ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.. ಓವರ್ ಅಸಿಡಿಟಿಯಿಂದ ಬಳಲುತ್ತಿದ್ದ ಉಪೇಂದ್ರ ಅವರನ್ನು ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಆಪ್ತ ಮೂಲಗಳ ಪ್ರಕಾರ, ಉಪೇಂದ್ರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅಭಿಮಾನಿಗಳು ಗಾಬರಿಗೊಳಗಾಗುವ ಅಗತ್ಯವಿಲ್ಲ ಎಂದು ತಿಳಿಸಲಾಗಿದೆ.
ಈ ಹಿಂದೆ, ತಮ್ಮ ಚಿತ್ರ “ಯುಐ” ಶೂಟಿಂಗ್ ಸಂದರ್ಭದಲ್ಲೂ ಉಪೇಂದ್ರ ಅವರು ಇದೇ ರೀತಿಯ ಆರೋಗ್ಯ ಸಮಸ್ಯೆಯನ್ನು ಎದುರಿಸಿದ್ದರು. ಆದರೆ, ವೈದ್ಯರ ಸೂಕ್ತ ಚಿಕಿತ್ಸೆಯಿಂದ ಅವರು ಶೀಘ್ರವಾಗಿ ಚೇತರಿಸಿಕೊಂಡಿದ್ದರು. ಈ ಬಾರಿಯೂ ಸ್ಪರ್ಶ್ ಆಸ್ಪತ್ರೆಯ ವೈದ್ಯರ ತಂಡವು ಉಪೇಂದ್ರ ಅವರಿಗೆ ಉತ್ತಮ ಚಿಕಿತ್ಸೆ ನೀಡಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ.
ಸದ್ಯ ಉಪೇಂದ್ರ ಅವರ ಆರೋಗ್ಯ ಸ್ಥಿತಿಯು ಈಗ ಸುಧಾರಿಸುತ್ತಿದ್ದು, ಅವರು ಶೀಘ್ರವಾಗಿ ಸಂಪೂರ್ಣ ಗುಣಮುಖರಾಗುವ ವಿಶ್ವಾಸವಿದೆ. ಅವರ ಚೇತರಿಕೆಗಾಗಿ ಅಭಿಮಾನಿಗಳು ಮತ್ತು ಚಿತ್ರರಂಗದ ಸಹಕಲಾವಿದರು ಶುಭ ಹಾರೈಸುತ್ತಿದ್ದಾರೆ.





