• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಗ್‌ಬಾಸ್ ಸ್ಪರ್ಧಿಗಳ ನಡುವೆ ನಿಲ್ಲದ ಜಗಳ: ಅಶ್ವಿನಿಗೆ ಟಾಂಗ್ ಕೊಟ್ಟ ಚೈತ್ರಾ ಕುಂದಾಪುರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 10, 2026 - 8:56 am
in Flash News, ಬಿಗ್ ಬಾಸ್, ಸಿನಿಮಾ
0 0
0
Untitled design 2026 02 10T085530.949

RelatedPosts

ಇಂಧನ ಬಿಕ್ಕಟ್ಟು ಎದುರಿಸಲು ಕೋವಿಡ್ ಮಾದರಿ ಒಗ್ಗಟ್ಟು ಅಗತ್ಯ: ರಾಜ್ಯಗಳಿಗೆ ಪ್ರಧಾನಿ ಮೋದಿ ಕರೆ

LPG ಸಿಲಿಂಡರ್ ಅಭಾವ: 3 ಲಕ್ಷ ಮರಗಳ ಕಟಾವಿಗೆ ಅರಣ್ಯ ಇಲಾಖೆ ಗ್ರೀನ್ ಸಿಗ್ನಲ್

RCB ಮೊದಲ ಪಂದ್ಯಕ್ಕೆ ಮಳೆ ಅಡ್ಡಿಯಾಗುತ್ತಾ ? ಇಲ್ಲಿದೆ ಹವಾಮಾನ ಇಲಾಖೆಯ ಲೇಟೆಸ್ಟ್ ರಿಪೋರ್ಟ್

ಜೋಜಿಲಾ ಪಾಸ್‌ನಲ್ಲಿ ಹಿಮಪಾತಕ್ಕೆ ಸಿಲುಕಿ 7 ಮಂದಿ ದುರ್ಮರಣ, ಹಲವರ ಸ್ಥಿತಿ ಗಂಭೀರ

ADVERTISEMENT
ADVERTISEMENT

ಬಿಗ್‌ಬಾಸ್ ಕನ್ನಡ ಸೀಸನ್ 12 ಮುಗಿದು ತಿಂಗಳು ಸಮೀಪಿಸುತ್ತಿದ್ದರೂ, ಅದರೊಳಗೆ ಹುಟ್ಟಿದ ವೈಮನಸ್ಸು ಮಾತ್ರ ಇನ್ನೂ ಮುಗಿದಂತೆ ಕಾಣುತ್ತಿಲ್ಲ. ಶೋ ಅಂತ್ಯವಾದ ಬಳಿಕವೂ ಸ್ಪರ್ಧಿಗಳ ನಡುವಿನ ಮಾತಿನ ಚಕಮಕಿ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಭುಗಿಲೆದ್ದಿದೆ. ಈ ಬಾರಿ ಮತ್ತೆ ಸುದ್ದಿಯಲ್ಲಿರುವುದು ಅಶ್ವಿನಿ ಗೌಡ ಮತ್ತು ಚೈತ್ರಾ ಕುಂದಾಪುರ ನಡುವಿನ ಹಳೆಯ ಜಗಳ.

ಬಿಗ್‌ಬಾಸ್ ಕನ್ನಡ ಸೀಸನ್ 12ರಲ್ಲಿ ವಿಶೇಷ ಅತಿಥಿಗಳಾಗಿ ಮನೆಗೆ ಪ್ರವೇಶಿಸಿದ್ದ ಚೈತ್ರಾ ಕುಂದಾಪುರ ಮತ್ತು ರಜತ್ ಕಿಶನ್, ನಿಜವಾದ ಸ್ಪರ್ಧಿಗಳಂತೆ ಆಟವಾಡಿದ್ದರು. ಅದರಲ್ಲೂ ಚೈತ್ರಾ ಮತ್ತು ಅಶ್ವಿನಿ ಗೌಡ ನಡುವಿನ ಟಾಸ್ಕ್ ವೇಳೆ ನಡೆದ ಜಿದ್ದಾಜಿದ್ದಿ ಅಂದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಕ್ಯಾಪ್ಟನ್ಸಿ ಹಾಗೂ ಟಾಸ್ಕ್ ಸಂಬಂಧಿಸಿದ ಕಿತ್ತಾಟದಲ್ಲಿ ಪರಚುವುದು, ಗಿಲ್ಲುವುದು, ಎಂಜಲು ಉಗುಳುವುದು ಸೇರಿದಂತೆ ಗಂಭೀರ ಆರೋಪಗಳು ಕೇಳಿಬಂದಿದ್ದವು.

ಟಾಸ್ಕ್ ವೇಳೆ ಅಶ್ವಿನಿ ಗೌಡ, “ಚೈತ್ರಾ ನನ್ನ ಕೈಗಳಿಗೆ ಪರಚಿ ಚಿವುಟಿದ್ದಾರೆ” ಎಂದು ಆರೋಪಿಸಿದ್ದರು. ಇದಕ್ಕೆ ಪ್ರತಿಯಾಗಿ ಚೈತ್ರಾ, ನಾನು ಉದ್ದೇಶಪೂರ್ವಕವಾಗಿ ಏನೂ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಬಳಿಕ ಮನೆಯೊಳಗೆ ಮಾತಿನ ಚರ್ಚೆ ನಡೆದಿದ್ದು, ಚೈತ್ರಾ ಅಶ್ವಿನಿ ಬಳಿ ಕ್ಷಮೆಯಾಚಿಸಿದ್ದರು. ಅಶ್ವಿನಿ ಕೂಡ ಕ್ಷಮಿಸಿರುವುದಾಗಿ ಹೇಳಿ, ಅಂದು ಜಗಳಕ್ಕೆ ತಾತ್ಕಾಲಿಕವಾಗಿ ತೆರೆ ಎಳೆದಿದ್ದರು.

ಆದರೆ ಬಿಗ್‌ಬಾಸ್ ಮುಗಿದ ಬಳಿಕ ಈ ವಿಷಯ ಮತ್ತೆ ಜೀವಂತವಾಗಿದೆ. ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಚೈತ್ರಾ ಕುಂದಾಪುರ, ಅಶ್ವಿನಿ ಜೊತೆಗಿನ ಜಗಳದ ಬಗ್ಗೆ ಮತ್ತೆ ಮಾತನಾಡಿದ್ದಾರೆ. “ಆಟದ ವೇಳೆ ನನಗೂ ಗಾಯಗಳಾಗಿವೆ” ಎಂದು ತಮ್ಮ ಕೈಗಳ ಮೇಲೆ ಇರುವ ಗಾಯದ ಗುರುತುಗಳನ್ನು ತೋರಿಸಿದ್ದಾರೆ. ಆಟದ ಕಿತ್ತಾಟದಲ್ಲಿ ಇಬ್ಬರಿಂದಲೂ ತಪ್ಪುಗಳು ಆಗಿವೆ ಎಂಬುದನ್ನು ಒಪ್ಪಿಕೊಂಡ ಅವರು, ಇದನ್ನೆಲ್ಲ ಆಟವಾಗಿಯೇ ನೋಡಿದ್ದೆ ಎಂದು ಹೇಳಿದ್ದಾರೆ.

ಇದರೊಂದಿಗೆ ಚೈತ್ರಾ, ತಮ್ಮ ಬಳಿ ಯಾವುದೇ ಪೈಡ್ ಪಿಆರ್ ಟೀಮ್ ಇರಲಿಲ್ಲ ಎಂಬ ಅಸಮಾಧಾನವನ್ನೂ ಹೊರಹಾಕಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ನಡೆಯುವ ಟ್ರೋಲ್‌, ಆರೋಪ-ಪ್ರತ್ಯಾರೋಪಗಳ ನಡುವೆ ಪಿಆರ್ ಟೀಮ್ ಇದ್ದವರಿಗೆ ಹೆಚ್ಚು ಬೆಂಬಲ ಸಿಗುತ್ತದೆ ಎಂಬ ಅರ್ಥದಲ್ಲಿ ಚೈತ್ರಾ ಮಾತಾಡಿದ್ದಾರೆ ಎನ್ನಲಾಗಿದೆ. ಇದೇ ವಿಚಾರ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ.

ಅಶ್ವಿನಿ ಗೌಡ ಕೂಡ ಇನ್‌ಸ್ಟಾಗ್ರಾಂನಲ್ಲಿ ತಮ್ಮದೇ ಶೈಲಿಯಲ್ಲಿ ಪೋಸ್ಟ್ ಮಾಡಿದ್ದು, “ನನ್ನ ಶಕ್ತಿ ಶಾಂತಿ, ಸ್ಥಿರತೆ ಮತ್ತು ಘನತೆಯಲ್ಲಿ ಬೇರೂರಿದೆ. ನನಗೆ ನಾಟಕೀಯತೆ ಇಲ್ಲ. ಯಾವುದೇ ಕಾರ್ಡ್‌ಗಳನ್ನು ಬಳಸದೆ ನಾನು ದೃಢವಾಗಿ ಆಟ ಆಡಿದ್ದೇನೆ” ಎಂದು ಬರೆದುಕೊಂಡಿದ್ದಾರೆ. ಪೈಡ್ ಪಿಆರ್ ಬಗ್ಗೆ ಟೀಕೆ ಮಾಡಿರುವ ಅಶ್ವಿನಿ, “ಇಲ್ಲಿ ಗೌರವಕ್ಕಿಂತ ಪಿಆರ್‌ಗೆ ಬೆಲೆ ಜಾಸ್ತಿ” ಎಂದು ವ್ಯಂಗ್ಯವಾಡಿದ್ದಾರೆ.

ಈ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿದ ಚೈತ್ರಾ ಕುಂದಾಪುರ, “ನನ್ನ ದೇಹದ ಮೇಲೆ ಉಗುರುಗಳ ಗುರುತುಗಳಿವೆ. ನನಗಿಂತ ಬಲಿಷ್ಠರು ನನ್ನ ಮೇಲೆ ಬಲ ಪ್ರಯೋಗ ಮಾಡಿದ್ದಾರೆ” ಎಂದು ಹೇಳಿಕೊಂಡಿದ್ದಾರೆ. ಜೊತೆಗೆ, ಇದನ್ನೆಲ್ಲ ಹೇಳಲು ನನ್ನ ಬಳಿ ಯಾವುದೇ ಪೈಡ್ ಪಿಆರ್ ಟೀಮ್ ಇಲ್ಲ ಎಂದು ಮತ್ತೆ ಒತ್ತಿಹೇಳಿದ್ದಾರೆ.

ವಿವಾದ ಇಲ್ಲಿಯೇ ಮುಗಿಯಲಿಲ್ಲ. ಅಶ್ವಿನಿ ಗೌಡ ಪೋಸ್ಟ್‌ಗೆ ಜಾಹ್ನವಿ ಕಾಮೆಂಟ್ ಮಾಡಿ ಚೈತ್ರಾ ಕುರಿತು ಕಟುವಾಗಿ ಪ್ರತಿಕ್ರಿಯಿಸಿದ್ದಾರೆ. ಇದಕ್ಕೆ ಚೈತ್ರಾ ಕೂಡ ತಿರುಗೇಟು ನೀಡಿದ್ದು, ಕಾಮೆಂಟ್ ಬಾಕ್ಸ್‌ನಲ್ಲೇ ಜಾಹ್ನವಿ ಮತ್ತು ಚೈತ್ರಾ ನಡುವೆ ವಾಗ್ಧಾಳಿ ನಡೆದಿದೆ. ಈ ಮೂಲಕ ಅಶ್ವಿನಿ–ಚೈತ್ರಾ ಕದನಕ್ಕೆ ಜಾಹ್ನವಿ ಎಂಟ್ರಿ ನೀಡಿದಂತಾಗಿದೆ.

ಇನ್ನೊಂದೆಡೆ, ಚೈತ್ರಾ ಕುಂದಾಪುರ ತಮ್ಮ ಇನ್‌ಸ್ಟಾಗ್ರಾಂನಲ್ಲಿ “ಆಟ ಮುಗಿದ ಮೇಲೆ ಅದನ್ನು ಅಲ್ಲಿಯೇ ಬಿಡುವುದು ಮ್ಯಾಚ್ಯುರಿಟಿ” ಎಂದು ಬರೆದುಕೊಂಡಿದ್ದಾರೆ. ಅಶ್ವಿನಿ ಗೌಡ ಉದ್ದೇಶಪೂರ್ವಕವಾಗಿ ಮಾಡಿದರು ಎಂದು ಹೇಳಲು ಆಗಲ್ಲ, ಅದು ಆಟದ ವೇಳೆ ಆಗಿದೆ ಎಂದು ಹೇಳಿಕೊಂಡರೂ, ಸೋಶಿಯಲ್ ಮೀಡಿಯಾದಲ್ಲಿ ನಡೆಯುತ್ತಿರುವ ಪ್ರತಿಕ್ರಿಯೆಗಳು ಮತ್ತೆ ಬೆಂಕಿ ಹಚ್ಚಿದಂತಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (17)

ಶನಿವಾರದ ಭವಿಷ್ಯ: ಈ ರಾಶಿಯವರು ಇಂದು ಆಸ್ತಿ ವಿಚಾರದಲ್ಲಿ ಎಚ್ಚರದಿಂದಿರಬೇಕು..!

by ಯಶಸ್ವಿನಿ ಎಂ
March 28, 2026 - 6:42 am
0

Untitled design (16)

ಇಂಧನ ಬಿಕ್ಕಟ್ಟು ಎದುರಿಸಲು ಕೋವಿಡ್ ಮಾದರಿ ಒಗ್ಗಟ್ಟು ಅಗತ್ಯ: ರಾಜ್ಯಗಳಿಗೆ ಪ್ರಧಾನಿ ಮೋದಿ ಕರೆ

by ಯಶಸ್ವಿನಿ ಎಂ
March 27, 2026 - 11:26 pm
0

Untitled design (15)

LPG ಸಿಲಿಂಡರ್ ಅಭಾವ: 3 ಲಕ್ಷ ಮರಗಳ ಕಟಾವಿಗೆ ಅರಣ್ಯ ಇಲಾಖೆ ಗ್ರೀನ್ ಸಿಗ್ನಲ್

by ಯಶಸ್ವಿನಿ ಎಂ
March 27, 2026 - 11:07 pm
0

Untitled design (14)

RCB ಮೊದಲ ಪಂದ್ಯಕ್ಕೆ ಮಳೆ ಅಡ್ಡಿಯಾಗುತ್ತಾ ? ಇಲ್ಲಿದೆ ಹವಾಮಾನ ಇಲಾಖೆಯ ಲೇಟೆಸ್ಟ್ ರಿಪೋರ್ಟ್

by ಯಶಸ್ವಿನಿ ಎಂ
March 27, 2026 - 10:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (16)
    ಇಂಧನ ಬಿಕ್ಕಟ್ಟು ಎದುರಿಸಲು ಕೋವಿಡ್ ಮಾದರಿ ಒಗ್ಗಟ್ಟು ಅಗತ್ಯ: ರಾಜ್ಯಗಳಿಗೆ ಪ್ರಧಾನಿ ಮೋದಿ ಕರೆ
    March 27, 2026 | 0
  • Untitled design (15)
    LPG ಸಿಲಿಂಡರ್ ಅಭಾವ: 3 ಲಕ್ಷ ಮರಗಳ ಕಟಾವಿಗೆ ಅರಣ್ಯ ಇಲಾಖೆ ಗ್ರೀನ್ ಸಿಗ್ನಲ್
    March 27, 2026 | 0
  • Untitled design (14)
    RCB ಮೊದಲ ಪಂದ್ಯಕ್ಕೆ ಮಳೆ ಅಡ್ಡಿಯಾಗುತ್ತಾ ? ಇಲ್ಲಿದೆ ಹವಾಮಾನ ಇಲಾಖೆಯ ಲೇಟೆಸ್ಟ್ ರಿಪೋರ್ಟ್
    March 27, 2026 | 0
  • Untitled design (13)
    ಜೋಜಿಲಾ ಪಾಸ್‌ನಲ್ಲಿ ಹಿಮಪಾತಕ್ಕೆ ಸಿಲುಕಿ 7 ಮಂದಿ ದುರ್ಮರಣ, ಹಲವರ ಸ್ಥಿತಿ ಗಂಭೀರ
    March 27, 2026 | 0
  • Untitled design (11)
    ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ
    March 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version