• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಾಲಿವುಡ್‌‌‌ಗೆ ಕಾಲಿಟ್ಟ ಮಂಡ್ಯ ಹುಡ್ಗ

ಪ್ರಭಾಕರ್‌ ಎಂಬ ಯುವ ನಟನ ತಮಿಳುಯಾನ

admin by admin
July 27, 2025 - 5:29 pm
in ಸಿನಿಮಾ
0 0
0
Web 2025 07 27t172131.834

ಕನ್ನಡದ ಬಹುತೇಕ ಪ್ರತಿಭಾವಂತ ನಟರು ಈಗಾಗಲೇ ಪರಭಾಷೆಯ ಚಿತ್ರರಂಗದಲ್ಲಿ ಗಟ್ಟಿ ನೆಲೆ ಕಂಡಿದ್ದಾರೆ. ಒಂದಷ್ಟು ಮಂದಿ ಈಗಷ್ಟೇ ಛಾಪು ಮೂಡಿಸುತ್ತಿದ್ದಾರೆ. ಈಗ ಆ ಸಾಲಿಗೆ ಕನ್ನಡದ ಮತ್ತೊಬ್ಬ ಯುವ ನಟ ಪ್ರಭಾಕರ್‌ ಬೋರೇಗೌಡ ಕೂಡ ಭವ್ಯ ಭರವಸೆಯೊಂದಿಗೆ ತಮಿಳು ಚಿತ್ರರಂಗಕ್ಕೆ ಎಂಟ್ರಿಯಾಗಿದ್ದಾರೆ. ಹೌದು, ಪ್ರಭಾಕರ್‌ ಕನ್ನಡದ ಕಿರುತೆರೆಯಲ್ಲಿ ಮಿಂಚಿದವರು. ಕಳೆದ ಎರಡು ದಶಕಗಳಿಂದಲೂ ಪ್ರಭಾಕರ್‌ ಸಾಕಷ್ಟು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಹಲವು ಸಿನಿಮಾಗಳಲ್ಲೂ ಅವರು ನೆಗೆಟಿವ್‌ ರೋಲ್‌ ಮೂಲಕ ಗಮನಸೆಳೆದಿದ್ದಾರೆ. ಈಗ ತಮಿಳಿನ ಅಕ್ಯೂಸ್ಡ್‌ ಸಿನಿಮಾ ಮೂಲಕ ತಮ್ಮ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

ಪ್ರಭಾಕರ್‌ ಅಭಿನಯದ ಅಕ್ಯೂಸ್ಡ್‌ (Accused) ಸಿನಿಮಾವನ್ನು ಪ್ರಭು ಶ್ರೀನಿವಾಸ್‌ ನಿರ್ದೇಶಿಸಿದ್ದು, ಚಿತ್ರದಲ್ಲಿ ಉದಯ, ಯೋಗಿಬಾಬು, ಅಜ್ಮಲ್‌, ಜಾನ್ವಿಕ ಇತರರು ನಟಿಸಿದ್ದಾರೆ. ಈ ಚಿತ್ರದಲ್ಲಿ ಪ್ರಭಾಕರ್‌ ಅವರದು ಖಳನಟನ ಪಾತ್ರ. ಇಡೀ ಸಿನಿಮಾದ ಮೇನ್‌ ವಿಲನ್‌ ಆಗಿ ನಟಿಸಿರುವ ಪ್ರಭಾಕರ್‌ ಅವರಿಗೆ ಈ ಸಿನಿಮಾದ ಮೇಲೆ ನಂಬಿಕೆ ಇದೆ. ಆಗಸ್ಟ್‌ ೧ಕ್ಕೆ ಈ ಸಿನಿಮಾ ವರ್ಲ್ಡ್‌ ವೈಡ್‌ ರಿಲೀಸ್‌ ಆಗುತ್ತಿದೆ. ಈಗಾಗಲೇ ಸಿನಿಮಾದ ಟ್ರೇಲರ್‌ ಗೆ ಸಾಕಷ್ಟು ಮೆಚ್ಚುಗೆ ಸಿಕ್ಕಿದ್ದು, ಪ್ರಭಾಕರ್‌ ಅವರಿಗೂ ಚಿತ್ರ ಹೆಸರು ತಂದುಕೊಡುತ್ತೆ ಎಂಬ ವಿಶ್ವಾಸವಿದೆ.

RelatedPosts

ರಾಮಾಯಣದ ಭವ್ಯ ಆರಂಭಕ್ಕೆ ದೆಹಲಿ ಸಾಕ್ಷಿ..!

ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್

500ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಅಭಿಯಾನ

‘ರಾಮಾಯಣ’ದಲ್ಲಿ ಸೀತೆಯಾಗಿ ನಟಿಸುವುದು ನನ್ನ ಆಯ್ಕೆಯಲ್ಲ, ಆಶೀರ್ವಾದ: ಸಾಯಿ ಪಲ್ಲವಿ

ADVERTISEMENT
ADVERTISEMENT

Whatsapp image 2025 07 27 at 5.10.56 pm

ಪ್ರಭಾಕರ್‌ ಅವರು ಕಳೆದ ಎರಡು ದಶಕಕ್ಕೂ ಹೆಚ್ಚು ಕಾಲ ಬಣ್ಣದ ಲೋಕದಲ್ಲಿದ್ದವರು. ಮೂಲತಃ ಮಂಡ್ಯದವರಾದ ಪ್ರಭಾಕರ್‌ ಚಿಕ್ಕಂದಿನಲ್ಲೇ ಕಲೆಯ ಮೇಲೆ ಪ್ರೀತಿ ಹೊಂದಿದವರು. ಎಂಜಿನಿಯರಿಂಗ್‌ ಮುಗಿಸಿ, ಬೆಂಗಳೂರಿಗೆ ಬಂದ ಪ್ರಭಾಕರ್‌ ಅಭಿನಯ ತರಂಗದಲ್ಲಿ ರಂಗಭೂಮಿಯ ತಾಲೀಮು ನಡೆಸಿ, ಹಲವಾರು ನಾಟಕ ಮಾಡಿ ಸೈ ಎನಿಸಿಕೊಂಡವರು. ನಂತರ ಕಿರುತೆರೆಗೆ ಕಾಲಿಟ್ಟ ಪ್ರಭಾಕರ್‌, ಸುಮಾರು ಐದು ಸಾವಿರಕ್ಕೂ ಹೆಚ್ಚು ಎಪಿಸೋಡ್‌ ಗಳಲ್ಲಿ ಕಾಣಿಸಿಕೊಂಡು ಮನೆಮಾತಾದವರು.

Whatsapp image 2025 07 27 at 5.10.57 pm

“ಕಪಿಚೇಷ್ಟೇ”, “ಕುಂಕುಮ ಭಾಗ್ಯ”, “ಸೌಂದರ್ಯ ಲಹರಿ” , “ಮಾಂಗಲ್ಯ”, “ಪುಣ್ಯಕೋಟಿ” ಸೀರಿಯಲ್ಸ್‌ ಮಾಡಿದೆ. “ಪುಣ್ಯಕೋಟಿ” ಧಾರಾವಾಹಿ ಬರೋಬ್ಬರಿ ಎರಡು ಸಾವಿರ ಎಪಿಸೋಡು ಮೂಡಿಬಂತು. “ಬದುಕು” ಸೀರಿಯಲ್‌ ಕೂಡ ಹೊಸ ಬದುಕು ಕಟ್ಟಿಕೊಟ್ಟಿತು. ಇದು ೬ ವರ್ಷಗಳ ಕಾಲ ಪ್ರಸಾರವಾಯ್ತು. “ಮನೆಯೊಂದು ಮೂರು ಬಾಗಿಲು” ಧಾರಾವಾಹಿಯಲ್ಲಿ ನೆಗೆಟಿವ್ ರೋಲ್‌ ಮಾಡಿದೆ. ಪುಣ್ಯಕೋಟಿ ಸೀರಿಯಲ್‌ ಗೆ ಎ.ಜಿ.ಶೇಷಾದ್ರಿ ಅವರು ಇವರನ್ನ ಹೀರೋ ಮಾಡಿದ್ರು. ಅಲ್ಲಿಂದ ಬಹುತೇಕ ಹೀರೋ ಪಾತ್ರಗಳಲ್ಲೇ ಕಾಣಿಸಿಕೊಂಡ ಪ್ರಭಾಕರ್‌ ಅವರ ಕೈಯಲ್ಲಿ ಸಾಕಷ್ಟು ಸೀರಿಯಲ್‌ ಗಳಿದ್ದವು. ಒಂದು ಕಡೆ ಸೀರಿಯಲ್ಸ್ ನಲ್ಲಿ ಬಿಜಿ. ಇನ್ನೊಂದು ಕಡೆ ಅವರದೇ ಆದ ಒಂದು ಬಿಜಿನೆಸ್‌ ರನ್‌ ಮಾಡುತ್ತಿದ್ದ ಅವರಿಗೆ ಸೀರಿಯಲ್ಸ್‌ ಸಾಕು ಅನಿಸಿ ಸಿನಿಮಾ ಕಡೆ ಮುಖ ಮಾಡಿದರು.

Whatsapp image 2025 07 27 at 5.10.56 pm (2)

ಮೆಲ್ಲನೆ ಸಿನಿಮಾ ಅವಕಾಶಗಳು ಅವರನ್ನು ಹುಡುಕಿ ಬಂದವು. “ಕರಿಯ 2 ” ಸಿನಿಮಾದಲ್ಲಿ ವಿಲನ್‌ ಆಗಿ ನಟಿಸುವ ಮೂಲಕ ಸಿನಿಮಾಗೆ ಎಂಟ್ರಿಕೊಟ್ಟರು. ಸಂಚಾರಿ ವಿಜಯ್‌ ಅವರ ಜೊತೆ “ಅಹಂ ಬ್ರಹ್ಮಾಸಿ” ಸೇರಿದಂತೆ ಒಂದಷ್ಟು ಸಿನಿಮಾಗಳಲ್ಲಿ ನಟಿಸಿದರು. ಅವರಿಗೆ ಬಹುತೇಕ ನೆಗೆಟಿವ್‌ ರೋಲ್‌ ಗಳೇ ಹೆಚ್ಚು ಹುಡುಕಿ ಬಂದವು. ಅವರಿಗೆ ಈಗಲೂ ನೆಗೆಟಿವ್‌ ರೋಲ್‌ ಮಾಡುವುದೆಂದರೆ ಪ್ರೀತಿ. ಇತ್ತೀಚೆಗೆ ತೆರೆಕಂಡ ‌ “ರುದ್ರ ಗರುಡ ಪುರಾಣ” ಸಿನಿಮಾದಲ್ಲೂ ನೆಗೆಟಿವ್‌ ರೋಲ್‌ ಮಾಡಿ ಸೈ ಎನಿಸಿಕೊಂಡರು. ಸದ್ಯ ಬಿಡುಗಡೆ ಆಗಬೇಕಿರುವ ಕೆಲ ಸಿನಿಮಾಗಳಿವೆ.

ಅಲ್ಲೂ ನೆಗೆಟಿವ್‌ ರೋಲ್‌ ಗಳಲ್ಲೇ ಕಾಣಿಸಿಕೊಂಡಿದ್ದಾರೆ. ಪ್ರಭಾಕರ್‌ ಅವರಿಗೆ ನೆಗೆಟಿವ್‌ ರೋಲ್‌ ಅಂದರೆ ಅಚ್ಚುಮೆಚ್ಚು.

Whatsapp image 2025 07 27 at 5.10.56 pm (1)

ಸದ್ಯ ಅವರ ಕೆರಿಯರ್‌ ನ ಮತ್ತೊಂದು ಹೊಸ ಮಜಲು ಅಂದರೆ ಅದು ತಮಿಳಿನ ಅಕ್ಯೂಸ್ಡ್‌ ಸಿನಿಮಾ. ಇದರಲ್ಲಿ ಅವರೇ ಮೇನ್‌ ವಿಲನ್‌. ಚಿತ್ರದ ಕಂಟೆಂಟ್‌ ಹೊಸದಾಗಿದೆ. ಹಾಗಾಗಿ ಅವರಿಗೆ ಆ ಚಿತ್ರದ ಮೇಲೆ ನಂಬಿಕೆ ಮತ್ತು ಭರವಸೆ ಇದೆಯಂತೆ. ಆಗಸ್ಟ್‌ ೧ಕ್ಕೆ ವರ್ಲ್ಡ್‌ ವೈಡ್‌ ರಿಲೀಸ್‌ ಆಗುತ್ತಿರುವ ಸಿನಿಮಾದಲ್ಲಿ ಫುಲ್‌ ಆಕ್ಷನ್ ಇದೆ. ಅವರಿಗೆ ಹಿರಿಯ ಕಲಾವಿದರು, ತಾಂತ್ರಿಕ ವರ್ಗದವರ ಕೆಲಸ ಮಾಡಿದ ತೃಪ್ತಿ ಇದೆ.

Whatsapp image 2025 07 27 at 5.10.55 pm (1)

ಈಗಾಗಲೇ ಸಿನಿಮಾದ ಟ್ರೇಲರ್‌ ನೋಡಿದವರು ಮೆಚ್ಚಿದ್ದಾರೆ. ಸದ್ಯ ತಮಿಳಿನಲ್ಲಿ ಸೌಂಡ್‌ ಮಾಡುತ್ತಿರುವ ಈ ಸಿನಿಮಾ ನೋಡಿರುವ ಒಂದಷ್ಟು ನಿರ್ದೇಶಕರು, ಪ್ರಭಾಕರ್‌ ಅವರ ನಟನೆ ನೋಡಿ ಒಳ್ಳೆಯ ಮಾತುಗಳನ್ನಾಡಿದ್ದಾರೆ. ಅಲ್ಲಿನ ನಿರ್ದೇಶಕರು ಒಂದಷ್ಟು ಕಥೆಗಳನ್ನು ಹೇಳುತ್ತಿದ್ದಾರೆ. ಕಾಲಿವುಡ್‌ ನಲ್ಲಿ ನೆಲೆಯೂರುವ ನಂಬಿಕೆ ಅವರಿಗಿದೆ. ಅದೇನೆ ಇರಲಿ, ಕನ್ನಡದ ಬಹುತೇಕ ನಟರು ಪರಭಾಷೆಯತ್ತ ಮುಖ ಮಾಡಿ ಗೆಲುವು ಕಂಡಿದ್ದಾರೆ. ಪ್ರಭಾಕರ್ ಕೂಡ ಆ ನಿರೀಕ್ಷೆಯಲ್ಲಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮೇಘಸ್ಫೋಟ (12)

ನಾಗಾಲ್ಯಾಂಡ್‌ನಲ್ಲಿ ಭೂಕುಸಿತ: 8 ಮಂದಿ ಸಾ*ವು, ನಾಲ್ವರ ಶವ ಪತ್ತೆ

by ಶಾಲಿನಿ ಕೆ. ಡಿ
July 19, 2026 - 8:43 pm
0

ಮೇಘಸ್ಫೋಟ (11)

IND vs ENG 3rd ODI: ಭಾರತಕ್ಕೆ ದಾಖಲೆಯ ಗುರಿ ನೀಡಿದ ಇಂಗ್ಲೆಂಡ್

by ಶಾಲಿನಿ ಕೆ. ಡಿ
July 19, 2026 - 8:27 pm
0

ಮೇಘಸ್ಫೋಟ (10)

ಚೆನ್ನಮ್ಮ ಅಂತ್ಯಕ್ರಿಯೆಗೆ ಸ್ಥಳ ನಿಗದಿ: 2,000ಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಭದ್ರತೆ

by ಶಾಲಿನಿ ಕೆ. ಡಿ
July 19, 2026 - 7:59 pm
0

ಮೇಘಸ್ಫೋಟ (8)

ಫಿಫಾ ವಿಶ್ವಕಪ್ ಫೈನಲ್ ಕ್ರೇಜ್: ಕೇರಳ, ಮೇಘಾಲಯದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

by ಶಾಲಿನಿ ಕೆ. ಡಿ
July 19, 2026 - 6:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (5)
    ರಾಮಾಯಣದ ಭವ್ಯ ಆರಂಭಕ್ಕೆ ದೆಹಲಿ ಸಾಕ್ಷಿ..!
    July 19, 2026 | 0
  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
  • ಮೇಘಸ್ಫೋಟ (2)
    500ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಅಭಿಯಾನ
    July 19, 2026 | 0
  • ವಾಂಗ್ಚುಕ್ (5)
    ‘ರಾಮಾಯಣ’ದಲ್ಲಿ ಸೀತೆಯಾಗಿ ನಟಿಸುವುದು ನನ್ನ ಆಯ್ಕೆಯಲ್ಲ, ಆಶೀರ್ವಾದ: ಸಾಯಿ ಪಲ್ಲವಿ
    July 19, 2026 | 0
  • Untitled design 2026 07 18T220310.168
    ರಾಷ್ಟ್ರೀಯ ಪ್ರಶಸ್ತಿಯಲ್ಲಿ ‘ಆರ್ಟಿಕಲ್ 370’ ಅಬ್ಬರ; ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಸಿನಿಮಾ
    July 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version