ಫ್ಯಾನ್ಸ್​ಗೆ ಗುಡ್​ನ್ಯೂಸ್: ರಜನಿಕಾಂತ್ 173ನೇ ಚಿತ್ರದ ಟೈಟಲ್ ರಿವೀಲ್

Web Photo Editor (35)

ನಟ, ಸೂಪರ್‌ಸ್ಟಾರ್ ರಜನಿಕಾಂತ್ ಅವರು ತಮ್ಮ 75ನೇ ವಯಸ್ಸಿನಲ್ಲೂ ಸಿನಿಮಾಗಳಲ್ಲಿ ನಟಿಸುತ್ತಾ, ಅಭಿಮಾನಿಗಳ ಮನ ಗೆಲ್ಲುತ್ತಿದ್ದಾರೆ. ಅವರ ಮುಂಬರುವ ‘ತಲೈವರ್ 173’ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಅಪಾರ ನಿರೀಕ್ಷೆ ಮೂಡಿದೆ. ಈಗಾಗಲೇ ಈ ಚಿತ್ರದ ಅಧಿಕೃತ ಶೀರ್ಷಿಕೆ ಬಿಡುಗಡೆಯಾಗಿದ್ದು, ‘ಧರ್ಮನ್’ ಎಂದು ನಾಮಕರಣ ಮಾಡಲಾಗಿದೆ. ಜೊತೆಗೆ ಶೀರ್ಷಿಕೆಯೊಂದಿಗೆ ಮೊದಲ ಪೋಸ್ಟರ್ ಕೂಡ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ.

ಬಿಡುಗಡೆಯಾದ ಪೋಸ್ಟರ್‌ನಲ್ಲಿ ರಜನಿಕಾಂತ್ ಅವರು ನೀಲಿ ಬಣ್ಣದ ಡಾಕ್ಟರ್ ಸೂಟ್ ಧರಿಸಿ, ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿಕೊಂಡು, ಕೈಯಲ್ಲಿ ರಕ್ತಸಿಕ್ತವಾದ ಶಸ್ತ್ರಚಿಕಿತ್ಸಾ ಚಾಕು ಹಿಡಿದು, ವಿಭಿನ್ನ ಹಾಗೂ ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಭಾರೀ ಬಜೆಟ್ ಸಿನಿಮಾವನ್ನು ಕಮಲ್ ಹಾಸನ್ ಅವರ ‘ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್’ ಸಂಸ್ಥೆಯು ನಿರ್ಮಿಸುತ್ತಿದ್ದು, ಕಮಲ್ ಹಾಸನ್ ಮತ್ತು ಆರ್. ಮಹೇಂದ್ರನ್ ಅವರು ಜಂಟಿಯಾಗಿ ಬಂಡವಾಳ ಹೂಡುತ್ತಿದ್ದಾರೆ. ಚಿತ್ರಕ್ಕೆ ಅಶ್ವತ್ ಮಾರಿಮುತ್ತು ನಿರ್ದೇಶನದ ಜವಾಬ್ದಾರಿ ಹೊತ್ತಿದ್ದರೆ, ಸಂಗೀತವನ್ನು ರಾಕ್‌ಸ್ಟಾರ್ ಅನಿರುದ್ಧ್ ರವಿಚಂದರ್ ಅವರು ಸಿದ್ಧಪಡಿಸುತ್ತಿದ್ದಾರೆ. ಜೊತೆಗೆ ಅನ್ಬರಿವ್ ಅವರು ಸಾಹಸ ನಿರ್ದೇಶನದ ಮೂಲಕ ಚಿತ್ರಕ್ಕೆ ಮತ್ತಷ್ಟು ಸ್ಫೋಟಕತೆ ತಂದುಕೊಡಲಿದ್ದಾರೆ.

ಇತ್ತೀಚೆಗೆ ರಜನಿಕಾಂತ್ ಅವರು ‘ಜೈಲರ್ 2’ ಚಿತ್ರದ ಕೆಲಸಗಳನ್ನು ಪೂರ್ಣಗೊಳಿಸಿದ್ದಾರೆ ಎಂದು ವರದಿಯಾಗಿದ್ದು, ಈ ಚಿತ್ರವು ಈ ವರ್ಷವೇ ತೆರೆಕಾಣಲಿದೆ. ಇದರ ಬಳಿಕ ಅವರು ‘ಧರ್ಮನ್’ ಚಿತ್ರದ ತಯಾರಿಯಲ್ಲಿ ತೊಡಗಿಕೊಳ್ಳಲಿದ್ದಾರೆ. ಈ ಮಧ್ಯೆ, ರಜನಿಕಾಂತ್ ಅವರು ಶೀಘ್ರವೇ ಚಿತ್ರರಂಗಕ್ಕೆ ವಿದಾಯ ಹೇಳುವ ಸಾಧ್ಯತೆಯಿದೆ ಎಂಬ ವದಂತಿಯೂ ಚಿತ್ರರಂಗದಲ್ಲಿ ಹರಿದಾಡುತ್ತಿದೆ. ಆದರೆ ಅಧಿಕೃತ ದೃಢೀಕರಣವಾಗಿಲ್ಲ. 

ನಟಿಯರು, ಸಿಬ್ಬಂದಿ ಮತ್ತು ತಾಂತ್ರಿಕ ತಂಡ
ಈ ಚಿತ್ರದಲ್ಲಿ ಖ್ಯಾತ ನಟಿಯರಾದ ಸಿಮ್ರಾನ್ ಮತ್ತು ರಾಶಿ ಖನ್ನಾ ಅವರು ಪ್ರಮುಖ ಪಾತ್ರಗಳಲ್ಲಿ ನಟಿಸಲಿದ್ದಾರೆ. ಶೀಘ್ರದಲ್ಲೇ ಚಿತ್ರತಂಡವು ಸಂಪೂರ್ಣ ಪಾತ್ರವರ್ಗವನ್ನು ಅಧಿಕೃತವಾಗಿ ಘೋಷಿಸಲಿದೆ. ಸಂಗೀತವನ್ನು ರಾಕ್‌ಸ್ಟಾರ್ ಅನಿರುದ್ಧ್ ರವಿಚಂದರ್ ಸಂಯೋಜಿಸಿದ್ದರೆ, ಛಾಯಾಗ್ರಹಣವನ್ನು ನಿಕೇತ್ ಬೊಮ್ಮಿ, ಸಂಕಲನವನ್ನು ಪ್ರದೀಪ್ ಇ ರಾಗವ್ ಮತ್ತು ಸಾಹಸವನ್ನು ಅನ್ಬರಿವ್ ಅವರು ನಿರ್ವಹಿಸಲಿದ್ದಾರೆ.

ಇಂದು ಚೆನ್ನೈನಲ್ಲಿ ಚಿತ್ರದ ಪೂಜಾ ಸಮಾರಂಭವು ಇಡೀ ಪಾತ್ರವರ್ಗ ಮತ್ತು ಸಿಬ್ಬಂದಿಯೊಂದಿಗೆ ನಡೆಯುತ್ತಿದೆ. ಇದರೊಂದಿಗೆ ಚಿತ್ರದ ಚಿತ್ರೀಕರಣ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ನಿರೀಕ್ಷಿಸಲಾಗಿದೆ.ರಜನಿಕಾಂತ್ ಅವರ ‘ಧರ್ಮನ್’ ಚಿತ್ರವು ಇದೀಗ ಅಭಿಮಾನಿಗಳ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಡಾಕ್ಟರ್ ಲುಕ್‌ನಲ್ಲಿ ರಜನಿ ಕಾಣಿಸಿಕೊಂಡಿರುವ ಮೊದಲ ಪೋಸ್ಟರ್ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಚಿತ್ರತಂಡದಿಂದ ಮತ್ತಷ್ಟು ಅಪ್ಡೇಟ್‌ಗಳು ಹೊರಬೀಳಲಿವೆ.

ರಜನಿಕಾಂತ್ ಅವರ 173ನೇ ಚಿತ್ರವು 2025ರಲ್ಲಿ ಘೋಷಣೆಯಾದಾಗಿನಿಂದ ಸಾಕಷ್ಟು ಬದಲಾವಣೆಗಳನ್ನು ಕಂಡಿದೆ. ಆರಂಭದಲ್ಲಿ ನಿರ್ದೇಶಕ ಸುಂದರ್ ಸಿ ಅವರನ್ನು ಈ ಚಿತ್ರದ ನಿರ್ದೇಶಕರನ್ನಾಗಿ ಅಧಿಕೃತವಾಗಿ ಘೋಷಿಸಲಾಗಿತ್ತು. ಆದರೆ ಘೋಷಣೆಯಾದ ಕೆಲವೇ ದಿನಗಳಲ್ಲಿ, ಅನಿವಾರ್ಯ ಸಂದರ್ಭಗಳಿಂದಾಗಿ ಅವರು ಚಿತ್ರದಿಂದ ಹೊರಗುಳಿದಿದ್ದರು.

ನಂತರ, ‘ಡಾನ್’ ಸಿನಿಮಾ ಖ್ಯಾತಿಯ ಸಿ.ಬಿ. ಚಕ್ರವರ್ತಿ ಅವರನ್ನು ತಲೈವರ್ 173ರ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿತ್ತು. ಅವರು ಪ್ರೀ-ಪ್ರೊಡಕ್ಷನ್ ಕಾರ್ಯಗಳಲ್ಲೂ ತೊಡಗಿಕೊಂಡಿದ್ದರು. ಆದರೆ, ಕೆಲವೇ ದಿನಗಳಲ್ಲಿ ಅವರು ಸಹ ಯೋಜನೆಯಿಂದ ಹೊರಬಂದಿದ್ದಾರೆ ಎಂದು ವರದಿಯಾಗಿದೆ. ಈ ಬದಲಾವಣೆಯ ಹಿಂದಿನ ಕಾರಣವನ್ನು ಚಿತ್ರತಂಡ ಅಧಿಕೃತವಾಗಿ ಹೇಳಿಲ್ಲ. ಈಗ ಅಶ್ವಥ್ ಮಾರಿಮುತ್ತು ಅವರು ನಿರ್ದೇಶಕರಾಗಿ ಚಿತ್ರಕ್ಕೆ ಮುಂದಾಗಿದ್ದಾರೆ.

Exit mobile version