಿಸಿದರು.

“ವಿಶ್ವದ ನಾಯಕರು ಮೊದಲಿಗೆ ಬೆಂಗಳೂರಿಗೆ ಬಂದು ನಂತರ ದೇಶದ ಇತರ ನಗರಗಳಿಗೆ ಹೋಗುವ ಕಾಲ ಬಂದಿದೆ ಎಂದು ವಾಜಪೇಯಿ ಅವರು ತಿಳಿಸಿದ್ದರು. ಈ ಸಾಧನೆ ಕೇವಲ ಎಸ್.ಎಂ ಕೃಷ್ಣ ಅವರ ಸರ್ಕಾರದಿಂದ ಮಾತ್ರ ಆಗಿದೆ ಎಂದು ನಾನು ಹೇಳುವುದಿಲ್ಲ. ಮಹಾರಾಜರ ಕಾಲದಿಂದ ಬಂದ ಪರಂಪರೆ, ಸಂಸ್ಕೃತಿ, ಹವಾಮಾನ, ಶಿಕ್ಷಣ, ಪ್ರಕೃತಿ ಕಾರಣಗಳಿಂದಾಗಿ ಬೆಂಗಳೂರು ಅತಿ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ಬೆಂಗಳೂರು ಅನೇಕ ಕ್ಷೇತ್ರಗಳಲ್ಲಿ ತನ್ನದೆ ಆದ ಹೆಸರು ಗಳಿಸಿದೆ. ಐಟಿ ಸಿಟಿ, ಗಾರ್ಡನ್ ಸಿಟಿ, ನಿವೃತ್ತರ ಸ್ವರ್ಗ ಎಂದು ಹೆಸರು ಪಡೆದಿದೆ. ಇಲ್ಲಿ ಓದಿರುವ ಅನೇಕರು ವಿಶ್ವದ ಅನೇಕ ಸಂಸ್ಥೆಗಳಲ್ಲಿ ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಇಲ್ಲಿ ಪ್ರತಿಭಾವಂತ ಮಾನವ ಸಂಪನ್ಮೂಲ ಹೊಂದಿದೆ. ಹೀಗಾಗಿ ಈ ನಗರಕ್ಕೆ ಹೊಸ ರೂಪ ನೀಡುವ ಉದ್ದೇಶದಿಂದ ಸುದೀರ್ಘ ಚರ್ಚೆ ಮಾಡಿ ನಾವು ಈ ಮಸೂದೆ ರೂಪಿಸಿದ್ದೇವೆ” ಎಂದು ತಿಳಿಸಿದ್ದಾರೆ.

“ವಿರೋಧ ಪಕ್ಷದ ನಾಯಕರಾದ ನಾರಾಯಣ ಸ್ವಾಮಿ ಅವರು ಪ್ಲಾನಿಂಗ್ ವಿಚಾರವನ್ನು ಪ್ರಸ್ತಾಪಿಸಿದರು. ನಾವು ಈಗ ನಂಬಿಕೆ ನಕ್ಷೆ ಎಂಬ ಯೋಜನೆ ರೂಪಿಸಿದ್ದೇವೆ. 50X80 ನಿವೇಷನದವರೆಗೂ ಕಟ್ಟಡ ಪ್ಲಾನಿಂಗ್ ಅನುಮತಿ ಪಡೆಲು ಯಾರು ಪಾಲಿಕೆ ಕಚೇರಿ ಅಲೆಯುವಂತಿಲ್ಲ. ಅಧಿಕೃತ ಇಂಜಿನಿಯರ್ ಗಳಿಂದಲೇ ಪ್ಲಾನಿಂಗ್ ಅನುಮತಿ ನೀಡುವ ಅವಕಾಶ ಕಲ್ಪಿಸಲಾಗಿದೆ. ನಾವು ಈ ಮಸೂದೆಯಲ್ಲಿ 74ನೇ ತಿದ್ದುಪಡಿಗೆ ಯಾವುದೇ ತೊಂದರೆ ಮಾಡಿಲ್ಲ. ಒಂದು ವೇಳೆ ಹೆಚ್ಚು ಕಮ್ಮಿ ಮಾಡಿದರೆ ಯಾರಾದರೂ ನ್ಯಾಯಾಲಯದಲ್ಲಿ ಅರ್ಜಿಹಾಕಿ ತಕರಾರು ಮಾಡುತ್ತಾರೆ ಎಂಬ ಅರಿವು ನನಗಿದೆ. ಗ್ರೇಟರ್ ಬೆಂಗಳೂರು ಅಥಾರಿಟಿಗೆ ಎಲ್ಲಾ ಭಾಗಗಳಿಂದ ಆದಾಯ ಸಂಗ್ರಹಿಸಿ ನಂತರ ಎಲ್ಲಾ ಪಾಲಿಕೆಗೆಳಿಗೆ ಹಂಚುವ ಆಲೋಚನೆಯನ್ನು ನಾವು ಮಾಡಿದೆವು. ಆದರೆ, 74ನೇ ತಿದ್ದುಪಡಿ ಪ್ರಕಾರ ಒಂದು ಸ್ಥಳೀಯ ಸಂಸ್ಥೆಗಳ ಆದಾಯವನ್ನು ಮತ್ತೊಂದು ಸಂಸ್ಥೆಗೆ ವರ್ಗಾವಹಿಸುವಂತಿಲ್ಲ. ಹೀಗಾಗಿ ಇದು ಅಸಾಧ್ಯ. ಹೀಗಾಗಿ ಕಡಿಮೆ ಆದಾಯವಿರುವ ಪಾಲಿಕೆಗಳಿಗೆ ಸರ್ಕಾರದಿಂದ ನೆರವು ಒದಗಿಸಲು ಈ ಮಸೂದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ” ಎಂದು ವಿವರಿಸಿದರು.

“ಸಿ.ಟಿ ರವಿ ಅವರು ಬಿಡಿಎ, ಬಿಎಂಆರ್ ಡಿಎ ಸೇರಿದಂತೆ ಹಲವು ವಿಚಾರ ಪ್ರಸ್ತಾಪಿಸಿದರು. ನಾವು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಎಂದು ನಿಗದಿಪಡಿಸಿರುವ ವ್ಯಾಪ್ತಿಯಷ್ಟು ಯೋಜನಾ ಪ್ರಾಧಿಕಾರದ ಅಧಿಕಾರವಿದೆ. ಸದಸ್ಯರಾದ ಗೋಪಿನಾಥ್ ಅವರು ಸಲಹೆ ನೀಡಿದಂತೆ ಎಲ್ಲಾ ಪಕ್ಷದ ಶಾಸಕರ ಜತೆ ಚರ್ಚೆ ಮಾಡಿ ರೂಪುರೇಷೆ ತೀರ್ಮಾನ ಮಾಡಬೇಕು ಎಂದಿದ್ದು, ಅದರಂತೆ ಎಲ್ಲರ ಅಭಿಪ್ರಾಯ ಪಡೆದೇ ಇದನ್ನು ರೂಪಿಸುತ್ತೇವೆ. ಈ ಮಸೂದೆಯಲ್ಲಿ ಮುಖ್ಯಮಂತ್ರಿಗಳಿಗೆ ಅಧಿಕಾರ ನೀಡಿ, ಪ್ರತಿ ಮೂರು ತಿಂಗಳಿಗೊಮ್ಮೆ ಅವರು ಸಭೆ ಮಾಡಬೇಕು ಎಂದು ಹೇಳಲಾಗಿದೆ. ಕಾರಣ, ವಿವಿಧ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಮೇಲ್ಸೇತುವೆ, ಟನಲ್ ರಸ್ತೆ ಸೇರಿದಂತೆ ಕೆಲವು ಪ್ರಮುಖ ಯೋಜನೆಗಳ ವಿಚಾರ ಬಂದಾಗ ನಿರ್ದಿಷ್ಟ ಪಾಲಿಕೆಯಿಂದ ಅನುದಾನ ನೀಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಸರ್ಕಾರದ ನೆರವು ಪಡೆಯಲು ಮುಖ್ಯಮಂತ್ರಿಗಳ ಸಹಕಾರ ಬೇಕಾಗುತ್ತದೆ” ಎಂದು ಸ್ಪಷ್ಟನೆ ನೀಡಿದರು.

“ಜಿಬಿಎ ವೇತನವನ್ನು ಸರ್ಕಾರ ನೀಡಲಿದ್ದು, ಸ್ಥಳೀಯ ಪಾಲಿಕೆ ವೇತನವನ್ನು ಆಯಾ ಪಾಲಿಕೆಗಳೇ ನೀಡಲಿವೆ” ಎಂದು ತಿಳಿಸಿದರು.

ನಾನು ಕರೆದಾಗ ಬಂದಿದ್ದರೆ ಮಂತ್ರಿ ಮಾಡುತ್ತಿದ್ದೆ:

“ಈ ವಿಧೇಯಕದಲ್ಲಿ ಉಸ್ತುವಾರಿ ಸಚಿವರು ಅಥವಾ ಬೇರೆ ನಾಮನಿರ್ದೇಶಿತರಿಗೆ ಉಪಾಧ್ಯಕ್ಷ ಸ್ಥಾನ ಎಂದು ಹೇಳಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸುತ್ತಿದ್ದೀರಿ. ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಬೆಂಗಳೂರು ಉಸ್ತುವಾರಿಗೆ ಇಬ್ಬರು ಸಚಿವರನ್ನು ನೇಮಿಸಲಾಗಿತ್ತು. ಬೆಂಗಳೂರು ಉತ್ತರಕ್ಕೆ ಕಟ್ಟಾ ಸುಬ್ರಮಣ್ಯ ನಾಯ್ಡು, ದಕ್ಷಿಣಕ್ಕೆ ಆರ್.ಅಶೋಕ್ ಅವರನ್ನು ನೇಮಿಸಲಾಗಿತ್ತು. ಅಂತಹ ಪರಿಸ್ಥಿತಿ ಬಂದರೆ ಏನು ಮಾಡಬೇಕು? ಇನ್ನು ಕೆಲವೊಮ್ಮೆ ಬಿಜೆಪಿ ಸರ್ಕಾರ ರಚನೆಯಾಗಿ, ಬೆಂಗಳೂರಿನ ಎಲ್ಲಾ ಕ್ಷೇತ್ರಗಳಲ್ಲಿ ಶಾಸಕರು ಆಯ್ಕೆಯಾದರೆ, ಕಾಂಗ್ರೆಸ್ ಶಾಸಕರನ್ನು ಸಚಿವರನ್ನಾಗಿ ಮಾಡುವುದಿಲ್ಲ. ಆಗ ಬಿಜೆಪಿಯಿಂದಲೇ ಇರುವವರನ್ನು ಈ ಜವಾಬ್ದಾರಿ ನೀಡಬಹುದು. ಇಂತಹ ಪರಿಸ್ಥಿತಿಯಲ್ಲಿ ಶರವಣ, ಭೋಜೇಗೌಡರನ್ನು ಉಪಾಧ್ಯಕ್ಷರನ್ನಾಗಿ ಮಾಡಬಹುದು” ಎಂದು ವಿವರಣೆ ನೀಡಿದರು.

ಆಗ ಶರವಣ ಅವರು ಶಿವನ ಬಾಯಿಂದ ಬಂದಿದೆ ಎಂದಮೇಲೆ ನಾನು ಸಚಿವನಾಗಬಹುದು ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು “ರಾಜಕೀಯ ಎಂಬುದು ಸಾಧ್ಯತೆಗಳ ಕಲೆ. ನಾನು ನಿಮ್ಮನ್ನು ನಮ್ಮ ಪಕ್ಷಕ್ಕೆ ಬನ್ನಿ ಎಂದು ಕೇಳುತ್ತಿದ್ದೆ. ನೀವು ಬಂದಿದ್ದರೆ ಮಂತ್ರಿ ಮಾಡುತ್ತಿದ್ದೆ” ಎಂದು ಚಟಾಕಿ ಹಾರಿಸಿದರು.

ಸದಸ್ಯರ ಸಲಹೆಗಳನ್ನು ಪರಿಗಣಿಸಲಾಗುವುದು

“ಸದಸ್ಯರಾದ ಗೋಪಿನಾಥ್ ಹಾಗೂ ನವೀನ್ ಅವರು ಕೊಟ್ಟ ಪ್ರಮುಖ ಸಲಹೆಗಳನ್ನು ಪರಿಗಣಿಸಿದ್ದೇವೆ. ನಾಗರಾಜ್ ಯಾದವ್ ಅವರು ಸಾರ್ವಜನಿಕ ಸಾರಿಗೆ ಬಗ್ಗೆ ಪ್ರಸ್ತಾಪ ಮಾಡಿದ್ದು, ಅದರ ಬಗ್ಗೆಯೂ ಗಮನ ಹರಿಸುತ್ತೇವೆ. ರವಿಕುಮಾರ್ ಅವರು ಕೆಲವು ಆತಂಕ ವ್ಯಕ್ತಪಡಿಸಿದ್ದಾರೆ. ನೀವು ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡ. ನಾವು ಛಿದ್ರ ಮಾಡುವುದಿಲ್ಲ. ಚುನಾಯಿತ ಸಮಿತಿಗೆ ಯಾವ ಅಧಿಕಾರ ನೀಡಬೇಕೋ ನೀಡಲಾಗುವುದು. ಅವರ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಪಂಚಾಯ್ತಿಯಲ್ಲೂ ಮಾಡಲು ಸಾಧ್ಯವಿಲ್ಲ. ಉಮಾಶ್ರೀ ಅವರು ಮೀಸಲಾತಿ ವಿಚಾರ ಪ್ರಸ್ತಾಪ ಮಾಡಿದ್ದು, ಮೀಸಲಾತಿ ನೀಡಿದ್ದೇವೆ. ರಾಜಕೀಯವಾಗಿ ಮೀಸಲಾತಿಗೆ ನಾವು ಬದ್ಧವಾಗಿದ್ದೇವೆ. ಹಿಂದುಳಿದವರಿಗೆ ಮೀಸಲಾತಿ, ಮಹಿಳೆಯರಿಗೆ 50% ಮೀಸಲಾತಿ ನೀಡಲೇಬೇಕು. ಈ ವಿಚಾರವಾಗಿ ಗಮನಹರಿಸುತ್ತೇವೆ” ಎಂದು ಭರವಸೆ ನೀಡಿದರು.

“ಇಡೀ ವಿಶ್ವ ಬೆಂಗಳೂರಿನ ಮೂಲಕ ಭಾರತವನ್ನು ನೋಡುತ್ತಿದೆ. ದೇಶಕ್ಕೆ ಅತಿ ಹೆಚ್ಚು ಆದಾಯ ನೀಡುತ್ತಿರುವ ಎರಡನೇ ನಗರವಾಗಿದೆ. ಇಲ್ಲಿಗೆ ಬಂದವರು ಮತ್ತೆ ತಮ್ಮ ಊರಿಗೆ ವಾಪಸ್ ಹೋಗುತ್ತಿಲ್ಲ. ಇದು ಬೆಂಗಳೂರು ಭವಿಷ್ಯ ಎಲ್ಲರ ಜವಾಬ್ದಾರಿ. ಹೀಗಾಗಿ ಪಕ್ಷಾತೀತವಾಗಿ ಒಮ್ಮತದಿಂದ ಈ ಮಸೂದೆಯನ್ನು ಅಂಗೀಕರಿಸಬೇಕು” ಎಂದು ತಿಳಿಸಿದರು.

ಕೆಂಪೇಗೌಡರ ಗೋಪುರಗಳನ್ನು ಮೀರಿ ಬೆಂಗಳೂರು ಬೆಳೆದಿದೆ

ಇದಕ್ಕೂ ಮುನ್ನ ಮಸೂದೆ ಪ್ರಸ್ತಾವನೆ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಕೆಂಪೇಗೌಡರು ನಾಲ್ಕು ಗೋಪುರಗಳನ್ನು ನಿರ್ಮಿಸಿ ಬೆಂಗಳೂರನ್ನು ಕಟ್ಟಿದರು. 24 ಚದರ ಕಿ.ಮೀ. ವ್ಯಾಪ್ತಿಯಲ್ಲಿ ಬೆಂಗಳೂರು ಹರಡಿಕೊಂಡಿತ್ತು. ಇಂದು 700 ಚದರ ಕಿ.ಮೀ. ವಿಸ್ತೀರ್ಣಕ್ಕೆ ಬೆಳೆದಿದೆ. ನಗರ ಬೆಳೆದಂತೆ ಆಡಳಿತಕ್ಕೆ ಸಮಸ್ಯೆ ಸವಾಲುಗಳು ಹೆಚ್ಚಾಗಿವೆ. ಇದಕ್ಕೆ ಪರಿಹಾರ ಹುಡುಕಬೇಕು, ಭವಿಷ್ಯದ ಬಗ್ಗೆ ಚಿಂತನೆ ಮಾಡಬೇಕು, ಪರಿಣಾಮಕಾರಿಯಾಗಿ ಆಡಳಿತ ನಡೆಯಬೇಕು. ಈ ಕಾರಣಕ್ಕೆ ಈ ವಿಧೇಯಕವನ್ನು ಪರಿಚಯಿಸಲಾಗಿದೆ” ಎಂದು ತಿಳಿಸಿದರು.

“ಸ್ಥಳೀಯ ಸಂಸ್ಥೆಯಿಂದ ಬಂದಂತಹ ಅನೇಕ ಸದಸ್ಯರು ಪರಿಷತ್ತಿನಲ್ಲಿ ಇದ್ದಾರೆ. ವಿಧಾನಸಭೆಯಲ್ಲಿಯೂ ಅನೇಕ ಜನಪ್ರತಿನಿಧಿಗಳು ಸ್ಥಳೀಯ ಸಂಸ್ಥೆಗಳಿಂದ ಬೆಳೆದು ಈ ಹಂತಕ್ಕೆ ಬಂದಿದ್ದಾರೆ. ನೆಹರು, ರಾಜಗೋಪಾಲಚಾರಿ ಅವರು, ಬಿ.ಡಿ.ಜತ್ತಿ ಅವರು ಸ್ಥಳೀಯ ಸಂಸ್ಥೆಗಳಿಂದ ಬೆಳೆದವರು” ಎಂದರು.

ಬಿಜೆಪಿ- ದಳ ಸೇರಿಸಿದ್ದ ಹಳ್ಳಿಗಳಿಗೆ ನಾನು ನೀರು ನೀಡಿದೆ

“1970 ರಲ್ಲಿ ಇಂದಿರಾಗಾಂಧಿ ಅವರು ಸಮೀಕ್ಷೆ ಮಾಡಿಸುತ್ತಾರೆ. ಅದರ ಪ್ರಕಾರ ಶೇ.31 ರಷ್ಟು ಗ್ರಾಮೀಣ ಭಾಗದ ಜನರು ನಗರ ಭಾಗಕ್ಕೆ ವಲಸೆಯಾಗುತ್ತಿರುತ್ತಾರೆ. ಈಗ ಶೇ 39 ರಷ್ಟು ಜನಸಂಖ್ಯೆ ನಗರ ಹಾಗೂ ಅರೆ ನಗರ ಪ್ರದೇಶಗಳಿಗೆ ಬಂದು ನೆಲೆಸಿದೆ. ನಾನು ಎಸ್.ಎಂ.ಕೃಷ್ಣ ಅವರ ಕಾಲದಲ್ಲಿ ನಾನು ನಗರಾಭಿವೃದ್ದಿ ಸಚಿವನಾಗಿದ್ದಾಗ ನಗರದ ಜನಸಂಖ್ಯೆ 70 ಲಕ್ಷವಿತ್ತು. ಇಂದು 1.40 ಲಕ್ಷಕ್ಕೆ ಏರಿದೆ. ಬೊಮ್ಮನಹಳ್ಳಿ, ರಾಜರಾಜೇಶ್ವರಿ, ನಗರ ಸೇರಿದಂತೆ ಬೆಂಗಳೂರಿನ ಅನೇಕ ಭಾಗಗಳು ಸಿಎಂಸಿಗೆ ಸೇರಿದ್ದವು. ದಳ- ಬಿಜೆಪಿಯವರು ಸೇರಿ 110 ಹಳ್ಳಿಗಳನ್ನು ಸೇರಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಾಡಿದರು. ಈ ಭಾಗಗಳಿಗೆ ಇತ್ತೀಚೆಗೆ ನಾನು ಕಾವೇರಿ 5 ನೇ ಹಂತದ ಮೂಲಕ ಕುಡಿಯುವ ನೀರು ಕೊಟ್ಟಿದ್ದೇನೆ” ಎಂದರು.

“ಸ್ಥಳೀಯ ಸಂಸ್ಥೆಗಳ ಬಗ್ಗೆ ಬೆಂಗಳೂರಿನಲ್ಲಿ ಒಮ್ಮೆ ಸಭೆ ನಡೆದಾಗ ನಾನು ರಾಜೀವ್ ಗಾಂಧಿ ಅವರನ್ನು ಪ್ರಶ್ನೆ ಮಾಡಿದೆ. ನಮ್ಮಲ್ಲಿ ಆಗಲೇ ಸ್ಥಳೀಯ ಸಂಸ್ಥೆಗಳು ಇವೆಯಲ್ಲಾ ಎಂದು ಕೇಳಿದೆ. ಅವರು ಹಿಂದುಳಿದವರಿಗೆ, ಮಹಿಳೆಯರಿಗೆ, ಪರಿಶಿಷ್ಟರಿಗೆ ಮೀಸಲಾತಿ ಇರಬೇಕು ಎಂದು ಸೂಚಿಸಿದರು. ಅವರ ಕಾಲದಲ್ಲಿ ತಿದ್ದುಪಡಿಯಾಯಿತು, ನಂತರ ಪಿ.ವಿ.ನರಸಿಂಹರಾವ್ ಅವರ ಕಾಲದಲ್ಲಿ ಜಾರಿಗೆ ಬಂದಿತು” ಎಂದು ಹೇಳಿದರು.

“ಬೆಂಗಳೂರಿನಲ್ಲಿ ಇರುವವರು ಮಾತ್ರ ಬೆಂಗಳೂರಿಗರಲ್ಲ. ಮನುಷ್ಯನಿಗೆ ಹೃದಯದಷ್ಟೇ ಇಡೀ ರಾಜ್ಯಕ್ಕೆ ರಾಜಧಾನಿ ಬೆಂಗಳೂರು ಮುಖ್ಯ. ಈ ಕಾರಣಕ್ಕೆ ನಾವೆಲ್ಲರೂ ಬೆಂಗಳೂರನ್ನು ಕಾಪಾಡಬೇಕು ಎಂದು ರಿಜ್ವಾನ್ ಅರ್ಷದ್ ನೇತೃತ್ವದಲ್ಲಿ ಎಲ್ಲಾ ಪಕ್ಷಗಳ ಸದಸ್ಯರನ್ನು ಒಳಗೊಂಡ ಸದನ ಸಮಿತಿ ರಚನೆ ಮಾಡಲಾಯಿತು. ಸಮಿತಿಯು 15 ಬಾರಿ ಸಭೆ ನಡೆಸಿ ಸಂಬಂಧಪಟ್ಟವರ ಎಲ್ಲರ ಜೊತೆಯೂ ಚರ್ಚೆ ಮಾಡಿದ್ದಾರೆ” ಎಂದು ತಿಳಿಸಿದರು.

“ಈ ವಿಧೇಯಕದ ಅಡಿ ಬೆಂಗಳೂರಿಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳನ್ನು ಇದರ ಕೆಳಗೆ ತರಲಾಗಿದೆ. ಇದಕ್ಕೆ ಮುಖ್ಯಮಂತ್ರಿಗಳು ಅಧ್ಯಕ್ಷರಾಗಿರುತ್ತಾರೆ. ಸ್ಥಳೀಯ ಮಟ್ಟದಲ್ಲಿ ಶಾಸಕರಿಗೆ ನಿಯಂತ್ರಣ ಇರಬೇಕು, ವಾರ್ಡ್ ಸಮಿತಿಗಳಾಗಬೇಕು, ಅಲ್ಲಿ ಜನಪ್ರತಿನಿಧಿಗಳು ಇರಬೇಕು. ಈ ಮಸೂದೆಯಲ್ಲಿ ಎಲ್ಲಾ ಶಾಸಕರು, ಸಂಸದರು ಕೂಡ ಸದಸ್ಯರಾಗಿರುತ್ತಾರೆ. ಜಿಲ್ಲಾ ಉಸ್ತುವಾರಿ ಸಚಿವರು ಇದಕ್ಕೆ ಉಪಾಧ್ಯಕ್ಷರಾಗಿರುತ್ತಾರೆ. ಪಾಲಿಕೆ ರಚನೆಯನ್ನು ನಾವು ಯಾವುದೇ ರೀತಿ ಬದಲಾವಣೆ ಮಾಡುತ್ತಿಲ್ಲ” ಎಂದು ತಿಳಿಸಿದರು.

“ಯಾವುದೇ ಪಾಲಿಕೆಗೆ ಹೆಸರು ಇಡುವಾಗ ಬೆಂಗಳೂರಿನ ಹೆಸರನ್ನು ಬಿಡುವಂತಿಲ್ಲ. ಆರ್ಥಿಕವಾಗಿ ಕಡಿಮೆ ಶಕ್ತಿ ಇರುವ ಪಾಲಿಕೆಗಳಿಗೆ ಸರ್ಕಾರವೇ ಬಲ ನೀಡುತ್ತದೆ. 150ಕ್ಕು ಹೆಚ್ಚು ವಾರ್ಡ್ಗಳು ಇರುವಂತಿಲ್ಲ, ಪಾಲಿಕೆ ಆಡಳಿತಾವಧಿ 5 ವರ್ಷ ನಿಗದಿ ಮಾಡಿದ್ದು, ಇಲ್ಲಿ ಪ್ರತಿ ಪಾಲಿಕೆಯಲ್ಲಿ 100ರಿಂದ 150 ಸದಸ್ಯರಿಗೆ ಅವಕಾಶ ಮಾಡಿಕೊಡಲಾಗಿದೆ. ಮೇಯರ್, ಉಪಮೇಯರ್ ಅಧಿಕಾರವಧಿ ಎರಡೂವರೆ ವರ್ಷಗಳಿಗೆ ವಿಸ್ತರಿಸಲಾಗಿದೆ. ಮೇಯರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಬೇಕಾದರೆ ಆತ ಮೇಯರ್ ಆಗಿ ಆರು ತಿಂಗಳು ಕಳೆದಿರಬೇಕು” ಎಂದು ಹೇಳಿದರು.

ಭವಿಷ್ಯದಲ್ಲಿ 7 ಪಾಲಿಕೆಗೆ ಅವಕಾಶ, ಸಧ್ಯಕ್ಕಲ್ಲ:

ಸದಸ್ಯ ಟಿ.ಎ.ಶರವಣ ಅವರು ಏಳು ಪಾಲಿಕೆಗಳನ್ನಾಗಿ ಮಾಡುತ್ತಿರುವುದು ಸರಿಯಲ್ಲ ಎಂದಾಗ, “ತಕ್ಷಣಕ್ಕೆ ಏಳು ಪಾಲಿಕೆ ಮಾಡುತಿಲ್ಲ. ಸದ್ಯದ ಮಟ್ಟಿಗೆ ಎರಡು, ಮೂರು ಆಗಬಹುದು. ಇನ್ನೂ ಬೆಳೆದ ಕಾಲಕ್ಕೆ ಏಳು ಪಾಲಿಕೆ ಮಾಡಬಹುದು ಎಂದಿದ್ಧೇವೆ” ಎಂದು ಡಿಸಿಎಂ ಸ್ಪಷ್ಟನೆ ನೀಡಿದರು.

ವಿರೋಧ ಪಕ್ಷದವರ ಹಕ್ಕು ಕಸಿಯುವುದು ಬೇಡ, ಅವರ ಉತ್ತಮ ಸಲಹೆ ಸ್ವೀಕರಿಸೋಣ

ಕಾಂಗ್ರೆಸ್ ಸದಸ್ಯ ಐವಾನ್ ಡಿಸೋಜಾ ಅವರು ಮಾತನಾಡುತ್ತಾ, ‘ಈ ಮಸೂದೆ ಮೇಲೆ ಡಿಸಿಎಂ ಅವರು ಜಂಟಿ ಸದನ ಸಮಿತಿ ರಚಿಸಿ ಚರ್ಚೆಗೆ ಅವಕಾಶ ನೀಡಿದ್ದು, ಸುದೀರ್ಘವಾದ ಚರ್ಚೆಯಾಗಿದೆ. ಜಂಟಿ ಸದನ ಸಮಿತಿಯಲ್ಲಿ ವಿರೋಧ ಪಕ್ಷದ ಸದಸ್ಯರೂ ಇದ್ದು ಚರ್ಚೆ ಮಾಡಿದ್ದು, ಈ ಮಸೂದೆಯಲ್ಲಿ ವಿಚಾರಗಳು ಗೊತ್ತಿಲ್ಲ, ಬೇಡ ಎಂದು ಹೇಳುವುದು ಆತ್ಮವಂಚನೆ ಮಾಡಿದಂತೆ’ ಎಂದು ತಿಳಿಸಿದರು. ಇದಕ್ಕೆ ಬಿಜೆಪಿ ಸದಸ್ಯರಾದ ಭೋಜೆಗೌಡ ಅವರು ಆಕ್ಷೇಪ ವ್ಯಕ್ತಪಡಿಸಿ, ‘ನಮಗೆ ಸದನದಲ್ಲಿ ಚರ್ಚೆ ಮಾಡಿ ನಮ್ಮ ಆಕ್ಷೇಪ ವ್ಯಕ್ತಪಡಿಸಲು ಹಕ್ಕಿದೆ’ ಎಂದು ತಿಳಿಸಿ ವಾಗ್ವಾದಕ್ಕೆ ಮುಂದಾದರು.

ಈ ವೇಳೆ ಮಧ್ಯಪ್ರವೇಶಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ವಿರೋಧ ಪಕ್ಷಗಳ ಸದಸ್ಯರಿಗೆ ಸದನದಲ್ಲಿ ಚರ್ಚೆ ಮಾಡುವ ಅಧಿಕಾರವಿದೆ. ಜಂಟಿ ಸದನ ಸಮಿತಿಯಲ್ಲಿದ್ದ ಸದಸ್ಯರಾಗಿದ್ದರೂ ಕೂಡ ಸದನದಲ್ಲಿ ಚರ್ಚೆ ಮಾಡಿ ತಮ್ಮ ಆಕ್ಷೇಪ ವ್ಯಕ್ತಪಡಿಸುವ ಅಧಿಕಾರ ಸದಸ್ಯರಿಗೆ ಅವಕಾಶವಿದೆ. ಒಂದು ವೇಳೆ ಜಂಟಿ ಸದನ ಸಮಿತಿ ಸಭೆ ವೇಳೆ ಸದಸ್ಯರು ಕೆಲವು ವಿಚಾರಗಳನ್ನು ಪ್ರಸ್ತಾಪ ಮಾಡಲು ಮರೆತಿದ್ದರೆ ಅದನ್ನು ಸದನದಲ್ಲಿ ತಿಳಿಸಬಹುದು. ಅವರ ಹಕ್ಕನ್ನು ನಾವು ತಡೆಯಲು ಸಾಧ್ಯವಿಲ್ಲ. ಅವರು ಮಾತನಾಡುವುದು ತಪ್ಪು ಎಂದು ಹೇಳುವುದು ನಮ್ಮ ಕೆಲಸವಲ್ಲ. ಅವರು ಏನು ಬೇಕಾದರೂ ಚರ್ಚೆ ಮಾಡಲಿ, ಅವರಿಂದ ಬರುವ ಉತ್ತಮ ಸಲಹೆಗಳನ್ನು ನಾವು ತೆಗೆದುಕೊಳ್ಳೋಣ. ಕಲ್ಲಿಗೆ ಪೆಟ್ಟು ಬಿದ್ದಷ್ಟು ಶಿಲೆ ಸುಂದರವಾಗಿ ಮೂಡಿಬರಲಿದೆ. ನೀವು ಹೇಳಿರುವ ಅಂಶಗಳನ್ನು ನಾವು ಪಟ್ಟಿ ಮಾಡಿಕೊಂಡಿದ್ದೇವೆ. ಕೆಳಮನೆಯಲ್ಲಿ 15 ಸದಸ್ಯರು ಚರ್ಚೆ ಮಾಡಿದ್ದು, ಇಲ್ಲೂ ಎಲ್ಲರೂ ಚರ್ಚೆ ಮಾಡಿ, ರಾತ್ರಿ 2 ಗಂಟೆಯಾದರೂ ನಾನು ಚರ್ಚೆಯನ್ನು ಆಲಿಸಲು ಸಿದ್ಧ” ಎಂದು ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 06 09t205635.444

ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಕಿಡಿ

by ಶಾಲಿನಿ ಕೆ. ಡಿ
June 9, 2025 - 8:58 pm
0

Untitled design 2025 06 09t204752.548

ದೀಪಿಕಾ, ಕತ್ರೀನಾ ಸ್ಟಾರ್‌‌ಗಿರಿ ಸೀಕ್ರೆಟ್ ಬಿಚ್ಚಿಟ್ಟ ವಿಜಯ್ ಮಲ್ಯ

by ಶಾಲಿನಿ ಕೆ. ಡಿ
June 9, 2025 - 8:51 pm
0

Untitled design 2025 06 09t202245.507

ಲಕ್ಷ್ಮಣ ಸವದಿ ಕಾರಿಗೆ ಗೂಡ್ಸ್ ವಾಹನ ಡಿಕ್ಕಿ: ಶಾಸಕರ ಕಾರು ಜಖಂ

by ಶಾಲಿನಿ ಕೆ. ಡಿ
June 9, 2025 - 8:24 pm
0

Untitled design 2025 06 09t194322.758

ಮ್ಯೂಸಿಯಂನಲ್ಲಿ 200 ವರ್ಷದ ಹಳೆಯ ಕಾಂಡೋಮ್ ಪ್ರದರ್ಶನ: ಇದರ ವಿಶೇಷವೇನು ಗೊತ್ತಾ?

by ಶಾಲಿನಿ ಕೆ. ಡಿ
June 9, 2025 - 7:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 06 09t205635.444
    ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಕಿಡಿ
    June 9, 2025 | 0
  • Untitled design 2025 06 09t202245.507
    ಲಕ್ಷ್ಮಣ ಸವದಿ ಕಾರಿಗೆ ಗೂಡ್ಸ್ ವಾಹನ ಡಿಕ್ಕಿ: ಶಾಸಕರ ಕಾರು ಜಖಂ
    June 9, 2025 | 0
  • Untitled design 2025 06 09t172111.047
    ಛತ್ತೀಸ್‌ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ; ಹಿರಿಯ ಪೊಲೀಸ್ ಅಧಿಕಾರಿ ಸಾವು
    June 9, 2025 | 0
  • Untitled design 2025 06 08t231627.863
    ಹೆತ್ತ ಮಗಳನ್ನೇ ಕೊಂದ ಪಾಪಿ ತಾಯಿ
    June 8, 2025 | 0
  • Untitled design 2025 06 08t225009.638
    ಕರ್ನಾಟಕದಲ್ಲಿ ಕೊರೋನಾ ಏರಿಕೆ: 24 ಗಂಟೆಯಲ್ಲಿ 61 ಹೊಸ ಕೇಸ್‌ಗಳು ಪತ್ತೆ
    June 8, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version