ಕನ್ನಡ ಚಿತ್ರರಂಗದ ಉದಯೋನ್ಮುಖ ನಟಿ ಅರ್ಚನಾ ಕೊಟ್ಟಿಗೆ ಅವರು ಕರ್ನಾಟಕ ಕ್ರಿಕೆಟ್ ತಂಡದ ಪ್ರಮುಖ ಆಟಗಾರ ಶರತ್ ಬಿ.ಆರ್. ಅವರೊಂದಿಗೆ ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಈ ಜೋಡಿ ಇತ್ತೀಚೆಗೆ ಉಂಗುರ ಬದಲಾಯಿಸಿಕೊಂಡಿದ್ದು, ಅವರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಶರತ್ ಬಿ.ಆರ್. ಕರ್ನಾಟಕ ಕ್ರಿಕೆಟ್ ತಂಡದಲ್ಲಿ ಬ್ಯಾಟ್ಸ್ಮನ್ ಮತ್ತು ವಿಕೆಟ್ ಕೀಪರ್ ಆಗಿ ಗುರುತಿಸಿಕೊಂಡವರು.

ಕಳೆದ ವರ್ಷ ಅವರು ಐಪಿಎಲ್ನ ಗುಜರಾತ್ ಟೈಟನ್ಸ್ ತಂಡದ ಭಾಗವಾಗಿದ್ದರು. ಅವರ ಕ್ರೀಡಾ ಸಾಧನೆಯಿಂದಾಗಿ ಕ್ರಿಕೆಟ್ ಜಗತ್ತಿನಲ್ಲಿ ಗಮನಾರ್ಹ ಸ್ಥಾನ ಪಡೆದಿದ್ದಾರೆ.

ಇನ್ನು, ಅರ್ಚನಾ ಕೊಟ್ಟಿಗೆ ಕನ್ನಡ ಚಿತ್ರರಂಗದಲ್ಲಿ ‘ಡಿಯರ್ ಸತ್ಯ’ ಚಿತ್ರದ ಮೂಲಕ ಚೊಚ್ಚಲ ಪ್ರವೇಶ ಮಾಡಿದರು. ಈ ಚಿತ್ರದಿಂದಾಗಿ ಅವರು ಚಿತ್ರರಂಗದಲ್ಲಿ ಭರವಸೆಯ ನಟಿಯಾಗಿ ಹೊರಹೊಮ್ಮಿದ್ದಾರೆ.

ಇದೇ ರೀತಿ, ಉಷಾ ಗೋವಿಂದರಾಜು ನಿರ್ಮಾಣದ ‘ಎಲ್ರ ಕಾಲೆಳಿಯತ್ತೆ ಕಾಲ’ ಚಿತ್ರದಲ್ಲಿ ಚಂದನ್ ಶೆಟ್ಟಿ ಜೊತೆಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

ಜೊತೆಗೆ, ‘ಶಬರಿ’ ಚಿತ್ರದಲ್ಲಿಯೂ ನಟಿಸಿದ್ದು, ಅಲಂಕಾರ ವಿದ್ಯಾರ್ಥಿಯಾಗಿಯೂ ಗುರುತಿಸಿಕೊಂಡಿದ್ದಾರೆ.

ಅರ್ಚನಾ ಮತ್ತು ಶರತ್ರ ನಿಶ್ಚಿತಾರ್ಥದ ಸುದ್ದಿ ಅವರ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ. ಈ ಜೋಡಿಯ ಭವಿಷ್ಯದ ಯೋಜನೆಗಳ ಬಗ್ಗೆ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.





