ಅಕ್ಟೋಬರ್ 16 ರಂದು ಬಿಡುಗಡೆ ಆಗಲಿದೆ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಬೃಂದಾವಿಹಾರಿ”

Untitled design (27)

ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ, ಸಮೃದ್ಧಿ ವಿ ಮಂಜುನಾಥ್ ಅವರ ಅದ್ದೂರಿ ನಿರ್ಮಾಣದ ಹಾಗೂ ಶ್ರೀನಿವಾಸರಾಜು ನಿರ್ದೇಶನದ ಬಹು ನಿರೀಕ್ಷಿತ “ಬೃಂದಾ ವಿಹಾರಿ” ಚಿತ್ರ ಇದೇ ಅಕ್ಟೋಬರ್ 16 ರಂದು ಬಿಡುಗಡೆಯಾಗುತ್ತಿದೆ. ಗೋಲ್ಡನ್ ಸ್ಟಾರ್ ಗಣೇಶ್ ಅವರ ಹುಟ್ಟುಹಬ್ಬದ ದಿನ ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಗಣೇಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿ, ಬಿಡುಗಡೆಯ ದಿನಾಂಕ ಘೋಷಣೆ ಮಾಡಿದೆ.

ಗಣೇಶ್ ಹಾಗೂ ಶ್ರೀನಿವಾಸರಾಜು ಅವರ ಕಾಂಬಿನೇಶನ್ ನಲ್ಲಿ ಮೂಡಿಬಂದಿದ್ದ “ಕೃಷ್ಣಂ ಪ್ರಣಯ ಸಖಿ” ಚಿತ್ರ ಭರ್ಜರಿ ಯಶಸ್ಸು ಕಂಡಿತ್ತು. ಆ ಚಿತ್ರದ ನಂತರ ಇವರಿಬ್ಬರ ಕಾಂಬಿನೇಶನ್ ನಲ್ಲಿ ಬರುತ್ತಿರುವ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಸದಭಿರುಚಿಯ ಚಿತ್ರಗಳ ನಿರ್ಮಾಪಕ ಸಮೃದ್ಧಿ ಮಂಜುನಾಥ್ ಅವರು ಯಾವುದೇ ಕೊರತೆ ಬಾರದ ಹಾಗೆ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಜನಪ್ರಿಯವಾಗಿದ್ದು, ಗಣೇಶ್ ಅವರ ಅಭಿಮಾನಿಗಳು ಚಿತ್ರ ಬಿಡುಗಡೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಹೇಶಮ್ ಅಬ್ದುಲ್ ವಹಾಬ್ ಸಂಗೀತ ನಿರ್ದೇಶನ ಹಾಗೂ ವೆಂಕಟ್ ಪ್ರಸಾದ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಗಣೇಶ್ ಅವರಿಗೆ ನಾಯಕಿಯರಾಗಿ ದೇವಿಕಾ ಭಟ್ ಹಾಗೂ ಮಾಳವಿಕ ಶರ್ಮ ಅಭಿನಯಿಸಿದ್ದಾರೆ.

ಗಣೇಶ್ ಅವರ ಇನ್ನೊಂದು ಸಿನಿಮಾ ಕೂಡಾ ಅಕ್ಟೋಬರ್ ನಲ್ಲಿ ತೆರೆ ಮೇಲೆ ಬರಲು ಸಜ್ಜಾಗಿದೆ. ಪೀಪಲ್ ಮೀಡಿಯಾ ಫ್ಯಾಕ್ಟರಿ ಲಾಂಛನದಲ್ಲಿ ವಿಶ್ವಪ್ರಸಾದ್ ಅವರು ಅದ್ದೂರಿಯಾಗಿ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ಧನಂಜಯ್ ಚೊಚ್ಚಲ ನಿರ್ದೇಶನದ ಹಾಗೂ ಗೋಲ್ಟನ್ ಸ್ಟಾರ್ ಗಣೇಶ್‍ ಅಭಿನಯದ ಬಹು ನಿರೀಕ್ಷಿತ ‘ಪಿನಾಕ’ ಚಿತ್ರ ಇದೇ ಅಕ್ಟೋಬರ್ 2 ರಂದು ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. 

ಸ್ಯಾಂಡಲ್​ವುಡ್‌‌ನ ‘ರೊಮ್ಯಾಂಟಿಕ್ ಹೀರೋ’ ಗೋಲ್ಡನ್ ಸ್ಟಾರ್ ಗಣೇಶ್‌ಗೆ ಇಂದು 48ನೇ ವಸಂತಕ್ಕೆ ಕಾಲಿಡ್ತಿದ್ದಾರೆ, ಈ ವಿಶೇಷ ದಿನದಂದೇ ತಮ್ಮ ಅಭಿಮಾನಿಗಳಿಗೆ ಬ್ಯಾಕ್-ಟು-ಬ್ಯಾಕ್ ಎರಡು ಸಿನಿಮಾಗಳ ರಿಲೀಸ್ ಡೇಟ್ ಅನೌನ್ಸ್ ಮಾಡೋ ಮೂಲಕ ಡಬಲ್ ಸರ್ಪ್ರೈಸ್ ಕೊಟ್ಟಿದ್ದಾರೆ. ಗಣಿ ಸಿನಿಮಾಗಳಿಂದ ತುಂಬಿ ತುಳುಕಲಿರೋ ಅಕ್ಟೋಬರ್ ತಿಂಗಳ ಧಮಾಕ ಜೊತೆ ಬರ್ತ್ ಡೇ ಬಾಯ್ ಇಂದು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.

Exit mobile version