• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇನ್‌ಸ್ಟಾಗ್ರಾಮ್‌ನಲ್ಲಿ 22ರ ಚೆಲುವೆಗೆ ಮೆಸೇಜ್‌: ಈ ನಟನ ಮುಖವಾಡ ಕಳಚಿದ ಯುವತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 15, 2026 - 3:15 pm
in Flash News, ಬಾಲಿವುಡ್, ಸಿನಿಮಾ
0 0
0
Untitled design 2026 01 15T150918.594

ಸಾಮಾಜಿಕ ಜಾಲತಾಣಗಳು ಇಂದಿನ ಆಧುನಿಕ ಯುಗದ ಅತ್ಯಂತ ಬಲಿಷ್ಠ ಅಸ್ತ್ರ. ಸರಿಯಾಗಿ ಬಳಕೆಯಾದರೆ ಇದು ವ್ಯಕ್ತಿಗೆ ಅವಕಾಶಗಳ ಬಾಗಿಲು ತೆರೆದು ಕೊಡುತ್ತದೆ. ಆದರೆ ಅತಿಯಾದ ಅಥವಾ ದುರುಪಯೋಗ ಮನುಷ್ಯನ ಬದುಕನ್ನೇ ಸಂಕಷ್ಟಕ್ಕೆ ತಳ್ಳಬಲ್ಲದು. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಮನುಷ್ಯನ ಜೀವನವನ್ನು ನಿಯಂತ್ರಿಸುತ್ತಿರುವ ಮಟ್ಟಿಗೆ ಪ್ರಭಾವ ಬೀರುತ್ತಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ಒಳ್ಳೆಯ ಮನಸ್ಸುಗಳು ಇದ್ದರೂ, ಅವಾಚ್ಯ ಪದಗಳು, ದ್ವೇಷ, ಅಸೂಯೆ, ನಿಂದನೆ, ಮಾನಸಿಕ ಕಿರುಕುಳ ನೀಡುವವರ ಸಂಖ್ಯೆಯೂ ಕಡಿಮೆಯೇನಿಲ್ಲ. ವಿಶೇಷವಾಗಿ ಮಹಿಳೆಯರು, ಯುವತಿಯರು ಹಾಗೂ ಚಿತ್ರರಂಗದ ನಟಿಯರು ಈ ಆನ್‌ಲೈನ್ ಕಿರುಕುಳಕ್ಕೆ ಹೆಚ್ಚು ಗುರಿಯಾಗುತ್ತಿದ್ದಾರೆ. ಇದರಲ್ಲಿ ಕೆಲವರು ಲೈಂಗಿಕ ಶೋಷಣೆಯ ಉದ್ದೇಶದಿಂದಲೇ ಮೆಸೇಜ್‌ಗಳನ್ನು ಕಳುಹಿಸುವುದು ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ.

RelatedPosts

ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ

‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!

ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ

ADVERTISEMENT
ADVERTISEMENT

ಈ ಸಾಲಿನಲ್ಲಿ ಈಗ ಬಾಲಿವುಡ್‌ನ ಸ್ವಯಂಘೋಷಿತ ವಿಮರ್ಶಕ “ಕೆಆರ್‌ಕೆ” ಅಲಿಯಾಸ್ ಕಮಲ್ ರಶೀದ್ ಖಾನ್ ಹೆಸರು ಕೂಡ ಕೇಳಿಬರುತ್ತಿದೆ. 22 ವರ್ಷದ ಯುವತಿ ಒಬ್ಬರು, ಕೆಆರ್‌ಕೆ ತಮ್ಮನ್ನು ಇನ್‌ಸ್ಟಾಗ್ರಾಮ್ ಮೂಲಕ ಸಂಪರ್ಕಿಸಿ ಭೇಟಿಗೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಕಮಲ್ ರಶೀದ್ ಖಾನ್ ಅವರು ವಿವಾದಗಳಿಂದಲೇ ಗುರುತಿಸಿಕೊಂಡಿದ್ದಾರೆ. ‘ದೇಶದ್ರೋಹಿ’ ಎಂಬ ಚಿತ್ರವನ್ನು ನಿರ್ದೇಶಿಸಿ ನಟಿಸಿದ್ದೇ ಅವರ ಪ್ರಮುಖ ಸಿನಿಮಾ ಸಾಧನೆ. ನಂತರದ ವರ್ಷಗಳಲ್ಲಿ ಚಿತ್ರರಂಗದಲ್ಲಿ ಅವರಿಗೆ ಕೆಲಸವೂ ಸಿಗಲಿಲ್ಲ. ಆದರೂ ಸಾಮಾಜಿಕ ಜಾಲತಾಣಗಳಲ್ಲಿ ಬಾಲಿವುಡ್ ನಟ–ನಟಿಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಸದಾ ಸುದ್ದಿಯಲ್ಲಿರುವ ವ್ಯಕ್ತಿ ಅವರು. ಬಾಲಿವುಡ್‌ನ ಅನೇಕ ಮಂದಿ ಅವರನ್ನು ಬಹಿರಂಗವಾಗಿಯೇ ದೂರ ಇಟ್ಟಿದ್ದಾರೆ ಎಂಬ ಮಾತು ಕೂಡ ಇದೆ.

ಆದರೆ ಇದೀಗ 22 ವರ್ಷದ ಯುವತಿ ಸಿಮ್ರನ್ (ಸಿಮ್ಮೊಲಿಕ್) ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಕೆಆರ್‌ಕೆ ಕಳುಹಿಸಿದ ಮೆಸೇಜ್‌ಗಳ ಸ್ಕ್ರೀನ್‌ಶಾಟ್ ಹಂಚಿಕೊಂಡಿದ್ದಾರೆ. ಕೇವಲ 3,200ಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿರುವ ಅಪರಿಚಿತ ಯುವತಿಯನ್ನು, 50ಕ್ಕೂ ಹೆಚ್ಚು ವಯಸ್ಸಿನ ವ್ಯಕ್ತಿಯೊಬ್ಬರು “ಕೆಲಸದ” ನೆಪದಲ್ಲಿ ಭೇಟಿಗೆ ಕರೆಯುತ್ತಿರುವುದು ಅನುಮಾನ ಹುಟ್ಟಿಸುತ್ತದೆ ಎಂದು ಸಿಮ್ರನ್ ಪ್ರಶ್ನಿಸಿದ್ದಾರೆ.

“ಮೆಸೇಜ್ ಮಾಡುವುದು ತಪ್ಪಲ್ಲ. ಆದರೆ ಕೆಲಸ ಏನು ಎಂದು ಸ್ಪಷ್ಟವಾಗಿ ಹೇಳದೆ ಬಂದು ಭೇಟಿಯಾಗಿ ಎನ್ನುವುದರ ಅರ್ಥವೇನು?” ಎಂದು ಸಿಮ್ರನ್ ತಮ್ಮ ಪೋಸ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ಸಾಮಾನ್ಯವಾಗಿ ದೊಡ್ಡ ಸೆಲೆಬ್ರಿಟಿಗಳಿಗೆ ಮ್ಯಾನೇಜರ್ ಅಥವಾ ಏಜೆನ್ಸಿ ಇರುತ್ತದೆ. ನಿಜಕ್ಕೂ ಕೆಲಸದ ಆಫರ್ ಇದ್ದಿದ್ದರೆ ಅದರ ಸಂಪೂರ್ಣ ವಿವರಗಳನ್ನು ಮೆಸೇಜ್ ಅಥವಾ ಇಮೇಲ್ ಮೂಲಕ ಕಳುಹಿಸಬೇಕಿತ್ತು ಎಂದು ಅವರು ಹೇಳಿದ್ದಾರೆ.

View this post on Instagram

 

A post shared by 𝑆𝑖𝑚𝑟𝑎𝑛 ♡︎ (@simholicc)

ಇನ್ನೂ ಮಾತನಾಡಿದ ಸಿಮ್ರನ್, “ನಾವೆಲ್ಲರೂ ಇದೇ ಜನರೇಷನ್‌ನವರು. ‘ಭೇಟಿಯಾಗೋಣ’ ಎನ್ನುವುದರ ಹಿಂದಿನ ಉದ್ದೇಶ ಏನು ಎಂಬುದು ನಮಗೆ ಚೆನ್ನಾಗಿ ಗೊತ್ತು” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಆನ್‌ಲೈನ್‌ನಲ್ಲಿ ನಡೆಯುವ ಅಸಭ್ಯ ವರ್ತನೆಯ ವಿರುದ್ಧ ಧ್ವನಿ ಎತ್ತಿದ್ದಾರೆ.

ಸಿಮ್ರನ್ ಹಂಚಿಕೊಂಡ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಕೇವಲ 21 ಗಂಟೆಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಲೈಕ್ಸ್ ಪಡೆದುಕೊಂಡಿದೆ. 2,000ಕ್ಕೂ ಹೆಚ್ಚು ಕಾಮೆಂಟ್‌ಗಳು ಬಂದಿದ್ದು, ಅದರಲ್ಲಿ ಇನ್ನಿಬ್ಬರು ಮಹಿಳೆಯರು ಕೂಡ “ನಮಗೂ ಕೆಆರ್‌ಕೆ ಇದೇ ರೀತಿಯ ಮೆಸೇಜ್ ಕಳುಹಿಸಿದ್ದರು” ಎಂದು ಆರೋಪಿಸಿದ್ದಾರೆ. “ಇಂತಹ ಅಂಕಲ್‌ಗಳು ಹೇಗೆ ಇರುತ್ತಾರೆ ಅನ್ನೋದು ನಮಗೆ ಗೊತ್ತು” ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. ಈ ವಿಷಯದ ಬಗ್ಗೆ ಕೆಆರ್‌ಕೆ ಇನ್ನೂ ಯಾವುದೇ ಸ್ಪಷ್ಟನೆ ನೀಡಿಲ್ಲ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅದ್ವೈತ್ (19)

ಅಕ್ರಮ ಲೋನ್ ಆ್ಯಪ್‌ಗಳಿಗೆ ಕೇಂದ್ರದ ಶಾಕ್; 3,718 ಆ್ಯಪ್‌ ಗಳಿಗೆ ನಿರ್ಬಂಧ

by ಕವಿತಾ
August 12, 2026 - 11:22 pm
0

ಅದ್ವೈತ್ (20)

ಜೈಲಲ್ಲೂ ಬಿಂದಾಸ್ ಫೋನ್ ಬಳಕೆ: ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್

by ಕವಿತಾ
August 12, 2026 - 11:00 pm
0

ಅದ್ವೈತ್ (16)

ಯಮಕೂಪಿ ಗುಂಡಿಗೆ ಮತ್ತೊಂದು ಬಲಿ; ಗೂಡ್ಸ್ ವಾಹನ ಹರಿದು ಯುವತಿ ಸಾ*ವು!

by ಕವಿತಾ
August 12, 2026 - 10:49 pm
0

ಅದ್ವೈತ್ (18)

ನೂತನ ಜಲಸಂಪನ್ಮೂಲ ಸಚಿವರಾಗಿ ನೇಮಕ: CM, ಮಾಜಿ CM ಹಾಗೂ ಹೈಕಮಾಂಡ್‌ಗೆ N. ಚಲುವರಾಯಸ್ವಾಮಿ ಕೃತಜ್ಞತೆ

by ಕವಿತಾ
August 12, 2026 - 10:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಪಷ್ಟನೆ (2)
    ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ
    August 12, 2026 | 0
  • Untitled design 2026 08 12T130254.996
    ಆಗಸ್ಟ್ 14ರಂದು ವಿಧಾನಸಭೆಯ ಸಭಾಧ್ಯಕ್ಷ, ಸಭಾಪತಿ ಸ್ಥಾನಕ್ಕೆ ಚುನಾವಣೆ
    August 12, 2026 | 0
  • Untitled design 2026 08 12T123253.993
    ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ: ಜೈಲಾಧಿಕಾರಿ ಸಸ್ಪೆಂಡ್, ಎಸ್ಪಿಗೆ ನೋಟಿಸ್‌
    August 12, 2026 | 0
  • Untitled design 2026 08 12T121247.060
    ಮುಂಬೈನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ: 8 ಮಂದಿ ಸಾ*ವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ
    August 12, 2026 | 0
  • Untitled design 2026 08 12T115051.036
    ನಾಳೆ ಕರ್ನಾಟಕ ಬಂದ್‌: ಎಂದಿನಂತೆ ಸಂಚರಿಸಲಿವೆ KSRTC, BMTC ಬಸ್‌‌ಗಳು
    August 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version