ದಿಯಾ ಖ್ಯಾತಿಯ ಪೃಥ್ವಿ ಅಂಬಾರ್ ಹಾಗೂ ದೊಡ್ಮನೆ ಹುಡ್ಗಿ ಧನ್ಯ ರಾಮ್ ಕುಮಾರ್ ನಟನೆಯ ಚೌಕಿದಾರ್ ಸಿನಿಮಾದ ಮೂರನೇ ಹಾಡು ಬಿಡುಗಡೆಯಾಗಿದೆ. ಈ ಹಿಂದೆ ರಿಲೀಸ್ ಆಗಿದ್ದ ಎರಡು ಹಾಡುಗಳಿಗೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದ್ದು, ಇದೀಗ ಚಿತ್ರತಂಡ ಇಷ್ಟ ಆದೆ ನೀನು ಎಂಬ ಮೆಲೋಡಿ ಗೀತೆಯನ್ನು ಅನಾವರಣ ಮಾಡಿದೆ. ಎಂಟಿಆರ್ ಮ್ಯೂಸಿಕ್ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿರುವ ಇಷ್ಟ ಆದೆ ನೀನು ಹಾಡಿಗೆ ಪ್ರಮೋದ್ ಮರವಂತೆ ಸಾಹಿತ್ಯ ಬರೆದಿದ್ದಾರೆ. ಸಚಿನ್ ಬಸ್ರೂರ್ ಸಂಗೀತ ಒದಗಿಸುವುದರ ಜೊತೆಗೆ ಪೃಥ್ವಿ ಭಟ್ ಜೊತೆಗೂಡಿ ಧ್ವನಿಯಾಗಿದ್ದಾರೆ.
ರಥಾವರ ಸಿನಿಮಾ ಖ್ಯಾತಿಯ ಚಂದ್ರಶೇಖರ ಬಂಡಿಯಪ್ಪ ಕಥೆ ಬರೆದು ಚೌಕಿದಾರ್ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಹಿರಿಯ ನಟ ಸಾಯಿ ಕುಮಾರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಹಿರಿಯ ನಟಿ ಶ್ವೇತಾ, ಸುಧಾರಾಣಿ, ಧರ್ಮ, ಬಿಗ್ ಬಾಸ್ ಖ್ಯಾತಿಯ ಗಿಲ್ಲಿ ನಟ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ.
ವಿ ಎಸ್ ಎಂಟರ್ಟೈನ್ಮೆಂಟ್ ಬ್ಯಾನರ್ನಡಿ ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಾಣ ಮಾಡಿದ್ದಾರೆ. ವಿದ್ಯಾದೇವಿ ನಿರ್ಮಾಣದಲ್ಲಿ ಸಾಥ್ ಕೊಟ್ಟಿದ್ದಾರೆ. ‘ಚೌಕಿದಾರ್’ ಬಹುಭಾಷೆಯಲ್ಲಿ ಮೂಡಿ ಬರುತ್ತಿದ್ದು, ಈ ಚಿತ್ರದ ಮೂಲಕ ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ ಯಾವುದೋ ಹೊಸ ಕಥೆಯನ್ನು ಹೇಳಲು ಸಜ್ಜಾಗಿದ್ದಾರೆ.
ಖ್ಯಾತ ತಾರೆಯಿಂದ ರಿಲೀಸ್ ಡೇಟ್ ಅನೌನ್ಸ್
ಚೌಕಿದಾರ್ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈಗಾಗಲೇ ಸೆನ್ಸಾರ್ ನಿಂದ ಯು/ಎ ಸರ್ಟಿಫಿಕೇಟ್ ಪಡೆದಿರುವ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರರಂಗದ ಖ್ಯಾತ ತಾರೆಯೊಬ್ಬರು ಬಿಡುಗಡೆ ಮಾಡಲಿದ್ದಾರೆ.
ಚೌಕಿದಾರ್ ಸಿನಿಮಾದ ‘ಓ ಮೈ ಬ್ರೋ’ ಸಾಂಗ್ಗೆ ಭರ್ಜರಿ ರೆಸ್ಪಾನ್ಸ್..ಒಂದು ಮಿಲಿಯನ್ ವೀಕ್ಷಣೆ
ನಿರ್ದೇಶಕ ಚಂದ್ರಶೇಖರ್ ಸಾರಥ್ಯದ ಚೌಕಿದಾರ್ ಸಿನಿಮಾ ಈಗಾಗಲೇ ತನ್ನ ಕಂಟೆಂಟ್ ಮೂಲಕ ಪ್ರೇಕ್ಷಕರ ವಲಯದಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಹಾಡುಗಳು ಈಗಾಗಲೇ ಹಿಟ್ ಲೀಸ್ಟ್ ಸೇರಿವೆ. ಇತ್ತೀಚಿಗೆ ಬಿಡುಗಡೆಯಾಗಿದ್ದ ಓ ಮೈ ಬ್ರೋ ಸಾಂಗ್ ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಎಂಆರ್ ಟಿ ಮ್ಯೂಸಿಕ್ ಯೂಟ್ಯೂಬ್ ನಲ್ಲಿ ರಿಲೀಸ್ ಆಗಿದ್ದ ಈ ಹಾಡು ಈಗ ಒಂದು ಮಿಲಿಯನ್ ಜನರನ್ನು ತಲುಪಿದೆ. ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಬಿಡುಗಡೆಯಾಗಿದ್ದ ಓ ಮೈ ಬ್ರೋ ಸಾಂಗ್ ಸಂಗೀತ ಪ್ರಿಯರ ಮೆಚ್ಚುಗೆ ಪಡೆದುಕೊಂಡಿದೆ.
ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿರುವ ಓ ಮೈ ಬ್ರೋ ಗೀತೆಗೆ ಖ್ಯಾತ ಗಾಯಕ ಕೈಲಾಸ್ ಖೇರ್ ಧ್ವನಿಯಾಗಿದ್ದಾರೆ. ಸಚಿನ್ ಬಸ್ರೂರ್ ಮ್ಯೂಸಿಕ್ ಒಳಗೊಂಡಿರುವ ಈ ಹಾಡಿಗೆ ನಾಯಕ ಪೃಥ್ವಿ ಅಂಬಾರ್ ಹಾಗೂ ಹಿರಿಯ ನಟ ಸಾಯಿಕುಮಾರ್ ಬಿಂದಾಸ್ ಆಗಿ ಕುಣಿದಿದ್ದಾರೆ.
ಕಲ್ಲಹಳ್ಳಿ ಚಂದ್ರಶೇಖರ್ ಚೌಕಿದಾರ್ ಸಿನಿಮಾವನ್ನು ನಿರ್ಮಾಣ ಮಾಡಿದ್ದು, ವಿದ್ಯಾದೇವಿ ಸಹ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ. ಧನ್ಯಾ ರಾಮ್ಕುಮಾರ್ ನಾಯಕ ನಟಿಯಾಗಿ ನಟಿಸಿದ್ದಾರೆ. ಚಿತ್ರರಂಗದಲ್ಲಿ ಐವತ್ತು ವರ್ಷ ಪೂರೈಸಿರುವ ಹಿರಿಯ ನಟ ಸಾಯಿ ಕುಮಾರ್ ಅವರು ಚೌಕಿದಾರ್ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಚೈತ್ರದ ಪ್ರೇಮಾಂಜಲಿ ಚಿತ್ರದ ನಾಯಕಿ ಶ್ವೇತಾ, ಸುಧಾರಾಣಿ ಪ್ರಮುಖ ಪಾತ್ರಗಳಲ್ಲಿದ್ದಾರೆ.
ಸಚಿನ್ ಬಸ್ರೂರು ಸಂಗೀತ, ಸಿದ್ದು ಕಂಚನಹಳ್ಳಿ ಛಾಯಾಗ್ರಹಣವಿದೆ. ವಿ.ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ, ಸಂತೋಷ್ ನಾಯಕ್ ಹಾಡುಗಳಿಗೆ ಸಾಹಿತ್ಯ ಒದಗಿಸಿದ್ದು,ಮುರುಳಿ ಮಾಸ್ಟರ್ ಕೋರಿಯೋಗ್ರಫಿ ಮಾಡಿದ್ದಾರೆ. ಜ್ಞಾನೇಶ್ ಮಾತಾಡ್ ಸಂಕಲನ, ಜೈ ಸುಬ್ರಹ್ಮಣ್ಯ ಸಾಹಸ ದೃಶ್ಯಗಳು ಚಿತ್ರಕ್ಕಿದೆ. ‘ಚೌಕಿದಾರ್’ ಬಹು ಭಾಷೆಗಳಲ್ಲಿ ಮೂಡಿ ಬರುತ್ತಿದೆ. ಇದುವರೆಗೆ ಲವರ್ ಬಾಯ್ ಆಗಿದ್ದ ಪೃಥ್ವಿ ಈ ಚಿತ್ರದಲ್ಲಿ ಬೇರೆಯದ್ದೇ ಅವತಾರ ತಾಳಿದ್ದಾರೆ.





