• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮ್ಯಾಸಿವ್ ಸ್ಟಾರ್ ನಟ ರಾಜವರ್ಧನ್ ನಿರ್ಮಾಣ ಸಂಸ್ಥೆ ಹಾಗೂ ಚಿತ್ರದ ಟೈಟಲ್ ಬಿಡುಗಡೆ

admin by admin
May 7, 2025 - 11:08 am
in ಸಿನಿಮಾ
0 0
0
Web (67)

ಚಂದನವನದ ಹಿರಿಯ ನಟ ಡಿಂಗ್ರಿ ನಾಗರಾಜ್ ರವರ ಸುಪುತ್ರ ನಟ ರಾಜವರ್ಧನ್ ಈಗ ನಿರ್ಮಾಪಕರಾಗಿ ಹೆಜ್ಜೆ ಇಡುತ್ತಿದ್ದಾರೆ. ನಗರದ ಜಿಟಿ ಮಾಲ್ ನಲ್ಲಿರುವ MMB Legacy ಯಲ್ಲಿ ತಮ್ಮ ನಿರ್ಮಾಣ ಸಂಸ್ಥೆಯಾದ Barn Swallow company ಪ್ರೊಡಕ್ಷನ್ ಹೌಸ್ ಮೂಲಕ ಸಾಲು ಸಾಲಾಗಿ ಚಿತ್ರ ಮಾಡಲು ಸಿದ್ಧರಾಗಿದ್ದು , “ಜಾವಾ” ಎಂಬ ಚಿತ್ರದ ಟೈಟಲ್ ರಿವಿಲ್ ಮಾಡಲಾಯಿತು. ಈ ಚಿತ್ರವನ್ನು ಪತ್ರಕರ್ತ ಹಾಗೂ ಬರಹಗಾರರಾದ ದೇವಾ ಚಕ್ರವರ್ತಿ ನಿರ್ದೇಶನ ಮಾಡ್ತಿದ್ದು, ನಟರಾಗಿ ಮ್ಯಾಸಿವ್ ಹೀರೋ ರಾಜವರ್ಧನ್ ನಾಯಕನಾಗಿ ಅಭಿಸುತ್ತಿದ್ದು , ನಟಿ ರಾಗಿಣಿ ದ್ವಿವೇದಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಹಂಚಿಕೊಳ್ಳಲು ಚಿತ್ರತಂಡ ಪತ್ರಿಕಾಗೋಷ್ಠಿಯನ್ನು ಆಯೋಜನೆ ಮಾಡಿತ್ತು.

ಈ ಚಿತ್ರದ ನಟ ಹಾಗೂ ನಿರ್ಮಾಪಕ ರಾಜವರ್ಧನ್ ಮಾತನಾಡುತ್ತಾ ನಮ್ಮದು ಚಿತ್ರೋದ್ಯಮದ ಕುಟುಂಬ, ನಮ್ಮ ತಂದೆ ಡಿಂಗ್ರಿ ನಾಗರಾಜ್ 40 ವರ್ಷಗಳಿಂದ ಚಿತ್ರಗಳಲ್ಲಿ ನಟಿಸಿ , ಸೀರಿಯಲ್ , ಸಿನಿಮಾಗಳನ್ನ ನಿರ್ಮಿಸಿ , ನಿರ್ದೇಶಿಸಿ ಪ್ರೇಕ್ಷಕರನ್ನ ರಂಜಿಸುತ್ತ ಮನ ಗೆದ್ದಿದ್ದಾರೆ. ನಾನು ಕೂಡ ಚಿತ್ರರಂಗದಲ್ಲಿ ನಟನಾಗಿ ಬಿಚ್ಚುಗತ್ತಿ , ಪ್ರಣಯಂ , ಹಿರಣ್ಯ , ಗಜರಾಮ ಸೇರಿದಂತೆ ವಿಭಿನ್ನ ಚಿತ್ರಗಳಲ್ಲಿ ಅಭಿನಯಿಸುತ್ತ ಪ್ರೇಕ್ಷಕರ ಮನಸ್ಸನ್ನು ಗೆಲ್ಲುತ್ತಾ ಸಾಗಿದ್ದೇನೆ. ಸುಮಾರು ಎರಡು ವರ್ಷಗಳ ಹಿಂದೆ ಪೂರ್ವ ತಯಾರಿ ಮಾಡಿಕೊಂಡು ನನ್ನದೇ ನಿರ್ಮಾಣ ಸಂಸ್ಥೆಯಾದ Barn Swallow company ಪ್ರೊಡಕ್ಷನ್ ಹೌಸ್ ಮೂಲಕ ಜಾವಾ ಎಂಬ ಚಿತ್ರವನ್ನು ನಿರ್ಮಿಸುವುದರ ಜೊತೆಗೆ ನಾಯಕನಾಗಿ ಕೂಡ ಅಭಿನಯಿಸಿದ್ದೇನೆ.

RelatedPosts

ಮೂರು ದಶಕಗಳ ಬಳಿಕ ಮರಳುತ್ತಿದೆ ಶಾಂತಿ ಕ್ರಾಂತಿ

ಏಳು ಸಮುದ್ರ ದಾಟಿದ ರಾಜಮೌಳಿ-ಮಹೇಶ್ ಬಾಬು..!

7 ದಿನದಲ್ಲಿ 10 ಸಾವಿರ ಕೋಟಿ ಬಾಚಿದ ಸ್ಪೈಡರ್ ಮ್ಯಾನ್

ದೀಪಾವಳಿಗೆ ಗ್ರ್ಯಾಂಡ್ ಎಂಟ್ರಿ: ನವೆಂಬರ್ 6ಕ್ಕೆ ವಿಶ್ವಾದ್ಯಂತ ಬಿಡುಗಡೆಯಾಗಲಿದೆ ‘ರಾಮಾಯಣ’

ADVERTISEMENT
ADVERTISEMENT

Whatsapp image 2025 05 07 at 9.49.45 am

ಇಂದು ವಿಶೇಷವಾಗಿ ನಮ್ಮ ಸಂಸ್ಥೆಯ ಬ್ಯಾನರ್ ಹಾಗೂ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡಿದ್ದೇವೆ. ನಮ್ಮ ಚಿತ್ರದ ನಿರ್ದೇಶಕ ದೇವ ಚಕ್ರವರ್ತಿ ನನ್ನ ಆರಂಭದ ದಿನಗಳಿಂದಲೂ ಆತ್ಮೀಯರು , ನನಗೆ ಮಾರ್ಗದರ್ಶನ ಮಾಡುತ್ತಾ ಬಂದಿದ್ದಾರೆ. ಕಥೆ ಆಯ್ಕೆ ವಿಚಾರದಾಗ್ಲಿ , ನನ್ನ ಬೆಳವಣಿಗೆಗಾಗಿ ಬಹಳಷ್ಟು ಸಹಕಾರಿಯಾಗಿ ನಿಂತಿದ್ದಾರೆ. ಈಗ ಅವರೇ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಕಥೆ ಕುತೂಹಲಕಾರಿಯಾಗಿದ್ದು, 80ರ ಕಾಲಘಟ್ಟದಲ್ಲಿ ಚಿತ್ರರಂಗದಲ್ಲಿ ನಡೆದಂತಹ ಘಟನೆ ಚಿತ್ರೋದ್ಯಮದ ಮಂದಿಗೆ ಹೆಚ್ಚು ಈ ವಿಚಾರ ಗೊತ್ತಿಲ್ಲ, ಇಂತಹ ಇಂಟರೆಸ್ಟಿಂಗ್ ಕಥೆಯನ್ನು ಪೂರ್ವ ತಯಾರಿ ಮಾಡಿಕೊಂಡು ಚಿತ್ರವನ್ನು ಆರಂಭಿಸಿದ್ದೇವೆ. ನಮ್ಮ ಸಂಸ್ಥೆಯಲ್ಲಿ ಈಗಾಗಲೇ ನಾಲ್ಕು ಕಥೆಗಳಿದೆ ಬೇರೆ ಬೇರೆ ಕಲಾವಿದರಿಗೂ ಅವಕಾಶ ನೀಡುವ ಆಲೋಚನೆ ಇದೆ. ಈ ನಮ್ಮ ನೂತನ ಸಂಸ್ಥೆಗೆ ನಿಮ್ಮೆಲ್ಲರ ಪ್ರೀತಿ , ಸಹಕಾರ ಪ್ರೋತ್ಸಾಹ ಇರಲಿ ಎಂದು ಕೇಳಿಕೊಂಡರು.

Whatsapp image 2025 05 07 at 9.49.47 am
ನಾಯಕಿಯಾಗಿ ಅಭಿನಯಿಸುತ್ತಿರುವ ರಾಗಿಣಿ ದ್ವಿವೇದಿ ಮಾತನಾಡುತ್ತಾ ನಿರ್ದೇಶಕರು ಬಹಳಷ್ಟು ಸಿದ್ಧತೆ ಮಾಡಿಕೊಂಡು ಬಂದು ನನಗೆ ಮೊದಲು ಒಂದು ಕಥೆ ಹೇಳಿದರು, ತದನಂತರ ಈ ಕಥೆಯನ್ನ ಹೇಳಿದ ರೀತಿ ಇಷ್ಟವಾಯಿತು. ಬಹಳ ಚಾಲೆಂಜಿಂಗ್ ಇರುವಂತಹ ಪಾತ್ರ ನನ್ನದಾಗಿದೆ. ಸಿನಿಮಾ ನಟಿಯ ಬದುಕಿನ ಸುತ್ತ ಸಾಗುವ ಕಥೆ ಇದಾಗಿದೆ. ಹಾಗೆಯೇ ನಟ ರಾಜವರ್ಧನ್ ನನ್ನ ಆತ್ಮೀಯ ಗೆಳೆಯ, ಅವರ ನಿರ್ಮಾಣದ ಸಂಸ್ಥೆಯ ಚಿತ್ರದಲ್ಲಿ ಅಭಿನಯಿಸುತ್ತಿರುವುದು ಖುಷಿ ಇದೆ. ನಮ್ಮ ಚಿತ್ರತಂಡಕ್ಕೆ ನಿಮ್ಮೆಲ್ಲರ ಪ್ರೋತ್ಸಾಹ ಸಹಕಾರ ಇರಲಿ , ಹಾಗೆಯೇ ನನ್ನ ಹುಟ್ಟುಹಬ್ಬಕ್ಕೆ ಮತ್ತೊಂದು ವಿಶೇಷ ಅನೌನ್ಸ್ಮೆಂಟ್ ನೀಡುತ್ತೇನೆ ಎಂದು ಹೇಳಿದರು.

Whatsapp image 2025 05 07 at 9.49.45 am (1)

ಇನ್ನು ಈ ಚಿತ್ರದ ನಿರ್ದೇಶಕ ದೇವ ಚಕ್ರವರ್ತಿ ಮಾತನಾಡುತ್ತಾ ನಾನು ಒಬ್ಬ ಪತ್ರಕರ್ತನಾಗಿ , ಸಾಹಿತಿ , ಬರಹಗಾರ , ಕಲಾವಿದನಾಗಿ ಚಿತ್ರೋದ್ಯಮದಲ್ಲಿ ನನ್ನನ್ನ ನಾನು ಬಹಳಷ್ಟು ತೊಡಗಿಸಿಕೊಂಡು ಸಾಗಿದದೇನೆ. ಹಾಗೆಯೇ ಒಂದಷ್ಟು ಏರುಪೇರುಗಳ ಜೊತೆ ಚಿತ್ರೋದ್ಯಮದ ಅನುಭವವು ಆಗಿದೆ. ಬಹಳಷ್ಟು ಕಥೆಗಳನ್ನು ಸಿದ್ಧ ಮಾಡಿಕೊಂಡು ,ಒಂದು ಸೂಕ್ತ ಸಮಯಕ್ಕಾಗಿ ಕಾಯುತಿದ್ದೆ. ಈಗ ಅದರ ಫಲವಾಗಿ ಒಂದು ನೈಜ ಘಟನೆಗಳ ಆಧಾರದ ಚಿತ್ರವನ್ನು ನಿರ್ದೇಶನ ಮಾಡಲು ಮುಂದಾಗಿದ್ದೇನೆ. ಈಗ ಜಾವಾ ಅನ್ನೋ ಶೀರ್ಷಿಕೆಯ ಮೂಲಕ ಒಂದು ಸ್ಟ್ರಾಂಗ್ ಕಂಟೆಂಟ್ ಅನ್ನು ಪ್ರೇಕ್ಷಕರ ಮುಂದೆ ತರುತ್ತಿದ್ದೇನೆ. ವೇಗ ಎನ್ನುವಂತೆ ಕಥಾಂದರವು ಅಷ್ಟೇ ಕುತೂಹಲಕಾರಿಯಾಗಿ ಸಾಗಲಿದ್ದು , 80ರ ಕಾಲಘಟ್ಟದಲ್ಲಿ ಚಿತ್ರರಂಗದಲ್ಲಿ ನಡೆದಂತಹ ನೈಜ ಘಟನೆಯನ್ನು ಆಧಾರಿತವಾಗಿದೆ.

Whatsapp image 2025 05 07 at 9.49.45 am (2)

ಚಿತ್ರೋದ್ಯಮದವರಿಗೂ ತಿಳಿಯದಂತಹ ವಿಷಯವಾಗಿದ್ದು, ಜನಸಾಮಾನ್ಯರಿಗೆ ಈ ಒಂದು ಕಥೆ ಬಹಳ ಇಷ್ಟವಾಗಲಿದೆ. ನಟಿಯ ಬದುಕಿನ ಸುತ್ತ ಸಾಗುವ ಈ ಕಥಾ ಎಳೆ ಹಲವು ಘಟನೆಗಳಿಗೆ ಸಾಕ್ಷಿಯಾಗುವಂತಿದೆ. ಸರಿಸುಮಾರು ಎರಡು ವರ್ಷಗಳ ಕಾಲ ಈ ಕಥೆಯ ಪೂರ್ವ ತಯಾರಿ ಮಾಡಿಕೊಂಡು ಜಾವಾ ಎನ್ನುವ ಶೀರ್ಷಿಕೆ ಇಟ್ಟುಕೊಂಡು ಚಿತ್ರೀಕರಣಕ್ಕೆ ಹೊರಡಲು ಸಿದ್ದರಾಗಿದ್ದು , ಇದಕ್ಕೂ ಮೊದಲು ಒಂದು ವಿಭಿನ್ನ ಕಥೆಯ ಸ್ಕ್ರಿಪ್ಟ್ ರೆಡಿಯಾಗಿ ಮೇಲುಕೋಟೆಯಿಂದ ಪ್ರಯಾಣ ಬೆಳೆಸಿ ದಿಲ್ಲಿಯ ವರೆಗೂ ಹೋಗಿ ಸಂಚಲನ ಮೂಡಿಸುವ ಚಿತ್ರಕಥೆಯಾಗಿತ್ತು, ಅದು ನಟಿ ರಾಗಿಣಿಗೂ ಹೇಳಿದಂತಹ ಕಥೆ. ಅದು ಈಗ ಬೇಡ ಎಂದು ನಿರ್ಧರಿಸಿ ಈ ಒಂದು ಸಿನಿಮಾ ಜಗತ್ತಿನ ಕಥೆಯನ್ನು ಮಾಡುತ್ತಿದ್ದೇವೆ.

80ರ ದಶಕದ ಕಥೆ ಇದ್ದರೂ ಪ್ರಸ್ತುತ ಕಾಲಘಟ್ಟಕ್ಕೆ ಸೂಕ್ತ ವಾಗುವಂತೆ ಚಿತ್ರಕಥೆ ಮಾಡಿದ್ದೇನೆ. ನಟ ರಾಜವರ್ಧನ್ ಪಾತ್ರ ಎಷ್ಟು ವಿಶೇಷವೋ , ಅಷ್ಟೇ ಕುತೂಹಲಕಾರಿ ಪಾತ್ರದಲ್ಲಿ ನಟಿ ರಾಗಿಣಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ಬಹಳಷ್ಟು ಪಾತ್ರಗಳು ಅಭಿನಯಿಸುತ್ತಿದ್ದಾರೆ. ಈ ನಮ್ಮ ಚಿತ್ರದಲ್ಲಿ ಪೂರ್ಣಚಂದ್ರ ತೇಜಸ್ವಿ ಸಂಗೀತವನ್ನು ನೀಡುತ್ತಿದ್ದು , ಕೆ.ಎಂ. ಪ್ರಕಾಶ್ ಸಂಕಲನವಿದ್ದು, ಛಾಯಾಗ್ರಾಹಕರ ಆಯ್ಕೆ ಆಗಬೇಕಿದೆ. ಜಾಹೀರಾತಿನ ರೂವಾರಿ ಪ್ರವೀಣ್ ಏಕಾಂತ ಜೊತೆಯಲ್ಲಿ ಸಿನಿಮಾ ಪ್ರಚಾರದ ಕಾರ್ಯವನ್ನು ಸುಮಂತ್ ಕನ್ನಡ ಪಿಚ್ಚರ್ ನಿರ್ವಹಿಸುತ್ತಿದ್ದಾರೆ. ಈ ಒಂದು ಚಿತ್ರ ಬಿರುಗಾಳಿಯಂತೆ ಸಂಚಲನವನ್ನ ಮೂಡಿಸುವ ಅಂಶವನ್ನು ಒಳಗೊಂಡಿದೆ. ಬಿರುಗಾಳಿಯಿಂದ ತಪ್ಪಿಸಿಕೊಂಡು ಓಡಿ ಬರುತ್ತಿರುವ ಹುಡುಗನೊಬ್ಬನ ಜಾವಾ ಪೋಸ್ಟರ್ ಬಹಳಷ್ಟು ಕುತೂಹಲವನ್ನು ಹುಟ್ಟುಹಾಕಿದ್ದು, ಜುಲೈನಲ್ಲಿ ಚಿತ್ರೀಕರಣವನ್ನು ಆರಂಭಿಸುವ ಯೋಜನೆ ಇದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮಾಹಿತಿಯನ್ನು ತಂಡ ಹಂಚಿಕೊಳ್ಳಲಿದೆ ಎಂದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (42)

ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ: ಮುಂದಿನ 4 ದಿನ ಭಾರೀ ಮಳೆಯ ಎಚ್ಚರಿಕೆ!

by ದಿಶಾ ಕೆ. ಎಸ್.
August 7, 2026 - 6:28 am
0

ಕೈಗೊಳ್ಳಲಿರುವ (41)

ಇಂದಿನ ಭವಿಷ್ಯ: ಯಾವ ರಾಶಿಯವರಿಗೆ ಯಶಸ್ಸಿನ ಯೋಗ? ಸಂಪೂರ್ಣ ವಿವರ ಇಲ್ಲಿದೆ

by ದಿಶಾ ಕೆ. ಎಸ್.
August 7, 2026 - 6:23 am
0

ಸಂಘದ (10)

ಭಾರೀ ಮಳೆ ಎಫೆಕ್ಟ್‌: ಹೆಲಾಂಗ್ ಬಳಿ ರಸ್ತೆಗುರುಳಿದ ಬಂಡೆಗಳು, ಬದರಿನಾಥ್‌ ರಾಷ್ಟ್ರೀಯ ಹೆದ್ದಾರಿ ಬಂದ್‌

by ಶಾಲಿನಿ ಕೆ. ಡಿ
August 6, 2026 - 11:15 pm
0

ಸಂಘದ (9)

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!

by ಶಾಲಿನಿ ಕೆ. ಡಿ
August 6, 2026 - 10:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 06T170535.640
    ಮೂರು ದಶಕಗಳ ಬಳಿಕ ಮರಳುತ್ತಿದೆ ಶಾಂತಿ ಕ್ರಾಂತಿ
    August 6, 2026 | 0
  • ಬಲಿಷ್ಠ (36)
    ಏಳು ಸಮುದ್ರ ದಾಟಿದ ರಾಜಮೌಳಿ-ಮಹೇಶ್ ಬಾಬು..!
    August 6, 2026 | 0
  • ಬಲಿಷ್ಠ (35)
    7 ದಿನದಲ್ಲಿ 10 ಸಾವಿರ ಕೋಟಿ ಬಾಚಿದ ಸ್ಪೈಡರ್ ಮ್ಯಾನ್
    August 6, 2026 | 0
  • ಬಲಿಷ್ಠ (31)
    ದೀಪಾವಳಿಗೆ ಗ್ರ್ಯಾಂಡ್ ಎಂಟ್ರಿ: ನವೆಂಬರ್ 6ಕ್ಕೆ ವಿಶ್ವಾದ್ಯಂತ ಬಿಡುಗಡೆಯಾಗಲಿದೆ ‘ರಾಮಾಯಣ’
    August 6, 2026 | 0
  • Your paragraph text (14)
    ಹಲವು ದಿನಗಳ ವಿರಾಮದ ಬಳಿಕ ಕಮ್‌ಬ್ಯಾಕ್ ಆದ ವಿಕ್ರಂ ರವಿಚಂದ್ರನ್
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version