ನಟಿ ದಿವ್ಯಾ ಸುರೇಶ್ ವಿರುದ್ದ ಹಿಟ್ ಅಂಡ್ ರನ್ ಕೇಸ್..!

Untitled design 2025 10 24t120846.834

ಬೆಂಗಳೂರು: ಕನ್ನಡ ಚಿತ್ರರಂಗದ ನಟಿ ದಿವ್ಯಾ ಸುರೇಶ್ ವಿರುದ್ಧದ ಹಿಟ್ ಅಂಡ್ ರನ್ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಬನಶಂಕರಿಯಲ್ಲಿ ಈ ಘಟನೆ ನಡೆದಿದೆ.

ಇದಕ್ಕೆ ಸಂಬಂಧಿಸಿದಂತೆ ಕಿರಣ್ ಎಂಬುವವರು ತಮ್ಮ ಸಂಬಂಧಿ ಅನಿತಾ ಅವರಿಗೆ ಗಂಭೀರ ಗಾಯವಾಗಿರುವ ಬಗ್ಗೆ ದೂರಿನಲ್ಲಿ ತಿಳಿಸಿದ್ದಾರೆ. ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನ ಪ್ರಕಾರ, ದಿವ್ಯಾ ಸುರೇಶ್ ಚಾಲನೆ ಮಾಡುತ್ತಿದ್ದ ಕಾರು ಬೈಕ್‌ಗೆ ಡಿಕ್ಕಿ ಹೊಡೆದು ಓಡಿಹೋಗಿದ್ದಾರೆ. ಈ ಘಟನೆಯಿಂದ ಅನಿತಾ ಅವರ ಕಾಲಿನ ಮಂಡಿ ಚಿಪ್ಪು ಒಡೆದುಹೋಗಿದ್ದು, ಒಂದು ವರ್ಷಕ್ಕೂ ಹೆಚ್ಚು ಕಾಲ ಓಡಾಡಲು ಸಾಧ್ಯವಾಗದ ಸ್ಥಿತಿ ಉಂಟಾಗಿದೆ.

ಕಿರಣ್ ನೀಡಿದ ಹೇಳಿಕೆಯ ಪ್ರಕಾರ, ನಮ್ಮ ಸಂಬಂಧಿ ಅನುಷಾ ಅವರಿಗೆ ಹುಷಾರಿಲ್ಲದ ಕಾರಣ ಆ ರಾತ್ರಿ ಗಿರಿನಗರ ಆಸ್ಪತ್ರೆಗೆ ಹೋಗುತ್ತಿದ್ದೆವು. ಬೈಕ್‌ನಲ್ಲಿ ನಾನು ಚಾಲನೆ ಮಾಡುತ್ತಿದ್ದೆ, ಮಧ್ಯೆ ಅನುಷಾ ಕುಳಿತಿದ್ದರು ಮತ್ತು ಹಿಂದೆ ಅನಿತಾ ಕುಳಿತಿದ್ದರು. ಏಕಾಏಕಿ ಕ್ರಾಸ್‌ನಲ್ಲಿ ಬಂದ ದಿವ್ಯಾ ಸುರೇಶ್ ಅವರ ಕಾರು ಅನಿತಾ ಅವರ ಕಾಲಿಗೆ ಗುದ್ದಿತು. ನಾವೆಲ್ಲರೂ ಕೆಳಗೆ ಬಿದ್ದೆವು. ಕೂಗಿದರೂ ಕಾರು ನಿಲ್ಲಿಸದೇ ದಿವ್ಯಾ ಸುರೇಶ್ ಎಸ್ಕೇಪ್ ಆದರು. ಬಳಿಕ ನಾವು ಬಂದು ಬ್ಯಾಟರಾಯನಪುರ ಠಾಣೆಯಲ್ಲಿ ದೂರು ನೀಡಿದೆವು. ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಈ ಘಟನೆಯಿಂದ ಅನಿತಾ ಅವರಿಗೆ ಗಂಭೀರ ಗಾಯವಾಗಿದೆ. ಕಾಲಿನ ಮಂಡಿ ಚಿಪ್ಪು ಒಡೆದುಹೋಗಿದ್ದು, ಬಿಜೆಎಸ್ ಆಸ್ಪತ್ರೆಯಲ್ಲಿ ಆಪರೇಷನ್ ಮಾಡಲಾಗಿದೆ. ಚಿಕಿತ್ಸೆಗೆ ಸುಮಾರು ಎರಡು ಲಕ್ಷ ರೂಪಾಯಿ ಖರ್ಚಾಗಿದೆ ಎಂದು ದುಋುದಾರರು ತಿಳಿಸಿದ್ದಾರೆ. ನಾವು ಮೈಸೂರಿನಿಂದ ಬಂದು ಬೆಂಗಳೂರಿನಲ್ಲಿ ಕ್ಯಾಬ್ ಓಡಿಸಿ ಜೀವನ ನಡೆಸುತ್ತಿದ್ದೇವೆ. ಅನಿತಾ ಟೈಲರಿಂಗ್ ಕೆಲಸ ಮಾಡುತ್ತಾರೆ. ಈ ಗಾಯದಿಂದ ಒಂದು ವರ್ಷಕ್ಕೂ ಹೆಚ್ಚು ಕಾಲ ಓಡಾಡಲು ಸಾಧ್ಯವಾಗದ ಸ್ಥಿತಿ ಉಂಟಾಗಿದೆ. ದಿವ್ಯಾ ಸುರೇಶ್ ಅವರು ಇದುವರೆಗೂ ಅನಿತಾ ಅವರ ಸ್ಥಿತಿ ವಿಚಾರಿಸಿಲ್ಲ. ದಯವಿಟ್ಟು ನಮಗೆ ನ್ಯಾಯ ಮತ್ತು ಪರಿಹಾರ ಕೊಡಿಸಿ ಎಂದು ಕಿರಣ್ ಮನವಿ ಮಾಡಿಕೊಂಡಿದ್ದಾರೆ.

ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದಿವ್ಯಾ ಸುರೇಶ್ ಅವರ ವಿರುದ್ಧ ಐಪಿಸಿ ಸೆಕ್ಷನ್ 279, 338 ಮತ್ತು 304ಎ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ದಿವ್ಯಾ ಸುರೇಶ್ ಅವರನ್ನು ವಿಚಾರಣೆಗೆ ಕರೆದಿದ್ದು, ಸಿಸಿಟಿವಿ ದೃಶ್ಯಗಳು ಮತ್ತು ಸಾಕ್ಷಿಗಳ ಹೇಳಿಕೆಯನ್ನು ಆಧರಿಸಿ ತನಿಖೆ ನಡೆಸುತ್ತಿದ್ದಾರೆ. ದಿವ್ಯಾ ಸುರೇಶ್ ಅವರು ಘಟನೆಯ ನಂತರ ಕಾರನ್ನು ಬಿಟ್ಟು ಓಡಿಹೋದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Exit mobile version