ಇತ್ತೀಚಿನ ದಿನಗಳಲ್ಲಿ ವಿವಿಧೆಡೆ ಮಂಗಳಮುಖಿಯರು ಹಲ್ಲೆಮಾಡುವುದು, ಸಾರ್ವಜನಿಕರಿಗೆ ಕಿರುಕುಳ ನೀಡುವ ಪ್ರಕರಣಗಳು ಹೆಚ್ಚಾಗಿ ವರದಿ ಆಗುತ್ತಿದ್ದವು. ಕಲಬುರಗಿ ಜಿಲ್ಲೆಯ ಶ್ರೀ ಗುರು ದತ್ತಾತ್ರೇಯ ದೇವಸ್ಥಾನದಲ್ಲಿ ಇಬ್ಬರು ಮಂಗಳಮುಖಿಯರು ಜಡೆ ಹಿಡಿದು ಹೊಡೆದಾಡಿದ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.ಈ ಘಟನೆಯಲ್ಲಿ, ಮಂಗಳಮುಖಿಯರು ಪರಸ್ಪರ ಜಡೆ ಹಿಡಿದು ಜಗಳ ಮಾಡಿಕೊಂಡಿದ್ದಾರೆ.
ಮಂಗಳಮುಖಿಯರು ದೇವಾಲಯದಲ್ಲಿ ಭಿಕ್ಷಾಟನೆ ಮಾಡಲು ತೆರಳಿದ್ದಾಗ ಪರಸ್ಪರ ಇಬ್ಬರು ಮಂಗಳಮುಖಿಯರು ಜಡೆ ಹಿಡಿದು ಜಗಳ ಮಾಡಿಕೊಂಡಿದ್ದು, ವಿಡಿಯೋ ವೈರಲ್ ಆಗಿದೆ.ಇತ್ತೀಚಿನ ದಿನಗಳಲ್ಲಿ, ಇವರು ಸಾರ್ವಜನಿಕ ಸ್ಥಳಗಳಲ್ಲಿ ಹಲ್ಲೆ ಮಾಡುವುದು, ಜಗಳಗಳಲ್ಲಿ ತೊಡಗುವುದು ಎಂಬ ವರದಿಗಳು ಹೆಚ್ಚಾಗುತ್ತಿದ್ದವು.
ಇದೇ ಸಂದರ್ಭದಲ್ಲಿ, ಗಾಣಗಾಪುರ ದೇವಾಲಯದಲ್ಲಿ ಭಿಕ್ಷೆ ಬೇಡಲು ಬಂದ ಇಬ್ಬರು ಮಂಗಳಮುಖಿಯರು ಪರಸ್ಪರ ಮಾತುಕತೆಯಿಂದ ಹಿಡಿದು ಹೊಡೆದಾಟಕ್ಕೆ ಇಳಿದರು. ಜಗಳ ಬಿಡಿಸಲು ಯಾರೂ ಮುಂದೆ ಬರಲಿಲ್ಲ, ಕಾರಣ ಜಗಳ ಬಿಡಿಸಲು ಇವರನ್ನು ಮುಟ್ಟಿದರೆ ಅವರ ಮೈಮೇಲೆಯೇ ಬೀಳುತ್ತಾರೆ. ಇವರಿಗೆ ಸಂವಿಧಾನಬದ್ಧವಾಗಿ ಸಿಕ್ಕಿದ್ದ ಸ್ವಾತಂತ್ರ್ಯ ಸ್ವೇಚ್ಛಾಚಾರ ಆಗಿದೆಯೇ ಎಂಬ ಅನುಮಾನ ಎಲ್ಲರಿಗೂ ಕಾಡುತ್ತಿದೆ.
ಇನ್ನು ಈ ಘಟನೆ ಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆದರೆ, ಪೊಲೀಸರು ಕೂಡ ಇವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಿಳಿದುಬಂದಿದೆ. ಆದರೆ, ಸಂವಿಧಾನಬದ್ಧ ಸ್ವಾತಂತ್ರ್ಯವನ್ನು ದುರ್ಬಳಕೆ ಮಾಡುತ್ತಿದ್ದಾರೆಯೇ ಎಂಬ ಪ್ರಶ್ನೆಗಳು ಉದ್ಭವಿಸಿವೆ.
ಈ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ತಾಲ್ಲೂಕಿನ ಗಾಣಗಾಪುರಲ್ಲಿರುವ ಶ್ರೀ ಗುರು ದತ್ತಾತ್ರೇಯ ದೇವಸ್ಥಾನದಲ್ಲಿ ನಡೆದಿದೆ. ಮಂಗಳಮುಖಿಯರ ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.