ಕಾಕ್ಸ್ ಟೌನ್ನ ಭಾರತಿನಗರ ನಿವಾಸಿಗಳ ವೇದಿಕೆ ವತಿಯಿಂದ ಸಂಕ್ರಾಂತಿ ಹಬ್ಬವನ್ನು ಅತ್ಯಂತ ಅರ್ಥಪೂರ್ಣ ಹಾಗೂ ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಬೆಳೆ ಹಬ್ಬವೆಂದು ಕರೆಸಿಕೊಳ್ಳುವ ಸಂಕ್ರಾಂತಿ ಹಬ್ಬವು ಕೇವಲ ಸಂಭ್ರಮಕ್ಕೆ ಸೀಮಿತವಾಗದೇ, ಸಮಾಜಕ್ಕೆ ಸೇವೆ ಸಲ್ಲಿಸುವವರನ್ನು ಗೌರವಿಸುವ ಹಬ್ಬವಾಗಬೇಕು ಎಂಬ ಸಂದೇಶವನ್ನು ಈ ಕಾರ್ಯಕ್ರಮ ಸಾರಿತು. ನಗರ ಸ್ವಚ್ಛತೆಗೆ ಅವಿರತವಾಗಿ ಶ್ರಮಿಸುವ ಜಿಬಿಎ ಪೌರ ಕಾರ್ಮಿಕರಿಗೆ ಉಚಿತವಾಗಿ ಸೀರೆ, ಬಟ್ಟೆ, ಸಂಪ್ರದಾಯಬದ್ಧ ಪೊಂಗಲ್ ಹಾಗೂ ಕಬ್ಬು ವಿತರಿಸುವ ಮೂಲಕ ಮಾನವೀಯ ಮೌಲ್ಯಗಳಿಗೆ ಒತ್ತು ನೀಡಲಾಯಿತು.
ಈ ವಿಶೇಷ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಿರಿಯ ನಟಿ ಹಾಗೂ ನ್ಯಾಷನಲ್ ಅವಾರ್ಡ್ ವಿಜೇತೆ ತಾರಾ ಅನುರಾಧ ಮತ್ತು ಖ್ಯಾತ ನಟಿ ಅನು ಪ್ರಭಾಕರ್ ಅವರು ಸಂಕ್ರಾಂತಿ ಸಂಭ್ರಮಕ್ಕೆ ವಿಶೇಷ ಕಳೆ ತಂದರು. ಜನಪ್ರಿಯತೆ ಮತ್ತು ಗೌರವ ಹೊಂದಿರುವ ಈ ಕಲಾವಿದರು ಪೌರ ಕಾರ್ಮಿಕರೊಂದಿಗೆ ಕುಟುಂಬದ ಸದಸ್ಯರಂತೆ ಬೆರೆತು ಹಬ್ಬವನ್ನು ಆಚರಿಸಿದ ದೃಶ್ಯಗಳು ಎಲ್ಲರ ಮನ ಸೆಳೆದವು. ಸೀರೆ ಹಾಗೂ ಬಟ್ಟೆ ವಿತರಿಸುವಾಗ ಕಾರ್ಮಿಕರೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿ, ಅವರ ಶ್ರಮಕ್ಕೆ ಅಭಿನಂದನೆ ಸಲ್ಲಿಸಿದರು.
ಕಾಕ್ಸ್ ಟೌನ್ನ ಭಾರತಿನಗರ ನಿವಾಸಿಗಳ ವೇದಿಕೆ ವತಿಯಿಂದ ಸಂಕ್ರಾಂತಿ ಹಬ್ಬವನ್ನು ಅತ್ಯಂತ ಅರ್ಥಪೂರ್ಣ ಹಾಗೂ ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಬೆಳೆ ಹಬ್ಬವೆಂದು ಕರೆಸಿಕೊಳ್ಳುವ ಸಂಕ್ರಾಂತಿ ಹಬ್ಬವು ಕೇವಲ ಸಂಭ್ರಮಕ್ಕೆ ಸೀಮಿತವಾಗದೇ, ಸಮಾಜಕ್ಕೆ ಸೇವೆ ಸಲ್ಲಿಸುವವರನ್ನು ಗೌರವಿಸುವ ಹಬ್ಬವಾಗಬೇಕು ಎಂಬ ಸಂದೇಶವನ್ನು ಈ ಕಾರ್ಯಕ್ರಮ ಸಾರಿತು. ನಗರ ಸ್ವಚ್ಛತೆಗೆ ಅವಿರತವಾಗಿ ಶ್ರಮಿಸುವ ಜಿಬಿಎ ಪೌರ ಕಾರ್ಮಿಕರಿಗೆ ಉಚಿತವಾಗಿ ಸೀರೆ, ಬಟ್ಟೆ, ಸಂಪ್ರದಾಯಬದ್ಧ ಪೊಂಗಲ್ ಹಾಗೂ ಕಬ್ಬು ವಿತರಿಸುವ ಮೂಲಕ ಮಾನವೀಯ ಮೌಲ್ಯಗಳಿಗೆ ಒತ್ತು ನೀಡಲಾಯಿತು.
ಈ ವಿಶೇಷ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಿರಿಯ ನಟಿ ಹಾಗೂ ನ್ಯಾಷನಲ್ ಅವಾರ್ಡ್ ವಿಜೇತೆ ತಾರಾ ಅನುರಾಧ ಮತ್ತು ಖ್ಯಾತ ನಟಿ ಅನು ಪ್ರಭಾಕರ್ ಅವರು ಸಂಕ್ರಾಂತಿ ಸಂಭ್ರಮಕ್ಕೆ ವಿಶೇಷ ಕಳೆ ತಂದರು. ಜನಪ್ರಿಯತೆ ಮತ್ತು ಗೌರವ ಹೊಂದಿರುವ ಈ ಕಲಾವಿದರು ಪೌರ ಕಾರ್ಮಿಕರೊಂದಿಗೆ ಕುಟುಂಬದ ಸದಸ್ಯರಂತೆ ಬೆರೆತು ಹಬ್ಬವನ್ನು ಆಚರಿಸಿದ ದೃಶ್ಯಗಳು ಎಲ್ಲರ ಮನ ಸೆಳೆದವು. ಸೀರೆ ಹಾಗೂ ಬಟ್ಟೆ ವಿತರಿಸುವಾಗ ಕಾರ್ಮಿಕರೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿ, ಅವರ ಶ್ರಮಕ್ಕೆ ಅಭಿನಂದನೆ ಸಲ್ಲಿಸಿದರು.