ಇಂದು ಚೆನ್ನೈನಲ್ಲಿ ಚಿತ್ರದ ಪೂಜಾ ಸಮಾರಂಭವು ಇಡೀ ಪಾತ್ರವರ್ಗ ಮತ್ತು ಸಿಬ್ಬಂದಿಯೊಂದಿಗೆ ನಡೆಯುತ್ತಿದೆ. ಇದರೊಂದಿಗೆ ಚಿತ್ರದ ಚಿತ್ರೀಕರಣ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ನಿರೀಕ್ಷಿಸಲಾಗಿದೆ.ರಜನಿಕಾಂತ್ ಅವರ ‘ಧರ್ಮನ್’ ಚಿತ್ರವು ಇದೀಗ ಅಭಿಮಾನಿಗಳ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಡಾಕ್ಟರ್ ಲುಕ್ನಲ್ಲಿ ರಜನಿ ಕಾಣಿಸಿಕೊಂಡಿರುವ ಮೊದಲ ಪೋಸ್ಟರ್ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಚಿತ್ರತಂಡದಿಂದ ಮತ್ತಷ್ಟು ಅಪ್ಡೇಟ್ಗಳು ಹೊರಬೀಳಲಿವೆ.
ರಜನಿಕಾಂತ್ ಅವರ 173ನೇ ಚಿತ್ರವು 2025ರಲ್ಲಿ ಘೋಷಣೆಯಾದಾಗಿನಿಂದ ಸಾಕಷ್ಟು ಬದಲಾವಣೆಗಳನ್ನು ಕಂಡಿದೆ. ಆರಂಭದಲ್ಲಿ ನಿರ್ದೇಶಕ ಸುಂದರ್ ಸಿ ಅವರನ್ನು ಈ ಚಿತ್ರದ ನಿರ್ದೇಶಕರನ್ನಾಗಿ ಅಧಿಕೃತವಾಗಿ ಘೋಷಿಸಲಾಗಿತ್ತು. ಆದರೆ ಘೋಷಣೆಯಾದ ಕೆಲವೇ ದಿನಗಳಲ್ಲಿ, ಅನಿವಾರ್ಯ ಸಂದರ್ಭಗಳಿಂದಾಗಿ ಅವರು ಚಿತ್ರದಿಂದ ಹೊರಗುಳಿದಿದ್ದರು.
ನಂತರ, ‘ಡಾನ್’ ಸಿನಿಮಾ ಖ್ಯಾತಿಯ ಸಿ.ಬಿ. ಚಕ್ರವರ್ತಿ ಅವರನ್ನು ತಲೈವರ್ 173ರ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿತ್ತು. ಅವರು ಪ್ರೀ-ಪ್ರೊಡಕ್ಷನ್ ಕಾರ್ಯಗಳಲ್ಲೂ ತೊಡಗಿಕೊಂಡಿದ್ದರು. ಆದರೆ, ಕೆಲವೇ ದಿನಗಳಲ್ಲಿ ಅವರು ಸಹ ಯೋಜನೆಯಿಂದ ಹೊರಬಂದಿದ್ದಾರೆ ಎಂದು ವರದಿಯಾಗಿದೆ. ಈ ಬದಲಾವಣೆಯ ಹಿಂದಿನ ಕಾರಣವನ್ನು ಚಿತ್ರತಂಡ ಅಧಿಕೃತವಾಗಿ ಹೇಳಿಲ್ಲ. ಈಗ ಅಶ್ವಥ್ ಮಾರಿಮುತ್ತು ಅವರು ನಿರ್ದೇಶಕರಾಗಿ ಚಿತ್ರಕ್ಕೆ ಮುಂದಾಗಿದ್ದಾರೆ.
