• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಟಕೀಲಾ’ ಡ್ರಗ್ಸ್ ಸುಳಿಯಲ್ಲಿ ಸಿಲುಕಿದ ಮನಸುಗಳ ಕಥೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 28, 2025 - 6:00 pm
in ಸಿನಿಮಾ
0 0
0
11 2025 04 28t175917.704

ಜಡ್, ಹೂ ಅಂತೀಯಾ ಉಹೂ ಅಂತೀಯಾ, ಮೀಸೆ ಚಿಗುರಿದಾಗದಂಥ ಚಿತ್ರಗಳ ನಿರ್ದೇಶಕ ಹಾಗೂ ಫೋಟೋ ಜರ್ನಲಿಸ್ಟ್ ಕೂಡ ಆಗಿರುವ ಕೆ.ಪ್ರವೀಣ್ ನಾಯಕ್ ಅವರು ಬಹಳ ದಿನಗಳ ನಂತರ ಆಕ್ಷನ್‌ಕಟ್ ಹೇಳಿರುವ ಚಿತ್ರ ಟಕೀಲಾ. ಶ್ರೀಸಿದ್ಧಿವಿನಾಯಕ ಫಿಲಂಸ್ ಲಾಂಛನದಲ್ಲಿ ಮರಡಿಹಳ್ಳಿ ನಾಗಚಂದ್ರ ಅವರ ನಿರ್ಮಾಣದ ಈ ಚಿತ್ರ ಮುಂದಿನ ತಿಂಗಳು ಬಿಡುಗಡೆಯಾಗಲಿದ್ದು, ಇತ್ತೀಚೆಗೆ ಚಿತ್ರದ ೨ ಹಾಡುಗಳ ಪ್ರದರ್ಶನ ಹಾಗೂ ಪತ್ರಿಕಾಗೋಷ್ಟಿ ನೆರವೇರಿತು.

RelatedPosts

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಪೋಸ್ಟರ್ ಬಿಡುಗಡೆ

ಸಪ್ತಮಿ, ಸಾನ್ವಿ ಸುದೀಪ್, ವೈಷ್ಣವಿಗೆ ಮುಜುಗರ ಆಗಿದ್ಯಾಕೆ..?!

ಪವಿತ್ರಾ ಗೌಡಗೆ ಬಿಗ್ ಶಾಕ್ ನೀಡಿದ ಹೈಕೋರ್ಟ್: ಮನೆಯೂಟ ಸೌಲಭ್ಯ ರದ್ದು

ವಾರ್ ಎಫೆಕ್ಟ್.. ರಾಕಿಭಾಯ್ ಟಾಕ್ಸಿಕ್ ಪೋಸ್ಟ್‌‌ಪೋನ್

ADVERTISEMENT
ADVERTISEMENT

ಧರ್ಮ ಕೀರ್ತಿರಾಜ್, ನಿಖಿತಾಸ್ವಾಮಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದಲ್ಲಿ ನಾಗೇಂದ್ರ ಅರಸ್, ಕೋಟೆ ಪ್ರಭಾಕರ್, ಸುಮನ್, ಜಯರಾಜ್, ಸುಶ್ಮಿತಾ, ನಿರ್ದೇಶಕ ಪ್ರವೀಣ್‌ನಾಯಕ್ ಕೂಡ ಅಭಿನಯಿಸಿದ್ದಾರೆ.

ಈ ಸಂದರ್ಭದಲ್ಲಿ ಪ್ರವೀಣ್ ನಾಯಕ್ ಮಾತನಾಡುತ್ತ ಮನಸಿನ ಬಗ್ಗೆ ಸಾಕಷ್ಟು ಅಧ್ಯಯನ ಮಾಡಿದ್ದೇನೆ, ಮನಸಿನ ಸಮಸ್ಯೆಗಳನ್ನು ನೋಡ್ತಾ ನೋಡ್ತಾ ಜನರ ಮನಸ್ಥಿತಿ ಅವಲೋಕಿಸಿದಾಗ ಎಲ್ಲರಿಗೂ ಒಂದಲ್ಲ ಒಂದು ಚಿಂತೆಯಿರುತ್ತೆ ಅನ್ನೋದು ಗೊತ್ತಾಯ್ತು, ಇದೆಲ್ಲವನ್ನೂ ಸೇರಿಸಿ ನಾನು, ನನ್ನ ಪತ್ನಿ ಸೇರಿ ನೈಜತೆಗೆ ಹತ್ತಿರವಾಗುವಂಥ ಒಂದು ಕಥೆ ಬರೆದೆವು. ಜೀವನದಲ್ಲಿ ಮನುಷ್ಯನಿಗೆ ಒಂದು ಅವಕಾಶ ಸಿಗುತ್ತೆ. ಅದನ್ನು ಸರಿಯಾಗಿ ಉಪಯೋಗಿಸಿಕೊಳ್ಳದೆ ಇದ್ದರೆ,‌ ಮತ್ತೆ ಎರಡನೇ ಅವಕಾಶ ಸಿಗದೇ ಇರಬಹುದು. ಹಾಗಾಗಿ ಸಿಕ್ಕ ಅವಕಾಶವನ್ನು ಸರಿಯಾಗಿ ಉಪಯೋಗಿಸಿಕೊಳ್ಳಬೇಕು ಎಂದು ನಮ್ಮ ಚಿತ್ರದ ಮೂಲಕ ಹೇಳಿದ್ದೇನೆ. ತುಂಬಾ ತಡವಾಗಿ ನಿರ್ಧಾರ ತಗೊಂಡರೆ ಅದು ಕೂಡ ಉಪಯೋಗಕ್ಕೆ ಬರಲ್ಲ, ಚಟಗಳು ಅತಿಯಾದಾಗ ಏನು ಬೇಕಾದರೂ ಆಗಬಹುದು, ಡ್ರಗ್ಸ್ ಅನ್ನೋದು ಒಂದು ಸುಳಿ ಇದ್ದಹಾಗೆ, ಅದನ್ನು ಕುತೂಹಲದಿಂದ ಮುಟ್ಟಿ ನೋಡೋ ಪ್ರಯತ್ನ ಮಾಡಬಾರದು ಅನ್ನೋದು ಚಿತ್ರದ ಕಾನ್ಸೆಪ್ಟ್.

ಈ ಚಿತ್ರದಲ್ಲಿ ೨ ಹಾಡುಗಳಿದ್ದು ನಾನು ಹಾಗೂ ನಾಗೇಂದ್ರ ಪ್ರಸಾದ್ ಲಿರಿಕ್ಸ್ ಬರೆದಿದ್ದೇವೆ. ಚಿತ್ರದಲ್ಲಿ ಸ್ವಲ್ಪ ಅಡಲ್ಟ್ ಕಂಟೆಂಟ್ ಕೂಡ ಬರುತ್ತೆ. ಹಾಗಂತ ಯಾವುದನ್ನೂ ವಲ್ಗರ್ ಆಗಿ ತೋರಿಸಿಲ್ಲ, ಕ್ಲಾಸ್ ಆಗಿ ಹೇಳೋ ಪ್ರಯತ್ನ ಮಾಡಿದ್ದೇನೆ. ಜೀವನದಲ್ಲಿ ನಾನು ನೋಡಿದ, ಕೇಳಿದ ಅನುಭವಗಳೇ ಈ ಸಿನಿಮಾವಾಗಿದೆ. ಸೈಕಾಲಜಿ ಜತೆಗೆ ಸ್ಪಿರಿಚುಯಾಲಿಟಿ ಬೆರೆಸಿ ಮಾಡಿದ ಚಿತ್ರವಿದಾಗಿದ್ದು, ಈ ಮೂಲಕ ಒಂದು ಅರಿವು ಮೂಡಿಸುವ ಪ್ರಯತ್ನ ಎನ್ನಬಹುದು, ಟೈಟಲ್ ಸಾಂಗ್ ಒಂದೇ ದಿನದಲ್ಲಿ ಒಂದೂವರೆ ಲಕ್ಷ ವೀಕ್ಷಣೆಯಾಗಿದೆ ಎಂದು ಹೇಳಿದರು.

ನಂತರ ನಿರ್ಮಾಪಕ ನಾಗಚಂದ್ರ ಮಾತನಾಡಿ ಮೊದಲು ಚಿಕ್ಕದಾಗಿ ಮಾಡೋಣ ಅಂದುಕೊಂಡದ್ದು ನಂತರ ದೊಡ್ಡದಾಯ್ತು. ಅಲ್ಲದೆ ಹಲವಾರು ಕಾರಣಗಳಿಂದ ಸಿನಿಮಾದ ಬಿಡುಗಡೆ ತಡವಾಗಿದೆ. ಚಿತ್ರವನ್ನು ವಿತರಕ‌ ಜಯಣ್ಣ ಅವರು ರಿಲೀಸ್ ಮಾಡುತ್ತಿದ್ದಾರೆ. ಕರ್ನಾಟಕದಾದ್ಯಂತ ೧೫೦ಕ್ಕೂ ಹೆಚ್ಚು ಸೆಂಟರ್‌ಗಳಲ್ಲಿ ಟಕೀಲ ತೆರೆಗೆ ಬರಲಿದೆ ಎಂದರು.

ನಾಯಕ ಧರ್ಮ ಕೀರ್ತಿರಾಜ್ ಮಾತನಾಡುತ್ತ ನಾನು ಈ ಸಿನಿಮಾದಲ್ಲಿ ಅಭಿನಯಿಸಲು ಕಾರಣ ನಿರ್ಮಾಪಕ ನಾಗಚಂದ್ರ, ಅವರಿಗೆ ಈ ಚಿತ್ರದಿಂದ ಒಳ್ಳೇ ಹೆಸರು ಬರಲಿ, ನಮ್ಮ ತಂದೆಯವರಿಗೆ ಪ್ರವೀಣ್ ನಾಯಕ್ ಅವರ ಜತೆ ಸಿನಿಮಾ ಮಾಡ್ತಿದೀನಿ ಎಂದಾಗ ಮಾಡು ಅಂಥವರ ಬಳಿ ಕಲಿಯುವುದು ಬಹಳಷ್ಟಿರುತ್ತೆ ಎಂದು ಪ್ರೋತ್ಸಾಹಿಸಿದರು. ಈ ಸಿನಿಮಾ ಮೂಲಕ ನನಗೆ ಖಂಡಿತ ಒಳ್ಳೇ ಹೆಸರು ಬರುತ್ತೆ ಎಂಬ ನಂಬಿಕೆಯಿದೆ. ಒಬ್ಬ ಬ್ಯುಸಿನೆಸ್ ಮ್ಯಾನ್ ಪಾತ್ರ ಮಾಡಿದ್ದು, ಆತ ಯಾವುದೋ ಒಂದು ಚಟಕ್ಕೆ ಬಿದ್ದಾಗ ಏನೆಲ್ಲ ಆಗಬಹುದೆಂದು ತೋರಿಸಲಾಗಿದೆ ಎಂದರು.

ನಾಯಕಿ ನಿಖಿತಾಸ್ವಾಮಿ ಮಾತನಾಡಿ ನನಗೆ ಈ ಕಥೆ ಹೇಳಿದಾಗ ತುಂಬಾ ಚಾಲೆಂಜಿಂಗ್ ಪಾತ್ರ ಎನಿಸಿತು. ಇದರಲ್ಲಿ ಹಲವಾರು ಶೇಡ್ಸ್ ಬರುತ್ತೆ, ನನ್ನಿಂದಾದ ಎಫರ್ಟ್ ಹಾಕಿದ್ದೇನೆ ಎಂದರು. ನಂತರ ಸಂಗೀತ ನಿರ್ದೇಶಕ ರೇಣುಕುಮಾರ್, ನಟ ಸಂಕಲನಕಾರ ನಾಗೇಂದ್ರ ಅರಸ್, ಸಹ ನಿರ್ಮಾಪಕರಾದ ಶಂಕರ ರಾಮರೆಡ್ಡಿ, ಚನ್ನತಿಮ್ಮಯ್ಯ ಮುಂತಾದವರು ಟಕೀಲಾ ಚಿತ್ರದ ಕುರಿತಂತೆ ಮಾತನಾಡಿದರು. ಪಿ.ಕೆ.ಹೆಚ್. ದಾಸ್ ಅವರ ಛಾಯಾಗ್ರಹಣ, ಗಿರೀಶ್ ಅವರ ಸಂಕಲನ, ಪ್ರಶಾಂತ್ ಅವರ ಕಲಾನಿರ್ದೇಶನ ಈ ಚಿತ್ರಕ್ಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಏಕದಿನ ತಂಡದಿಂದಲೂ ಬಾಬರ್ ಔಟ್

ಏಕದಿನ ತಂಡದಿಂದ ಬಾಬರ್ ಆಜಮ್‌ ಔಟ್: 6 ಹೊಸ ಆಟಗಾರರಿಗೆ ಅವಕಾಶ

by ಶ್ರೀದೇವಿ ಬಿ. ವೈ
March 4, 2026 - 5:58 pm
0

Untitled design 2026 03 04T174204.652

Israel-Iran war: ಇರಾನ್‌ನ YAK-130 ಫೈಟರ್ ಜೆಟ್ ಮೇಲೆ ದಾಳಿ ನಡೆಸಿದ ಇಸ್ರೇಲ್‌

by ಶಾಲಿನಿ ಕೆ. ಡಿ
March 4, 2026 - 5:51 pm
0

ಇರಾನ್ ಹಾರ್ಮುಜ್ ಜಲಸಂಧಿ ಮುಚ್ಚಿದ ಪರಿಣಾಮ

ಇರಾನ್ ಹಾರ್ಮುಜ್ ಜಲಸಂಧಿ ಮುಚ್ಚಿದ್ದರಿಂದ ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿದ ಭಾರತದ 37 ಹಡಗು

by ಶ್ರೀದೇವಿ ಬಿ. ವೈ
March 4, 2026 - 5:42 pm
0

Untitled design 2026 03 04T172023.717

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಪೋಸ್ಟರ್ ಬಿಡುಗಡೆ

by ಶಾಲಿನಿ ಕೆ. ಡಿ
March 4, 2026 - 5:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 04T172023.717
    ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಪೋಸ್ಟರ್ ಬಿಡುಗಡೆ
    March 4, 2026 | 0
  • BeFunky collage 2026 03 04T170412.581
    ಸಪ್ತಮಿ, ಸಾನ್ವಿ ಸುದೀಪ್, ವೈಷ್ಣವಿಗೆ ಮುಜುಗರ ಆಗಿದ್ಯಾಕೆ..?!
    March 4, 2026 | 0
  • Untitled design 2026 03 04T152713.935
    ಪವಿತ್ರಾ ಗೌಡಗೆ ಬಿಗ್ ಶಾಕ್ ನೀಡಿದ ಹೈಕೋರ್ಟ್: ಮನೆಯೂಟ ಸೌಲಭ್ಯ ರದ್ದು
    March 4, 2026 | 0
  • Untitled design (61)
    ವಾರ್ ಎಫೆಕ್ಟ್.. ರಾಕಿಭಾಯ್ ಟಾಕ್ಸಿಕ್ ಪೋಸ್ಟ್‌‌ಪೋನ್
    March 4, 2026 | 0
  • Untitled design (60)
    16 ಕೋಟಿ ಮೌಲ್ಯದ ಸನ್ನಿ ಲಿಯೋನ್‌ ಕನಸಿನ ಅರಮನೆ ಹೇಗಿದೆ ಗೊತ್ತಾ ?
    March 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version