ದರ್ಶನ್ ಪರ ವಕೀಲರು ಸಲ್ಲಿಸಿದ್ದ ಅರ್ಜಿಯಲ್ಲಿ, ಜೈಲು ಅಧಿಕಾರಿಗಳು ಕೋರ್ಟ್ ಆದೇಶದಂತೆ ಕನಿಷ್ಠ ಸೌಲಭ್ಯ ನೀಡುತ್ತಿಲ್ಲ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದಾರೆ ಎಂಬ ಗಂಭೀರ ಆರೋಪ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಸ್ವತಃ ಪರಿಶೀಲನೆ ನಡೆಸಬೇಕು ಎಂಬ ಮನವಿ ಅರ್ಜಿಯಲ್ಲಿ ಮಾಡಲಾಗಿತ್ತು.
ಈ ಅರ್ಜಿಯ ವಿಚಾರಣೆ ವೇಳೆ, ಹೈಕೋರ್ಟ್ ಕಾನೂನು ಸೇವಾ ಪ್ರಾಧಿಕಾರದ ಸದಸ್ಯರಿಗೆ ಜೈಲು ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದೆ.
ಜೈಲಿನಲ್ಲಿ ದರ್ಶನ್ ಅವರಿಗೆ ಕನಿಷ್ಠ ಸೌಲಭ್ಯ ನೀಡಲಾಗಿದೆಯೇ ಎಂಬುದನ್ನು ಪರಿಶೀಲನೆ ನಡೆಸಿ, ಅಕ್ಟೋಬರ್ 18ರೊಳಗೆ ವರದಿ ಸಲ್ಲಿಸಬೇಕು.ಕೋರ್ಟ್ ಆದೇಶದ ಪಾಲನೆ ಸರಿಯಾಗಿ ನಡೆದಿದೆಯೇ ಎಂಬುದನ್ನೂ ವರದಿಯಲ್ಲಿ ಉಲ್ಲೇಖಿಸಬೇಕು ಎಂದು ನ್ಯಾಯಲಯ ಸೂಚಿಸಿದೆ.
ಜೈಲು ಅಧಿಕಾರಿಗಳು ಈಗಾಗಲೇ ಕೋರ್ಟ್ ಆದೇಶದಂತೆ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಹೈಕೋರ್ಟ್ಗೆ ಮಾಹಿತಿ ನೀಡಿದರೆ, ದರ್ಶನ್ ಪರ ವಕೀಲರು ಅದನ್ನು ತಳ್ಳಿ, ವಾಸ್ತವದಲ್ಲಿ ಸೌಲಭ್ಯ ನೀಡಿಲ್ಲ ಹಾಗೂ ಶಾರೀರಿಕ ಹಿಂಸೆ ನೀಡಲಾಗಿದೆ ಎಂದು ವಾದಿಸಿದರು.ಈ ಸಂಬಂಧ ಸಿಆರ್ಪಿಸಿ ಸೆಕ್ಷನ್ 310ರ ಅಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮುಂದಿನ ದಿನಾಂಕಕ್ಕೆ ಮುಂದೂಡಲಾಗಿದೆ.