• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೆ.ಹೆಚ್ ಪಾಟೀಲ್ ಅವರು ಮಹಾ ಮಾನವತಾವಾದಿ: ಡಿಸಿಎಂ ಡಿ.ಕೆ. ಶಿವಕುಮಾರ್

admin by admin
March 16, 2025 - 6:26 pm
in Flash News, ಕರ್ನಾಟಕ
0 0
0
Befunky collage 2025 03 16t181900.345

“ಕೆ.ಹೆಚ್ ಪಾಟೀಲ್ ಅವರು ಮಹಾ ಮಾನವತಾವಾದಿಯಾಗಿದ್ದರು. ಜಾತಿ, ಧರ್ಮದ ತಾರತಮ್ಯವಿಲ್ಲದೆ ಸಹಕಾರಿ ಕ್ಷೇತ್ರದಲ್ಲಿ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಮುನ್ನಡೆಸಿದವರು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಗದಗದಲ್ಲಿ ಭಾನುವಾರ ನಡೆದ ಸಹಕಾರಿ ಧುರೀಣ, ಮಾಜಿ ಸಚಿವ ದಿವಂಗತ ಶ್ರೀ ಕೆ.ಹೆಚ್. ಪಾಟೀಲ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.

RelatedPosts

ಅ.1ರಿಂದ ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸಂಚಾರ

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಮೊಬೈಲ್ ಕೊಟ್ಟ ಖದೀಮ ಅರೆಸ್ಟ್

ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: TMC ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ

ರಾಷ್ಟ್ರಗೀತೆಗೂ ಮೊದಲು ತಮಿಳು ರಾಜ್ಯಗೀತೆ ಹಾಡಲು ಮದ್ರಾಸ್ ಹೈಕೋರ್ಟ್ ಗ್ರೀನ್‌ ಸಿಗ್ನಲ್‌

ADVERTISEMENT
ADVERTISEMENT

“ಧೀಮಂತ ನಾಯಕ ಕೆ.ಹೆಚ್. ಪಾಟೀಲ್ ಅವರನ್ನು ಸ್ಮರಿಸಲು ನಾವು ಸೇರಿದ್ದೇವೆ. ಪಾಟೀಲರ ಬದುಕು, ಚಿಂತನೆ, ಆದರ್ಶ ಬೇರೆಯವರ ಬದುಕಿಗೆ ದಾರಿ ದೀಪವಾಗಲಿ. ನಾವು ಇತ್ತೀಚೆಗೆ ಮಹಾತ್ಮಾ ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ನಡೆಸಿದ ಬೆಳಗಾವಿ ಅಧಿವೇಶನಕ್ಕೆ ಶತಮಾನೋತ್ಸವ ಆಚರಣೆ ಮಾಡಿದ್ದೇವೆ. ಈ ಕಾರ್ಯಕ್ರಮಗಳ ರೂಪುರೇಷೆಗಳನ್ನು ಹೆಚ್.ಕೆ ಪಾಟೀಲ್ ಅವರ ನೇತೃತ್ವದಲ್ಲಿ ನಡೆಸಲಾಗಿದೆ” ಎಂದು ಹೇಳಿದರು

“ಮಹಾಭಾರತದಲ್ಲಿ ಭೀಷ್ಮ, ಧರ್ಮರಾಯನಿಗೆ ಒಂದು ಮಾತು ಹೇಳಿದ್ದರು. ‘ಮನುಷ್ಯ ಹುಟ್ಟುವಾಗ ತಂದೆ ತಾಯಿ, ಗುರು, ದೇವರು ಹಾಗೂ ಸಮಾಜ ಈ ನಾಲ್ಕು ಋಣದಲ್ಲಿ ಹುಟ್ಟುತ್ತಾನೆ. ಈ ನಾಲ್ಕು ಋಣಗಳನ್ನು ಧರ್ಮದಿಂದ ತೀರಿಸಬೇಕು’ ಎಂದು ಹೇಳಿದ್ದರು. ಅದೇ ರೀತಿ ಹೆಚ್.ಕೆ ಪಾಟೀಲ್, ಅವರ ಸ್ನೇಹಿತರು, ಅಭಿಮಾನಿಗಳು ಈ ಕಾರ್ಯಕ್ರಮ ನಡೆಸಿ ಧರ್ಮದ ಮೂಲಕ ಋಣ ತೀರಿಸುವ ಕೆಲಸ ಮಾಡುತ್ತಿದ್ದೀರಿ. ವಿದ್ಯಾ ಸಂಸ್ಥೆ, ಸಹಕಾರ ಸಂಸ್ಥೆ, ರೈತರು ಸೇರಿದಂತೆ ಕೆ.ಹೆಚ್ ಪಾಟೀಲ್ ಅವರು ಸಮಾಜಕ್ಕೆ ಏನೆಲ್ಲಾ ಬೇಕು ಎಂದು ಚಿಂತನೆ ನಡೆಸಿದ್ದರು” ಎಂದರು.

ನನಗೆ ಮೊದಲು ಟಿಕೆಟ್ ಕೊಟ್ಟಿದ್ದು ಕೆ.ಹೆಚ್ ಪಾಟೀಲ್

“ಕೆ.ಹೆಚ್ ಪಾಟೀಲರ ಜತೆ ನಾಲ್ಕೈದು ವರ್ಷ ಕೆಲಸ ಮಾಡುವ ಭಾಗ್ಯ ನನಗೆ ಸಿಕ್ಕಿತ್ತು. ನಾನು ಇಂದು ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿದ್ದು, ಅಂದು ಕೆ.ಹೆಚ್ ಪಾಟೀಲ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದರು. ನಾನು ವಿದ್ಯಾರ್ಥಿ ನಾಯಕನಾಗಿದ್ದಾಗ 1985ರಲ್ಲಿ ನನಗೆ ವಿಧಾನಸಭೆ ಚುನಾವಣೆ ಟಿಕೆಟ್ ನೀಡಿ ದೇವೇಗೌಡರ ವಿರುದ್ಧ ಸ್ಪರ್ಧಿಸುವಂತೆ ಹೇಳಿದರು. ಅಲ್ಲಿಂದ ಇಲ್ಲಿಯವರೆಗೂ ಸತತವಾಗಿ 9 ಬಾರಿ ಬಿ ಫಾರಂ ತೆಗೆದುಕೊಂಡು ಈ ಮಟ್ಟಕ್ಕೆ ಬೆಳೆದಿದ್ದೇನೆ” ಎಂದು ಸ್ಮರಿಸಿದರು.

“ಕೆ.ಹೆಚ್ ಪಾಟೀಲ್ ಅವರು ಸೋಲು, ಗೆಲುವು, ಯಶಸ್ಸು ಎಲ್ಲವನ್ನು ಕಂಡಿರುವ ಮಾನವತಾವಾದಿ. ಅವರ ಜೊತೆ ಶಾಸಕನಾಗಿ, ಸಚಿವನಾಗಿ ಕೆಲಸ ಮಾಡಿದ್ದೇನೆ. ಮಣ್ಣಿಲ್ಲದೆ ಮಡಿಕೆ ಇಲ್ಲ, ಹಿರಿಯರ ಬಿಟ್ಟು ದೇವರಿಲ್ಲ. ತಂದೆ ತಾಯಿಗಳೇ ನಮ್ಮ ದೇವರು. ಅವರನ್ನು ಸ್ಮರಿಸುತ್ತಾ ಅವರು ತೋರಿದ ಮಾರ್ಗದರ್ಶನದಲ್ಲಿ ನಾವು ಸಾಗಬೇಕು. ಸಹಕಾರ ಕ್ಷೇತ್ರದಲ್ಲಿ ಕೆ.ಹೆಚ್ ಪಾಟೀಲ್ ಅವರು ಅನೇಕ ಸಂಸ್ಥೆಗಳನ್ನು ಕಟ್ಟಿದ್ದಾರೆ” ಎಂದರು.

“ಜತೆಗೂಡುವುದು ಆರಂಭ, ಜತೆಗೂಡಿ ಚರ್ಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು. ಇದೇ ಸಹಕಾರ ಕ್ಷೇತ್ರದ ಮೂಲ ಮಂತ್ರ. ಹೀಗೆ ಕೆ.ಹೆಚ್ ಪಾಟೀಲ್ ಅವರು ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಮುನ್ನಡೆಸಿದ್ದಾರೆ. ಪಂಚಾಯ್ತಿ ಅಧ್ಯಕ್ಷ ಸ್ಥಾನದಿಂದ ಮಂತ್ರಿ ಸ್ಥಾನದವರೆಗೆ ಅವರು ಅನೇಕ ಹೆಜ್ಜೆ ಗುರುತು ಬಿಟ್ಟು ಹೋಗಿದ್ದಾರೆ. ಈ ಕಾರಣಕ್ಕೆ ನಾವಿಂದು ಅವರನ್ನು ಸ್ಮರಿಸುತ್ತಿದ್ದೇವೆ. ಅವರ ಮಾರ್ಗದರ್ಶನದಲ್ಲಿ ಹೆಚ್.ಕೆ ಪಾಟೀಲ್, ಡಿ.ಆರ್. ಪಾಟೀಲ್ ಅವರು ಗದಗ ಜಿಲ್ಲೆಗೆ ಹೊಸ ರೂಪ ನೀಡಲು ಮುಂದಾಗಿದ್ದಾರೆ” ಎಂದರು.

ಕೆ.ಹೆಚ್.ಪಾಟೀಲ್ ಅವರ ಕುಟುಂಬದ ಕೊಡುಗೆ ಅಪಾರ:

“ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ, ಜನನ ಉಚಿತ, ಮರಣ ಖಚಿತ. ಈ ಹುಟ್ಟು ಸಾವಿನ ಮಧ್ಯೆ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಬಹಳ ಮುಖ್ಯ. ದೇವರು ನಮಗೆ ಕೇವಲ ಎರಡು ಆಯ್ಕೆ ಕೊಟ್ಟಿದ್ದಾನೆ. ಒಂದು ಕೊಟ್ಟು ಹೋಗುವುದು, ಮತ್ತೊಂದು ಬಿಟ್ಟು ಹೋಗುವುದು. ಅದೇ ರೀತಿ ಈ ಜಿಲ್ಲೆಯ ಜಿಲ್ಲಾ ಕಚೇರಿ, ಮೆಡಿಕಲ್ ಕಾಲೇಜು, ಗಾಂಧೀಜಿ ಅವರ ಹೆಸರಲ್ಲಿ ಗ್ರಾಮೀಣಾಭಿವೃದ್ಧಿ ವಿಶ್ವ ವಿದ್ಯಾಲಯ, ಗಾಂಧೀಜಿ ಅವರ ಸಬರಾಮತಿ ಆಶ್ರಮ ಮಾದರಿಯನ್ನು ಇದೇ ಜಿಲ್ಲೆಯಲ್ಲಿ ಮಾಡಿದ್ದಾರೆ. ನಾನು 15 ವರ್ಷಗಳ ಹಿಂದೆ ಇಲ್ಲಿಗೆ ಬಂದಿದ್ದಾಗ ಇಲ್ಲಿನ ಶುದ್ಧ ಕುಡಿಯುವ ನೀರಿನ ಘಟಕ ನೋಡಿದ್ದೆ. ನನ್ನ ಸಹೋದರ ಲೋಕಸಭಾ ಸದಸ್ಯನಾಗಿದ್ದಾಗ ಆತನ ಕ್ಷೇತ್ರದಲ್ಲಿ 300-400 ಘಟಕ ಸ್ಥಾಪಿಸಿದ್ದೆವು. ನಂತರ ಅದನ್ನು ಸರ್ಕಾರದ ಕಾರ್ಯಕ್ರಮವಾಗಿ ಘೋಷಣೆ ಮಾಡಿದೆವು” ಎಂದು ಹೇಳಿದರು.

“ಜೀವನದಲ್ಲಿ ನಂಬಿಕೆ ಹಾಗೂ ಸಂಬಂಧ ಬಹಳ ಪ್ರಮುಖ ವಿಚಾರ. ನಂಬಿಕೆ ಇಲ್ಲದೆ ಯಾವುದೇ ಸಂಬಂಧ ಉಳಿಯಲು ಸಾಧ್ಯವಿಲ್ಲ. ಮರಕ್ಕೆ ಬೇರು ಎಷ್ಟು ಮುಖ್ಯವೋ, ಮನುಷ್ಯನಿಗೆ ನಂಬಿಕೆ ಅಷ್ಟೇ ಮುಖ್ಯ. ನಾನು ಕಂಡಂತೆ ಕೆ.ಹೆಚ್ ಪಾಟೀಲ್ ಅವರ ಜತೆಗೆ ಅವರ ಕುಟುಂಬದವರು ಮಾತ್ರ ಇರಲಿಲ್ಲ. ರಾಜ್ಯದ ಉದ್ದಗಲ ತಮ್ಮದೇ ಆದ ಪರಿವಾರ ಬೆಳಸಿಕೊಂಡಿದ್ದಾರೆ. ಅವರು ನಮ್ಮನ್ನು ಆಗಲಿ 33 ವರ್ಷಗಳಾಗಿರಬಹುದು. ಅವರ ಆದರ್ಶ, ಬದುಕು ಇಡೀ ಕರ್ನಾಟಕಕ್ಕೆ ಮಾದರಿಯಾಗಿದೆ” ಎಂದರು.

“ಇಲ್ಲಿನ ರುಧ್ರಭೂಮಿಗೆ ಅವರು ಮುಕ್ತವನ ಎಂದು ಹೆಸರಿಟ್ಟಿದ್ದರು. ನಾನು ನನ್ನ ಸಹೋದರನ ಜತೆ ಚರ್ಚೆ ಮಾಡಿ ಇಲ್ಲಿಗೆ ಒಂದು ತಂಡ ಕಳುಹಿಸಿಕೊಟ್ಟಿದ್ದೆ. ಇತಿಹಾಸ ಮರೆತವ ಇತಿಹಾಸ ಸೃಷ್ಟಿಸಲಾರ. ಕೆ.ಹೆಚ್ ಪಾಟೀಲ್ ಅವರ ಕುಟುಂಬ ನಿಮ್ಮೆಲ್ಲರ ಬದುಕಿನಲ್ಲಿ ಬದಲಾವಣೆ ತಂದಿದ್ದಾರೆ. ಈ ಜಿಲ್ಲೆ ಹಾಗೂ ಇಲ್ಲಿನ ಜನರ ಋಣ ತೀರಿಸಲು ದಿಟ್ಟವಾದ ತೀರ್ಮಾನ ಮಾಡಿದ್ದಾರೆ” ಎಂದು ಹೇಳಿದರು.

“ಡಿ.ಆರ್ ಪಾಟೀಲ್ ಅವರು ವಿವೇಕಾನಂದರ ಅನುಯಾಯಿ. ವಿವೇಕಾನಂದರು ಮಹಾತ್ಯಾಗದಿಂದ ಮಾತ್ರ ಮಹತ್ಕಾರ್ಯ ಮಾಡಲು ಸಾಧ್ಯ ಎಂದು ಹೇಳಿದ್ದಾರೆ. ತಾಯಿ ನಮಗೆ ಜನ್ಮ ನೀಡುತ್ತಾಳೆ. ದೇವರು ನಮಗೆ ಬುದ್ಧಿ ನೀಡುತ್ತಾನೆ. ಗುರು ವಿದ್ಯೆ ನೀಡುತ್ತಾರೆ. ಇವರ ಕುಟುಂಬ ನಮಗೆ ಸ್ನೇಹವನ್ನು ನೀಡಿದೆ. ಜನಸೇವೆಯೇ ನಮ್ಮ ಗುರಿಯಾಗಲಿ, ಜನಸೇವೆಯಲ್ಲಿ ನಿಯಮವಿರಲಿ, ಜನಸೇವೆಯಲ್ಲಿ ಪ್ರಾಮಾಣಿಕತೆ ಇರಲಿ. ಇದನ್ನು ನಮ್ಮ ಹೆಚ್.ಕೆ ಪಾಟೀಲ್ ಅವರು ಉಳಿಸಿಕೊಂಡು ಬೆಳೆಸಿಕೊಂಡು ಹೋಗಿದ್ದಾರೆ” ಎಂದು ತಿಳಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸ್ಕ್ರೀನ್ಸ್ (18)

Instagram ಲೋಗೋ ಬದಲಾವಣೆ: ‘Instagzam’ ಎಂದು ಟ್ರೋಲ್ ಮಾಡಿದ ನೆಟ್ಟಿಗರು!

by ಶಾಲಿನಿ ಕೆ. ಡಿ
August 19, 2026 - 11:15 pm
0

ಸ್ಕ್ರೀನ್ಸ್ (17)

ಅ.1ರಿಂದ ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸಂಚಾರ

by ಶಾಲಿನಿ ಕೆ. ಡಿ
August 19, 2026 - 11:02 pm
0

ಸ್ಕ್ರೀನ್ಸ್ (16)

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಮೊಬೈಲ್ ಕೊಟ್ಟ ಖದೀಮ ಅರೆಸ್ಟ್

by ಶಾಲಿನಿ ಕೆ. ಡಿ
August 19, 2026 - 10:46 pm
0

ಸ್ಕ್ರೀನ್ಸ್ (15)

ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ

by ಶಾಲಿನಿ ಕೆ. ಡಿ
August 19, 2026 - 10:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಕ್ರೀನ್ಸ್ (17)
    ಅ.1ರಿಂದ ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸಂಚಾರ
    August 19, 2026 | 0
  • ಸ್ಕ್ರೀನ್ಸ್ (16)
    ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಮೊಬೈಲ್ ಕೊಟ್ಟ ಖದೀಮ ಅರೆಸ್ಟ್
    August 19, 2026 | 0
  • ಸ್ಕ್ರೀನ್ಸ್ (13)
    ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: TMC ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ
    August 19, 2026 | 0
  • ಸ್ಕ್ರೀನ್ಸ್ (10)
    ರಾಷ್ಟ್ರಗೀತೆಗೂ ಮೊದಲು ತಮಿಳು ರಾಜ್ಯಗೀತೆ ಹಾಡಲು ಮದ್ರಾಸ್ ಹೈಕೋರ್ಟ್ ಗ್ರೀನ್‌ ಸಿಗ್ನಲ್‌
    August 19, 2026 | 0
  • ಸ್ಕ್ರೀನ್ಸ್ (8)
    ಯೂನಿಯನ್‌ ಬ್ಯಾಂಕ್‌ ಖಾತೆಯಿಂದ ಹಣ ಕಡಿತ: ಶಿವಮೊಗ್ಗ ಗ್ರಾಹಕ ಆಯೋಗ ಚಾಟಿ
    August 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version